Homeಕರ್ನಾಟಕದಲಿತ ಮಹಿಳೆಯರನ್ನು ಕಾನೂನುಬಾಹಿರವಾಗಿ ಸೇವೆಯಿಂದ ವಜಾಗೊಳಿಸಿದ ನಿಮ್ಹಾನ್ಸ್‌: ಆರೋಪ

ದಲಿತ ಮಹಿಳೆಯರನ್ನು ಕಾನೂನುಬಾಹಿರವಾಗಿ ಸೇವೆಯಿಂದ ವಜಾಗೊಳಿಸಿದ ನಿಮ್ಹಾನ್ಸ್‌: ಆರೋಪ

- Advertisement -
- Advertisement -

ನಿಮ್ಹಾನ್ಸ್‌ ಆಸ್ಪತ್ರೆಯ ಅಧಿಕಾರಿಗಳು ನಮ್ಮನ್ನು ಕಾನೂನುಬಾಹಿರವಾಗಿ ಸೇವೆಯಿಂದ ವಜಾ ಮಾಡಿದ್ದಾರೆ ಎಂದು ಆರೋಪಿಸಿ ದಲಿತ ಸಮುದಾಯಕ್ಕೆ ಸೇರಿದ 15 ಮಹಿಳೆಯರು ಸೇರಿದಂತೆ ಒಟ್ಟು 19 ಮಂದಿ ಬೆಂಗಳೂರಿನಲ್ಲಿ ಜುಲೈ 9 ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನಾಕಾರರು ತಮ್ಮನ್ನು ಮತ್ತೆ ಸೇವೆಗೆ ತೆಗೆದುಕೊಳ್ಳುವಂತೆ ಆಡಳಿತ ಮಂಡಳಿಯನ್ನು ಒತ್ತಾಯಿಸಿದ್ದಾರೆ.

ಆಲ್ ಇಂಡಿಯಾ ಸೆಂಟ್ರಲ್ ಕೌನ್ಸಿಲ್ ಆಫ್ ಟ್ರೇಡ್ ಯೂನಿಯನ್ (ಎಐಸಿಸಿಟಿಯು) ಗೆ ಸಂಯೋಜಿತವಾಗಿರುವ ನಿಮ್ಹಾನ್ಸ್ ಪ್ರಗತಿಪರ ವರ್ಕರ್ಸ್ ಯೂನಿಯನ್ (ಎನ್‌ಪಿಡಬ್ಲ್ಯುಯು) ಅಡಿಯಲ್ಲಿ ನೌಕರರು ಪ್ರತಿಭಟನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಕಾರ್ಮಿಕರಿಗೆ ಸರ್ಕಾರಿ ಆಸ್ಪತ್ರೆಗಳಲ್ಲೇ ಲಸಿಕೆ ನೀಡಲು ಒತ್ತಾಯಿಸಿ ರಾಜ್ಯವ್ಯಾಪಿ ಪ್ರತಿಭಟನೆ

ಕೊರೊನಾ ನೈಟ್‌ ಕರ್ಫ್ಯೂ ಇದ್ದಂತಹ (ಎರಡು ತಿಂಗಳ ಹಿಂದೆ) ಸಮಯಲ್ಲಿ ನೌಕರರಿಗೆ ರಾತ್ರಿ 9:30 ವರೆಗೆ ಕೆಲಸ ನಿರ್ವಹಿಸುವಂತೆ ನಿಮ್ಹಾನ್ಸ್‌ ಆಡಳಿತ ಮಂಡಳಿಯು ನಿರ್ದೇಶಿಸಿತ್ತು. ಆದರೆ ಕಾರ್ಮಿಕರು ರಾತ್ರಿ ಹೊತ್ತು ಬಸ್ಸುಗಳು ಇಲ್ಲದಿರುವ ಕಾರಣ, ತಮಗೆ ವಾಹನಗಳನ್ನು ವ್ಯವಸ್ಥೆ ಮಾಡಿಕೊಡಿ ಎಂದು ಕೋರಿದ್ದರು. ಇಷ್ಟಕ್ಕೆ ಆಡಳಿತ ಮಂಡಳಿ ಕಾರ್ಮಿಕರನ್ನು ಸೇವೆಯಿಂದ ವಜಾಗೊಳಿಸಿದೆ ಎಂದು ಎನ್‌ಪಿಡಬ್ಲ್ಯುಯು ಆರೋಪಿಸಿದೆ.

ಪ್ರತಿಭಟನಾ ಸ್ಥಳಕ್ಕೆ ಸಾಮಾಜಿಕ ಹೋರಾಟಗಾರರಾಗಿರುವ ವಿನಯ್ ಶ್ರೀನಿವಾಸ್ ಅವರು ಭೇಟಿ ನೀಡಿ ಕಾರ್ಮಿಕರಿಗೆ ಬೆಂಬಲ ನೀಡಿದ್ದಾರೆ.

ಪ್ರತಿಭಟನಾ ನಿರತ ಮಹಿಳೆಯರು ತಮ್ಮ ಅಳಲನ್ನು ತೋಡಿಕೊಂಡಿದ್ದು, ನಾವು ಯಾವುದೆ ತಪ್ಪನ್ನು ಮಾಡಿಲ್ಲ. ಕೊರೊನಾದಂತಹ ಸಂಕಷ್ಟದಲ್ಲಿ ಕೂಡಾ ನಾವು ಕೆಲಸ ಮಾಡಿದ್ದೇವೆ. ಕೆಲಸದ ಸಮಯ ಬದಲಾಯಿಸದ್ದನ್ನು ಪ್ರಶ್ನಿಸಿರುವುದಕ್ಕೆ ನಮ್ಮನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ನಮಗೆ ನ್ಯಾಯ ಸಿಗಬೇಕು ಎಂದು ಹೇಳಿದ್ದಾರೆ. ವಿಡಿಯೊವನ್ನು ಕೆಳಗೆ ನೋಡಬಹುದು.

ಇದನ್ನೂ ಓದಿ: ಹೆಣ್ಣು ಮಕ್ಕಳ ಆಕ್ರಂದನ ಕೇಳುತ್ತಿಲ್ಲವೇ? ದೆಹಲಿಯ ದಲಿತ ಬಾಲಕಿ ಮೇಲಿನ ಅತ್ಯಾಚಾರ ಖಂಡಿಸಿ ಪ್ರತಿಭಟನೆ

“ವಿಕಿರಣಶಾಸ್ತ್ರ ವಿಭಾಗದಲ್ಲಿ ಕೆಲಸ ಮಾಡುವವರಿಗೆ ಮಾತ್ರ ಕೆಲಸದ ಸಮಯವನ್ನು ಬದಲಾಯಿಸಲಾಗಿದೆ. ಈ ವಿಭಾಗದಲ್ಲಿ ಹೆಚ್ಚಿನ ಆಸ್ಪತ್ರೆ ಸಹಾಯಕರು ಮಹಿಳೆಯರೇ ಆಗಿರುವುದರಿಂದ, ಕಾರ್ಮಿಕರು ತಮ್ಮ ಸುರಕ್ಷತೆ ಬಗ್ಗೆ ಆತಂಕಗಳನ್ನು ವ್ಯಕ್ತಪಡಿಸಿದ್ದರು. ಜೊತೆಗೆ ಕನಿಷ್ಠ ಸಾರಿಗೆ ವ್ಯವಸ್ಥೆಯನ್ನಾದರೂ ಮಾಡಿ ಎಂದು ಕೋರಿದ್ದರು. ಆದಾಗ್ಯೂ, ಅವರನ್ನು ಜುಲೈ 9 ರಂದು ಸೇವೆಯಿಂದ ವಜಾಗೊಳಿಸಲಾಯಿತು” ಎಂದು ಎನ್‌ಪಿಡಬ್ಲ್ಯುಯು ಪ್ರಧಾನ ಕಾರ್ಯದರ್ಶಿ ಎಂ.ಬಸವರಾಜ್ ಹೇಳಿದ್ದಾರೆ.

“ನಾವು ಹೊರಗುತ್ತಿಗೆ ಏಜೆನ್ಸಿಯಿಂದ ಬಂದವರಾಗಿದ್ದರೂ, ನಿಮ್ಹಾನ್ಸ್ ಅಧಿಕಾರಿಗಳ ಸೂಚನೆ ಮೇರೆಗೆ ಈ ಸಂಸ್ಥೆ ಕಾರ್ಯನಿರ್ವಹಿಸುತ್ತಿದೆ. ನಮ್ಮನ್ನು ಮತ್ತೆ ಸೇವೆಗೆ ಸೇರಿಸಿಕೊಳ್ಳುವವರೆಗೂ ನಾವು ನಮ್ಮ ಪ್ರತಿಭಟನೆಯನ್ನು ಮುಂದುವರಿಸುತ್ತೇವೆ” ಎಂದು ಅವರು ಹೇಳಿದ್ದಾರೆ.

ಆದರೆ ಪ್ರತಿಭಟನಾಕಾರ ಕಾರ್ಮಿಕರ ಆರೋಪಗಳನ್ನು ನಿಮ್ಹಾನ್ಸ್ ರಿಜಿಸ್ಟ್ರಾರ್ ಬಿ.ಎಸ್. ಶಂಕರನಾರಾಯಣ ರಾವ್ ಅವರು ನಿರಾಕರಿಸಿದ್ದಾರೆ ಎಂದು ದಿ ಹಿಂದೂ ಪತ್ರಿಕೆ ವರದಿ ಮಾಡಿದೆ. ಅವರು ಹೇಳುವಂತೆ, “ಎಲ್ಲಾ ಕಾರ್ಮಿಕರು ಹೊರಗುತ್ತಿಗೆ ಏಜೆನ್ಸಿಗೆ ಸೇರಿದವರು. ಯಾರೂ ನಿಮ್ಹಾನ್ಸ್‌ನಿಂದ ನೇರವಾಗಿ ಕೆಲಸ ಮಾಡುತ್ತಿಲ್ಲ. ಈ ಕಾರ್ಮಿಕರ ಮೇಲೆ ನಮಗೆ ಯಾವುದೇ ನಿಯಂತ್ರಣವಿಲ್ಲ. ಅವರ ಕೆಲಸದ ಸ್ವರೂಪವನ್ನು ತೀರ್ಮಾನಿಸಲು ಏಜೆನ್ಸಿಗೆ ಅಧಿಕಾರವಿದೆ” ಎಂದು ಅವರು ದಿ ಹಿಂದೂಗೆ ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ: ಏಕಾಂಗಿ ಪ್ರತಿಭಟನೆ ನಡೆಸಿದ ಬಿಜೆಪಿ ಶಾಸಕ: ಧರಣಿ ಬಳಿಕ ಸಿದ್ದರಾಮಯ್ಯ ಭೇಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...