Homeಚಳವಳಿರೈತ ಮಹಿಳೆಗೆ ಪರಿಹಾರ ವಿಳಂಬ: ನ್ಯಾಯಾಂಗ ನಿಂದನೆ ಆರೋಪದಲ್ಲಿ ಆಂಧ್ರದ IAS ಅಧಿಕಾರಿಗಳಿಗೆ ಜೈಲು

ರೈತ ಮಹಿಳೆಗೆ ಪರಿಹಾರ ವಿಳಂಬ: ನ್ಯಾಯಾಂಗ ನಿಂದನೆ ಆರೋಪದಲ್ಲಿ ಆಂಧ್ರದ IAS ಅಧಿಕಾರಿಗಳಿಗೆ ಜೈಲು

- Advertisement -
- Advertisement -

ರೈತ ಮಹಿಳೆಗೆ ಪರಿಹಾರ ನೀಡುವಂತೆ ಫೆಬ್ರವರಿ 10, 2017 ರ ನ್ಯಾಯಾಲಯ ನೀಡಿದ್ದ ಆದೇಶಕ್ಕೆ ಉದ್ದೇಶಪೂರ್ವಕವಾಗಿ ಅಸಹಕಾರ ನೀಡಿ, ನ್ಯಾಯಾಂಗ ನಿಂದನೆ ಮಾಡಿದ ಆರೋಪದಲ್ಲಿ ಆಂಧ್ರಪ್ರದೇಶ ಹೈಕೋರ್ಟ್ ನಾಲ್ವರು ಐಎಎಸ್ ಅಧಿಕಾರಿಗಳಿಗೆ ಮತ್ತು ಒಬ್ಬ ನಿವೃತ್ತ ಅಧಿಕಾರಿಗೆ ಜೈಲು ಶಿಕ್ಷೆ ವಿಧಿಸಿದೆ.

ಇದೇ ವೇಳೆ ಮುಖ್ಯ ಕಾರ್ಯದರ್ಶಿ ಆದಿತ್ಯ ನಾಥ್ ದಾಸ್ ಸೇರಿದಂತೆ ಇತರ ಮೂವರು ಐಎಎಸ್ ಅಧಿಕಾರಿಗಳ ಮೇಲಿನ ಆರೋಪವನ್ನು ವಜಾಗೊಳಿಸಲಾಗಿದೆ.

ಶಿಕ್ಷೆಗೊಳಗಾದ ಐಎಎಸ್ ಅಧಿಕಾರಿಗಳಲ್ಲಿ ಪ್ರಧಾನ ಹಣಕಾಸು ಕಾರ್ಯದರ್ಶಿ ಶಂಶೀರ್ ಸಿಂಗ್ ರಾವತ್, ಮುಖ್ಯಮಂತ್ರಿಯವರ ಹೆಚ್ಚುವರಿ ಕಾರ್ಯದರ್ಶಿ ರೇವು ಮುತ್ಯಾಲ ರಾಜು, ನೆಲ್ಲೂರು ಜಿಲ್ಲಾಧಿಕಾರಿ ಕೆವಿಎನ್ ಚಕ್ರಧರಾ ಬಾಬು ಮತ್ತು ಮಾಜಿ ಕಲೆಕ್ಟರ್ ಎಂ.ವಿ ಶೇಷಗಿರಿ ಬಾಬು ಸೇರಿದ್ದಾರೆ.

ಮುತ್ಯಾಲ ರಾಜು ಈ ಹಿಂದೆ ಎಸ್ಪಿಎಸ್ ನೆಲ್ಲೂರು ಜಿಲ್ಲೆಯ ಜಿಲ್ಲಾಧಿಕಾರಿ ಆಗಿಯೂ ಸೇವೆ ಸಲ್ಲಿಸಿದ್ದರು. 2017 ರಲ್ಲಿ ಆಗಿನ ಪ್ರಧಾನ ಕಾರ್ಯದರ್ಶಿ (ಕಂದಾಯ) ಆಗಿದ್ದ ನಿವೃತ್ತ ಐಎಎಸ್ ಅಧಿಕಾರಿ ಮನಮೋಹನ್ ಸಿಂಗ್ ಕೂಡ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿದ್ದಾರೆ.

ಇದನ್ನೂ ಓದಿ: ದೆಹಲಿ ಗಲಭೆ: ಒಂದೇ ಘಟನೆ ಬಗ್ಗೆ ದಾಖಲಾದ ನಾಲ್ಕು ಎಫ್‌ಐಆರ್‌ಗಳನ್ನು ರದ್ದುಗೊಳಿಸಿದ ಹೈಕೋರ್ಟ್

ಪ್ರಕರಣವೇನು…?

ತಮ್ಮ ಮೂರು ಎಕರೆ ಭೂಮಿಯನ್ನು ಕಂದಾಯ ಅಧಿಕಾರಿಗಳು ಯಾವುದೇ ಸೂಚನೆ ಅಥವಾ ಪರಿಹಾರ ನೀಡದೆ ರಾಷ್ಟ್ರೀಯ ಮಾನಸಿಕ ಆರೋಗ್ಯ ಸಂಸ್ಥೆಗೆ ಮಂಜೂರು ಮಾಡಿದ್ದಾರೆ ಎಂದು ರೈತ ಮಹಿಳೆ ತಲ್ಲಪಕ ಸಾವಿತ್ರಮ್ಮ ಅವರು 2017 ರಲ್ಲಿ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದರು.

ಡಿಸೆಂಬರ್ 2016 ರಲ್ಲಿ, ಕಂದಾಯ ಅಧಿಕಾರಿಗಳು ಮೂರು ಎಕರೆ ಭೂಮಿಗೆ ಪರಿಹಾರವನ್ನು ನೀಡುವುದಾಗಿ ಭರವಸೆ ನೀಡಿದರು ಮತ್ತು ಅದನ್ನು ಲೋಕಾಯುಕ್ತಕ್ಕೆ ವರದಿ ಮಾಡಲಾಗಿತ್ತು ಎಂದು ರೈತ ಮಹಿಳೆ ಅರ್ಜಿಯಲ್ಲಿ ತಿಳಿಸಿದ್ದರು.

ಹೈಕೋರ್ಟ್‌ನ ನ್ಯಾಯಮೂರ್ತಿ ಎ ರಾಜಶೇಖರ್ ರೆಡ್ಡಿ, ಫೆಬ್ರವರಿ 10, 2017 ರಂದು ಅರ್ಜಿದಾರರ ಪರವಾಗಿ ತೀರ್ಪು ನೀಡಿದ್ದರು. ಮೂರು ತಿಂಗಳಲ್ಲಿ ಆಕೆಗೆ ಪರಿಹಾರ ನೀಡುವಂತೆ ಸಂಬಂಧಿಸಿದ ಕಂದಾಯ ಅಧಿಕಾರಿಗಳಿಗೆ ಸೂಚಿಸಿದ್ದರು.

2018 ರಲ್ಲಿ ಕಂದಾಯ ಅಧಿಕಾರಿಗಳು ನ್ಯಾಯಾಲಯದ ಆದೇಶವನ್ನು ಅನುಷ್ಠಾನಗೊಳಿಸುವಲ್ಲಿ ವಿಫಲರಾದ ನಂತರ ರೈತ ಮಹಿಳೆ ತಲ್ಲಪಕ ಸಾವಿತ್ರಮ್ಮ ಅವರು ಹೈಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿದ್ದರು.

ರೈತ ಮಹಿಳೆಯ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಟ್ಟು ದೇವಾನಂದ್ ಅವರು ಐಎಎಸ್ ಅಧಿಕಾರಿಗಳಿಗೆ ಜೈಲು ಶಿಕ್ಷೆ ವಿಧಿಸಿದ್ದಾರೆ.

ಶಂಶೀರ್ ಸಿಂಗ್ ರಾವತ್ ಮತ್ತು ಮನಮೋಹನ್ ಸಿಂಗ್ ಅವರಿಗೆ ಒಂದು ತಿಂಗಳ ಜೈಲು ಶಿಕ್ಷೆ ಹಾಗೂ ಇತರರಿಗೆ ಎರಡು ವಾರಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಪ್ರತಿಯೊಬ್ಬರಿಗೂ 1,000 ಸಾವಿರ ರೂಪಾಯಿ ದಂಡವನ್ನೂ ವಿಧಿಸಲಾಗಿದೆ.

ಈ ವರ್ಷದ ಜೂನ್ ತಿಂಗಳಲ್ಲಿ ನ್ಯಾಯಮೂರ್ತಿ ದೇವಾನಂದ್ ನ್ಯಾಯಾಂಗ ನಿಂದನೆ ಪ್ರಕರಣದ ವಿಚಾರಣೆ ನಡೆಸುವಾಗ, ಕಂದಾಯ ವಿಭಾಗೀಯ ಅಧಿಕಾರಿಯು ಜುಲೈ 6, 2020 ರಂದು ಖಾತೆಗಳ ಕಚೇರಿಗೆ ಬಿಲ್ಲುಗಳನ್ನು ಸಲ್ಲಿಸಿದ್ದನ್ನು ಗಮನಿಸಿದ್ದರು. ಜೊತೆಗೆ ಅವುಗಳನ್ನು ಮಾರ್ಚ್ 30, 2021 ರವರೆಗೆ ತೆರವಾಗಿಲ್ಲ ಎಂಬುದನ್ನು ತೀರ್ಪು ನೀಡುವಾಗ ಗಣನೆಗೆ ತೆಗೆದುಕೊಂಡಿದ್ದಾರೆ.

“ಬಿಲ್ಲುಗಳನ್ನು ತೆರವುಗೊಳಿಸಲು ಮತ್ತು ಅರ್ಜಿದಾರರಿಗೆ ಪರಿಹಾರವನ್ನು ಪಾವತಿಸಲು ಪ್ರಧಾನ ಲೆಕ್ಕಾಧಿಕಾರಿಗಳ ಕಚೇರಿಯಲ್ಲಿ ಸುಮಾರು ಎಂಟು ತಿಂಗಳು ವಿಳಂಬವಾಗಿದೆ ಎಂಬುದನ್ನು ನ್ಯಾಯಾಲಯ ಗಮನಿಸಿದೆ” ಎಂದು ನ್ಯಾಯಮೂರ್ತಿ ಎ.ರಾಜಶೇಖರ್ ರೆಡ್ಡಿ ತಿಳಿಸಿದ್ದಾರೆ.


ಇದನ್ನೂ ಓದಿ: ಎಲ್‌ಪಿಜಿ, ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆ – ಯುವ ಕಾಂಗ್ರೆಸ್ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ತರಹದ ಶಿಕ್ಷೆಗಳನ್ನು ನೀಡಿದಾಗಲೇ, ಅಧಿಕಾರಿಗಳ ಎಮ್ಮೆ ಚರ್ಮ; ಮನುಷ್ಯ ಚರ್ಮವಾಗುವುದು.

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...