Homeಚಳವಳಿರೈತ ಮಹಿಳೆಗೆ ಪರಿಹಾರ ವಿಳಂಬ: ನ್ಯಾಯಾಂಗ ನಿಂದನೆ ಆರೋಪದಲ್ಲಿ ಆಂಧ್ರದ IAS ಅಧಿಕಾರಿಗಳಿಗೆ ಜೈಲು

ರೈತ ಮಹಿಳೆಗೆ ಪರಿಹಾರ ವಿಳಂಬ: ನ್ಯಾಯಾಂಗ ನಿಂದನೆ ಆರೋಪದಲ್ಲಿ ಆಂಧ್ರದ IAS ಅಧಿಕಾರಿಗಳಿಗೆ ಜೈಲು

- Advertisement -
- Advertisement -

ರೈತ ಮಹಿಳೆಗೆ ಪರಿಹಾರ ನೀಡುವಂತೆ ಫೆಬ್ರವರಿ 10, 2017 ರ ನ್ಯಾಯಾಲಯ ನೀಡಿದ್ದ ಆದೇಶಕ್ಕೆ ಉದ್ದೇಶಪೂರ್ವಕವಾಗಿ ಅಸಹಕಾರ ನೀಡಿ, ನ್ಯಾಯಾಂಗ ನಿಂದನೆ ಮಾಡಿದ ಆರೋಪದಲ್ಲಿ ಆಂಧ್ರಪ್ರದೇಶ ಹೈಕೋರ್ಟ್ ನಾಲ್ವರು ಐಎಎಸ್ ಅಧಿಕಾರಿಗಳಿಗೆ ಮತ್ತು ಒಬ್ಬ ನಿವೃತ್ತ ಅಧಿಕಾರಿಗೆ ಜೈಲು ಶಿಕ್ಷೆ ವಿಧಿಸಿದೆ.

ಇದೇ ವೇಳೆ ಮುಖ್ಯ ಕಾರ್ಯದರ್ಶಿ ಆದಿತ್ಯ ನಾಥ್ ದಾಸ್ ಸೇರಿದಂತೆ ಇತರ ಮೂವರು ಐಎಎಸ್ ಅಧಿಕಾರಿಗಳ ಮೇಲಿನ ಆರೋಪವನ್ನು ವಜಾಗೊಳಿಸಲಾಗಿದೆ.

ಶಿಕ್ಷೆಗೊಳಗಾದ ಐಎಎಸ್ ಅಧಿಕಾರಿಗಳಲ್ಲಿ ಪ್ರಧಾನ ಹಣಕಾಸು ಕಾರ್ಯದರ್ಶಿ ಶಂಶೀರ್ ಸಿಂಗ್ ರಾವತ್, ಮುಖ್ಯಮಂತ್ರಿಯವರ ಹೆಚ್ಚುವರಿ ಕಾರ್ಯದರ್ಶಿ ರೇವು ಮುತ್ಯಾಲ ರಾಜು, ನೆಲ್ಲೂರು ಜಿಲ್ಲಾಧಿಕಾರಿ ಕೆವಿಎನ್ ಚಕ್ರಧರಾ ಬಾಬು ಮತ್ತು ಮಾಜಿ ಕಲೆಕ್ಟರ್ ಎಂ.ವಿ ಶೇಷಗಿರಿ ಬಾಬು ಸೇರಿದ್ದಾರೆ.

ಮುತ್ಯಾಲ ರಾಜು ಈ ಹಿಂದೆ ಎಸ್ಪಿಎಸ್ ನೆಲ್ಲೂರು ಜಿಲ್ಲೆಯ ಜಿಲ್ಲಾಧಿಕಾರಿ ಆಗಿಯೂ ಸೇವೆ ಸಲ್ಲಿಸಿದ್ದರು. 2017 ರಲ್ಲಿ ಆಗಿನ ಪ್ರಧಾನ ಕಾರ್ಯದರ್ಶಿ (ಕಂದಾಯ) ಆಗಿದ್ದ ನಿವೃತ್ತ ಐಎಎಸ್ ಅಧಿಕಾರಿ ಮನಮೋಹನ್ ಸಿಂಗ್ ಕೂಡ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿದ್ದಾರೆ.

ಇದನ್ನೂ ಓದಿ: ದೆಹಲಿ ಗಲಭೆ: ಒಂದೇ ಘಟನೆ ಬಗ್ಗೆ ದಾಖಲಾದ ನಾಲ್ಕು ಎಫ್‌ಐಆರ್‌ಗಳನ್ನು ರದ್ದುಗೊಳಿಸಿದ ಹೈಕೋರ್ಟ್

ಪ್ರಕರಣವೇನು…?

ತಮ್ಮ ಮೂರು ಎಕರೆ ಭೂಮಿಯನ್ನು ಕಂದಾಯ ಅಧಿಕಾರಿಗಳು ಯಾವುದೇ ಸೂಚನೆ ಅಥವಾ ಪರಿಹಾರ ನೀಡದೆ ರಾಷ್ಟ್ರೀಯ ಮಾನಸಿಕ ಆರೋಗ್ಯ ಸಂಸ್ಥೆಗೆ ಮಂಜೂರು ಮಾಡಿದ್ದಾರೆ ಎಂದು ರೈತ ಮಹಿಳೆ ತಲ್ಲಪಕ ಸಾವಿತ್ರಮ್ಮ ಅವರು 2017 ರಲ್ಲಿ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದರು.

ಡಿಸೆಂಬರ್ 2016 ರಲ್ಲಿ, ಕಂದಾಯ ಅಧಿಕಾರಿಗಳು ಮೂರು ಎಕರೆ ಭೂಮಿಗೆ ಪರಿಹಾರವನ್ನು ನೀಡುವುದಾಗಿ ಭರವಸೆ ನೀಡಿದರು ಮತ್ತು ಅದನ್ನು ಲೋಕಾಯುಕ್ತಕ್ಕೆ ವರದಿ ಮಾಡಲಾಗಿತ್ತು ಎಂದು ರೈತ ಮಹಿಳೆ ಅರ್ಜಿಯಲ್ಲಿ ತಿಳಿಸಿದ್ದರು.

ಹೈಕೋರ್ಟ್‌ನ ನ್ಯಾಯಮೂರ್ತಿ ಎ ರಾಜಶೇಖರ್ ರೆಡ್ಡಿ, ಫೆಬ್ರವರಿ 10, 2017 ರಂದು ಅರ್ಜಿದಾರರ ಪರವಾಗಿ ತೀರ್ಪು ನೀಡಿದ್ದರು. ಮೂರು ತಿಂಗಳಲ್ಲಿ ಆಕೆಗೆ ಪರಿಹಾರ ನೀಡುವಂತೆ ಸಂಬಂಧಿಸಿದ ಕಂದಾಯ ಅಧಿಕಾರಿಗಳಿಗೆ ಸೂಚಿಸಿದ್ದರು.

2018 ರಲ್ಲಿ ಕಂದಾಯ ಅಧಿಕಾರಿಗಳು ನ್ಯಾಯಾಲಯದ ಆದೇಶವನ್ನು ಅನುಷ್ಠಾನಗೊಳಿಸುವಲ್ಲಿ ವಿಫಲರಾದ ನಂತರ ರೈತ ಮಹಿಳೆ ತಲ್ಲಪಕ ಸಾವಿತ್ರಮ್ಮ ಅವರು ಹೈಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿದ್ದರು.

ರೈತ ಮಹಿಳೆಯ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಟ್ಟು ದೇವಾನಂದ್ ಅವರು ಐಎಎಸ್ ಅಧಿಕಾರಿಗಳಿಗೆ ಜೈಲು ಶಿಕ್ಷೆ ವಿಧಿಸಿದ್ದಾರೆ.

ಶಂಶೀರ್ ಸಿಂಗ್ ರಾವತ್ ಮತ್ತು ಮನಮೋಹನ್ ಸಿಂಗ್ ಅವರಿಗೆ ಒಂದು ತಿಂಗಳ ಜೈಲು ಶಿಕ್ಷೆ ಹಾಗೂ ಇತರರಿಗೆ ಎರಡು ವಾರಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಪ್ರತಿಯೊಬ್ಬರಿಗೂ 1,000 ಸಾವಿರ ರೂಪಾಯಿ ದಂಡವನ್ನೂ ವಿಧಿಸಲಾಗಿದೆ.

ಈ ವರ್ಷದ ಜೂನ್ ತಿಂಗಳಲ್ಲಿ ನ್ಯಾಯಮೂರ್ತಿ ದೇವಾನಂದ್ ನ್ಯಾಯಾಂಗ ನಿಂದನೆ ಪ್ರಕರಣದ ವಿಚಾರಣೆ ನಡೆಸುವಾಗ, ಕಂದಾಯ ವಿಭಾಗೀಯ ಅಧಿಕಾರಿಯು ಜುಲೈ 6, 2020 ರಂದು ಖಾತೆಗಳ ಕಚೇರಿಗೆ ಬಿಲ್ಲುಗಳನ್ನು ಸಲ್ಲಿಸಿದ್ದನ್ನು ಗಮನಿಸಿದ್ದರು. ಜೊತೆಗೆ ಅವುಗಳನ್ನು ಮಾರ್ಚ್ 30, 2021 ರವರೆಗೆ ತೆರವಾಗಿಲ್ಲ ಎಂಬುದನ್ನು ತೀರ್ಪು ನೀಡುವಾಗ ಗಣನೆಗೆ ತೆಗೆದುಕೊಂಡಿದ್ದಾರೆ.

“ಬಿಲ್ಲುಗಳನ್ನು ತೆರವುಗೊಳಿಸಲು ಮತ್ತು ಅರ್ಜಿದಾರರಿಗೆ ಪರಿಹಾರವನ್ನು ಪಾವತಿಸಲು ಪ್ರಧಾನ ಲೆಕ್ಕಾಧಿಕಾರಿಗಳ ಕಚೇರಿಯಲ್ಲಿ ಸುಮಾರು ಎಂಟು ತಿಂಗಳು ವಿಳಂಬವಾಗಿದೆ ಎಂಬುದನ್ನು ನ್ಯಾಯಾಲಯ ಗಮನಿಸಿದೆ” ಎಂದು ನ್ಯಾಯಮೂರ್ತಿ ಎ.ರಾಜಶೇಖರ್ ರೆಡ್ಡಿ ತಿಳಿಸಿದ್ದಾರೆ.


ಇದನ್ನೂ ಓದಿ: ಎಲ್‌ಪಿಜಿ, ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆ – ಯುವ ಕಾಂಗ್ರೆಸ್ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ತರಹದ ಶಿಕ್ಷೆಗಳನ್ನು ನೀಡಿದಾಗಲೇ, ಅಧಿಕಾರಿಗಳ ಎಮ್ಮೆ ಚರ್ಮ; ಮನುಷ್ಯ ಚರ್ಮವಾಗುವುದು.

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...