Homeಕರ್ನಾಟಕ‘ವಾರ್ತಾಭಾರತಿ’ಗೆ ಸರ್ಕಾರಿ ಜಾಹಿರಾತು ನಿರಾಕರಣೆ: ಮುಖ್ಯಮಂತ್ರಿಗೆ ಪತ್ರ ಬರೆದ ಸಿದ್ದರಾಮಯ್ಯ

‘ವಾರ್ತಾಭಾರತಿ’ಗೆ ಸರ್ಕಾರಿ ಜಾಹಿರಾತು ನಿರಾಕರಣೆ: ಮುಖ್ಯಮಂತ್ರಿಗೆ ಪತ್ರ ಬರೆದ ಸಿದ್ದರಾಮಯ್ಯ

- Advertisement -
- Advertisement -

ರಾಜ್ಯದ ಪ್ರಮುಖ ದಿನ ಪತ್ರಿಕೆಯಾಗಿರುವ ‘ವಾರ್ತಾಭಾರತಿ’ ಗೆ ರಾಜ್ಯ ಸರ್ಕಾರ ತನ್ನ ಸರ್ಕಾರಿ ಜಾಹಿರಾತುಗಳನ್ನು ನೀಡದೆ ಇರುವುದು ಇದೀಗ ವಿವಾದವಾಗಿ ಮಾರ್ಪಟ್ಟಿದೆ. ವಾರ್ತಾಇಲಾಖೆಯ ಆಯುಕ್ತರಾಗಿರುವ ಡಾ.ಪಿ.ಎಸ್. ಹರ್ಷ ಇದಕ್ಕೆ ಕಾರಣ ಎಂದು ಹೇಳಲಾಗುತ್ತಿದ್ದು, ಅವರು ಪತ್ರಿಕೆಯ ಮೇಲೆ ವೈಯಕ್ತಿಕ ದ್ವೇಷ ಸಾಧಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಇದೀಗ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕೂಡಾ ಪತ್ರಿಕೆಯೊಂದಕ್ಕೆ ಅನ್ಯಾಯ ಮಾಡುತ್ತಿರುವ ರಾಜ್ಯ ಸರ್ಕಾರದ ವಿರುದ್ದ ಧ್ವನಿ ಎತ್ತಿದ್ದಾರೆ.

ಈ ಅನ್ಯಾಯವನ್ನು ಸರಿಪಡಿಸಬೇಕು ಎಂದು ಅವರು ಮುಖ್ಯಮಂತ್ರಿಗೆ ಪತ್ರ ಬರೆದಿದ್ದು, “ವಾರ್ತಾಭಾರತಿ ಪತ್ರಿಕೆಗೆ ಒಂದು ವರ್ಷದಿಂದ ಸುಮಾರು 1 ಕೋಟಿಗೂ ಹೆಚ್ಚಿನ ಮೌಲ್ಯದ ಜಾಹಿರಾತುಗಳನ್ನು ನೀಡದೆ ವಂಚಿಸಿ, ಪಕ್ಷಪಾತ ಮಾಡಲಾಗಿದೆ. ಇದು ಅಕ್ಷಮ್ಯಕರ ನಿಲುವು” ಎಂದು ಅವರು ಪತ್ರದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ‘ವಾರ್ತಾಭಾರತಿ’ ಪತ್ರಿಕೆಗೆ ಜಾಹೀರಾತು ನೀಡದ ವಾರ್ತಾ ಇಲಾಖೆ- ಮಂಗಳೂರಿನ ಮಾಜಿ ಪೊಲೀಸ್ ಕಮೀಷನರ್‌ ಡಾ. ಪಿ.ಎಸ್‌. ಹರ್ಷ ಕೈವಾಡ?

ಸಿದ್ದರಾಮಯ್ಯ ಅವರು ತನ್ನ ಪತ್ರದಲ್ಲಿ, “ಕರ್ನಾಟಕದಲ್ಲಿ ನೈಜ ಸ್ಫೂರ್ತಿಯಲ್ಲಿ ಪತ್ರಿಕಾ ವೃತ್ತಿಯನ್ನು ನಿರ್ವಹಿಸುತ್ತಿರುವ ಮಾಧ್ಯಮಗಳಲ್ಲಿ ‘ವಾರ್ತಾಭಾರತಿ’ ಕೂಡ ಒಂದು. ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ಹಾಗೂ ಮಾಧ್ಯಮ ರಂಗಗಳಿಗೆ ಭಾರತದ ಸಂವಿಧಾನದ ಆಶಯಗಳೆ ಆತ್ಯಂತಿಕವಾಗಿವೆ. ನಮ್ಮ ಸಂವಿಧಾನದ ಆಶಯಗಳಿಗೆ ಪೂರಕವಾಗಿ ಕೆಲಸ ಮಾಡುವವರೆಲ್ಲರೂ ನೈಜ ಸ್ಫೂರ್ತಿಯಿಂದ ಕೆಲಸ ಮಾಡುತ್ತಿದ್ದಾರೆಂದು ಅರ್ಥ” ಎಂದು ಹೇಳಿದ್ದಾರೆ.

“ಈ ನಾಲ್ಕೂ ಅಂಗಗಳು ತಮಗೆ ನಿರ್ಧಿಷ್ಟ ಪಡಿಸಿದ ಚೌಕಟ್ಟುಗಳಲ್ಲೆ ಕೆಲಸ ಮಾಡಬೇಕು. ಹಾಗೆ ಒಂದು ಚೌಕಟ್ಟನ್ನು ವಿಧಿಸಿಕೊಂಡು ಕೆಲಸ ಮಾಡುತ್ತಿರುವ ಪತ್ರಿಕೆಗಳಲ್ಲಿ ವಾರ್ತಾಭಾರತಿ ಕೂಡ ಒಂದು. ನಾನದರ ಓದುಗ ಆಗಿರುವುದರಿಂದ ಈ ಮಾತನ್ನು ಹೇಳುತ್ತಿದ್ದೇನೆ” ಎಂದು ಅವರು ತಿಳಿಸಿದ್ದಾರೆ.

“ಕಳೆದ ಮೂರು ನಾಲ್ಕು ವರ್ಷಗಳಿಂದ ಕೇಂದ್ರ ಸರ್ಕಾರವು ‘ನ್ಯೂಸ್‌ ಪ್ರಿಂಟ್‌’ನ ಜಿಲೆ ವಿಪರೀತ ಹೆಚ್ಚಿಸಿದೆ. ಜಿಎಸ್‌ಟಿಯನ್ನು ಹೆಚ್ಚಿಸಲಾಗಿದೆ. ಇದರಿಂದಾಗಿ ದೊಡ್ಡ ದೊಡ್ಡ ಪತ್ರಿಕೆಗಳು ಕೂಡ ದಿನ ನಿತ್ಯದ ಚಟುವಟಿಕೆಗಳನ್ನು ನಡೆಸಲೂ ಆಗದಷ್ಟು ಸುಸ್ತಾಗುತ್ತಿವೆ. ಇದರಿಂದಾಗಿ ಲೆಕ್ಕವಿಲ್ಲದಷ್ಟು ಪತ್ರಕರ್ತರನ್ನು ಕೆಲಸದಿಂದ ತೆಗೆದು ಹಾಕಿವೆ. ಅನೇಕ ಪತ್ರಿಕೆಗಳು ಸಾಲ ತಗೆದು, ಆಸ್ತಿ ಪಾಸ್ತಿಗಳನ್ನು ಮಾರಿ ನಿರ್ವಹಣೆ ಮಾಡುತ್ತಿವೆ” ಎಂದು ಅವರು ಪತ್ರದಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ.

“ಪ್ರಜಾಪ್ರಭುತ್ವ ಉಳಿಯಬೇಕೆಂದರೆ ಮಾಧ್ಯಮಗಳು ಉಳಿಯಬೇಕು. ಕೇಂದ್ರ ಸರ್ಕಾರಕ್ಕೆ ಈ ಕುರಿತು ಕಾಳಜಿಗಳಿದ್ದರೆ ನ್ಯೂಸ್‌‌ ಪ್ರಿಂಟ್‌ನ ಬೆಲೆಯನ್ನು ಇಳಿಸಬೇಕು. ಅತಿ ಕಡಿಮೆ ದರದಲ್ಲಿ ಪತ್ರಿಕೆಗಳಿಗೆ ಪೂರೈಸಬೇಕು. ಇಂಥ ಸಂದರ್ಭದಲ್ಲಿ ಪತ್ರಿಕೆಗಳು ಸರ್ಕಾರವು ನೀಡುವ ಜಾಹಿರಾತುಗಳ ಮೇಲೆ ಅವಲಂಬಿತವಾಗುತ್ತವೆ. ಸರ್ಕಾರವು ನಿಷ್ಟಕ್ರಪಾತವಾಗಿ ಜಾಹಿರಾತುಗಳನ್ನು ನೀಡಬೇಕು” ಎಂದು ಅವರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಸಂಘ ಪರಿವಾರ ಬೆಂಬಲಿಗ ಪತ್ರಿಕೆ ‘ಹೊಸದಿಗಂತ’ದ ಸಂಪಾದಕ ಮತ್ತು ಪ್ರಕಾಶಕರಿಗೆ ಏಳು ತಿಂಗಳ ಜೈಲು ಶಿಕ್ಷೆ ಖಾಯಂ

“ನಮ್ಮ ಸರ್ಕಾರದ ಅವಧಿಯಲ್ಲಿ ಹೊಸದಿಗಂತದಂತಹ ಪತ್ರಿಕೆಗಳಿಗೆ ಕೂಡ ಉಳಿದ ಪತ್ರಿಕೆಗಳಿಗೆ ನೀಡಿದ ಪ್ರಮಾಣದಲ್ಲೆ ಜಾಹಿರಾತುಗಳನ್ನು ನೀಡಿದ್ದೆವು. ಜನರ ತೆರಿಗೆ ಹಣದಲ್ಲಿ ಸರ್ಕಾರ ನಡೆಸುವಾಗ ಸರ್ಕಾರಗಳು ಪಕ್ಷಪಾತ ಮಾಡದಂತೆ ಎಚ್ಚರವಹಿಸಬೇಕಾಗುತ್ತದೆ. ಕನ್ನಡದ 9 ದಿನಪತ್ರಿಕೆಗಳನ್ನು ರಾಜ್ಯ ಪತ್ರಿಕೆಗಳಂದು ಗುರುತಿಸಲಾಗಿದೆ. ಅದರಲ್ಲಿ ವಾರ್ತಾಭಾರತಿ ಕೂಡ ಒಂದು. ಆದರೆ ಸರ್ಕಾರವು ಪಕ್ಷಪಾತ ಮಾಡಿ ಕಳೆದ ಒಂದು ವರ್ಷದಿಂದ ಸುಮಾರು 1 ಕೋಟಿಗೂ ಹೆಚ್ಚಿನ ಮೌಲ್ಯದ ಜಾಹಿರಾತುಗಳನ್ನು ನೀಡದೆ ವಂಚಿಸಿ, ಪಕ್ಷಪಾತ ಮಾಡಲಾಗಿದೆ. ಇದು ಅಕ್ಷಮ್ಯಕರ ನಿಲುವು” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಪತ್ರಿಕೆಗಳ ಕೆಲಸವೆ ಆಡಳಿತ ನಡೆಸುವ ಸರ್ಕಾರಗಳ ಮುಖಕ್ಕೆ ಕನ್ನಡಿ ಹಿಡಿಯುವುದು. ಸರಿಯಾದ ಕೆಲಸ ಮಾಡಿದರೆ ಬೆನ್ನುತಟ್ಟುವುದು, ತಪ್ಪು ಮಾಡಿದರೆ ತಪ್ಪು ಮಾಡುತ್ತಿದ್ದೀರೆಂದು ಹೇಳಬೇಕಾದುದು ಮಾಧ್ಯಮಗಳ ನೈತಿಕ ಜವಾಬ್ದಾರಿ. ಈ ನಿಲುವಿಗೆ ವಿರುದ್ಧವಾದರೆ ಅದನ್ನು ಅನೈತಿಕ ಪತ್ರಿಕೋದ್ಯಮ ಎನ್ನಬೇಕಾಗುತ್ತದೆ. ನೈತಿಕ ಪತ್ರಿಕೋದ್ಯಮವನ್ನು ಆರೋಗ್ಯಕರ ಮನಸ್ಸುಗಳು ಬೆಂಬಲಿಸಬೇಕು, ಪ್ರೋತ್ಸಾಹಿಸಬೇಕು” ಎಂದು ಅವರು ತಿಳಿಸಿದ್ದಾರೆ.

“ಆದ್ದರಿಂದ ಸರ್ಕಾರವು ವಾರ್ತಾಭಾರತಿಗೆ ಮಾಡಿರುವ ಅನ್ಯಾಯವನ್ನು ಕೂಡಲೆ ಸರಿಪಡಿಸಿ ಇದುವರೆಗೆ ತಡೆಹಿಡಿದಿರುವ ಮೌಲ್ಯದಷ್ಟು ಜಾಹಿರಾತುಗಳನ್ನು ನೀಡಬೇಕು. ಅಲ್ಲದೆ ಇನ್ನು ಮುಂದೆ ಸರ್ಕಾರ ನೀಡುವ ಜಾಹಿರಾತುಗಳನ್ನು ತಾರತಮ್ಯವಿಲ್ಲದೆ ಬಿಡುಗಡೆ ಮಾಡಬೇಕು” ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿ ಪರ ಪ್ರಚಾರ: 8 ಪತ್ರಿಕೆಗಳಿಗೆ ಚುನಾವಣಾ ಆಯೋಗ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. That’s true … Varthabarathi is a great paper, reports ground reality as it is. It’s unjust from PS Harsha take personal revenge.
    Change this biased officer if he is found guilty.
    We need media/newspaper which is genuine and reports the reality of the world.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...