Homeರಾಜಕೀಯದಾವಣಗೆರೆ: ಕೈಗೆ ಬೆಣ್ಣೆದೋಸೆ ಕಮಲಕ್ಕೆ ಖಾರ ಮಿರ್ಚಿ

ದಾವಣಗೆರೆ: ಕೈಗೆ ಬೆಣ್ಣೆದೋಸೆ ಕಮಲಕ್ಕೆ ಖಾರ ಮಿರ್ಚಿ

- Advertisement -
- Advertisement -
  • ಟಿ.ಎನ್.ಷಣ್ಮುಖ |

ಕಳೆದ ಸಲ ಬಹುಪಾಲು `ಕೈ’ವಶವಾಗಿದ್ದ ದಾವಣಗೆರೆ ಜಿಲ್ಲೆಯಲ್ಲಿ ಈ ಸಲ ಬಿಜೆಪಿ ಪೈಪೋಟಿ ನೀಡುತ್ತಿದೆಯಾದರೂ ಹಳೆಯ ಫಲಿತಾಂಶ ಸಂಪೂರ್ಣ ಬುಡಮೇಲಾಗುವ ಸಾಧ್ಯತೆ ಇಲ್ಲ. ಒಟ್ಟು ಎಂಟು ಕ್ಷೇತ್ರಗಳ ಪೈಕಿ 2013ರಲ್ಲಿ ಕಾಂಗ್ರೆಸ್ ಏಳರಲ್ಲಿ ಗೆದ್ದಿದ್ದರೆ ಹರಿಹರ ಮಾತ್ರ ಜೆಡಿಎಸ್ ಪಾಲಾಗಿತ್ತು. ಒಂದು ಕಾಲಕ್ಕೆ ಅಖಂಡ ಪ್ರಾಬಲ್ಯ ಸಾಧಿಸಿದ್ದ ಬಿಜೆಪಿ ಶೂನ್ಯ ಸಾಧನೆ ಮೂಲಕ ನೆಲ ಕಚ್ಚಿತ್ತು.

ಈ ಸಲ ಸ್ಪರ್ಧಿಸುವುದಿಲ್ಲ ಎಂದಿದ್ದ ವಯೋವೃದ್ಧ ಶಾಮನೂರು ಶಿವಶಂಕರಪ್ಪನವರು ಮತ್ತೆ ದಾವಣಗೆರೆ ದಕ್ಷಿಣದಿಂದ ಕೈ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಬಿಜೆಪಿಯಿಂದ ಸ್ಪರ್ಧಿಸಿರುವ ಯಶವಂತರಾವ್ ಯಾವ ನಿಟ್ಟಿನಿಂದ ನೋಡಿದರೂ ಶಾಮನೂರು ಧಣಿಗೆ ಸರಿಸಾಟಿಯಾದ ಅಭ್ಯರ್ಥಿಯೇ ಅಲ್ಲ. ಕಾಂಗ್ರೆಸ್‍ಗೆ ಹರಿದುಹೋಗುವ ಮುಸ್ಲಿಂ ಮತಗಳನ್ನು ತನ್ನತ್ತ ತಿರುಗಿಸಿಕೊಳ್ಳಲು ಜೆಡಿಎಸ್ ಇಲ್ಲಿ ಅಮಾನುಲ್ಲಾ ಖಾನ್‍ನನ್ನು ಅಭ್ಯರ್ಥಿಯಾಗಿಸಿದೆ. ಆದರೆ ಈತ ಮೂರನೇ ಸ್ಥಾನಕ್ಕೆ ತಿಣುಕಾಡಬೇಕಾದ ಪರಿಸ್ಥಿತಿಯಿದೆ. ಬಿಜೆಪಿಯ ಯಶವಂತ ಕಳೆದ ಬಾರಿಗಿಂತ ತನ್ನ ಮತಗಳನ್ನು ಒಂದಷ್ಟು ಹೆಚ್ಚಿಸಿಕೊಳ್ಳುವ ಸಾಧ್ಯತೆ ಇದೆಯಾದರು ಶಿವಶಂಕರಪ್ಪರನ್ನು ಸೋಲಿಸುವಷ್ಟು ಆತನ ಅಖಾಡ ಪಕ್ವವಾಗಿಲ್ಲ.

ದಾವಣಗೆರೆ ಉತ್ತರದಲ್ಲಿ ಹಾಲಿ ಮತ್ತು ಮಾಜಿ ತರಕಾರಿ ಮಂತ್ರಿಗಳದ್ದೇ ಕಾದಾಟ. ಆದಾಗ್ಯೂ ಕಾಂಗ್ರೆಸ್‍ನ ಎಸ್.ಎಸ್.ಮಲ್ಲಿಕಾರ್ಜುನ ಜಯದ ನಗೆ ಬೀರಲು ಹಲವು ಕಾರಣಗಳಿವೆ. ಬಿಜೆಪಿ ರವೀಂದ್ರನಾಥನನ್ನು ಯಡ್ಯೂರಪ್ಪ ಜೊತೆ ಆತ ಕಟ್ಟಿಕೊಂಡಿರುವ ದುಷ್ಮನಿ ಅಡ್ಡಡ್ಡ ಮಲಗಿಸಿದರೆ, ಕಳೆದ ಐದು ವರ್ಷದ ಅಭಿವೃದ್ಧಿ ಕಾರ್ಯಗಳು ಮಲ್ಲಿಕಾರ್ಜುನ್‍ರ ಕೈಹಿಡಿಯಲಿವೆ.

ಎಂ.ಪಿ.ರವೀಂದ್ರ

ಹರಪನಹಳ್ಳಿಯಲ್ಲಿ ಮೇಲ್ನೋಟಕ್ಕೆ ಹಾಲಿ ಕೈ ಶಾಸಕ ಎಂ.ಪಿ.ರವೀಂದ್ರನಿಗೆ ಇಕ್ಕಟ್ಟಿನಂತೆ ಕಂಡುಬಂದರೂ ಬಿಜೆಪಿಯ ಆಂತರಿಕ ಗುದಮುರಗಿ ರವಿಗೆ ನೆರವಾಗುವ ಸಾಧ್ಯತೆ ಇದೆ. ಜೆಡಿಎಸ್‍ನಿಂದ ಸ್ಪರ್ಧಿಸಿರುವ ಕೊಟ್ರೇಶ್ ಕೂಡಾ ಲಿಂಗಾಯತನಾಗಿರುವುದರಿಂದ ರವೀಂದ್ರನ ಜಾತಿ ಮತಗಳು ಹಂಚಿಹೋಗುತ್ತವೆ ಎಂಬ ವಾದವಿದೆ. ಆದರೆ ಅಸಲಿಯತ್ತೇನೆಂದರೆ ಮೊದಲಿನಿಂದಲೂ ಇಲ್ಲಿನ ಬಹುಪಾಲು ಲಿಂಗಾಯತ ಮತಗಳು ಹೋಗುತ್ತಿದ್ದುದು ಬಿಜೆಪಿಯ ಕರುಣಾಕರ ರೆಡ್ಡಿಗೆ, ಯಡ್ಯೂರಪ್ಪನ ಕಾರಣಕ್ಕೆ. ಜೆಡಿಎಸ್‍ನ ಕೊಟ್ರೇಶಿ ಪಕ್ಕಾ ಯಡಿಯೂರಪ್ಪನ ಶಿಷ್ಯ. ಕಳೆದ ಸಲ ಕೆಜೆಪಿಯಿಂದ ಸ್ಪರ್ಧಿಸಿದ್ದ. ಆತನಿಗೇ ಬಿಜೆಪಿ ಟಿಕೇಟ್ ಕೊಡಿಸಬೇಕೆನ್ನುವುದು ಯಡ್ಯೂರಪ್ಪ ಇಂಗಿತವಾಗಿತ್ತು. ಆದರೆ ರೆಡ್ಡಿಯೇ ಟಿಕೇಟ್ ಗಿಟ್ಟಿಸಿಕೊಂಡಿರುವುದರಿಂದ ಕೊಟ್ರೇಶಿ ಜೆಡಿಎಸ್‍ನಿಂದ ಸ್ಪರ್ಧಿಸಿದ್ದಾನೆ. ಅಂದರೆ ಆತ ಕೀಳಲಿರುವುದು ಬಿಜೆಪಿಯ ಮತಗಳನ್ನೇ ಹೊರತು ಕಾಂಗ್ರೆಸ್ ಓಟುಗಳನ್ನಲ್ಲ. ಅಲ್ಲಿಗೆ ರವಿಯ ಗೆಲ್ಲುವ ಸಂಭವ ಹೆಚ್ಚಾಗಿದೆ. ಆದರೆ ರವಿ ಕ್ಷೇತ್ರವನ್ನು ನಿರ್ಲಕ್ಷಿಸಿದ್ದಾನೆ ಎನ್ನುವ ವಾದವೂ ಇದ್ದು ಅದು ಫಲಿತಾಂಶದ ಮೇಲೆ ಪ್ರಭಾವ ಬೀರಿದರೆ ಅಚ್ಚರಿಯಿಲ್ಲ.

ಹರಿಹರದಲ್ಲಿ ಹಾಲಿ ಜೆಡಿಎಸ್ ಶಾಸಕ ಶಿವಶಂಕರನ ದರ್ಪ ಮತ್ತು ಮತದಾರರನ್ನು ಕಡೆಗಣಿಸಿದ ಅಪರಾಧವೇ ಆತನ ಸೋಲಿಗೆ ಮುನ್ನುಡಿಯಾಗುವ ಸಾಧ್ಯತೆಗಳಿವೆ. ಕೈ ಪಾರ್ಟಿಯಿಂದ ಹಳೇ ಹುಲಿ ರಾಮಪ್ಪಜ್ಜ ಕಣಕ್ಕಿಳಿದಿರೋದರಿಂದ ಬಿಜೆಪಿಯ ಹರೀಶನ ಬಿಪಿಯೂ ಯದ್ವತದ್ವಾ ಏರತೊಡಗಿದೆ. ರಾಮಪ್ಪನಿಗೆ ಸ್ವಜಾತಿ ಕುರುಬರು ಮಾತ್ರವಲ್ಲದೇ ಮುಸ್ಲಿಮರು, ನಾಯಕರು, ದಲಿತರ ಮತಗಳೂ ಹರಿದುಬರುವ ಸಾಧ್ಯತೆಯಿದ್ದು ಅಜ್ಜ ಗೆಲುವಿನ ನಗೆ ಬೀರಬಲ್ಲರು.

ವಡ್ನಾಳ್ ರಾಜಣ್ಣ

ಚನ್ನಗಿರಿಯಲ್ಲಿ ತ್ರಿಕೋನ ಸ್ಪರ್ಧೆಯಿದೆ. ಕಾಂಗ್ರೆಸ್‍ನ ಹಾಲಿ ಶಾಸಕ ವಡ್ನಾಳು ರಾಜಣ್ಣ, ಬಿಜೆಪಿಯ ಮಾಡಾಳು ವಿರುಪಾಕ್ಷಪ್ಪ, ಜೆಡಿಯು ಮಹಿಮಾ ಪಟೇಲ್ ಆ ತ್ರಿವಳಿ ವೀರರು. ಇವರ ನಡುವೆ ಜೆಡಿಎಸ್‍ನ ಹೊದಿಗೆರೆ ರಮೇಶ ಆಟಕ್ಕೂ ಇಲ್ಲ ಲೆಕ್ಕಕ್ಕೂ ಇಲ್ಲ. ನಾಯಕ ಜಾತಿಯ ಹೊದಿಗೆರೆ ರಮೇಶನನ್ನು ಹೊರತುಪಡಿಸಿದರೆ ಉಳಿದ ಮೂವರೂ ಲಿಂಗಾಯತರು. ವಡ್ನಾಳು ರಾಜಣ್ಣನಿಗೆ ಜಾತಿ ಮತಗಳು ಕೈಕೊಡುವ ಸಾಧ್ಯತೆಯಿದ್ದು ಅವು ಮಾಡಾಳು ಮಾಡಾಳು ವಿರುಪಾಕ್ಷಪ್ಪನತ್ತ ಮುಖ ಮಾಡಿವೆ. ಆದರೆ ಈ ಮತಗಳ ಮೇಲೆ ಮಹಿಮಾ ಕೂಡಾ ದಾಳಿ ಮಾಡಬಹುದಾದ್ದರಿಂದ ಇನ್ನುಳಿದ ಸಮುದಾಯದ ಮತಗಳು ಯಾರತ್ತ ನುಗ್ಗಲಿವೆ ಎಂಬುದು ಸೋಲುಗೆಲುವನ್ನು ನಿರ್ಧರಿಸಲಿದೆ. ಸದ್ಯಕ್ಕಂತೂ ಬಿಜೆಪಿಯ ಮಾಡಾಳು ಮುಂಚೂಣಿಯಲ್ಲಿದ್ದಾರೆ.

ಜಗಳೂರಿನಲ್ಲಿ ಉದ್ಭವಿಸಿದ ಕಾಂಗ್ರೆಸ್ ಟಿಕೇಟ್ ಬಂಡಾಯದ ಯಡವಟ್ಟು ಬಿಜೆಪಿಯ ಎಸ್.ವಿ.ರಾಮಚಂದ್ರನಿಗೆ ಅನುಕೂಲ ಆಗಬಹುದು. ಮೊದಲು ಪುಷ್ಟಾಗೆ ಟಿಕೇಟ್ ಕೊಟ್ಟ ಕಾಂಗ್ರೆಸ್ ನಂತರ ನಿರ್ಧಾರದಿಂದ ಹಿಂದೆ ಸರಿದು ಹಾಲಿ ಶಾಸಕ ರಾಜೇಶನಿಗೆ ಬಿ ಫಾರಂ ದಯಪಾಲಿಸಿದೆ. ಈ ಕಣ್ಣಾಮುಚ್ಚಾಲೆಯಿಂದ ಸಿಟ್ಟಿಗೆದ್ದ ಪುಷ್ಟ ಬಂಡಾಯ ಅಭ್ಯರ್ಥಿಯಾಗಿ ಕಣದಲ್ಲಿರೋದು ಕಾಂಗ್ರೆಸ್‍ಗೆ ದುಬಾರಿಯಾಗಲಿದೆ.

ಬಸವರಾಜ ನಾಯ್ಕ್

ಮಾಯಕೊಂಡದಲ್ಲಿ ಕಾಂಗ್ರೆಸ್‍ನ ಮೇಲುಗೈ ಕಾಣಿಸುತ್ತೆ. ಮಂತ್ರಿ ಆಂಜನೇಯರ ಅಳಿಯ ಬಸವರಾಜನನ್ನು ಕಾಂಗ್ರೆಸ್ ಅಖಾಡಕ್ಕಿಳಿಸಿದೆ. ಯಡ್ಯೂರಪ್ಪ ತನ್ನ ಭಂಟ ಲಿಂಗಪ್ಪನಿಗೆ ಟಿಕೇಟ್ ಕೊಡಿಸಿರುವುದರಿಂದ ಬೇಸತ್ತಿರುವ ಮಾಜಿ ಶಾಸಕ ಬಸವರಾಜ ನಾಯ್ಕ ಜೆಡಿಯು ಸೇರಿ ಕಣದಲ್ಲಿದ್ದಾನೆ. ಸಾಲದ್ದಕ್ಕೆ ಆನಂದಪ್ಪ ಎಂಬ ಮತ್ತೊಬ್ಬ ಅಭ್ಯರ್ಥಿಯೂ ಬಿಜೆಪಿ ಬಂಡಾಯಗಾರನಾಗಿ ಮತ ಬೇಟೆಯಲ್ಲಿ ತೊಡಗಿದ್ದಾನೆ. ಬಿಜೆಪಿಗೆ ಈ ಇಬ್ಬರ ಬಂಡಾಯ ದುಬಾರಿಯಾಗಲಿದೆ. ಮುಖ್ಯವಾಗಿ ಲಂಬಾಣಿ ಮತಗಳು ಬಿಜೆಪಿಯಿಂದ ದೂರ ಸರಿದಿವೆ. ಶಾಮನೂರು ಪಾಳೆಗಾರಿಕೆ ಕಾರಣಕ್ಕೆ ಒಂದಷ್ಟು ಲಿಂಗಾಯತ ಮತಗಳು ಕಾಂಗ್ರೆಸ್‍ಗೆ ಒಲಿಯಲಿವೆ. ಜೊತೆಗೆ ಕುರುಬ, ನಾಯಕ, ಮಾದಿಗ ಮೊದಲಾದ ಅಹಿಂದ ಮತಗಳೂ ಕೈಹಿಡಿಯಲಿವೆ. ಲಂಬಾಣಿ ಮತಗಳು ಬಸವರಾಜ ನಾಯ್ಕ ಮತ್ತು ಜೆಡಿಎಸ್‍ನ ಶೀಲಾ ನಾಯ್ಕ ನಡುವೆ ಹರಿದು ಹಂಚಿಹೋಗಲಿವೆ. ಬಿಜೆಪಿಯ ಲಿಂಗಪ್ಪನಿಗೆ ಸ್ವಜಾತಿಯ ಮಾದಿಗ ಮತಗಳು ಬೀಳೋದೂ ಡೌಟು. ಏನಿದ್ದರೂ ಯಡ್ಯೂರಪ್ಪನ ವಶೀಲಿಬಾಜಿಯ ಒಂದಷ್ಟು ಲಿಂಗಾಯತ ಮತಗಳಷ್ಟೇ ಗಟ್ಟಿ.

ರೇಣುಕಾಚಾರ್ಯ

ಹೊನ್ನಾಳಿಯಲ್ಲಿ ಬಿಜೆಪಿ-ಕಾಂಗ್ರೆಸ್ ನಡುವೆ ನೆಕ್-ಟು-ನೆಕ್ ಹಣಾಹಣಿಯಿದೆ. ಕಾಂಗ್ರೆಸ್ ಟಿಕೇಟ್ ಕೈತಪ್ಪಿದ ಕಾರಣಕ್ಕೆ ಕುರುಬರ ಎಚ್.ಬಿ.ಮಂಜಪ್ಪ ಆರಂಭದಲ್ಲಿ ಬಂಡಾಯವೆದ್ದರೂ ಈಗ ಹಾಲಿ ಶಾಸಕ ಶಾಂತನಗೌಡನ ಪರ ಲವಲವಿಕೆಯಿಂದ ಪ್ರಚಾರ ಮಾಡುತ್ತಿದ್ದಾನೆ. ಇನ್ನು ಬಿಜೆಪಿಯಿಂದ ಕಣದಲ್ಲಿರುವ ನರ್ಸ್ ರೇಣುಕಾಚಾರ್ಯ ಯುವಜನರು ಮತ್ತು ನೊಣಬ, ಬಣಜಿಗ ಲಿಂಗಾಯತರ ಮತಗಳನ್ನು ನಂಬಿ ಹೋರಾಟ ನಡೆಸಿದ್ದಾನೆ. ಕಾಂಗ್ರೆಸ್‍ಗೆ ಹೆಚ್ಚಿನ ಸಂಖ್ಯೆಯಲ್ಲಿರುವ ಸಾದರ ಲಿಂಗಾಯತರ ಜೊತೆಗೆ ಅಹಿಂದ ವರ್ಗದ ಮತಗಳೂ ಬೀಳುವುದರಿಂದ ಇಲ್ಲಿ ಈ ಸಲವೂ ರೇಣುಕಾರ್ಯನಿಗೆ ಕಷ್ಟವಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...