Homeಅಂತರಾಷ್ಟ್ರೀಯಕೆಲವೆ ಗಂಟೆಗಳಲ್ಲಿ ಹೊಸ ಸರ್ಕಾರ ರಚಿಸಲಿರುವ ತಾಲಿಬಾನ್‌

ಕೆಲವೆ ಗಂಟೆಗಳಲ್ಲಿ ಹೊಸ ಸರ್ಕಾರ ರಚಿಸಲಿರುವ ತಾಲಿಬಾನ್‌

- Advertisement -
- Advertisement -

ತಾಲಿಬಾನ್‌‌‌ ಇಂದು ಅಫ್ಘಾನಿಸ್ತಾನದಲ್ಲಿ ಹೊಸ ಸರ್ಕಾರವನ್ನು ಘೋಷಿಸಲು ಸಜ್ಜಾಗಿದೆ ಎಂದು ವರದಿಗಳು ಹೇಳಿವೆ. ಅಷ್ಟೇ ಅಲ್ಲದೆ ದೇಶದಲ್ಲಿ ಆಹಾರ ಪೂರೈಕೆಯ ಅಭಾವ ಕಾಡುತ್ತಿದ್ದು, ದೇಶವು ಬಡತನಕ್ಕೆ ಜಾರುತ್ತಿದೆ ಎಂದು ವರದಿ ತಿಳಿಸಿದೆ. ಈ ಹಿನ್ನಲೆಯಲ್ಲಿ ಅಂತರ್‌ರಾಷ್ಟ್ರೀಯ ಮಾನವೀಯ ನೆರವು ಪಡೆಯಲು ಸಹಿಷ್ಣು ಸರ್ಕಾರವನ್ನು ಸ್ಥಾಪಿಸಲು ತಾಲಿಬಾನ್‌ಗೆ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಒತ್ತಡವಿದೆ.

ಪ್ರಸ್ತಾಪಿತ ತಾಲಿಬಾನ್‌ ಸರ್ಕಾರವು ಇರಾನಿನ ನಾಯಕತ್ವದ ಮಾದರಿಯಲ್ಲಿರುತ್ತದೆ ಎಂದು ವರದಿಯಾಗಿದ್ದು, ತಾಲಿಬಾನ್‌‌ನ ಉನ್ನತ ಧಾರ್ಮಿಕ ನಾಯಕ ಮುಲ್ಲಾ ಹಿಬಾತುಲ್ಲಾ ಅಖುಂನ್‌ಜಾದ ಅಫ್ಘಾನಿಸ್ತಾನದ ಸರ್ವೋಚ್ಚ ಅಧಿಕಾರದ ಪಟ್ಟವನ್ನು ಏರಲಿದ್ದಾರೆ. ಈ ಎಲ್ಲಾ ಬೆಳವಣಿಗೆಯನ್ನು ತಿಳಿದಿರುವ ತಾಲಿಬಾನ್‌ ಅಧಿಕಾರಿಗಳ ಪ್ರಕಾರ, ಇಂದಿನ ಶುಕ್ರವಾರದ ಪ್ರಾರ್ಥನೆಯ ನಂತರ ಹೊಸ ಆಡಳಿತವನ್ನು ಘೋಷಿಸುವ ನಿರೀಕ್ಷೆಯಿದೆ.

ಇದನ್ನೂ ಓದಿ: ಅಫ್ಘಾನ್‌ನ ಹೊಸ ನಾಯಕರಾಗಲಿರುವ ತಾಲಿಬಾನ್‌‌ ಮುಖಂಡರಿವರು

ಸರ್ಕಾರದ ರಚನೆಯನ್ನು ಅಂತಿಮಗೊಳಿಸಲು, ಹೊಸ ಸರ್ಕಾರದ ಕುರಿತು ಸಮಾಲೋಚನೆ ಮತ್ತು ಚರ್ಚೆಯನ್ನು ಈಗಾಗಲೇ ಮಾಡಲಾಗಿದೆ. ಹೊಸ ರಚನೆಯ ಪ್ರಕಾರ, ದೇಶದ ಅಧ್ಯಕ್ಷರು ಸರ್ವೋಚ್ಚ ನಾಯಕನ ಕೆಳಗೆ ಇರುತ್ತಾರೆ.

ಹೊಸ ಸರ್ಕಾರದಲ್ಲಿ 60 ವರ್ಷದ ಮುಲ್ಲಾ ಅಖುಂನ್‌ಜಾದ ತಾಲಿಬಾನ್ ಸರ್ಕಾರದ ಸರ್ವೋಚ್ಚ ನಾಯಕರಾಗಿರುತ್ತಾರೆ. ಇದು ಇರಾನ್‌ ನಾಯಕತ್ವದ ಮಾದರಿಯಾಗಿದೆ. ಅಲ್ಲಿ ಸರ್ವೋಚ್ಚ ನಾಯಕನೆ ದೇಶದ ಅತ್ಯುನ್ನತ ನಾಯಕನಾಗಿದ್ದು, ರಾಜಕೀಯ ಮತ್ತು ಧಾರ್ಮಿಕ ನೀತಿಗಳ ಮುಖ್ಯಸ್ಥನಾಗಿ ಕಾರ್ಯ ನಿರ್ವಹಿಸುತ್ತಾರೆ. ಅವರು ದೇಶದ ಅಧ್ಯಕ್ಷರಿಗಿಂತ ಉನ್ನತ ಸ್ಥಾನದಲ್ಲಿದ್ದು, ದೇಶದ ಮಿಲಿಟರಿ, ಸರ್ಕಾರ ಮತ್ತು ನ್ಯಾಯಾಂಗದ ಮುಖ್ಯಸ್ಥರನ್ನು ನೇಮಿಸುತ್ತಾರೆ. ದೇಶದ ರಾಜಕೀಯ, ಧಾರ್ಮಿಕ ಮತ್ತು ಸೇನಾ ವ್ಯವಹಾರಗಳಲ್ಲಿ ಸರ್ವೋಚ್ಚ ನಾಯಕನ ತೀರ್ಮಾನವೆ ಅಂತಿಮ.

ಮುಲ್ಲಾ ಅಖುಂನ್‌ಜಾದ ಅವರು ಸರ್ಕಾರದ ನಾಯಕರಾಗಿರುತ್ತಾರೆ ಮತ್ತು ಈ ಬಗ್ಗೆ ಯಾವುದೇ ಅನುಮಾನ ಬೇಡ ಎಂದು ತಾಲಿಬಾನ್‌ನ ಮಾಹಿತಿ ಮತ್ತು ಸಂಸ್ಕೃತಿ ಆಯೋಗದ ಹಿರಿಯ ಅಧಿಕಾರಿ ಮುಫ್ತಿ ಇನಾಮುಲ್ಲಾ ಸಮಂಗಾನಿ ಹೇಳಿದ್ದು, ಅಧ್ಯಕ್ಷರು ಅವರ ಮೇಲ್ವಿಚಾರಣೆಯಲ್ಲಿ ಕೆಲಸ ಮಾಡುತ್ತಾರೆ ಎಂದು ಅವರು ಸೂಚಿಸಿದ್ದಾರೆ. ಮುಲ್ಲಾ ಅಖುಂನ್‌ಜಾದ ಅವರು ತಾಲಿಬಾನ್‌ನ ಉನ್ನತ ಧಾರ್ಮಿಕ ನಾಯಕರಾಗಿದ್ದು, 15 ವರ್ಷಗಳಿಂದ ಬಲೂಚಿಸ್ತಾನ ಪ್ರಾಂತ್ಯದ ಕಚ್ಲಾಕ್ ಪ್ರದೇಶದ ಮಸೀದಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

ಇದನ್ನೂ ಓದಿ: ರೈತ ಮಹಿಳೆಗೆ ಪರಿಹಾರ ವಿಳಂಬ: ನ್ಯಾಯಾಂಗ ನಿಂದನೆ ಆರೋಪದಲ್ಲಿ ಆಂಧ್ರದ IAS ಅಧಿಕಾರಿಗಳಿಗೆ ಜೈಲು

ಪಾಕಿಸ್ತಾನದ ಸೆರೆಮನೆಯಲ್ಲಿದ್ದ ತಾಲಿಬಾನ್‌ನ ಸಹ-ಸಂಸ್ಥಾಪಕ ಮತ್ತು ಉಪ ನಾಯಕರಾಗಿರುವ ಮುಲ್ಲಾ ಅಬ್ದುಲ್ ಘನಿ ಬರದಾರ್ ಅವರು ಕೂಡಾ ಸರ್ಕಾರದ ಮುಖ್ಯಸ್ಥರಾಗಿ ನೇಮಕಗೊಳ್ಳುವ ಸಾಧ್ಯತೆಯಿದೆ.

2013 ರಲ್ಲಿ ನಿಧನರಾದ ತಾಲಿಬಾನ್‌ ಸಂಸ್ಥಾಪಕ ಮುಲ್ಲಾ ಮುಹಮ್ಮದ್ ಒಮರ್ ಅವರ ಪುತ್ರ ಮೊಹಮ್ಮದ್ ಯಾಕೂಬ್ ಮತ್ತು ಇನ್ನೊಬ್ಬ ಉಪನಾಯಕ ಸಿರಾಜುದ್ದೀನ್ ಹಕ್ಕಾನಿ ಸೇರಿದಂತೆ ತಾಲಿಬಾನ್‌‌ನ ಹಿರಿಯ ನಾಯಕರು ಸರ್ಕಾರದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.

ಹೊಸ ಸರ್ಕಾರದ ಅಡಿಯಲ್ಲಿ, ಗವರ್ನರ್‌ಗಳು ಪ್ರಾಂತ್ಯಗಳನ್ನು ನಿಯಂತ್ರಿಸುತ್ತಾರೆ, ಜಿಲ್ಲಾ ಗವರ್ನರ್‌ಗಳು ತಮ್ಮ ಜಿಲ್ಲೆಗಳ ಉಸ್ತುವಾರಿ ವಹಿಸುತ್ತಾರೆ ಎಂದು ಸಮಂಗಾನಿ ಹೇಳಿದ್ದಾರೆ.

ತಾಲಿಬಾನ್‌ ಈಗಾಗಲೇ ಪ್ರಾಂತ್ಯಗಳು ಮತ್ತು ಜಿಲ್ಲೆಗಳಿಗೆ ರಾಜ್ಯಪಾಲರು, ಪೊಲೀಸ್ ಮುಖ್ಯಸ್ಥರು ಮತ್ತು ಪೊಲೀಸ್ ಕಮಾಂಡರ್‌ಗಳನ್ನು ನೇಮಿಸಿದೆ. ಹೊಸ ಆಡಳಿತ ವ್ಯವಸ್ಥೆಯ ಹೆಸರು, ರಾಷ್ಟ್ರ ಧ್ವಜ ಮತ್ತು ರಾಷ್ಟ್ರಗೀತೆ ಇನ್ನೂ ಅಂತಿಮಗೊಂಡಿಲ್ಲ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ‘ಪೆಟ್ರೋಲ್ ಬೆಲೆ ಹೆಚ್ಚುತ್ತಿದೆ’ ಎಂದರೆ ಅಫ್ಘಾನ್‌ಗೆ ಹೋಗಿ ಎಂದ ಬಿಜೆಪಿ ನಾಯಕ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...