Homeಕರ್ನಾಟಕರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಆದೇಶವನ್ನು ಕೂಡಲೇ ವಾಪಸ್ ಪಡೆಯಿರಿ: ಸಿದ್ದರಾಮಯ್ಯ ಆಗ್ರಹ

ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಆದೇಶವನ್ನು ಕೂಡಲೇ ವಾಪಸ್ ಪಡೆಯಿರಿ: ಸಿದ್ದರಾಮಯ್ಯ ಆಗ್ರಹ

'ನನ್ನ, ನಿಮ್ಮ ಆಯಸ್ಸು, ರಾಜಕೀಯ ವೃತ್ತಿ ಎಲ್ಲವೂ ಒಂದು ದಿನ ಮುಗಿಯುತ್ತದೆ. ಆದರೆ ಶಿಕ್ಷಣ ನೀತಿಯ ಹೆಸರಲ್ಲಿ ಬಲಿಪಶುಗಳಾಗುವ ಮಕ್ಕಳ ಮುಂದೆ 70-80 ವರ್ಷಗಳ ಭವಿಷ್ಯವಿದೆ'

- Advertisement -
- Advertisement -

ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೊಳಿಸಿ ಹೊರಡಿಸಿರುವ ಆದೇಶವನ್ನು ಕೂಡಲೇ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿ ಉನ್ನತ ಶಿಕ್ಷಣ ಸಚಿವ ಡಾ.ಅಶ್ವಥ್ ನಾರಾಯಣ್ ಅವರಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

ಇದರ ಜೊತೆಗೆ ಆದೇಶವನ್ನು ವಾಪಸ್ ಪಡೆಯುವವರೆಗೂ ರಾಷ್ಟ್ರೀಯ ಶಿಕ್ಷಣ ನೀತಿ ಕುರಿತಾದ ಯಾವುದೇ ಚರ್ಚೆಯಲ್ಲಿ ತಾವು ಭಾಗವಹಿಸುವುದಿಲ್ಲ ಎಂದು ತಿಳಿಸಿದ್ದಾರೆ.

ಪತ್ರದ ವಿವರ ಹೀಗಿದೆ: 

ರಾಷ್ಟ್ರೀಯ ಶಿಕ್ಷಣ ನೀತಿ-202 ಅನ್ನು ಕರ್ನಾಟಕದಲ್ಲಿ ಪ್ರಪ್ರಥಮವಾಗಿ ಅನುಷ್ಠಾನಗೊಳಿಸಲು ಚಾಲನೆ ನೀಡಲಾಗಿದೆಯೆಂದು ಹಾಗೂ ಈ ಕುರಿತು ಚರ್ಚಿಸಲು ದಿನಾಂಕವನ್ನು ನೀಡುವಂತೆ ತಮ್ಮ ಕಛೇರಿಯಿಂದ ಪತ್ರ ಬರೆದು ಕೋರಲಾಗಿದೆ. ಕರ್ನಾಟಕದಲ್ಲಿ ಈಗಾಗಲೆ ತರಾತುರಿಯಲ್ಲಿ ವಿದ್ಯಾರ್ಥಿಗಳು, ತಜ್ಞರು, ಪ್ರಾಧ್ಯಾಪಕರು, ಪೋಷಕರುಗಳ ಜೊತೆ ಚರ್ಚಿಸದೆ, ಸಾಧಕ-ಬಾಧಕಗಳನ್ನು ಪರಿಶೀಲಿಸದೆ ಈ ಶೈಕ್ಷಣಿಕ ವರ್ಷದಿಂದಲೆ ಅನುಷ್ಠಾನ ಮಾಡುವುದಾಗಿ ಹೇಳಿ ಉದ್ಘಾಟನೆಯನ್ನೂ ಮಾಡಲಾಗಿದೆ. ಉದ್ಘಾಟನೆಯನ್ನೂ ಮುಗಿಸಿ ಚರ್ಚೆ ಮಾಡಬೇಕು ಎಂದು ಕರೆಯುವುದು ಸಂಸದೀಯವಾಗಿ ಸರಿಯಲ್ಲ.

ಒಂದು ಶಿಕ್ಷಣ ನೀತಿಯ ಅನುಷ್ಠಾನವೆಂದರೆ ಸಣ್ಣ ಸಂಗತಿಯೆ..? ತಾವೂ ಕೂಡ ಬೆವರಿನ ಸಂಸ್ಕೃತಿಯ ಹಿನ್ನೆಲೆಯ ಸಮುದಾಯದಿಂದ ಬಂದಿದ್ದೀರಿ. ರಾಷ್ಟ್ರಕವಿ ಕುವೆಂಪು ಅವರು ಶಿಕ್ಷಣ, ಅದರ ಗುಣಮಟ್ಟವನ್ನು ಸುಧಾರಣೆ, ಕಲಿಕೆಯ ಮಾಧ್ಯಮ ಹಾಗೂ ಸರ್ಕಾರದ ಜವಾಬ್ಧಾರಿಗಳ ಬಗ್ಗೆ ಮಾತನಾಡಿದ್ದಾರೆ. ಶಿಕ್ಷಣದ ಕುರಿತಂತೆ ಕೆಲಸ ಮಾಡುತ್ತಿರುವವರೆಲ್ಲರೂ ಕುವೆಂಪು ಅವರ ವಿಚಾರಗಳನ್ನು ಓದಿ, ಅದರಂತೆ ನಡೆದುಕೊಳ್ಳಬೇಕಾಗಿದೆ.

ಇದನ್ನೂ ಓದಿ: ನಕಲಿ ದೇಶಭಕ್ತಿ ಹೇಳುತ್ತಿದ್ದ ಬಿಜೆಪಿ ಈಗ ಜನರ ಬದುಕನ್ನು ಹೈರಾಣಾಗಿಸಿದೆ: ಸಿದ್ದರಾಮಯ್ಯ

ಮುಂದುವರೆದ ದೇಶಗಳಲ್ಲಿ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳನ್ನು ಸರ್ಕಾರಗಳೆ ನಿರ್ವಹಿಸುತ್ತವೆ. ಯಾವುದೇ ನಾಡಿನಲ್ಲಿ ಉನ್ನತ ಶಿಕ್ಷಣ ವ್ಯವಸ್ಥೆ ಸಮರ್ಪಕವಾಗಿದ್ದರೆ ಆ ನಾಡಿನ ಸಮಸ್ತ ಆರೋಗ್ಯವೂ ಸರಿಯಾಗಿರುತ್ತದೆ. ಇಂದು ಭಾರತದ ಸಮಾಜಗಳು ತೀವ್ರ ರೂಪದ ಬಿಕ್ಕಟ್ಟುಗಳನ್ನು ಎದುರಿಸುತ್ತಿವೆ. ಅದಕ್ಕೆ ಕಾರಣಗಳು ಹಲವಿವೆ.
ಮೊದಲನೆಯದಾಗಿ ವಿದ್ಯಾರ್ಥಿ ಶಿಕ್ಷಕ ಪ್ರಮಾಣ ವಿಪರೀತ ಹೆಚ್ಚಾಗಿದೆ, ಅದು ಕಡಿಮೆಯಾಗಬೇಕು. ಶಿಕ್ಷಣ ಕ್ಷೇತ್ರಕ್ಕೆ ಅತಿ ಕಡಿಮೆ ಅನುದಾನ ನೀಡಲಾಗುತ್ತಿದೆ. ಈ ನೀತಿಯ ಶಿಫಾರಸ್ಸುಗಳ ಪ್ರಕಾರ ಜಿಡಿಪಿಯಲ್ಲಿ ಕನಿಷ್ಠ ಶೇ 6 ರಷ್ಟು ಮೀಸಲಿರಿಸಬೇಕು. ಇದಾಗಬೇಕೆಂದರೆ ಕರ್ನಾಟಕದಲ್ಲಿ ಕನಿಷ್ಠ 1.08 ಲಕ್ಷ ಕೋಟಿ ರೂಪಾಯಿಗಳನ್ನು ಮೀಸಲಿರಿಸಬೇಕಾಗುತ್ತದೆ.

ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಹೇರಿಕೆಯು ಹಲವು ಸಮಸ್ಯೆಗಳನ್ನು ಒಳಗೊಂಡಿದೆ ಎಂದು ಹೇಳುತ್ತಿದೆ. ಒಕ್ಕೂಟ ವ್ಯವಸ್ಥೆಯ ಮೂಲ ಸ್ಫೂರ್ತಿಯ ನಿರಾಕರಣೆ, ಖಾಸಗೀಕರಣ, ತರಗತಿಗಳನ್ನು ನಿರಾಕರಿಸಿ ಕಾಲೇಜು, ವಿಶ್ವ ವಿದ್ಯಾಲಯಗಳ ಪಾವಿತ್ರ್ಯದ ನಿರಾಕರಣೆ, ಬಡವರು, ಹಿಂದುಳಿದವರು, ದಮನಿತರ ಸಿಗಬಹುದಾದ ಸುಲಭ ಶಿಕ್ಷ,ಣದ ನಿರಾಕರಣೆ, ಕೋಮು ಅಜೆಂಡಾಗಳನ್ನು ತಂದು ಅವೈಜ್ಞಾನಿಕತೆಯನ್ನು, ದ್ವೇಷವನ್ನು ತುಂಬಿ ಭಾರತವನ್ನು ಶಾಶ್ವತ ಅಂಧಕಾರಕ್ಕೆ ತಳ್ಳಲಾಗುತ್ತಿದೆ ಮುಂತಾದ ಗಂಭೀರ ಆರೋಪಗಳಿವೆ.

ಸರ್ಕಾರ ಈ ಎಲ್ಲದರ ಕುರಿತು ಚರ್ಚೆ ನಡೆಸಬೇಕಾಗಿತ್ತು. ಇದೇನನ್ನೂ ನೀವು ಮಾಡಿಲ್ಲ. ನನ್ನ, ನಿಮ್ಮ ಆಯಸ್ಸು, ರಾಜಕೀಯ ವೃತ್ತಿ ಎಲ್ಲವೂ ಮುಂದೆಂದೊ ಒಂದು ದಿನ ಮುಗಿಯುತ್ತದೆ. ಆದರೆ ಶಿಕ್ಷಣ ನೀತಿಯ ಹೆಸರಲ್ಲಿ ಬಲಿಪಶುಗಳಾಗುವ ಮಕ್ಕಳ ಮುಂದೆ 70-80 ವರ್ಷಗಳ ಭವಿಷ್ಯವಿದೆ. ಶಿಕ್ಷಣದ ಹಂತದಲ್ಲಿ ಅವರ ಭವಿಷ್ಯ ಅಲ್ಲೋಲ, ಕಲ್ಲೋಲವಾದರೆ ಅದರ ಶಾಪವನ್ನು ಹೊರುವವರು ಯಾರು? ಈ ನಾಡಿನ , ರೈತರ, ಪಶುಪಾಲಕರ, ಕುಶಲಕರ್ಮಿಗಳ, ಸಣ್ಣ ಪುಟ್ಟ ವ್ಯಾಪಾರಿಗಳ, ಕಾರ್ಮಿಕರ ಮನೆಗಳಿಂದ ಬಂದ ಮಕ್ಕಳು ಗುಣ ಮಟ್ಟದ ಶಿಕ್ಷಣ ಪಡೆದು ಜಾಗತಿಕ ಮಟ್ಟದ ಉದಾರ ಮಾನವತಾವಾದಿ, ವೈಜ್ಞಾನಿಕ ಶಿಕ್ಷಣ ಪಡೆಯಬಾರದೆ..?
ತಾವು ನಿಜವಾಗಿಯೂ ನೈಜ ಸ್ಫೂರ್ತಿಯಲ್ಲಿ ಚರ್ಚೆ ಮಾಡಬಯಸಿದರೆ, ಕೂಡಲೆ ಈ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಹಿಂದಕ್ಕೆ ಪಡೆಯಿರಿ. ಚರ್ಚೆ ನಡೆಸಿದ ಮೇಲೆ ನಿಜವಾಗಿಯೂ ಈ ನೀತಿ ಆರೋಗ್ಯಕರವೆನ್ನಿಸಿ ಅನುಷ್ಠಾನ ಸೂಕ್ತವೆನ್ನಿಸಿದರೆ, ಈ ಶತಮಾನಕ್ಕೆ ಅತ್ಯಗತ್ಯ ಎನ್ನಿಸಿದರೆ ನಾವೇ ನಿಂತು ಅನುಷ್ಠಾನ ಮಾಡಲು ಬೆಂಬಲಿಸುತ್ತೇವೆ. ಇಲ್ಲದಿದ್ದರೆ ಮಕ್ಕಳ ಭವಿಷ್ಯದ ಕುತ್ತಿಗೆ ಕೊಯ್ಯುವಂಥ ಪಾಪದ ಕೆಲಸದಲ್ಲಿ ಭಾಗಿಯಾದೆವು ಎಂಬ ಪಶ್ಚಾತ್ತಾಪವನ್ನು ಹೊರಬೇಕಾಗುತ್ತದೆ ಎಂಬುದನ್ನು ತಮಗೆ ತಿಳಿಸಬಯಸುತ್ತೇನೆ.


ಇದನ್ನೂ ಓದಿ: ದಲಿತ ಮಹಿಳೆಯರನ್ನು ಕಾನೂನುಬಾಹಿರವಾಗಿ ಸೇವೆಯಿಂದ ವಜಾಗೊಳಿಸಿದ ನಿಮ್ಹಾನ್ಸ್‌: ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...