Homeಮುಖಪುಟದೆಹಲಿ ವಿಧಾನಸಭೆಯಿಂದ ಕೆಂಪು ಕೋಟೆಗೆ ಸುರಂಗ ಮಾರ್ಗ- 2016 ರಲ್ಲಿ ಬಿಬಿಸಿಯಲ್ಲಿ ವರದಿಯಾಗಿತ್ತು

ದೆಹಲಿ ವಿಧಾನಸಭೆಯಿಂದ ಕೆಂಪು ಕೋಟೆಗೆ ಸುರಂಗ ಮಾರ್ಗ- 2016 ರಲ್ಲಿ ಬಿಬಿಸಿಯಲ್ಲಿ ವರದಿಯಾಗಿತ್ತು

- Advertisement -
- Advertisement -

ದೆಹಲಿ ವಿಧಾನಸಭೆಯಲ್ಲಿ ಸುರಂಗ ಮಾರ್ಗವೊಂದು ಪತ್ತೆಯಾಗಿದ್ದು, ಸ್ವಾತಂತ್ರ್ಯ ಹೋರಾಟ ನಡೆಯುತ್ತಿದ್ದ ಸಂದರ್ಭದಲ್ಲಿ ಬ್ರಿಟಿಷರು ಸ್ವಾತಂತ್ರ್ಯ ಹೋರಾಟಗಾರರನ್ನು ಹತ್ತಿಕ್ಕಲು ಈ ಸುರಂಗವನ್ನು ಬಳಸುತ್ತಿದ್ದರು ಹೇಳಲಾಗಿದೆ. ಆದರೆ ಈ ಸುರಂಗದ ಬಗ್ಗೆ 2016 ರಲ್ಲಿ ಬಿಬಿಸಿ ಸುದ್ದಿ ಮಾಡಿ, ವಿಡಿಯೊ ಬಹಿರಂಗಪಡಿಸಿತ್ತು.

ಈಗ ಮತ್ತೆ ಹಳೆ ಸುದ್ದಿಗೆ ಜೀವ ಬಂದಿದ್ದು, ರಾಷ್ಟ್ರೀಯ ಮಾಧ್ಯಮಗಳು ಈ ಬಗ್ಗೆ ವರದಿ ಮಾಡುತ್ತಿವೆ. ಬಿಬಿಸಿ 2016 ರ ಮಾರ್ಚ್ 26 ರಂದು ಈ ಸುರಂಗ ಮಾರ್ಗದ ಬಗ್ಗೆ ಸುದ್ದಿ ಮಾಡಿ, ವಿಡಿಯೊ ಕೂಡ ಬಹಿರಂಗ ಪಡಿಸಿತ್ತು. ಜೊತೆಗೆ ಸ್ಪೀಕರ್ ರಾಮ್ ನಿವಾಸ್ ಗೋಯೆಲ್ ಅವರು ಮತ್ತು ಇತಿಹಾಸಕಾರ ವಿಲಿಯಂ ಡಾಲ್ರಿಂಪಲ್ ಅವರ ಹೇಳಿಕೆಗಳನ್ನು ದಾಖಲಿಸಿತ್ತು.

“ಈ ಸುರಂಗ ಮಾರ್ಗವು ವಿಧಾನಸಭೆಯಿಂದ ಕೆಂಪು ಕೋಟೆಗೆ ಸಂಪರ್ಕಿಸುತ್ತದೆ. ಬ್ರಿಟಿಷರು ಇದನ್ನು ಬಳಸುತ್ತಿದ್ದರು ಎಂದು ದೆಹಲಿ ವಿಧಾನಸಭಾ ಸ್ಪೀಕರ್ ರಾಮ್ ನಿವಾಸ್ ಗೋಯೆಲ್ ಹೇಳಿದ್ದಾರೆ.

“ನಾನು 1993ರಲ್ಲಿ ಶಾಸಕರಾಗಿ ಆಯ್ಕೆಯಾದಾಗ ವಿಧಾನಸಭೆಯಿಂದ ಕೆಂಪುಕೋಟೆಗೆ ಸಂಪರ್ಕಿಸುವ ಸುರಂಗದ ಬಗ್ಗೆ ಕೇಳಿದ್ದೆ. ನಾನು ಅದರ ಇತಿಹಾಸವನ್ನು ಹುಡುಕಲು ಪ್ರಯತ್ನಿಸಿದ್ದೆ. ಆದರೆ ಅದರ ಬಗ್ಗೆ ಸ್ಪಷ್ಟತೆ ಇರಲಿಲ್ಲ” ಎಂದು ಈಗ ಎಎನ್‌ಐಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಉತ್ತರಪ್ರದೇಶ: ಮತ್ತೊಬ್ಬ ಮಹಿಳೆಗಾಗಿ ಹೆಂಡತಿ, ಪುಟ್ಟ ಮಕ್ಕಳನ್ನು ಕೊಂದು, ಮನೆಯಲ್ಲಿ ಹೂತು ಪರಾರಿಯಾಗಿದ್ದ ವ್ಯಕ್ತಿ ಬಂಧನ

“ಈಗ ನಮಗೆ ಸುರಂಗದ ದ್ವಾರ ಪತ್ತೆಯಾಗಿದೆ. ಆದರೆ ಮೆಟ್ರೋ ಯೋಜನೆಗಳು ಮತ್ತು ಒಳಚರಂಡಿ ಸ್ಥಾಪನೆಯಿಂದಾಗಿ ಸುರಂಗದ ಎಲ್ಲಾ ಮಾರ್ಗಗಳು ನಾಶವಾಗಿದ್ದು, ನಾವು ಅದನ್ನು ಮತ್ತಷ್ಟು ಅಗೆಯುತ್ತಿಲ್ಲ” ಎಂದು ಹೇಳಿದ್ದಾರೆ.

“1912ರಲ್ಲಿ ಕೋಲ್ಕತ್ತಾದಿಂದ ದೆಹಲಿಗೆ ರಾಜಧಾನಿಯನ್ನು ವರ್ಗಾಯಿಸಿದ ನಂತರ ಕೇಂದ್ರ ಶಾಸಕಾಂಗ ಸಭೆಯಾಗಿ ಬಳಸಲಾಗುತ್ತಿದ್ದ ದೆಹಲಿ ವಿಧಾನ ಸಭೆಯನ್ನು 1926 ರಲ್ಲಿ ನ್ಯಾಯಾಲಯವಾಗಿ ಪರಿವರ್ತಿಸಲಾಗಿತ್ತು. ಬ್ರಿಟಿಷರು ಈ ಸುರಂಗವನ್ನು ಸ್ವಾತಂತ್ರ್ಯ ಹೋರಾಟಗಾರರನ್ನು ನ್ಯಾಯಾಲಯಕ್ಕೆ ಕರೆತರಲು ಬಳಸಿದ್ದರು” ಎಂದು ಗೋಯೆಲ್ ಮಾಹಿತಿ ನೀಡಿದ್ದಾರೆ.

“ಇಲ್ಲಿ ಗಲ್ಲು ಶಿಕ್ಷೆ ನೀಡುತ್ತಿದ್ದ ಕೋಣೆಯಿತ್ತು ಎಂಬುದರ ಬಗ್ಗೆ ನಮಗೆಲ್ಲರಿಗೂ ತಿಳಿದಿತ್ತು. ಆದರೆ ಅದನ್ನು ಎಂದಿಗೂ ತೆರೆಯಲಿಲ್ಲ. ಈಗ ಸ್ವಾತಂತ್ರ್ಯದ 75 ನೇ ವರ್ಷವಾಗಿದೆ. ಹೀಗಾಗಿ, ನಾನು ಆ ಕೊಠಡಿಯನ್ನು ಪರೀಕ್ಷಿಸಲು ನಿರ್ಧರಿಸಿದೆ. ನಾವು ಆ ಕೊಠಡಿಯನ್ನು ಸ್ವಾತಂತ್ರ್ಯ ಹೋರಾಟಗಾರರಿಗೆ ಗೌರವವನ್ನು ನೀಡುವ ದೇಗುಲವಾಗಿ ಬದಲಾಯಿಸುವ ಉದ್ದೇಶ ಹೊಂದಿದ್ದೇವೆ” ಎಂದು ಹೇಳಿದ್ದಾರೆ.

ಬಿಬಿಸಿ 2016 ರಲ್ಲಿ ಬಿಡುಗಡೆ ಮಾಡಿದ ಸುರಂಗದ ವರದಿ ಮತ್ತು ವಿಡಿಯೊ ನೋಡಲು ಇಲ್ಲಿ ಕ್ಲಿಕ್ ಮಾಡಿ.


ಇದನ್ನೂ ಓದಿ: ರೈತ ಮಹಿಳೆಗೆ ಪರಿಹಾರ ವಿಳಂಬ: ನ್ಯಾಯಾಂಗ ನಿಂದನೆ ಆರೋಪದಲ್ಲಿ ಆಂಧ್ರದ IAS ಅಧಿಕಾರಿಗಳಿಗೆ ಜೈಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...