ತಾಲಿಬಾನ್ ಆಡಳಿತದಲ್ಲಿ ಅಫ್ಘಾನಿಸ್ತಾನ ಪ್ರದೇಶವನ್ನು ಭಾರತ ವಿರೋಧಿ ಚಟುವಟಿಕೆಗೆ ಬಳಸಬಹುದೆಂಬ ಭಾರತದ ಆತಂಕದ ನಡುವೆ, ಕಾಶ್ಮೀರ ಸೇರಿದಂತೆ ಎಲ್ಲಿಯಾದರೂ ಮುಸ್ಲಿಮರಿಗಾಗಿ ಧ್ವನಿ ಎತ್ತುವ ಹಕ್ಕು ತನಗಿದೆ ಎಂದು ತಾಲಿಬಾನ್ ಗುಂಪು ಹೇಳಿದೆ.
ಆದರೆ, ಯಾವುದೇ ದೇಶದ ವಿರುದ್ಧ ಶಸ್ತ್ರಾಸ್ತ್ರಗಳನ್ನು ಬಳಸುವ ನೀತಿಯನ್ನು ನಮ್ಮ ಗುಂಪು ಹೊಂದಿಲ್ಲ ಎಂದೂ ಸೇರಿಸಿದೆ.
ಬಿಬಿಸಿ ಉರ್ದುಗೆ ನೀಡಿರುವ ಸಂದರ್ಶನದಲ್ಲಿ ತಾಲಿಬಾನ್ ವಕ್ತಾರ ಸುಹೇಲ್ ಶಾಹೀನ್, “ಮುಸ್ಲಿಮರಾಗಿರುವ ನಮಗೆ ಕಾಶ್ಮೀರ, ಭಾರತ ಮತ್ತು ಯಾವುದೇ ಇತರ ದೇಶಗಳಲ್ಲಿ ಮುಸ್ಲಿಮರಿಗಾಗಿ ಧ್ವನಿ ಎತ್ತುವ ಹಕ್ಕು ಇದೆ” ಎಂದಿದ್ದಾರೆ.
“ಮುಸ್ಲಿಮರು ನಿಮ್ಮ ಸ್ವಂತ ಜನರು, ನಿಮ್ಮ ಸ್ವಂತ ಪ್ರಜೆಗಳು ಎಂದು ಹೇಳುತ್ತೇವೆ. ನಿಮ್ಮ ಕಾನೂನುಗಳ ಅಡಿಯಲ್ಲಿ ಅವರಿಗೆ ಸಮಾನ ಹಕ್ಕುಗಳಿವೆ. ಎಂದು ಮುಸ್ಲಿಮರಿಗಾಗಿ ಧ್ವನಿ ಎತ್ತುತ್ತೇವೆ ” ಎಂದು ಹೇಳಿದ್ದಾರೆ.
ಆದರೆ, ಈ ಹಿಂದೆ ಕಾಶ್ಮೀರದ ಬಗ್ಗೆ ಹೇಳಿಕೆ ನೀಡಿದ್ದ ತಾಲಿಬಾನ್, ಕಾಶ್ಮೀರದ ಸಮಸ್ಯೆ ಅವರ ಆಂತರಿಕ ವಿಷಯ ಎಂದಿತ್ತು. ಅಫ್ಘಾನಿಸ್ತಾನದ ಭೂಮಿಯನ್ನು ಯಾವುದೇ ರೀತಿಯ ಭಯೋತ್ಪಾದಕ ಚಟುವಟಿಕೆಗಳಿಗೆ ಬಳಸದಂತೆ ನೋಡಿಕೊಳ್ಳುವುದು ಭಾರತದ ಗುರಿಯಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ವಕ್ತಾರ ಅರಿಂದಮ್ ಬಾಗ್ಚಿ ಗುರುವಾರ ಹೇಳಿದ್ದರು.
ಇದನ್ನೂ ಓದಿ: ತಾಲಿಬಾನ್ಗೆ ಅಧಿಕಾರ ಸಿಕ್ಕಿದ್ದಕ್ಕೆ ಸಂಭ್ರಮಿಸುವುದು ಅಪಾಯ: ನಾಸೀರುದ್ದೀನ್ ಶಾ
ಅಫ್ಘಾನಿಸ್ತಾನದಲ್ಲಿ ಸಿಲುಕಿರುವ ಭಾರತೀಯರ ಸುರಕ್ಷತೆ, ಭದ್ರತೆ ಮತ್ತು ಆರಂಭಿಕ ವಾಪಸಾತಿ ಮತ್ತು ಅಫ್ಘಾನ್ ಪ್ರಜೆಗಳು, ಅದರಲ್ಲೂ ವಿಶೇಷವಾಗಿ ಅಲ್ಪಸಂಖ್ಯಾತ ಸಮುದಾಯಗಳ ಸದಸ್ಯರು ಭಾರತಕ್ಕೆ ಪ್ರಯಾಣಿಸುವ ಬಗ್ಗೆಯೂ ಚರ್ಚೆಗಳು ಕೇಂದ್ರೀಕೃತವಾಗಿವೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೇಳಿದೆ.
ಜಮ್ಮು ಮತ್ತು ಕಾಶ್ಮೀರದಲ್ಲಿನ ಭದ್ರತಾ ಪರಿಸ್ಥಿತಿಯ ಬಗ್ಗೆ ಆತಂಕ ಹೆಚ್ಚಾಗಿದ್ದು, ಈ ಪ್ರದೇಶದಲ್ಲಿ ಭದ್ರತಾ ನಿಗಾ ಹೆಚ್ಚಿಸುವ ನಿರೀಕ್ಷೆಯಿದೆ.
“ಕಾಶ್ಮೀರದಲ್ಲಿ ಭದ್ರತೆ ಹೆಚ್ಚಿಸಲಾಗುವುದು. ಆದರೆ ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿವೆ ಮತ್ತು ಅಫ್ಘಾನಿಸ್ತಾನದಲ್ಲಿರುವ ಪಾಕಿಸ್ತಾನ ಮೂಲದ ಗುಂಪುಗಳು ಪರಿಸ್ಥಿತಿಯನ್ನು ಬಳಸಿಕೊಳ್ಳುವ ಸಾಮರ್ಥ್ಯ ಕಡಿಮೆ” ಎಂದು ANI ಕಳೆದ ತಿಂಗಳು ಸರ್ಕಾರಿ ಮೂಲಗಳನ್ನು ಉಲ್ಲೇಖಿಸಿತ್ತು.
ಇದನ್ನೂ ಓದಿ: ಬಹುಜನ ಭಾರತ; ಮನುವಾದ ಸುಣ್ಣವಾದರೆ ತಾಲಿಬಾನ್ ಬೆಣ್ಣೆ ಹೇಗಾದೀತು?



ನಿಮಗೆ ಕಾಶ್ಮೀರ ಮುಸ್ಲೀಂರ ಬಗ್ಗೆ ಕಾಳಜಿ ವಹಿಸುವ ಅಧಿಕಾರ ಇದ್ದರೆ ,ಭಾರತೀಯರಿಗೆ ತಾಲಿಬಾನ್ ನೆಲದಲ್ಲಿ ತಾಲಿಬಾನ್ ಗಳನ್ನು ನಿರ್ನಾಮ ಮಾಡುವ ಅಧಿಕಾರ ಸಹ ಇದೆ .ಜೈ ಹಿಂದ್
ಪಸ್ತೂನ್ ಜನರನ್ನು ಬೇರ್ಪಡಿಸಿರುವ ಡುರಾಂಡ್ ಲಯ್ನ್ ಜಗಳವನ್ನು ಮೊದಲು ಬಗೆಹರಿಸಲು ಹೆಜ್ಜೆ ಇಡಲಿ.