Homeಮುಖಪುಟಖಾಸಗೀಕರಣವನ್ನು ವಿರೋಧಿಸಿ ಮೋದಿಗೆ ಪತ್ರ ಬರೆಯಲಿರುವ ತಮಿಳುನಾಡು ಸಿಎಂ

ಖಾಸಗೀಕರಣವನ್ನು ವಿರೋಧಿಸಿ ಮೋದಿಗೆ ಪತ್ರ ಬರೆಯಲಿರುವ ತಮಿಳುನಾಡು ಸಿಎಂ

- Advertisement -
- Advertisement -

ಸಾರ್ವಜನಿಕ ವಲಯವನ್ನು ಖಾಸಗೀಕರಣ ಮಾಡುವುದು ರಾಷ್ಟ್ರೀಯ ಹಿತಾಸಕ್ತಿಯಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ರಾಜ್ಯ ವಿಧಾನಸಭೆಗೆ ಗುರುವಾರ ಹೇಳಿದ್ದು, ಸಾರ್ವಜನಿಕ ಆಸ್ತಿಯಾಗಿರುವ ‘ಸಾರ್ವಜನಿಕ ಉದ್ದಿಮೆ’ಗಳನ್ನು ಖಾಸಗೀಕರಣಗೊಳಿಸುವ ಒಕ್ಕೂಟ ಸರ್ಕಾರದ ಪ್ರಯತ್ನಗಳನ್ನು ತಮಿಳುನಾಡು ಸರ್ಕಾರ ವಿರೋಧಿಸುತ್ತದೆ ಎಂದು ತಿಳಿಸಿದ್ದಾರೆ.

ಸಾರ್ವಜನಿಕ ಆಸ್ತಿಗಳನ್ನು ಖಾಸಗೀಕರಣಗೊಳಿಸುವುದರ ವಿರುದ್ದ ತಮ್ಮ ಸರ್ಕಾರದ ವಿರೋಧವನ್ನು ವ್ಯಕ್ತಪಡಿಸಲು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆಯುವುದಾಗಿ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಹೇಳಿದ್ದಾರೆ.

ಇದನ್ನೂ ಓದಿ: ಮಾನಿಟೈಸೇಶನ್‌‌ ಹೆಸರಿನಲ್ಲಿ 70 ವರ್ಷಗಳ ಆಸ್ತಿ ಮಾರಾಟ ಮಾಡಲಾಗುತ್ತಿದೆ: ಪಿ. ಚಿದಂಬರಂ

ಭಾರತದ ಸಾರ್ವಜನಿಕ ಉದ್ದಿಮೆಗಳನ್ನು ಕಟ್ಟಿದ್ದು, ಆರ್ಥಿಕ ಬೆಳವಣಿಗೆಯನ್ನು ಪೋಷಿಸಲು ಮತ್ತು ಉದ್ಯೋಗಾವಕಾಶಗಳನ್ನು ಒದಗಿಸಲಿಕ್ಕಾಗಿ ಆಗಿದೆ ಎಂದು ಹೇಳಿರುವ ಅವರು, “ಈ ಸಾರ್ವಜನಿಕ ಉದ್ದಿಮೆಗಳು ಸಣ್ಣ ಮತ್ತು ಸೂಕ್ಷ್ಮ ಉದ್ಯಮಗಳ ತಳಪಾಯ. ಈ ಸಾರ್ವಜನಿಕ ವಲಯದ ಉದ್ದಿಮೆಗಳ ಉದ್ದೇಶ ಕೇವಲ ಲಾಭವಲ್ಲ. ಅದರ ಉದ್ದೇಶ ಸಾರ್ವಜನಿಕ ಹಿತ ಮತ್ತು ಕಲ್ಯಾಣ. ಅದನ್ನು ಪರಿಗಣಿಸಿ ಅವುಗಳು ಕಾರ್ಯನಿರ್ವಹಿಸಬೇಕು” ಎಂದು ಸೂಚಿಸಿದ್ದಾರೆ.

ಈ ಮಧ್ಯೆ, ಇಂದು ಮಾಜಿ ವಿತ್ತ ಸಚಿವ, ಕಾಂಗ್ರೆಸ್ ನಾಯಕ ಪಿ. ಚಿದಂಬರಂ ಅವರು ಕೂಡಾ ಒಕ್ಕೂಟ ಸರ್ಕಾರದ ವಿರುದ್ದ ಆಕ್ರೊಶ ವ್ಯಕ್ತಪಡಿಸಿದ್ದಾರೆ. “ಒಕ್ಕೂಟ ಸರ್ಕಾರ ತನ್ನ ಆಸ್ತಿಯನ್ನು ಮಾನಿಟೈಸೇಶನ್‌‌ ಪಾಲಿಸಿಯ ಹೆಸರಿನಲ್ಲಿ ಮಾರಾಟ ಮಾಡಲು ಯೋಜಿಸುತ್ತಿದ್ದು, ಕಳೆದ 70 ವರ್ಷಗಳಲ್ಲಿ ನಿರ್ಮಿಸಲಾಗಿರುವ ಎಲ್ಲವನ್ನೂ ಆಯ್ದ ಕೆಲವರ ಕೈಗೆ ಒತ್ತೆ ಇಡಲಾಗುತ್ತಿದೆ” ಎಂದು ಅವರು ಕಿಡಿ ಕಾರಿದ್ದಾರೆ.

ಒಕ್ಕೂಟ ಸರ್ಕಾರ ಇತ್ತೀಚೆಗೆ, ನ್ಯಾಷನಲ್‌‌ ಮಾನಿಟೈಸೇಶನ್‌‌ ಪೈಪ್‌ಲೈನ್ (NMP) ನೀತಿಯನ್ನು ಅನಾವರಣಗೊಳಿಸಿದೆ. ಕಂದಾಯ ಹಕ್ಕುಗಳನ್ನು ಖಾಸಗಿ ವಲಯಕ್ಕೆ ವರ್ಗಾಯಿಸುವ ಮೂಲಕ ಬ್ರೌನ್ ಫೀಲ್ಡ್ ಯೋಜನೆಗಳಲ್ಲಿ ಮೌಲ್ಯವನ್ನು ಅನ್ಲಾಕ್ ಮಾಡುವ ಉದ್ದೇಶವನ್ನು ಈ ನೀತಿ ಹೊಂದಿದೆ. ಆಸ್ತಿಗಳ ಮಾಲೀಕತ್ವವು ಸರ್ಕಾರದಲ್ಲಿ ಉಳಿಯುತ್ತದೆ ಎಂದು ಸರ್ಕಾರ ಹೇಳಿದೆ. ಪಾಲಿಸಿಯ ಮೂಲಕ ಉತ್ಪತ್ತಿಯಾದ ಹಣವನ್ನು ದೇಶದಲ್ಲಿ ಮೂಲಸೌಕರ್ಯ ಸೃಷ್ಟಿಗೆ ಬಳಸಲಾಗುವುದು ಎಂದು ಸರ್ಕಾರ ಹೇಳಿದೆ.

ಇದನ್ನೂ ಓದಿ: ಇನ್ಫೋಸಿಸ್‌ ವಿರುದ್ಧ ಲೇಖನ ಪ್ರಕಟಿಸಿದ ಆರ್‌ಎಸ್‌ಎಸ್‌ನ ‘ಪಾಂಚಜನ್ಯ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...