Homeಕರ್ನಾಟಕಇಂದು ಗೌರಿ ದಿನ: ಗೌರಿ ಲಂಕೇಶ್ ನೆನಪಿನಲ್ಲಿ ಸಾಮಾಜಿಕ ಮಾಧ್ಯಮಗಳಲ್ಲಿ ಹಲವು ಸಂವಾದ ಕಾರ್ಯಕ್ರಮಗಳು

ಇಂದು ಗೌರಿ ದಿನ: ಗೌರಿ ಲಂಕೇಶ್ ನೆನಪಿನಲ್ಲಿ ಸಾಮಾಜಿಕ ಮಾಧ್ಯಮಗಳಲ್ಲಿ ಹಲವು ಸಂವಾದ ಕಾರ್ಯಕ್ರಮಗಳು

ಯುವ ಹೋರಾಟಗಾರರಾದ ನತಾಶಾ ನರ್ವಾಲ್, ದೇವಂಗಾನಾ ಕಾಲಿತಾ ಮತ್ತು ಆಸಿಫ್ ಇಕ್ಬಾಲ್ ತನ್ಹಾ ಮಾತನಾಡಿ, ಗೌರಿ ಲಂಕೇಶ್ ಅವರಿಗೆ ಗೌರವ ನಮನ ಸಲ್ಲಿಸಲಿದ್ದಾರೆ.

- Advertisement -
- Advertisement -

ನಿರ್ಭಿತ, ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್ ನಮ್ಮನ್ನಗಲಿ ಇಂದಿಗೆ (ಸೆಪ್ಟಂಬರ್‌ 5) ನಾಲ್ಕು ವರ್ಷ. ಅವರ ನೆನಪಿನಲ್ಲಿ ಇಂದು ಹಲವು ಕಾರ್ಯಕ್ರಮಗಳ ಜೊತೆಗೆ ಚರ್ಚೆಗಳು ಆಯೋಜನೆಗೊಂಡಿವೆ. ಸಾಮಾಜಿಕ ಜಾಲತಾಣದ ವೇದಿಕೆಗಳಲ್ಲಿ ಚರ್ಚಾಕೂಟಗಳನ್ನು ಹಮ್ಮಿಕೊಳ್ಳಲಾಗಿದೆ.

ನಾನುಗೌರಿ.ಕಾಂ ಮತ್ತು ನ್ಯಾಯಪಥ ಪತ್ರಿಕೆಯ ಸಹಯೋಗದಲ್ಲಿ “ಗೌರಿ ಹತ್ಯೆ ಪ್ರಕರಣ ಮತ್ತು ಹಿಂಸೆಯನ್ನು ಎದುರುಗೊಳ್ಳುವ ಅಗತ್ಯ” ಎಂಬ ವಿಷಯದಲ್ಲಿ ಕ್ಲಬ್‌ ಹೌಸ್ ಸಂವಾದ ಆಯೋಜಿಸಿದೆ.

ಸಂವಾದವನ್ನು ಚಿಂತಕರಾದ ಶಿವಸುಂದರ್ ಮತ್ತು ಪತ್ರಕರ್ತರಾದ ಆದಿತ್ಯ ಭಾರದ್ವಾಜ್ ಪ್ರಾರಂಭಿಸಲಿದ್ದಾರೆ. ಇಂದು ಸಂಜೆ (ಭಾನುವಾರ) ಸಂಜೆ 7 ಗಂಟೆಯಿಂದ ಸಂವಾದ ಪ್ರಾರಂಭವಾಗಲಿದೆ.

ಗೌರಿ ಮೆಮೋರಿಯಲ್ ಟ್ರಸ್ಟ್ ಮತ್ತು ಸಿಟಿಜನ್ ಫಾರ್‌ ಜಸ್ಟೀಸ್ ಅಂಡ್ ಪೀಸ್ ಸಹಯೋಗದಲ್ಲಿ ಸೆ.5 ರಂದು zoom ವೇದಿಕೆಯಲ್ಲಿ ಮೃತ ಫಾದರ್‌ ಸ್ಟಾನ್ ಸ್ವಾಮಿ ಪ್ರಕರಣದಲ್ಲಿ ಪ್ರಮುಖರಾಗಿದ್ದ ಹಿರಿಯ ವಕೀಲ ಮಿಹೀರ್ ದೇಸಾಯಿ ಅವರಿಂದ “ಟೆರರ್ ಲಾ ಅಂಡರ್ ಪ್ರೋಟೋ ಫ್ಯಾಸಿಸ್ಟ್ ರೆಜಿಮ್” (ಫ್ಯಾಸಿಸ್ಟ್ ಆಡಳಿತದ ಅಡಿಯಲ್ಲಿ ಭಯೋತ್ಪಾದನಾ ಕಾನೂನುಗಳು) ಎಂಬ ವಿಷಯದ ಬಗ್ಗೆ ವಿಶೇಷ ಉಪನ್ಯಾಸ ನಡೆಯಲಿದೆ.

ಈ ವೇದಿಕೆಯಲ್ಲಿ ಯುವ ಹೋರಾಟಗಾರರಾದ ನತಾಶಾ ನರ್ವಾಲ್, ದೇವಂಗಾನಾ ಕಾಲಿತಾ ಮತ್ತು ಆಸಿಫ್ ಇಕ್ಬಾಲ್ ತನ್ಹಾ ಮಾತನಾಡಲಿದ್ದಾರೆ. ಗೌರಿ ಲಂಕೇಶ್ ಅವರಿಗೆ ಗೌರವ ನಮನ ಸಲ್ಲಿಸಲಿದ್ದಾರೆ.

ಇದನ್ನೂ ಓದಿ: ಗೌರಿ ಲಂಕೇಶ್ ಇಲ್ಲದ ಈ ಮೂರು ವರುಷಗಳು : ಪ್ರೊ.ಸಬಿಹಾ ಭೂಮಿಗೌಡ

ಎನ್‌ಆರ್‌ಸಿ, ಸಿಎಎ ಪ್ರತಿಭಟನೆಯಲ್ಲಿ ತೊಡಗಿಸಿಕೊಂಡಿದ್ದ ಇವರ ವಿರುದ್ಧ, ಈಶಾನ್ಯ ದೆಹಲಿ ಗಲಭೆ ಪ್ರಕರಣದಲ್ಲಿ ಆರೋಪಿಗಳನ್ನಾಗಿಸಿ, ಮೂವರು ವಿದ್ಯಾರ್ಥಿ ಹೋರಾಟಗಾರರ ವಿರುದ್ಧ ಭಯೋತ್ಪಾದನಾ ವಿರೋಧಿ ಕಾನೂನು ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ(UAPA)ಯಡಿ ಪ್ರಕರಣ ದಾಳಲಿಸಿದ್ದರು. ಒಂದು ವರ್ಷದಿಂದ ಜೈಲಿನಲ್ಲಿದ್ದ ಮೂವರು, ಕಳೆದ ಜೂನ್‌ನಲ್ಲಿ ಜಾಮೀನು ಪಡೆದಿದ್ದಾರೆ.

ಜೈಲಿನಿಂದ ಬಿಡುಗಡೆಗೊಂಡಿದ್ದ ಯುವ ಹೋರಾಟಗಾರರು, ‘‘ಜೈಲನ್ನು ತೋರಿಸಿ ನಮ್ಮನ್ನು ಹೆದರಿಸಬೇಡಿ. ಅನ್ಯಾಯದ ವಿರುದ್ಧ ನಮ್ಮ ಪ್ರತಿಭಟನೆ ನಿರಂತರ. ಇದು ಸರ್ಕಾರದ ಹತಾಶೆಯನ್ನು ತೋರಿಸುತ್ತದೆ. ನಾವು ಅವರಿಗೆ ಹೆದರದವರು. ನಮ್ಮನ್ನು ಜೈಲಿನಲ್ಲಿರಿಸುವುದಾಗಿ ಬೆದರಿಕೆ ಹಾಕಿದರೆ, ಅದು ನಮ್ಮ ಹೋರಾಟವನ್ನು ಮುಂದುವರಿಸುವ ಸಂಕಲ್ಪವನ್ನು ಬಲಪಡಿಸುತ್ತದೆ’’ ಎಂದು ಹೇಳಿ ಹೋರಾಟಗಾರರಿಗೆ ಸ್ಫೂರ್ತಿ ತುಂಬಿದ್ದರು.

ಕ್ಲಬ್ ಹೌಸ್‌ನಲ್ಲಿಯೂ ಗೌರಿ ದಿನದ ಅಂಗವಾಗಿ ’ಸಹಮತ’ ತಂಡ “ಗಾಂಧಿ ಕೊಂದವರೇ ಕಲ್ಬುರ್ಗಿ ಕೊಂದರು; ಗೌರಿಯನ್ನೂ ಕೊಂದರು” ಎಂಬ ಚರ್ಚೆ ಆಯೋಜಿಸಿದೆ.

ಚರ್ಚೆಯಲ್ಲಿ ನಿವೃತ್ತ ಪೊಲೀಸ್ ಅಧಿಕಾರಿ ಬಿ.ಕೆ.ಶಿವರಾಂ, ಹೋರಾಟಗಾರ್ತಿ ಕೆ.ನೀಲಾ ಮತ್ತು ಪತ್ರಕರ್ತ ನವೀನ್ ಸೂರಿಂಜೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳಲಿದ್ದಾರೆ. ಸೆ.5 ರ ಸಂಜೆ 4 ಗಂಟೆಗೆ ಚರ್ಚೆ ನಡೆಯಲಿದೆ.

ವಾರ್ತಾಭಾರತಿ ಯುಟ್ಯೂಬ್ ಚಾನೆಲ್‌ನಲ್ಲಿಯೂ ಬೆಳಗ್ಗೆಯಿಂದಲೇ ಹಲವು ಕಾರ್ಯಕ್ರಮಗಳು ನಡೆಯಲಿವೆ. ಬೆಳಗ್ಗೆ 11 ಗಂಟೆಗೆ “ಗೌರಿ ಹತ್ಯೆ ಪ್ರಕರಣ ಇನ್ನೂ ವಿಚಾರಣೆ ಆರಂಭವೇ ಆಗಿಲ್ಲವೇಕೆ..?” ಎಂಬುದರ ಬಗ್ಗೆ ಹಿರಿಯ ನ್ಯಾಯವಾದಿ ಎಸ್.ಬಾಲನ್ ಅವರ ವಿಶೇಷ ಸಂದರ್ಶನವಿದೆ. ಸಂಜೆ 5:30ಕ್ಕೆ ಗಂಟೆಗೆ ಗೌರಿ ಲಂಕೇಶ್ ಅವರ ಬಗ್ಗೆ ಕವಿತಾ ಲಂಕೇಶ್, ಶಿವಸುಂದರ್‌, ಬಿ.ಎಂ ಬಶೀರ್‌ ಮತ್ತು ಶಂಕರ್‌ ಎನ್.ಕೆಂಚನೂರು ಅವರು ಬರೆದಿರುವ ಕವನ ವಾಚನ ನಡೆಯಲಿದೆ. ಕವನಗಳನ್ನು ಮುಆದ್ ಜಿ.ಎಂ ವಾಚಿಸಲಿದ್ದಾರೆ. ಸಂಜೆ 7:30ಕ್ಕೆ “ನಾನುಗೌರಿ” ಕಿರುಚಿತ್ರ ಪ್ರಸಾರವಾಗಲಿದೆ.


ಇದನ್ನೂ ಓದಿ: ವಿದ್ಯಾರ್ಥಿ ಹೋರಾಟಗಾರರ ಪ್ರಕರಣ: ಜಾಮೀನು ತಡೆಗೆ ನಿರಾಕರಿಸಿದ ಸುಪ್ರೀಂಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...