Homeಮುಖಪುಟಖಾಸಗೀಕರಣವನ್ನು ವಿರೋಧಿಸಿ ಮೋದಿಗೆ ಪತ್ರ ಬರೆಯಲಿರುವ ತಮಿಳುನಾಡು ಸಿಎಂ

ಖಾಸಗೀಕರಣವನ್ನು ವಿರೋಧಿಸಿ ಮೋದಿಗೆ ಪತ್ರ ಬರೆಯಲಿರುವ ತಮಿಳುನಾಡು ಸಿಎಂ

- Advertisement -
- Advertisement -

ಸಾರ್ವಜನಿಕ ವಲಯವನ್ನು ಖಾಸಗೀಕರಣ ಮಾಡುವುದು ರಾಷ್ಟ್ರೀಯ ಹಿತಾಸಕ್ತಿಯಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ರಾಜ್ಯ ವಿಧಾನಸಭೆಗೆ ಗುರುವಾರ ಹೇಳಿದ್ದು, ಸಾರ್ವಜನಿಕ ಆಸ್ತಿಯಾಗಿರುವ ‘ಸಾರ್ವಜನಿಕ ಉದ್ದಿಮೆ’ಗಳನ್ನು ಖಾಸಗೀಕರಣಗೊಳಿಸುವ ಒಕ್ಕೂಟ ಸರ್ಕಾರದ ಪ್ರಯತ್ನಗಳನ್ನು ತಮಿಳುನಾಡು ಸರ್ಕಾರ ವಿರೋಧಿಸುತ್ತದೆ ಎಂದು ತಿಳಿಸಿದ್ದಾರೆ.

ಸಾರ್ವಜನಿಕ ಆಸ್ತಿಗಳನ್ನು ಖಾಸಗೀಕರಣಗೊಳಿಸುವುದರ ವಿರುದ್ದ ತಮ್ಮ ಸರ್ಕಾರದ ವಿರೋಧವನ್ನು ವ್ಯಕ್ತಪಡಿಸಲು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆಯುವುದಾಗಿ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಹೇಳಿದ್ದಾರೆ.

ಇದನ್ನೂ ಓದಿ: ಮಾನಿಟೈಸೇಶನ್‌‌ ಹೆಸರಿನಲ್ಲಿ 70 ವರ್ಷಗಳ ಆಸ್ತಿ ಮಾರಾಟ ಮಾಡಲಾಗುತ್ತಿದೆ: ಪಿ. ಚಿದಂಬರಂ

ಭಾರತದ ಸಾರ್ವಜನಿಕ ಉದ್ದಿಮೆಗಳನ್ನು ಕಟ್ಟಿದ್ದು, ಆರ್ಥಿಕ ಬೆಳವಣಿಗೆಯನ್ನು ಪೋಷಿಸಲು ಮತ್ತು ಉದ್ಯೋಗಾವಕಾಶಗಳನ್ನು ಒದಗಿಸಲಿಕ್ಕಾಗಿ ಆಗಿದೆ ಎಂದು ಹೇಳಿರುವ ಅವರು, “ಈ ಸಾರ್ವಜನಿಕ ಉದ್ದಿಮೆಗಳು ಸಣ್ಣ ಮತ್ತು ಸೂಕ್ಷ್ಮ ಉದ್ಯಮಗಳ ತಳಪಾಯ. ಈ ಸಾರ್ವಜನಿಕ ವಲಯದ ಉದ್ದಿಮೆಗಳ ಉದ್ದೇಶ ಕೇವಲ ಲಾಭವಲ್ಲ. ಅದರ ಉದ್ದೇಶ ಸಾರ್ವಜನಿಕ ಹಿತ ಮತ್ತು ಕಲ್ಯಾಣ. ಅದನ್ನು ಪರಿಗಣಿಸಿ ಅವುಗಳು ಕಾರ್ಯನಿರ್ವಹಿಸಬೇಕು” ಎಂದು ಸೂಚಿಸಿದ್ದಾರೆ.

ಈ ಮಧ್ಯೆ, ಇಂದು ಮಾಜಿ ವಿತ್ತ ಸಚಿವ, ಕಾಂಗ್ರೆಸ್ ನಾಯಕ ಪಿ. ಚಿದಂಬರಂ ಅವರು ಕೂಡಾ ಒಕ್ಕೂಟ ಸರ್ಕಾರದ ವಿರುದ್ದ ಆಕ್ರೊಶ ವ್ಯಕ್ತಪಡಿಸಿದ್ದಾರೆ. “ಒಕ್ಕೂಟ ಸರ್ಕಾರ ತನ್ನ ಆಸ್ತಿಯನ್ನು ಮಾನಿಟೈಸೇಶನ್‌‌ ಪಾಲಿಸಿಯ ಹೆಸರಿನಲ್ಲಿ ಮಾರಾಟ ಮಾಡಲು ಯೋಜಿಸುತ್ತಿದ್ದು, ಕಳೆದ 70 ವರ್ಷಗಳಲ್ಲಿ ನಿರ್ಮಿಸಲಾಗಿರುವ ಎಲ್ಲವನ್ನೂ ಆಯ್ದ ಕೆಲವರ ಕೈಗೆ ಒತ್ತೆ ಇಡಲಾಗುತ್ತಿದೆ” ಎಂದು ಅವರು ಕಿಡಿ ಕಾರಿದ್ದಾರೆ.

ಒಕ್ಕೂಟ ಸರ್ಕಾರ ಇತ್ತೀಚೆಗೆ, ನ್ಯಾಷನಲ್‌‌ ಮಾನಿಟೈಸೇಶನ್‌‌ ಪೈಪ್‌ಲೈನ್ (NMP) ನೀತಿಯನ್ನು ಅನಾವರಣಗೊಳಿಸಿದೆ. ಕಂದಾಯ ಹಕ್ಕುಗಳನ್ನು ಖಾಸಗಿ ವಲಯಕ್ಕೆ ವರ್ಗಾಯಿಸುವ ಮೂಲಕ ಬ್ರೌನ್ ಫೀಲ್ಡ್ ಯೋಜನೆಗಳಲ್ಲಿ ಮೌಲ್ಯವನ್ನು ಅನ್ಲಾಕ್ ಮಾಡುವ ಉದ್ದೇಶವನ್ನು ಈ ನೀತಿ ಹೊಂದಿದೆ. ಆಸ್ತಿಗಳ ಮಾಲೀಕತ್ವವು ಸರ್ಕಾರದಲ್ಲಿ ಉಳಿಯುತ್ತದೆ ಎಂದು ಸರ್ಕಾರ ಹೇಳಿದೆ. ಪಾಲಿಸಿಯ ಮೂಲಕ ಉತ್ಪತ್ತಿಯಾದ ಹಣವನ್ನು ದೇಶದಲ್ಲಿ ಮೂಲಸೌಕರ್ಯ ಸೃಷ್ಟಿಗೆ ಬಳಸಲಾಗುವುದು ಎಂದು ಸರ್ಕಾರ ಹೇಳಿದೆ.

ಇದನ್ನೂ ಓದಿ: ಇನ್ಫೋಸಿಸ್‌ ವಿರುದ್ಧ ಲೇಖನ ಪ್ರಕಟಿಸಿದ ಆರ್‌ಎಸ್‌ಎಸ್‌ನ ‘ಪಾಂಚಜನ್ಯ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...