Homeಕರ್ನಾಟಕ‘ವಾರ್ತಾಭಾರತಿ’ಗೆ ಸರ್ಕಾರಿ ಜಾಹಿರಾತು ನಿರಾಕರಣೆ: ಮುಖ್ಯಮಂತ್ರಿಗೆ ಪತ್ರ ಬರೆದ ಸಿದ್ದರಾಮಯ್ಯ

‘ವಾರ್ತಾಭಾರತಿ’ಗೆ ಸರ್ಕಾರಿ ಜಾಹಿರಾತು ನಿರಾಕರಣೆ: ಮುಖ್ಯಮಂತ್ರಿಗೆ ಪತ್ರ ಬರೆದ ಸಿದ್ದರಾಮಯ್ಯ

- Advertisement -
- Advertisement -

ರಾಜ್ಯದ ಪ್ರಮುಖ ದಿನ ಪತ್ರಿಕೆಯಾಗಿರುವ ‘ವಾರ್ತಾಭಾರತಿ’ ಗೆ ರಾಜ್ಯ ಸರ್ಕಾರ ತನ್ನ ಸರ್ಕಾರಿ ಜಾಹಿರಾತುಗಳನ್ನು ನೀಡದೆ ಇರುವುದು ಇದೀಗ ವಿವಾದವಾಗಿ ಮಾರ್ಪಟ್ಟಿದೆ. ವಾರ್ತಾಇಲಾಖೆಯ ಆಯುಕ್ತರಾಗಿರುವ ಡಾ.ಪಿ.ಎಸ್. ಹರ್ಷ ಇದಕ್ಕೆ ಕಾರಣ ಎಂದು ಹೇಳಲಾಗುತ್ತಿದ್ದು, ಅವರು ಪತ್ರಿಕೆಯ ಮೇಲೆ ವೈಯಕ್ತಿಕ ದ್ವೇಷ ಸಾಧಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಇದೀಗ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕೂಡಾ ಪತ್ರಿಕೆಯೊಂದಕ್ಕೆ ಅನ್ಯಾಯ ಮಾಡುತ್ತಿರುವ ರಾಜ್ಯ ಸರ್ಕಾರದ ವಿರುದ್ದ ಧ್ವನಿ ಎತ್ತಿದ್ದಾರೆ.

ಈ ಅನ್ಯಾಯವನ್ನು ಸರಿಪಡಿಸಬೇಕು ಎಂದು ಅವರು ಮುಖ್ಯಮಂತ್ರಿಗೆ ಪತ್ರ ಬರೆದಿದ್ದು, “ವಾರ್ತಾಭಾರತಿ ಪತ್ರಿಕೆಗೆ ಒಂದು ವರ್ಷದಿಂದ ಸುಮಾರು 1 ಕೋಟಿಗೂ ಹೆಚ್ಚಿನ ಮೌಲ್ಯದ ಜಾಹಿರಾತುಗಳನ್ನು ನೀಡದೆ ವಂಚಿಸಿ, ಪಕ್ಷಪಾತ ಮಾಡಲಾಗಿದೆ. ಇದು ಅಕ್ಷಮ್ಯಕರ ನಿಲುವು” ಎಂದು ಅವರು ಪತ್ರದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ‘ವಾರ್ತಾಭಾರತಿ’ ಪತ್ರಿಕೆಗೆ ಜಾಹೀರಾತು ನೀಡದ ವಾರ್ತಾ ಇಲಾಖೆ- ಮಂಗಳೂರಿನ ಮಾಜಿ ಪೊಲೀಸ್ ಕಮೀಷನರ್‌ ಡಾ. ಪಿ.ಎಸ್‌. ಹರ್ಷ ಕೈವಾಡ?

ಸಿದ್ದರಾಮಯ್ಯ ಅವರು ತನ್ನ ಪತ್ರದಲ್ಲಿ, “ಕರ್ನಾಟಕದಲ್ಲಿ ನೈಜ ಸ್ಫೂರ್ತಿಯಲ್ಲಿ ಪತ್ರಿಕಾ ವೃತ್ತಿಯನ್ನು ನಿರ್ವಹಿಸುತ್ತಿರುವ ಮಾಧ್ಯಮಗಳಲ್ಲಿ ‘ವಾರ್ತಾಭಾರತಿ’ ಕೂಡ ಒಂದು. ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ಹಾಗೂ ಮಾಧ್ಯಮ ರಂಗಗಳಿಗೆ ಭಾರತದ ಸಂವಿಧಾನದ ಆಶಯಗಳೆ ಆತ್ಯಂತಿಕವಾಗಿವೆ. ನಮ್ಮ ಸಂವಿಧಾನದ ಆಶಯಗಳಿಗೆ ಪೂರಕವಾಗಿ ಕೆಲಸ ಮಾಡುವವರೆಲ್ಲರೂ ನೈಜ ಸ್ಫೂರ್ತಿಯಿಂದ ಕೆಲಸ ಮಾಡುತ್ತಿದ್ದಾರೆಂದು ಅರ್ಥ” ಎಂದು ಹೇಳಿದ್ದಾರೆ.

“ಈ ನಾಲ್ಕೂ ಅಂಗಗಳು ತಮಗೆ ನಿರ್ಧಿಷ್ಟ ಪಡಿಸಿದ ಚೌಕಟ್ಟುಗಳಲ್ಲೆ ಕೆಲಸ ಮಾಡಬೇಕು. ಹಾಗೆ ಒಂದು ಚೌಕಟ್ಟನ್ನು ವಿಧಿಸಿಕೊಂಡು ಕೆಲಸ ಮಾಡುತ್ತಿರುವ ಪತ್ರಿಕೆಗಳಲ್ಲಿ ವಾರ್ತಾಭಾರತಿ ಕೂಡ ಒಂದು. ನಾನದರ ಓದುಗ ಆಗಿರುವುದರಿಂದ ಈ ಮಾತನ್ನು ಹೇಳುತ್ತಿದ್ದೇನೆ” ಎಂದು ಅವರು ತಿಳಿಸಿದ್ದಾರೆ.

“ಕಳೆದ ಮೂರು ನಾಲ್ಕು ವರ್ಷಗಳಿಂದ ಕೇಂದ್ರ ಸರ್ಕಾರವು ‘ನ್ಯೂಸ್‌ ಪ್ರಿಂಟ್‌’ನ ಜಿಲೆ ವಿಪರೀತ ಹೆಚ್ಚಿಸಿದೆ. ಜಿಎಸ್‌ಟಿಯನ್ನು ಹೆಚ್ಚಿಸಲಾಗಿದೆ. ಇದರಿಂದಾಗಿ ದೊಡ್ಡ ದೊಡ್ಡ ಪತ್ರಿಕೆಗಳು ಕೂಡ ದಿನ ನಿತ್ಯದ ಚಟುವಟಿಕೆಗಳನ್ನು ನಡೆಸಲೂ ಆಗದಷ್ಟು ಸುಸ್ತಾಗುತ್ತಿವೆ. ಇದರಿಂದಾಗಿ ಲೆಕ್ಕವಿಲ್ಲದಷ್ಟು ಪತ್ರಕರ್ತರನ್ನು ಕೆಲಸದಿಂದ ತೆಗೆದು ಹಾಕಿವೆ. ಅನೇಕ ಪತ್ರಿಕೆಗಳು ಸಾಲ ತಗೆದು, ಆಸ್ತಿ ಪಾಸ್ತಿಗಳನ್ನು ಮಾರಿ ನಿರ್ವಹಣೆ ಮಾಡುತ್ತಿವೆ” ಎಂದು ಅವರು ಪತ್ರದಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ.

“ಪ್ರಜಾಪ್ರಭುತ್ವ ಉಳಿಯಬೇಕೆಂದರೆ ಮಾಧ್ಯಮಗಳು ಉಳಿಯಬೇಕು. ಕೇಂದ್ರ ಸರ್ಕಾರಕ್ಕೆ ಈ ಕುರಿತು ಕಾಳಜಿಗಳಿದ್ದರೆ ನ್ಯೂಸ್‌‌ ಪ್ರಿಂಟ್‌ನ ಬೆಲೆಯನ್ನು ಇಳಿಸಬೇಕು. ಅತಿ ಕಡಿಮೆ ದರದಲ್ಲಿ ಪತ್ರಿಕೆಗಳಿಗೆ ಪೂರೈಸಬೇಕು. ಇಂಥ ಸಂದರ್ಭದಲ್ಲಿ ಪತ್ರಿಕೆಗಳು ಸರ್ಕಾರವು ನೀಡುವ ಜಾಹಿರಾತುಗಳ ಮೇಲೆ ಅವಲಂಬಿತವಾಗುತ್ತವೆ. ಸರ್ಕಾರವು ನಿಷ್ಟಕ್ರಪಾತವಾಗಿ ಜಾಹಿರಾತುಗಳನ್ನು ನೀಡಬೇಕು” ಎಂದು ಅವರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಸಂಘ ಪರಿವಾರ ಬೆಂಬಲಿಗ ಪತ್ರಿಕೆ ‘ಹೊಸದಿಗಂತ’ದ ಸಂಪಾದಕ ಮತ್ತು ಪ್ರಕಾಶಕರಿಗೆ ಏಳು ತಿಂಗಳ ಜೈಲು ಶಿಕ್ಷೆ ಖಾಯಂ

“ನಮ್ಮ ಸರ್ಕಾರದ ಅವಧಿಯಲ್ಲಿ ಹೊಸದಿಗಂತದಂತಹ ಪತ್ರಿಕೆಗಳಿಗೆ ಕೂಡ ಉಳಿದ ಪತ್ರಿಕೆಗಳಿಗೆ ನೀಡಿದ ಪ್ರಮಾಣದಲ್ಲೆ ಜಾಹಿರಾತುಗಳನ್ನು ನೀಡಿದ್ದೆವು. ಜನರ ತೆರಿಗೆ ಹಣದಲ್ಲಿ ಸರ್ಕಾರ ನಡೆಸುವಾಗ ಸರ್ಕಾರಗಳು ಪಕ್ಷಪಾತ ಮಾಡದಂತೆ ಎಚ್ಚರವಹಿಸಬೇಕಾಗುತ್ತದೆ. ಕನ್ನಡದ 9 ದಿನಪತ್ರಿಕೆಗಳನ್ನು ರಾಜ್ಯ ಪತ್ರಿಕೆಗಳಂದು ಗುರುತಿಸಲಾಗಿದೆ. ಅದರಲ್ಲಿ ವಾರ್ತಾಭಾರತಿ ಕೂಡ ಒಂದು. ಆದರೆ ಸರ್ಕಾರವು ಪಕ್ಷಪಾತ ಮಾಡಿ ಕಳೆದ ಒಂದು ವರ್ಷದಿಂದ ಸುಮಾರು 1 ಕೋಟಿಗೂ ಹೆಚ್ಚಿನ ಮೌಲ್ಯದ ಜಾಹಿರಾತುಗಳನ್ನು ನೀಡದೆ ವಂಚಿಸಿ, ಪಕ್ಷಪಾತ ಮಾಡಲಾಗಿದೆ. ಇದು ಅಕ್ಷಮ್ಯಕರ ನಿಲುವು” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಪತ್ರಿಕೆಗಳ ಕೆಲಸವೆ ಆಡಳಿತ ನಡೆಸುವ ಸರ್ಕಾರಗಳ ಮುಖಕ್ಕೆ ಕನ್ನಡಿ ಹಿಡಿಯುವುದು. ಸರಿಯಾದ ಕೆಲಸ ಮಾಡಿದರೆ ಬೆನ್ನುತಟ್ಟುವುದು, ತಪ್ಪು ಮಾಡಿದರೆ ತಪ್ಪು ಮಾಡುತ್ತಿದ್ದೀರೆಂದು ಹೇಳಬೇಕಾದುದು ಮಾಧ್ಯಮಗಳ ನೈತಿಕ ಜವಾಬ್ದಾರಿ. ಈ ನಿಲುವಿಗೆ ವಿರುದ್ಧವಾದರೆ ಅದನ್ನು ಅನೈತಿಕ ಪತ್ರಿಕೋದ್ಯಮ ಎನ್ನಬೇಕಾಗುತ್ತದೆ. ನೈತಿಕ ಪತ್ರಿಕೋದ್ಯಮವನ್ನು ಆರೋಗ್ಯಕರ ಮನಸ್ಸುಗಳು ಬೆಂಬಲಿಸಬೇಕು, ಪ್ರೋತ್ಸಾಹಿಸಬೇಕು” ಎಂದು ಅವರು ತಿಳಿಸಿದ್ದಾರೆ.

“ಆದ್ದರಿಂದ ಸರ್ಕಾರವು ವಾರ್ತಾಭಾರತಿಗೆ ಮಾಡಿರುವ ಅನ್ಯಾಯವನ್ನು ಕೂಡಲೆ ಸರಿಪಡಿಸಿ ಇದುವರೆಗೆ ತಡೆಹಿಡಿದಿರುವ ಮೌಲ್ಯದಷ್ಟು ಜಾಹಿರಾತುಗಳನ್ನು ನೀಡಬೇಕು. ಅಲ್ಲದೆ ಇನ್ನು ಮುಂದೆ ಸರ್ಕಾರ ನೀಡುವ ಜಾಹಿರಾತುಗಳನ್ನು ತಾರತಮ್ಯವಿಲ್ಲದೆ ಬಿಡುಗಡೆ ಮಾಡಬೇಕು” ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿ ಪರ ಪ್ರಚಾರ: 8 ಪತ್ರಿಕೆಗಳಿಗೆ ಚುನಾವಣಾ ಆಯೋಗ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. That’s true … Varthabarathi is a great paper, reports ground reality as it is. It’s unjust from PS Harsha take personal revenge.
    Change this biased officer if he is found guilty.
    We need media/newspaper which is genuine and reports the reality of the world.

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...