Homeಮುಖಪುಟಬಿಜೆಪಿಯ ಪ್ರತಿಯೊಂದು ತಂತ್ರವೂ ನಮ್ಮ ಪಕ್ಷವನ್ನು ಬಲಪಡಿಸುತ್ತದೆ: ಟಿಎಂಸಿ ಶಾಸಕ

ಬಿಜೆಪಿಯ ಪ್ರತಿಯೊಂದು ತಂತ್ರವೂ ನಮ್ಮ ಪಕ್ಷವನ್ನು ಬಲಪಡಿಸುತ್ತದೆ: ಟಿಎಂಸಿ ಶಾಸಕ

- Advertisement -
- Advertisement -

ಬಿಜೆಪಿ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಸೋತಿರುವ ಆಘಾತದಿಂದ ಇನ್ನೂ ಹೊರಬಂದಿಲ್ಲ. ಅದು ತನ್ನ ಸೋಲಿನ ವಿರುದ್ದ ರಾಜ್ಯದಲ್ಲಿ ಒಂದಲ್ಲ ಒಂದು ರಾಜಕೀಯ ತಂತ್ರವನ್ನು ಹಣೆಯುತ್ತಲೆ ಇದೆ. ಆದರೆ ಈ ಮಧ್ಯೆ ಟಿಎಂಸಿ ಬಿಟ್ಟು ಬಿಜೆಪಿ ಸೇರಿದ್ದ ಹಲವು ಶಾಸಕರು, ಕಾರ್ಯಕರ್ತರು ಮತ್ತೆ ಪಕ್ಷಕ್ಕೆ ಮರಳುತ್ತಿದ್ದಾರೆ. ಇದು ಕೂಡಾ ಬಿಜೆಪಿಗೆ ತಲೆ ನೋವಾಗಿ ಪರಿಣಮಿಸಿದೆ.

“ಬಿಜೆಪಿಯು ಎಣೆಯುತ್ತಿರುವ ಪ್ರತಿಯೊಂದು ತಂತ್ರವೂ ಟಿಎಂಸಿಯನ್ನು ಮತ್ತಷ್ಟು ಬಲಪಡಿಸುತ್ತಿದ್ದು, ಅವರ ಈ ತಂತ್ರಗಳಿಂದಾಗಿ ಮುಂದಿನ ದಿನಗಳಲ್ಲಿ ತ್ರಿಪುರ, ಉತ್ತರ ಪ್ರದೇಶ ಮತ್ತು ಗುಜರಾತ್‌ನಲ್ಲಿಯೂ ಪಕ್ಷ ಬಲಿಷ್ಠಗೊಳ್ಳಲಿದೆ” ಎಂದು ಟಿಎಂಸಿ ಶಾಸಕ ಮದನ್‌ ಮಿತ್ರಾ ಹೇಳಿದ್ದಾರೆ.

ಇದನ್ನೂ ಓದಿ: ಪಶ್ಚಿಮ ಬಂಗಾಳ: ತೃಣಮೂಲ ಕಾಂಗ್ರೆಸ್ ಸೇರಿದ ಮತ್ತೊಬ್ಬ ಬಿಜೆಪಿ ಶಾಸಕ

ನನ್ನ ಹೆಸರು ಜಾರಿ ನಿರ್ದೇಶನಾಲಯದ (ಇ.ಡಿ.) ಆರೋಪ ಪಟ್ಟಿಯಲ್ಲಿದೆ. ಇದರಿಂದ ನಾನು ತುಂಬಾ ಸಂತೋಷಗೊಂಡಿದ್ದೇನೆ. ಸುವೇಂದು ಅಧಿಕಾರಿ ಬಿಜೆಪಿಯವರು ಎಂಬ ಕಾರಣಕ್ಕೆ ಅವರ ಹೆಸರು ಆರೋಪ ಪಟ್ಟಿಯಲ್ಲಿಇಲ್ಲ. ಯಾರೆಲ್ಲ ಬಿಜೆಪಿಯಲ್ಲಿದ್ದಾರೋ ಅವರ ಹೆಸರುಗಳು ಆರೋಪ ಪಟ್ಟಿಯಲ್ಲಿ ಉಲ್ಲೇಖವಾಗುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

ಬಿಜೆಪಿಯಲ್ಲಿ ಇಲ್ಲದ ಸಾಕಷ್ಟು ಹಿರಿಯ ನಾಯಕರ ಹೆಸರುಗಳು ಇ.ಡಿ. ಆರೋಪ ಪಟ್ಟಿಯಲ್ಲಿವೆ. ಆದರೆ, ತನಿಖೆ ಮುಕ್ತಾಯವಾಗಿದೆ. ಇದೀಗ ಅವರು ಪ್ರತಿದಿನ ನೋಟಿಸ್‌ ನೀಡಲು ಸಾಧ್ಯವಿಲ್ಲ. ಬಿಜೆಪಿಯು ಇಂತಹ ತಂತ್ರಗಳನ್ನು ಹೆಚ್ಚೆಚ್ಚು ಮಾಡಿದಷ್ಟೂ, ಟಿಎಂಸಿ ಬಲಿಷ್ಠವಾಗುತ್ತದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಪಶ್ಚಿಮ ಬಂಗಾಳ: ವಿಧಾನ ಪರಿಷತ್ ರಚಿಸುವ ನಿರ್ಣಯ ಅಂಗೀಕಾರ, ಬಿಜೆಪಿ ತಂತ್ರಕ್ಕೆ ಟಿಎಂಸಿ ಪ್ರತಿತಂತ್ರವೇ?

ನಾರದಾ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ-2002 ಅಡಿಯಲ್ಲಿ ಟಿಎಂಸಿ ನಾಯಕರಾದ ಪಿರ್ಹಾದ್‌ ಹಕೀಂ, ಸುಬ್ರತಾ ಮುಖರ್ಜಿ, ಮದನ್‌ ಮಿತ್ರಾ ಮತ್ತು ಸೋವನ್‌ ಚಟರ್ಜಿ ವಿರುದ್ಧ ಇ.ಡಿ ದೂರು ದಾಖಲಿಸಿತ್ತು.

ಹಾಲಿ ಶಾಸಕರು, ಸಂಸದರು ಮತ್ತು ಐಪಿಎಸ್‌ ಅಧಿಕಾರಿಯೊಬ್ಬರೂ ಸೇರಿದಂತೆ ಒಟ್ಟು 12 ಜನರ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆ-1988 ಅಡಿಯಲ್ಲಿ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಮತ್ತು ಕೇಂದ್ರೀಯ ತನಿಖಾ ದಳ (ಸಿಬಿಐ) ದಾಖಲಿಸಿದ್ದ ಎಫ್‌ಐಆರ್‌ ಆಧರಿಸಿ ಇ.ಡಿ ತನಿಖೆ ನಡೆಸಿತ್ತು.

ಎಫ್‌ಐಆರ್‌ ಪ್ರಕಾರ, 2014ರಲ್ಲಿ ಕುಟುಕು ಕಾರ್ಯಾಚರಣೆ ನಡೆಸಿದ್ದ‌ ಪತ್ರಕರ್ತ ಮ್ಯಾಥ್ಯೂ ಸ್ಯಾಮುಯೆಲ್ಸ್, ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದ ವಿಡಿಯೊ ಹಾಗೂ ದಾಖಲೆಗಳನ್ನು ಬಹಿರಂಗಪಡಿಸಿದ್ದರು.

ಇದನ್ನೂ ಓದಿ: ಪಶ್ಚಿಮ ಬಂಗಾಳ: ಟಿಎಂಸಿ ಸೇರಿದ ಬಿಜೆಪಿ ಶಾಸಕ ತನ್ಮಯ್ ಘೋಷ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...