Homeಕರ್ನಾಟಕಸಾರಿಗೆ ನಿಗಮಗಳನ್ನು ಲಾಭದಾಯಕವಾಗಿಸಲು ಪರಿಣತರ ಸಮಿತಿ ರಚನೆ: ಬಸವರಾಜ ಬೊಮ್ಮಾಯಿ

ಸಾರಿಗೆ ನಿಗಮಗಳನ್ನು ಲಾಭದಾಯಕವಾಗಿಸಲು ಪರಿಣತರ ಸಮಿತಿ ರಚನೆ: ಬಸವರಾಜ ಬೊಮ್ಮಾಯಿ

- Advertisement -
- Advertisement -

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳನ್ನು ಲಾಭದಾಯಕವಾಗಿಸಲು ಕೈಗೊಳ್ಳಬೇಕಾದ ಸುಧಾರಣಾ ಕ್ರಮಗಳ ಕುರಿತು ಪರಿಶೀಲಿಸಲು ಪರಿಣತರ ಸಮಿತಿಯನ್ನು ರಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ತಿಳಿಸಿದರು.

ವಿಧಾನಸೌಧದಲ್ಲಿ ನಡೆದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ 60 ವರ್ಷಾಚರಣೆಯಲ್ಲಿ ಮಾತನಾಡಿದ ಅವರು, “ಇಂದು ನಿಗಮವು ಸಂಕಷ್ಟದಲ್ಲಿದೆ. ಆದರೆ ಸಮಸ್ಯೆಯನ್ನು ಬೆಳೆಯಲು ಬಿಡದೆ ನಾವು ಪರಿಹಾರ ಕಂಡುಕೊಳ್ಳಬೇಕಾಗಿದೆ. ಆದಾಯೋತ್ಪನ್ನ ಮಾದರಿಯಿದ್ದರೂ, ನಿಗಮ ನಷ್ಟದಲ್ಲಿರಲು ಕಾರಣಗಳನ್ನು ವಿಶ್ಲೇಷಿಸುವುದರೊಂದಿಗೆ, ನಿಗಮವನ್ನು ಲಾಭದಾಯಕವಾಗಿಸಲು ಸಲಹೆ ಸೂಚನೆಗಳನ್ನು ನೀಡಲು ಈ ಸಮಿತಿ ರಚಿಸಲಾಗುವುದು” ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

ಕೊರೊನಾ ಸಂಕಷ್ಟದ ಅವಧಿಯಲ್ಲಿ ನೌಕರರ ವೇತನ ಸೇರಿದಂತೆ, ನಿಗಮಕ್ಕೆ ಬೆಂಬಲ ನೀಡಲು ರಾಜ್ಯ ಸರ್ಕಾರ 2,300 ಕೋಟಿ ರೂ. ಬಿಡುಗಡೆ ಮಾಡಿದೆ. ತಾವು ಮುಖ್ಯಮಂತ್ರಿಯಾದ ನಂತರವೂ 108 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಮುಂದಿನ ದಿನಗಳಲ್ಲಿ ನಿಗಮದ ಆದಾಯ ಹೆಚ್ಚಿಸಲು ಕ್ರಮ ಕೈಗೊಳ್ಳಬೇಕಾಗಿದೆ. ಇದಕ್ಕೆ ಚಿಂತನೆ, ಕಾರ್ಯವಿಧಾನಗಳಲ್ಲಿ ಬದಲಾವಣೆ ಅಗತ್ಯ; ಜೊತೆಗೆ ಕ್ಷಮತೆಯಿಂದ ನಿಗಮವನ್ನು ಮುನ್ನಡೆಸಲು ಸರ್ಕಾರ ಬದ್ಧವಾಗಿದೆ. ನಿಗಮದ ಸುಧಾರಣೆಯೊಂದಿಗೆ ನೌಕರರ ಜೀವನಮಟ್ಟ ಸುಧಾರಣೆಗೂ ಆದ್ಯತೆ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಕಾರ್ಮಿಕರಿಗೆ ಸರ್ಕಾರಿ ಆಸ್ಪತ್ರೆಗಳಲ್ಲೇ ಲಸಿಕೆ ನೀಡಲು ಒತ್ತಾಯಿಸಿ ರಾಜ್ಯವ್ಯಾಪಿ ಪ್ರತಿಭಟನೆ

ವಿಶ್ವದಾದ್ಯಂತ ಸಾರಿಗೆ ವ್ಯವಸ್ಥೆಯಲ್ಲಿ ಎಷ್ಟೇ ಬದಲಾವಣೆಗಳಾದರೂ, ಬಸ್ ಸೇವೆ ನಿರಂತರವಾಗಿ ತನ್ನ ಅಸ್ತಿತ್ವ ಉಳಿಸಿಕೊಂಡಿದೆ. ಹಳ್ಳಿಗಳಲ್ಲಿ ಬಸ್ ಬಂದರೆ ಚಟುವಟಿಕೆ ಪ್ರಾರಂಭವಾಗುತ್ತದೆ. ಈ ಎಲ್ಲ ಕಾರಣಗಳಿಗಾಗಿ ನಿಗಮ ತನ್ನದೇ ಆದ ಗೌರವವನ್ನು ಹೊಂದಿದೆ. ಬಸ್ ಚಾಲಕರು ಅತ್ಯಂತ ಜವಾಬ್ದಾರಿಯ ಕೆಲಸ ನಿರ್ವಹಿಸುತ್ತಾರೆ. ಪ್ರಯಾಣದ ಅವಧಿಯಲ್ಲಿ ನಮ್ಮ ಜೀವ ಅವರ ಕೈಯಲಿರುತ್ತದೆ. ಆದ್ದರಿಂದ ಚಾಲಕರಿಗೆ ಮೊದಲ ಗೌರವ ಸಲ್ಲಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ಪರಿಸರ ಸ್ನೇಹಿ ವಾಹನಗಳನ್ನು ಪರಿಚಯಿಸುವ ನಿಟ್ಟಿನಲ್ಲಿ ಬಿಎಂಟಿಸಿಯು 90 ವಿದ್ಯುತ್ ಚಾಲಿತ ಬಸ್‌ಗಳನ್ನು ಖರೀದಿಸುತ್ತಿದೆ. ಅಂತೆಯೇ ಕೆಎಸ್‌ಆರ್‌ಟಿಸಿಯು 642 ಹೊಸ ಬಸ್ ಗಳನ್ನು ಖರೀದಿಸುತ್ತಿದೆ ಎಂದು ವಿವರಿಸಿದರು.

ಕಾರ್ಯಕ್ರಮದಲ್ಲಿ ನಾಲ್ಕೂ ನಿಗಮಗಳ ಅಪಘಾತ ರಹಿತ ಚಾಲನೆ ಮಾಡಿದ 60 ಚಾಲಕರಿಗೆ ಚಿನ್ನದ ಪದಕ ಪ್ರದಾನ ಮಾಡಲಾಯಿತು. ಈ ಸಂದರ್ಭದಲ್ಲಿ 60ನೇ ವರ್ಷದ ಸವಿ ನೆನಪಿಗೆ ಅಂಚೆ ಲಕೋಟೆ ಬಿಡುಗಡೆ ಹಾಗೂ ಕೆಂಪೇಗೌಡ ಬಸ್ ನಿಲ್ದಾಣ 60 ವರ್ಷ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಾಗಿದೆ.


ಇದನ್ನೂ ಓದಿ: ನಕಲಿ ದೇಶಭಕ್ತಿ ಹೇಳುತ್ತಿದ್ದ ಬಿಜೆಪಿ ಈಗ ಜನರ ಬದುಕನ್ನು ಹೈರಾಣಾಗಿಸಿದೆ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...