Homeಕರೋನಾ ತಲ್ಲಣ‘ಸಾಮೂಹಿಕ ಸಭೆಗಳನ್ನು ಕಡಿಮೆಗೊಳಿಸಿ’- ಹಬ್ಬಗಳ ಆಚರಣೆ ಬಗ್ಗೆ ಒಕ್ಕೂಟ ಸರ್ಕಾರ

‘ಸಾಮೂಹಿಕ ಸಭೆಗಳನ್ನು ಕಡಿಮೆಗೊಳಿಸಿ’- ಹಬ್ಬಗಳ ಆಚರಣೆ ಬಗ್ಗೆ ಒಕ್ಕೂಟ ಸರ್ಕಾರ

- Advertisement -
- Advertisement -

ಕೊರೊನಾ ಮೂರನೆ ಅಲೆಯ ಆಂತಕದ ನಡುವೆ ದೇಶದಲ್ಲಿ ಹಬ್ಬಗಳು ಪ್ರಾರಂಭವಾಗಿದೆ. ಈ ಹಿನ್ನಲೆಯಲ್ಲಿ ಹೇಳಿಕೆ ನೀಡಿರುವ ಒಕ್ಕೂಟ ಸರ್ಕಾರ, “ಸಾಮೂಹಿಕ ಸಭೆಗಳನ್ನು ಕಡಿಮೆಗೊಳಿಸಬೇಕು. ಆದರೆ ಇಂತಹ ಸಭೆಗಳಿಗೆ ಹಾಜರಾಗಲೆ ಬೇಕು ಎಂದಿದ್ದರೆ, ಸಂಪೂರ್ಣ ಲಸಿಕೆ ಹಾಕುವುದು ಅತ್ಯಗತ್ಯವಾಗಿರಬೇಕು” ಎಂದು ಗುರುವಾರ ಹೇಳಿದೆ.

ಜನರು ಲಸಿಕೆಗಳನ್ನು ಪಡೆಯುವಂತೆ ಮತ್ತು ವಿಶೇಷವಾಗಿ ಹಬ್ಬದ ಸಮಯದಲ್ಲಿ ಕೋವಿಡ್ ನಿಯಮಗಳನ್ನು ಅನುಸರಿಸುವಂತೆ ಒಕ್ಕೂಟ ಸರ್ಕಾರ ಜನರನ್ನು ಒತ್ತಾಯಿಸಿದೆ. ಸಾಪ್ತಾಹಿಕ ಪಾಸಿಟಿವ್‌‌ ಸರಾಸರಿ ದರ ಕಡಿಮೆಯಾಗುತ್ತಿದ್ದರೂ, ಭಾರತದಲ್ಲಿ ಕೊರೊನಾ ಎರಡನೇ ಅಲೆ ಇನ್ನೂ ಕೊನೆಗೊಂಡಿಲ್ಲ ಎಂದು ಒಕ್ಕೂಟ ಸರ್ಕಾರ ಎಚ್ಚರಿಸಿದೆ.

ಆಗಸ್ಟ್ 31 ಕ್ಕೆ ಕೊನೆಗೊಂಡ ವಾರದಲ್ಲಿ ದೇಶದ 39 ಜಿಲ್ಲೆಗಳು 10% ಸಾಪ್ತಾಹಿಕ ಕೋವಿಡ್ ಪಾಸಿಟಿವಿಟಿ ದರವನ್ನು ವರದಿಯಾಗಿವೆ. 38 ಜಿಲ್ಲೆಗಳಲ್ಲಿ ಇದು 5% ರಿಂದ 10% ದಷ್ಟು ಇದೆ ಎಂದು ಸರ್ಕಾರ ಹೇಳಿದೆ.

ಇದನ್ನೂ ಓದಿ: ‘ನಮ್ಮದು ಕೊರೊನಾ ವಿರೋಧಿ ಸರ್ಕಾರವೇ ಹೊರತು, ಹಿಂದೂ ವಿರೋಧಿಯಲ್ಲ’ – BJP ಗೆ ತಿರುಗೇಟು ನೀಡಿದ ಉದ್ದವ್‌ ಠಾಕ್ರೆ

ಭಾರತದ ವಯಸ್ಕ ಜನಸಂಖ್ಯೆಯ 16% ದಷ್ಟು ಜನರು ಕೊರೊನಾ ಲಸಿಕೆಯ ಎರಡು ಡೋಸ್‌ಗಳನ್ನು ಪಡೆದಿದ್ದಾರೆ ಮತ್ತು 54% ದಷ್ಟು ಜನರಿಗೆ ಮೊದಲ ಡೋಸ್ ಅನ್ನು ನೀಡಲಾಗಿದೆ ಎಂದು ಒಕ್ಕೂಟ ಸರ್ಕಾರ ಪ್ರತಿಪಾದಿಸಿದೆ.

“ಸಿಕ್ಕಿಂ, ದಾದ್ರಾ ಮತ್ತು ನಾಗರ್ ಹವೇಲಿ ಮತ್ತು ಹಿಮಾಚಲ ಪ್ರದೇಶದಲ್ಲಿ ಎಲ್ಲಾ ವಯಸ್ಕ ಜನಸಂಖ್ಯೆಯು ಕನಿಷ್ಠ ಒಂದು ಡೋಸ್ ಕೋವಿಡ್ ಲಸಿಕೆಯನ್ನು ಪಡೆದುಕೊಂಡಿದೆ” ಎಂದು ಸರ್ಕಾರ ಹೇಳಿದೆ.

ದೇಶವನ್ನು ಆವರಿಸಿರುವ ಕೋವಿಡ್‌‌ ಸೋಂಕಿನ ಮೂರನೇ ಅಲೆಯ ಆತಂಕದ ನಡುವೆ ಮುಂಬರುವ ಹಬ್ಬದ ಋತುವಿನ ದೃಷ್ಟಿಯಿಂದ, ಸಾಮೂಹಿಕ ಸಭೆಗಳನ್ನು ಕಡಿಮೆಗೊಳಿಸಬೇಕು ಎಂದು ಒಕ್ಕೂಟ ಸರ್ಕಾರ ಹೇಳಿದ್ದು, ಅಂತಹ ಸಭೆಗೆ ಹಾಜರಾಗುವುದು ಅಗತ್ಯವಿದ್ದಲ್ಲಿ ಸಂಪೂರ್ಣ ವ್ಯಾಕ್ಸಿನೇಷನ್ ಪೂರ್ವಾಪೇಕ್ಷಿತವಾಗಿರಬೇಕು ಎಂದು ತಿಳಿಸಿದೆ.

“ಜನರು ಮನೆಯಲ್ಲಿ ಹಬ್ಬಗಳನ್ನು ಆಚರಿಸಬೇಕು, ಕೋವಿಡ್‌‌ನ ಸೂಕ್ತ ನಿಯಮಗಳನ್ನು ಅನುಸರಿಸಬೇಕು ಮತ್ತು ಲಸಿಕೆಯನ್ನು ಪಡೆದುಕೊಳ್ಳಬೇಕು” ಎಂದು ಸರ್ಕಾರ ಹೇಳಿದೆ. ಭಾತರದಲ್ಲಿ ಇದುವರೆಗೆ SARS-CoV-2 ನ ಡೆಲ್ಟಾ ಪ್ಲಸ್ ರೂಪಾಂತರದ ಸುಮಾರು 300 ಪ್ರಕರಣಗಳು ಪತ್ತೆಯಾಗಿವೆ ಎಂದು ಸರ್ಕಾರ ಹೇಳಿದೆ.

ಇದನ್ನೂ ಓದಿ: ಕೇರಳ: ಕೊರೊನಾದಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ 3 ಲಕ್ಷ ರೂ. ಆರ್ಥಿಕ ನೆರವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...