Homeಮುಖಪುಟಗುಜರಾತ್‌ ಚುನಾವಣೆ: ಅಚ್ಛೇದಿನ್‌ ಬದಿಗೆ ಸರಿದು, ಮುನ್ನಲೆಗೆ ಬರಲಿದೆ ಹಿಂದುತ್ವ?

ಗುಜರಾತ್‌ ಚುನಾವಣೆ: ಅಚ್ಛೇದಿನ್‌ ಬದಿಗೆ ಸರಿದು, ಮುನ್ನಲೆಗೆ ಬರಲಿದೆ ಹಿಂದುತ್ವ?

- Advertisement -
- Advertisement -

ಮುಂದಿನ ಹದಿನಾರು ತಿಂಗಳ ಬಳಿಕ ಗುಜರಾತ್‌ ವಿಧಾನಸಭೆ ಚುನಾವಣೆ ಎದುರಾಗಲಿದ್ದು, ಬಿಜೆಪಿಯು ಹಿಂದುತ್ವವನ್ನು ಮುನ್ನೆಲೆಗೆ ತರಲು ಸಿದ್ಧತೆ ನಡೆಸಿದೆ. ಬೆಲೆ ಏರಿಕೆ, ಉದ್ಯೋಗ ನಷ್ಟದಂತಹ ಸಮಸ್ಯೆಗಳಿಗೆ ಬೆನ್ನು ತಿರುಗಿಸುವ ಸೂಚನೆಗಳು ದೊರೆತ್ತಿದ್ದು, ತನ್ನ ಹಳೆಯ ಅಜೆಂಡಾವಾದ ಹಿಂದುತ್ವದ ಬೆನ್ನೇರಿ ಚುನಾವಣೆ ಎದುರಿಸುವತ್ತ ಬಿಜೆಪಿ ಹೆಜ್ಜೆಗಳನ್ನಿರಿಸಿದೆ. ಈಗಾಗಲೇ ಚುನಾವಣಾ ಸಿದ್ಧತೆಯಲ್ಲಿ ಬಿಜೆಪಿ ತೊಡಗಿದ್ದು, ಹಿಂದುತ್ವವನ್ನು ಕೈಬಿಟ್ಟರೆ “ಅಚ್ಛೇದಿನ್‌” ಘೋಷಣೆ ಬಿಜೆಪಿಗೆ ಮುಳುವಾಗುವುದು ಸ್ಪಷ್ಟ.

ಬಿಜೆಪಿಯ ಕಾರ್ಯಕಾರಿ ಸಭೆ ಗುಜರಾತ್‌ನ ಕೆವಾಡಿಯದಲ್ಲಿ ಒಕ್ಕೂಟ ಸರ್ಕಾರದ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಉಪಸ್ಥಿತಿಯಲ್ಲಿ ಗುರುವಾರ ನಡೆದಿದ್ದು, ಸಭೆಯಲ್ಲಿ ಹಿಂದುತ್ವವೇ ಪ್ರಧಾನವಾಗಿ ಚರ್ಚಿಸಲ್ಪಟ್ಟಿದೆ ಎಂದು ’ದಿ ವೈರ್’ ಜಾಲತಾಣ ಅಭಿಪ್ರಾಯಪಟ್ಟಿದೆ.

ಸಭೆಯಲ್ಲಿ ಮಾತನಾಡಿರುವ ಪ್ರತಿಯೊಬ್ಬರೂ ಪ್ರಧಾನಿ ನರೇಂದ್ರ ಮೋದಿಯವರಿಗೆ ಅಭಿನಂದನೆ ಸಲ್ಲಿಸಿ, “ಭಯೋತ್ವಾದನೆ ಮುಕ್ತ ಭಾರತ”, “ಸ್ವಾವಲಂಬಿ ಭಾರತ”, “ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ”, “370ನೇ ವಿಧಿ ರದ್ಧತಿ” ವಿಚಾರಗಳನ್ನು ಪ್ರಸ್ತಾಪಿಸಿದ್ದಾರೆ. 2017 ರಲ್ಲಿ ವಿಕಾಸ ಮತ್ತು ಅಚ್ಛೇದಿನ್‌ ಎನ್ನುತ್ತಿದ್ದವರು ಈಗ ಹಿಂದುತ್ವದ ಕಡೆಗೆ ಹೊರಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರ 71 ನೇ ಜನ್ಮದಿನ ಹಿನ್ನೆಲೆಯಲ್ಲಿ ಸೆ.17 ರಂದು ಇಡೀ ಗುಜರಾತ್‌ ರಾಜ್ಯದ್ಯಾಂತ 7,001 ರಾಮ ಮಂದಿರಗಳಲ್ಲಿ ವಿಶೇಷ ಆರತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವುದಾಗಿ ರಾಜ್ಯ ಬಿಜೆಪಿ ಮುಖ್ಯಸ್ಥ ಸಿ.ಆರ್.ಪಾಟೀಲ್‌ ಘೋಷಿಸಿದ್ದಾರೆ. “ನಿಮಗೆ ರಾಮಮಂದಿರ ಸಿಗದಿದ್ದರೆ ರಾಮನ ಫೋಟೋವನ್ನಾದರೂ ಇಟ್ಟು ಪೂಜೆ ಮಾಡಿ” ಎಂದು ತಿಳಿಸಿದ್ದಾರೆ.

ಕೋಟ್ಯಂತರ ಭಾರತೀಯರ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ರಾಮಜನ್ಮಭೂಮಿಯಲ್ಲಿ ರಾಮಮಂದಿರ ನಿರ್ಮಿಸಲಾಗುತ್ತಿದೆ. ಜಾತ್ಯತೀತರೆಂದು ಕರೆಸಿಕೊಳ್ಳುವವರು ಇದನ್ನು ಇಷ್ಟಪಡುವುದಿಲ್ಲ. ಪ್ರತಿಯೊಬ್ಬರೂ ಸಾಮಾಜಿಕ ಮಾಧ್ಯಮದಲ್ಲಿ ಸಕ್ರಿಯವಾಗಿ ಕೆಲಸ ಮಾಡಿ ಮೋದಿಯವರ ಸಾಧನೆಗಳನ್ನು ಜನರಿಗೆ ತಿಳಿಸಬೇಕು ಎಂದು ಸಭೆಯಲ್ಲಿದ್ದವರಿಗೆ ನಿರ್ದೇಶಿಸಲಾಗಿದೆ.

ರಾಜ್‌ನಾಥ್‌ ಸಿಂಗ್ ಮಾತನಾಡಿ, “ಮೋದಿಯವರು ಭಯೋತ್ಪಾದನೆಯನ್ನಷ್ಟೇ ನಿರ್ಮೂಲನೆ ಮಾಡಿಲ್ಲ. 17,000 ಕೋಟಿ ರೂ. ಮೌಲ್ಯದ ರಕ್ಷಣಾ ಉತ್ಪನ್ನಗಳನ್ನು ರಫ್ತು ಮಾಡಿದ್ದಾರೆ. ನಾವು ಇವಿಎಂ ತಿರುಚಿ ಗೆದ್ದಿಲ್ಲ, ಜನರ ನಂಬಿಕೆಯನ್ನು ಉಳಿಸಿಕೊಂಡು ಗೆದ್ದಿದ್ದೇವೆ. ಭಾರತವನ್ನು ವಿಶ್ವಗುರು ಮಾಡಲು ಬೇಕಾದ ಕ್ರಮಗಳನ್ನು ಮೋದಿ ಕೈಗೊಂಡಿದ್ದಾರೆ. ಮುಸ್ಲಿಂ ಮಹಿಳೆಯರ ಉನ್ನತಿಗಾಗಿ ತ್ರಿವಳಿ ತಲಾಖ್‌ ನಿಷೇಧಿಸಿ ಕಾನೂನು ತರಲಾಗಿದೆ” ಎಂದಿದ್ದಾರೆ.

ಇದನ್ನೂ ಓದಿ: ನಕಲಿ ದೇಶಭಕ್ತಿ ಹೇಳುತ್ತಿದ್ದ ಬಿಜೆಪಿ ಈಗ ಜನರ ಬದುಕನ್ನು ಹೈರಾಣಾಗಿಸಿದೆ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...