Homeಕರ್ನಾಟಕ‘ವಾರ್ತಾಭಾರತಿ’ಗೆ ಸರ್ಕಾರಿ ಜಾಹಿರಾತು ನಿರಾಕರಣೆ: ಮುಖ್ಯಮಂತ್ರಿಗೆ ಪತ್ರ ಬರೆದ ಸಿದ್ದರಾಮಯ್ಯ

‘ವಾರ್ತಾಭಾರತಿ’ಗೆ ಸರ್ಕಾರಿ ಜಾಹಿರಾತು ನಿರಾಕರಣೆ: ಮುಖ್ಯಮಂತ್ರಿಗೆ ಪತ್ರ ಬರೆದ ಸಿದ್ದರಾಮಯ್ಯ

- Advertisement -
- Advertisement -

ರಾಜ್ಯದ ಪ್ರಮುಖ ದಿನ ಪತ್ರಿಕೆಯಾಗಿರುವ ‘ವಾರ್ತಾಭಾರತಿ’ ಗೆ ರಾಜ್ಯ ಸರ್ಕಾರ ತನ್ನ ಸರ್ಕಾರಿ ಜಾಹಿರಾತುಗಳನ್ನು ನೀಡದೆ ಇರುವುದು ಇದೀಗ ವಿವಾದವಾಗಿ ಮಾರ್ಪಟ್ಟಿದೆ. ವಾರ್ತಾಇಲಾಖೆಯ ಆಯುಕ್ತರಾಗಿರುವ ಡಾ.ಪಿ.ಎಸ್. ಹರ್ಷ ಇದಕ್ಕೆ ಕಾರಣ ಎಂದು ಹೇಳಲಾಗುತ್ತಿದ್ದು, ಅವರು ಪತ್ರಿಕೆಯ ಮೇಲೆ ವೈಯಕ್ತಿಕ ದ್ವೇಷ ಸಾಧಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಇದೀಗ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕೂಡಾ ಪತ್ರಿಕೆಯೊಂದಕ್ಕೆ ಅನ್ಯಾಯ ಮಾಡುತ್ತಿರುವ ರಾಜ್ಯ ಸರ್ಕಾರದ ವಿರುದ್ದ ಧ್ವನಿ ಎತ್ತಿದ್ದಾರೆ.

ಈ ಅನ್ಯಾಯವನ್ನು ಸರಿಪಡಿಸಬೇಕು ಎಂದು ಅವರು ಮುಖ್ಯಮಂತ್ರಿಗೆ ಪತ್ರ ಬರೆದಿದ್ದು, “ವಾರ್ತಾಭಾರತಿ ಪತ್ರಿಕೆಗೆ ಒಂದು ವರ್ಷದಿಂದ ಸುಮಾರು 1 ಕೋಟಿಗೂ ಹೆಚ್ಚಿನ ಮೌಲ್ಯದ ಜಾಹಿರಾತುಗಳನ್ನು ನೀಡದೆ ವಂಚಿಸಿ, ಪಕ್ಷಪಾತ ಮಾಡಲಾಗಿದೆ. ಇದು ಅಕ್ಷಮ್ಯಕರ ನಿಲುವು” ಎಂದು ಅವರು ಪತ್ರದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ‘ವಾರ್ತಾಭಾರತಿ’ ಪತ್ರಿಕೆಗೆ ಜಾಹೀರಾತು ನೀಡದ ವಾರ್ತಾ ಇಲಾಖೆ- ಮಂಗಳೂರಿನ ಮಾಜಿ ಪೊಲೀಸ್ ಕಮೀಷನರ್‌ ಡಾ. ಪಿ.ಎಸ್‌. ಹರ್ಷ ಕೈವಾಡ?

ಸಿದ್ದರಾಮಯ್ಯ ಅವರು ತನ್ನ ಪತ್ರದಲ್ಲಿ, “ಕರ್ನಾಟಕದಲ್ಲಿ ನೈಜ ಸ್ಫೂರ್ತಿಯಲ್ಲಿ ಪತ್ರಿಕಾ ವೃತ್ತಿಯನ್ನು ನಿರ್ವಹಿಸುತ್ತಿರುವ ಮಾಧ್ಯಮಗಳಲ್ಲಿ ‘ವಾರ್ತಾಭಾರತಿ’ ಕೂಡ ಒಂದು. ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ಹಾಗೂ ಮಾಧ್ಯಮ ರಂಗಗಳಿಗೆ ಭಾರತದ ಸಂವಿಧಾನದ ಆಶಯಗಳೆ ಆತ್ಯಂತಿಕವಾಗಿವೆ. ನಮ್ಮ ಸಂವಿಧಾನದ ಆಶಯಗಳಿಗೆ ಪೂರಕವಾಗಿ ಕೆಲಸ ಮಾಡುವವರೆಲ್ಲರೂ ನೈಜ ಸ್ಫೂರ್ತಿಯಿಂದ ಕೆಲಸ ಮಾಡುತ್ತಿದ್ದಾರೆಂದು ಅರ್ಥ” ಎಂದು ಹೇಳಿದ್ದಾರೆ.

“ಈ ನಾಲ್ಕೂ ಅಂಗಗಳು ತಮಗೆ ನಿರ್ಧಿಷ್ಟ ಪಡಿಸಿದ ಚೌಕಟ್ಟುಗಳಲ್ಲೆ ಕೆಲಸ ಮಾಡಬೇಕು. ಹಾಗೆ ಒಂದು ಚೌಕಟ್ಟನ್ನು ವಿಧಿಸಿಕೊಂಡು ಕೆಲಸ ಮಾಡುತ್ತಿರುವ ಪತ್ರಿಕೆಗಳಲ್ಲಿ ವಾರ್ತಾಭಾರತಿ ಕೂಡ ಒಂದು. ನಾನದರ ಓದುಗ ಆಗಿರುವುದರಿಂದ ಈ ಮಾತನ್ನು ಹೇಳುತ್ತಿದ್ದೇನೆ” ಎಂದು ಅವರು ತಿಳಿಸಿದ್ದಾರೆ.

“ಕಳೆದ ಮೂರು ನಾಲ್ಕು ವರ್ಷಗಳಿಂದ ಕೇಂದ್ರ ಸರ್ಕಾರವು ‘ನ್ಯೂಸ್‌ ಪ್ರಿಂಟ್‌’ನ ಜಿಲೆ ವಿಪರೀತ ಹೆಚ್ಚಿಸಿದೆ. ಜಿಎಸ್‌ಟಿಯನ್ನು ಹೆಚ್ಚಿಸಲಾಗಿದೆ. ಇದರಿಂದಾಗಿ ದೊಡ್ಡ ದೊಡ್ಡ ಪತ್ರಿಕೆಗಳು ಕೂಡ ದಿನ ನಿತ್ಯದ ಚಟುವಟಿಕೆಗಳನ್ನು ನಡೆಸಲೂ ಆಗದಷ್ಟು ಸುಸ್ತಾಗುತ್ತಿವೆ. ಇದರಿಂದಾಗಿ ಲೆಕ್ಕವಿಲ್ಲದಷ್ಟು ಪತ್ರಕರ್ತರನ್ನು ಕೆಲಸದಿಂದ ತೆಗೆದು ಹಾಕಿವೆ. ಅನೇಕ ಪತ್ರಿಕೆಗಳು ಸಾಲ ತಗೆದು, ಆಸ್ತಿ ಪಾಸ್ತಿಗಳನ್ನು ಮಾರಿ ನಿರ್ವಹಣೆ ಮಾಡುತ್ತಿವೆ” ಎಂದು ಅವರು ಪತ್ರದಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ.

“ಪ್ರಜಾಪ್ರಭುತ್ವ ಉಳಿಯಬೇಕೆಂದರೆ ಮಾಧ್ಯಮಗಳು ಉಳಿಯಬೇಕು. ಕೇಂದ್ರ ಸರ್ಕಾರಕ್ಕೆ ಈ ಕುರಿತು ಕಾಳಜಿಗಳಿದ್ದರೆ ನ್ಯೂಸ್‌‌ ಪ್ರಿಂಟ್‌ನ ಬೆಲೆಯನ್ನು ಇಳಿಸಬೇಕು. ಅತಿ ಕಡಿಮೆ ದರದಲ್ಲಿ ಪತ್ರಿಕೆಗಳಿಗೆ ಪೂರೈಸಬೇಕು. ಇಂಥ ಸಂದರ್ಭದಲ್ಲಿ ಪತ್ರಿಕೆಗಳು ಸರ್ಕಾರವು ನೀಡುವ ಜಾಹಿರಾತುಗಳ ಮೇಲೆ ಅವಲಂಬಿತವಾಗುತ್ತವೆ. ಸರ್ಕಾರವು ನಿಷ್ಟಕ್ರಪಾತವಾಗಿ ಜಾಹಿರಾತುಗಳನ್ನು ನೀಡಬೇಕು” ಎಂದು ಅವರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಸಂಘ ಪರಿವಾರ ಬೆಂಬಲಿಗ ಪತ್ರಿಕೆ ‘ಹೊಸದಿಗಂತ’ದ ಸಂಪಾದಕ ಮತ್ತು ಪ್ರಕಾಶಕರಿಗೆ ಏಳು ತಿಂಗಳ ಜೈಲು ಶಿಕ್ಷೆ ಖಾಯಂ

“ನಮ್ಮ ಸರ್ಕಾರದ ಅವಧಿಯಲ್ಲಿ ಹೊಸದಿಗಂತದಂತಹ ಪತ್ರಿಕೆಗಳಿಗೆ ಕೂಡ ಉಳಿದ ಪತ್ರಿಕೆಗಳಿಗೆ ನೀಡಿದ ಪ್ರಮಾಣದಲ್ಲೆ ಜಾಹಿರಾತುಗಳನ್ನು ನೀಡಿದ್ದೆವು. ಜನರ ತೆರಿಗೆ ಹಣದಲ್ಲಿ ಸರ್ಕಾರ ನಡೆಸುವಾಗ ಸರ್ಕಾರಗಳು ಪಕ್ಷಪಾತ ಮಾಡದಂತೆ ಎಚ್ಚರವಹಿಸಬೇಕಾಗುತ್ತದೆ. ಕನ್ನಡದ 9 ದಿನಪತ್ರಿಕೆಗಳನ್ನು ರಾಜ್ಯ ಪತ್ರಿಕೆಗಳಂದು ಗುರುತಿಸಲಾಗಿದೆ. ಅದರಲ್ಲಿ ವಾರ್ತಾಭಾರತಿ ಕೂಡ ಒಂದು. ಆದರೆ ಸರ್ಕಾರವು ಪಕ್ಷಪಾತ ಮಾಡಿ ಕಳೆದ ಒಂದು ವರ್ಷದಿಂದ ಸುಮಾರು 1 ಕೋಟಿಗೂ ಹೆಚ್ಚಿನ ಮೌಲ್ಯದ ಜಾಹಿರಾತುಗಳನ್ನು ನೀಡದೆ ವಂಚಿಸಿ, ಪಕ್ಷಪಾತ ಮಾಡಲಾಗಿದೆ. ಇದು ಅಕ್ಷಮ್ಯಕರ ನಿಲುವು” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಪತ್ರಿಕೆಗಳ ಕೆಲಸವೆ ಆಡಳಿತ ನಡೆಸುವ ಸರ್ಕಾರಗಳ ಮುಖಕ್ಕೆ ಕನ್ನಡಿ ಹಿಡಿಯುವುದು. ಸರಿಯಾದ ಕೆಲಸ ಮಾಡಿದರೆ ಬೆನ್ನುತಟ್ಟುವುದು, ತಪ್ಪು ಮಾಡಿದರೆ ತಪ್ಪು ಮಾಡುತ್ತಿದ್ದೀರೆಂದು ಹೇಳಬೇಕಾದುದು ಮಾಧ್ಯಮಗಳ ನೈತಿಕ ಜವಾಬ್ದಾರಿ. ಈ ನಿಲುವಿಗೆ ವಿರುದ್ಧವಾದರೆ ಅದನ್ನು ಅನೈತಿಕ ಪತ್ರಿಕೋದ್ಯಮ ಎನ್ನಬೇಕಾಗುತ್ತದೆ. ನೈತಿಕ ಪತ್ರಿಕೋದ್ಯಮವನ್ನು ಆರೋಗ್ಯಕರ ಮನಸ್ಸುಗಳು ಬೆಂಬಲಿಸಬೇಕು, ಪ್ರೋತ್ಸಾಹಿಸಬೇಕು” ಎಂದು ಅವರು ತಿಳಿಸಿದ್ದಾರೆ.

“ಆದ್ದರಿಂದ ಸರ್ಕಾರವು ವಾರ್ತಾಭಾರತಿಗೆ ಮಾಡಿರುವ ಅನ್ಯಾಯವನ್ನು ಕೂಡಲೆ ಸರಿಪಡಿಸಿ ಇದುವರೆಗೆ ತಡೆಹಿಡಿದಿರುವ ಮೌಲ್ಯದಷ್ಟು ಜಾಹಿರಾತುಗಳನ್ನು ನೀಡಬೇಕು. ಅಲ್ಲದೆ ಇನ್ನು ಮುಂದೆ ಸರ್ಕಾರ ನೀಡುವ ಜಾಹಿರಾತುಗಳನ್ನು ತಾರತಮ್ಯವಿಲ್ಲದೆ ಬಿಡುಗಡೆ ಮಾಡಬೇಕು” ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿ ಪರ ಪ್ರಚಾರ: 8 ಪತ್ರಿಕೆಗಳಿಗೆ ಚುನಾವಣಾ ಆಯೋಗ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. That’s true … Varthabarathi is a great paper, reports ground reality as it is. It’s unjust from PS Harsha take personal revenge.
    Change this biased officer if he is found guilty.
    We need media/newspaper which is genuine and reports the reality of the world.

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...