Homeಕರ್ನಾಟಕರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಆದೇಶವನ್ನು ಕೂಡಲೇ ವಾಪಸ್ ಪಡೆಯಿರಿ: ಸಿದ್ದರಾಮಯ್ಯ ಆಗ್ರಹ

ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಆದೇಶವನ್ನು ಕೂಡಲೇ ವಾಪಸ್ ಪಡೆಯಿರಿ: ಸಿದ್ದರಾಮಯ್ಯ ಆಗ್ರಹ

'ನನ್ನ, ನಿಮ್ಮ ಆಯಸ್ಸು, ರಾಜಕೀಯ ವೃತ್ತಿ ಎಲ್ಲವೂ ಒಂದು ದಿನ ಮುಗಿಯುತ್ತದೆ. ಆದರೆ ಶಿಕ್ಷಣ ನೀತಿಯ ಹೆಸರಲ್ಲಿ ಬಲಿಪಶುಗಳಾಗುವ ಮಕ್ಕಳ ಮುಂದೆ 70-80 ವರ್ಷಗಳ ಭವಿಷ್ಯವಿದೆ'

- Advertisement -
- Advertisement -

ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೊಳಿಸಿ ಹೊರಡಿಸಿರುವ ಆದೇಶವನ್ನು ಕೂಡಲೇ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿ ಉನ್ನತ ಶಿಕ್ಷಣ ಸಚಿವ ಡಾ.ಅಶ್ವಥ್ ನಾರಾಯಣ್ ಅವರಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

ಇದರ ಜೊತೆಗೆ ಆದೇಶವನ್ನು ವಾಪಸ್ ಪಡೆಯುವವರೆಗೂ ರಾಷ್ಟ್ರೀಯ ಶಿಕ್ಷಣ ನೀತಿ ಕುರಿತಾದ ಯಾವುದೇ ಚರ್ಚೆಯಲ್ಲಿ ತಾವು ಭಾಗವಹಿಸುವುದಿಲ್ಲ ಎಂದು ತಿಳಿಸಿದ್ದಾರೆ.

ಪತ್ರದ ವಿವರ ಹೀಗಿದೆ: 

ರಾಷ್ಟ್ರೀಯ ಶಿಕ್ಷಣ ನೀತಿ-202 ಅನ್ನು ಕರ್ನಾಟಕದಲ್ಲಿ ಪ್ರಪ್ರಥಮವಾಗಿ ಅನುಷ್ಠಾನಗೊಳಿಸಲು ಚಾಲನೆ ನೀಡಲಾಗಿದೆಯೆಂದು ಹಾಗೂ ಈ ಕುರಿತು ಚರ್ಚಿಸಲು ದಿನಾಂಕವನ್ನು ನೀಡುವಂತೆ ತಮ್ಮ ಕಛೇರಿಯಿಂದ ಪತ್ರ ಬರೆದು ಕೋರಲಾಗಿದೆ. ಕರ್ನಾಟಕದಲ್ಲಿ ಈಗಾಗಲೆ ತರಾತುರಿಯಲ್ಲಿ ವಿದ್ಯಾರ್ಥಿಗಳು, ತಜ್ಞರು, ಪ್ರಾಧ್ಯಾಪಕರು, ಪೋಷಕರುಗಳ ಜೊತೆ ಚರ್ಚಿಸದೆ, ಸಾಧಕ-ಬಾಧಕಗಳನ್ನು ಪರಿಶೀಲಿಸದೆ ಈ ಶೈಕ್ಷಣಿಕ ವರ್ಷದಿಂದಲೆ ಅನುಷ್ಠಾನ ಮಾಡುವುದಾಗಿ ಹೇಳಿ ಉದ್ಘಾಟನೆಯನ್ನೂ ಮಾಡಲಾಗಿದೆ. ಉದ್ಘಾಟನೆಯನ್ನೂ ಮುಗಿಸಿ ಚರ್ಚೆ ಮಾಡಬೇಕು ಎಂದು ಕರೆಯುವುದು ಸಂಸದೀಯವಾಗಿ ಸರಿಯಲ್ಲ.

ಒಂದು ಶಿಕ್ಷಣ ನೀತಿಯ ಅನುಷ್ಠಾನವೆಂದರೆ ಸಣ್ಣ ಸಂಗತಿಯೆ..? ತಾವೂ ಕೂಡ ಬೆವರಿನ ಸಂಸ್ಕೃತಿಯ ಹಿನ್ನೆಲೆಯ ಸಮುದಾಯದಿಂದ ಬಂದಿದ್ದೀರಿ. ರಾಷ್ಟ್ರಕವಿ ಕುವೆಂಪು ಅವರು ಶಿಕ್ಷಣ, ಅದರ ಗುಣಮಟ್ಟವನ್ನು ಸುಧಾರಣೆ, ಕಲಿಕೆಯ ಮಾಧ್ಯಮ ಹಾಗೂ ಸರ್ಕಾರದ ಜವಾಬ್ಧಾರಿಗಳ ಬಗ್ಗೆ ಮಾತನಾಡಿದ್ದಾರೆ. ಶಿಕ್ಷಣದ ಕುರಿತಂತೆ ಕೆಲಸ ಮಾಡುತ್ತಿರುವವರೆಲ್ಲರೂ ಕುವೆಂಪು ಅವರ ವಿಚಾರಗಳನ್ನು ಓದಿ, ಅದರಂತೆ ನಡೆದುಕೊಳ್ಳಬೇಕಾಗಿದೆ.

ಇದನ್ನೂ ಓದಿ: ನಕಲಿ ದೇಶಭಕ್ತಿ ಹೇಳುತ್ತಿದ್ದ ಬಿಜೆಪಿ ಈಗ ಜನರ ಬದುಕನ್ನು ಹೈರಾಣಾಗಿಸಿದೆ: ಸಿದ್ದರಾಮಯ್ಯ

ಮುಂದುವರೆದ ದೇಶಗಳಲ್ಲಿ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳನ್ನು ಸರ್ಕಾರಗಳೆ ನಿರ್ವಹಿಸುತ್ತವೆ. ಯಾವುದೇ ನಾಡಿನಲ್ಲಿ ಉನ್ನತ ಶಿಕ್ಷಣ ವ್ಯವಸ್ಥೆ ಸಮರ್ಪಕವಾಗಿದ್ದರೆ ಆ ನಾಡಿನ ಸಮಸ್ತ ಆರೋಗ್ಯವೂ ಸರಿಯಾಗಿರುತ್ತದೆ. ಇಂದು ಭಾರತದ ಸಮಾಜಗಳು ತೀವ್ರ ರೂಪದ ಬಿಕ್ಕಟ್ಟುಗಳನ್ನು ಎದುರಿಸುತ್ತಿವೆ. ಅದಕ್ಕೆ ಕಾರಣಗಳು ಹಲವಿವೆ.
ಮೊದಲನೆಯದಾಗಿ ವಿದ್ಯಾರ್ಥಿ ಶಿಕ್ಷಕ ಪ್ರಮಾಣ ವಿಪರೀತ ಹೆಚ್ಚಾಗಿದೆ, ಅದು ಕಡಿಮೆಯಾಗಬೇಕು. ಶಿಕ್ಷಣ ಕ್ಷೇತ್ರಕ್ಕೆ ಅತಿ ಕಡಿಮೆ ಅನುದಾನ ನೀಡಲಾಗುತ್ತಿದೆ. ಈ ನೀತಿಯ ಶಿಫಾರಸ್ಸುಗಳ ಪ್ರಕಾರ ಜಿಡಿಪಿಯಲ್ಲಿ ಕನಿಷ್ಠ ಶೇ 6 ರಷ್ಟು ಮೀಸಲಿರಿಸಬೇಕು. ಇದಾಗಬೇಕೆಂದರೆ ಕರ್ನಾಟಕದಲ್ಲಿ ಕನಿಷ್ಠ 1.08 ಲಕ್ಷ ಕೋಟಿ ರೂಪಾಯಿಗಳನ್ನು ಮೀಸಲಿರಿಸಬೇಕಾಗುತ್ತದೆ.

ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಹೇರಿಕೆಯು ಹಲವು ಸಮಸ್ಯೆಗಳನ್ನು ಒಳಗೊಂಡಿದೆ ಎಂದು ಹೇಳುತ್ತಿದೆ. ಒಕ್ಕೂಟ ವ್ಯವಸ್ಥೆಯ ಮೂಲ ಸ್ಫೂರ್ತಿಯ ನಿರಾಕರಣೆ, ಖಾಸಗೀಕರಣ, ತರಗತಿಗಳನ್ನು ನಿರಾಕರಿಸಿ ಕಾಲೇಜು, ವಿಶ್ವ ವಿದ್ಯಾಲಯಗಳ ಪಾವಿತ್ರ್ಯದ ನಿರಾಕರಣೆ, ಬಡವರು, ಹಿಂದುಳಿದವರು, ದಮನಿತರ ಸಿಗಬಹುದಾದ ಸುಲಭ ಶಿಕ್ಷ,ಣದ ನಿರಾಕರಣೆ, ಕೋಮು ಅಜೆಂಡಾಗಳನ್ನು ತಂದು ಅವೈಜ್ಞಾನಿಕತೆಯನ್ನು, ದ್ವೇಷವನ್ನು ತುಂಬಿ ಭಾರತವನ್ನು ಶಾಶ್ವತ ಅಂಧಕಾರಕ್ಕೆ ತಳ್ಳಲಾಗುತ್ತಿದೆ ಮುಂತಾದ ಗಂಭೀರ ಆರೋಪಗಳಿವೆ.

ಸರ್ಕಾರ ಈ ಎಲ್ಲದರ ಕುರಿತು ಚರ್ಚೆ ನಡೆಸಬೇಕಾಗಿತ್ತು. ಇದೇನನ್ನೂ ನೀವು ಮಾಡಿಲ್ಲ. ನನ್ನ, ನಿಮ್ಮ ಆಯಸ್ಸು, ರಾಜಕೀಯ ವೃತ್ತಿ ಎಲ್ಲವೂ ಮುಂದೆಂದೊ ಒಂದು ದಿನ ಮುಗಿಯುತ್ತದೆ. ಆದರೆ ಶಿಕ್ಷಣ ನೀತಿಯ ಹೆಸರಲ್ಲಿ ಬಲಿಪಶುಗಳಾಗುವ ಮಕ್ಕಳ ಮುಂದೆ 70-80 ವರ್ಷಗಳ ಭವಿಷ್ಯವಿದೆ. ಶಿಕ್ಷಣದ ಹಂತದಲ್ಲಿ ಅವರ ಭವಿಷ್ಯ ಅಲ್ಲೋಲ, ಕಲ್ಲೋಲವಾದರೆ ಅದರ ಶಾಪವನ್ನು ಹೊರುವವರು ಯಾರು? ಈ ನಾಡಿನ , ರೈತರ, ಪಶುಪಾಲಕರ, ಕುಶಲಕರ್ಮಿಗಳ, ಸಣ್ಣ ಪುಟ್ಟ ವ್ಯಾಪಾರಿಗಳ, ಕಾರ್ಮಿಕರ ಮನೆಗಳಿಂದ ಬಂದ ಮಕ್ಕಳು ಗುಣ ಮಟ್ಟದ ಶಿಕ್ಷಣ ಪಡೆದು ಜಾಗತಿಕ ಮಟ್ಟದ ಉದಾರ ಮಾನವತಾವಾದಿ, ವೈಜ್ಞಾನಿಕ ಶಿಕ್ಷಣ ಪಡೆಯಬಾರದೆ..?
ತಾವು ನಿಜವಾಗಿಯೂ ನೈಜ ಸ್ಫೂರ್ತಿಯಲ್ಲಿ ಚರ್ಚೆ ಮಾಡಬಯಸಿದರೆ, ಕೂಡಲೆ ಈ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಹಿಂದಕ್ಕೆ ಪಡೆಯಿರಿ. ಚರ್ಚೆ ನಡೆಸಿದ ಮೇಲೆ ನಿಜವಾಗಿಯೂ ಈ ನೀತಿ ಆರೋಗ್ಯಕರವೆನ್ನಿಸಿ ಅನುಷ್ಠಾನ ಸೂಕ್ತವೆನ್ನಿಸಿದರೆ, ಈ ಶತಮಾನಕ್ಕೆ ಅತ್ಯಗತ್ಯ ಎನ್ನಿಸಿದರೆ ನಾವೇ ನಿಂತು ಅನುಷ್ಠಾನ ಮಾಡಲು ಬೆಂಬಲಿಸುತ್ತೇವೆ. ಇಲ್ಲದಿದ್ದರೆ ಮಕ್ಕಳ ಭವಿಷ್ಯದ ಕುತ್ತಿಗೆ ಕೊಯ್ಯುವಂಥ ಪಾಪದ ಕೆಲಸದಲ್ಲಿ ಭಾಗಿಯಾದೆವು ಎಂಬ ಪಶ್ಚಾತ್ತಾಪವನ್ನು ಹೊರಬೇಕಾಗುತ್ತದೆ ಎಂಬುದನ್ನು ತಮಗೆ ತಿಳಿಸಬಯಸುತ್ತೇನೆ.


ಇದನ್ನೂ ಓದಿ: ದಲಿತ ಮಹಿಳೆಯರನ್ನು ಕಾನೂನುಬಾಹಿರವಾಗಿ ಸೇವೆಯಿಂದ ವಜಾಗೊಳಿಸಿದ ನಿಮ್ಹಾನ್ಸ್‌: ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...