Homeಕರ್ನಾಟಕಜಿಲ್ಲಾಧಿಕಾರಿ ಮತ್ತು ತಹಶೀಲ್ದಾರ್‌ರಿಂದ ವಯೋವೃದ್ಧ ದಲಿತನ ಪಿಂಚಣಿಗೆ ಸಂಚಕಾರ

ಜಿಲ್ಲಾಧಿಕಾರಿ ಮತ್ತು ತಹಶೀಲ್ದಾರ್‌ರಿಂದ ವಯೋವೃದ್ಧ ದಲಿತನ ಪಿಂಚಣಿಗೆ ಸಂಚಕಾರ

ಲೋಕಾಯುಕ್ತರಂತವರೆ ಬಡಪಾಯಿ ಶಿವುರ ಸಮಸ್ಯೆ ಪರಿಗಣಿಸದಿರುವಾಗ ಅವರಿಗೆ ಇನ್ನೆಲ್ಲಿ ನ್ಯಾಯ ಸಿಗುತ್ತದೆ?

- Advertisement -
- Advertisement -

ಉತ್ತರ ಕನ್ನಡದ ಹೊನ್ನಾವರ ತಾಲೂಕಿನ ಹೆರಂಗಡಿ ಗ್ರಾಮದ ವಯೋವೃದ್ಧ ದಲಿತ ಶಿವು ಹಳ್ಳೇರ ತುತ್ತಿಗಾಧರವಾದ ವೃದ್ಧಾಪ್ಯ ವೇತನ ಅಧಿಕಾರಿಗಳ ಅಸಡ್ಡೆ, ಹೊಣೆಗೇಡಿತನದಿಂದ ಸರಿಯಾಗಿ ಸಿಗದೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಉಳಿಯಲೊಂದು ಗುಡಿಸಲೂ ಇಲ್ಲದ ದೇಖರೇಖೆ ನೋಡಿಕೊಳ್ಳಲು ಯಾರೂ ಇಲ್ಲದ ಅವಿವಾಹಿತ ಶಿವುಗೀಗ ಎಂಬತ್ತು ವರ್ಷ ವಯಸ್ಸು. ಈ ಇಳಿ ವಯಸ್ಸಿನಲ್ಲಿ ಅವರಿಗೆ ಕಿವಿಯೂ ಕೇಳಿಸುತ್ತಿಲ್ಲ! ಫೆಬ್ರುವರಿ 2006 ರಿಂದ ಶಿವು ವೃದ್ಧಾಪ್ಯ ಪಿಂಚಣಿ ಮೇಲೆ ಜೀವವಿಟ್ಟು ಜೀವನ ನಡೆಸುತ್ತಿದ್ದರು.

ಹೇಗೋ ದಿನ ಕಳೆಯುತ್ತಿದ್ದಾಗ ಇದ್ದಕ್ಕಿದ್ದಂತೆ ಅಗಸ್ಟ್ 2018ರಲ್ಲಿ ಹೊನ್ನಾವರದ ಅಂದಿನ ತಹಶೀಲ್ದಾರ್ ವಿವೇಕ್ ಶೆಣ್ವಿ ಅಸಾಯಕ ಶಿವು ಹಳ್ಳೇರ ವೃದ್ದಾಪ್ಯ ವೇತನ ರದ್ದುಗೊಳಿಸಿ ಬಿಟ್ಟರು! ಅದಕ್ಕವರು ನೀಡಿದ ಕಾರಣ ಶಿವು ಹೊನ್ನಾವರ ತಾಲ್ಲೂಕಿನಲ್ಲಿ ವಾಸ್ತವ್ಯ ಮಾಡುತ್ತಿಲ್ಲ ಎಂಬುದಾಗಿತ್ತು. ಹೊನ್ನಾವರದ ಕಂದಾಯ ಅಧಿಕಾರಿಗಳು ಶಿವುರ ಅತಿ ಮುಖ್ಯ ದಾಖಲೆಯಾದ ಆಧಾರ ಕಾರ್ಡ್, ಮತದಾರ ಗುರುತಿನ ಚೀಟಿ, ಬಿಪಿಎಲ್ ಪಡಿತರ ಕಾರ್ಡ್, ಆಯುಷ್ಮಾನ್ ಆರೋಗ್ಯ ಕಾರ್ಡ್ ಅಥವಾ ಪಿಂಚಣಿ ಸಂದಾಯವಾಗುತ್ತಿದ್ದ ಅಂಚೆ ಇಲಾಖೆಯ ಪಾಸ್ ಬುಕ್‌ನಂಥ ಯಾವ ದಾಖಲೆಯನ್ನೂ ಪರಿಶೀಲಿಸದೆ ಎಡವಟ್ಟು ತೀರ್ಮಾನಕ್ಕೆ ಬಂದಿದ್ದರು! ತಹಶೀಲ್ದಾರರ ವಿವೇಚನಾರಹಿತ ಕ್ರಮವನ್ನು ಅಂದಿನ ಜಿಲ್ಲಾಧಿಕಾರಿ ಹರೀಶ್ ಕುಮಾರ್ ಎತ್ತಿ ಹಿಡಿದಿದ್ದು ಶಿವು ಹಳ್ಳಿರಗೆ ಅನ್ಯಾಯ ಮಾಡಿತ್ತು.

ಅಶಿಕ್ಷಿತ-ಅಮಾಯಕ ಶಿವು ಹಳ್ಳೇರ ಏನು ಮಾಡಬೇಕೆಂದು ತಿಳಿಯದೆ ಒದ್ದಾಡುತ್ತಿರುವಾಗ ಊರಿನ ಜಿ.ಎನ್.ಭಟ್ಟರಿಗೆ ವಿಷಯ ತಿಳಿಯುತ್ತದೆ. ಅವರು ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ, ತಹಶೀಲ್ದಾರ್‌ರಿಗೆ ಶಿವು ಹಳ್ಳೇರಗಾಗಿರುವ ತೊಂದರೆ ವಿವರಿಸಿ 2018ರ ಆಗಸ್ಟ್‌ನಿಂದ ಪಿಂಚಣಿ ಬಟವಡೆ ಮಾಡುವಂತೆ ಮನವಿ ಮಾಡುತ್ತಾರೆ. ಸರಕಾರಿ ಅಧಿಕಾರಿಗಳೊಂದಿಗೆ ವ್ಯವಹರಿಸುವ ಶಕ್ತಿ ವಯೋವೃದ್ಧ-ಅಶಿಕ್ಷಿತ ಶಿವುಗೆ ಇಲ್ಲದಿರುವುದರಿಂದ ಮತ್ತು ಅವರಿಗೆ ಕಿವಿ ಕೇಳಿಸದಿರುವುದರಿಂದ ಭಟ್ಟರೆ ಅರ್ಜಿ ಸಲ್ಲಿಸಿದ್ದರು. ಆದರೆ ಆರೆಂಟು ತಿಂಗಳು ಕಳೆದರೂ ತಹಶೀಲ್ದಾರ್ ಸಾಹೇಬರಿಂದ ಕನಿಷ್ಟ ಹಿಂಬರಹವೂ ಬರಲಿಲ್ಲ. ಜಿಲ್ಲಾಧಿಕಾರಿಗಳ ವಾಟ್ಸಪ್‌ಗೆ ಮನವಿ ಸಲ್ಲಿಸಿದರೂ ಪ್ರಯೋಜನವಾಗಲಿಲ್ಲ!

ಕಂದಾಯ ಅಧಿಕಾರಿಗಳು ಆಗಿರುವ ಅಚಾತುರ್ಯವನ್ನು ಅರಿತು ಕ್ಷಣಾರ್ಧದಲ್ಲಿ ಪರಿಹರಿಸಬಹುದಾಗಿದ್ದ ಈ ಸಣ್ಣ ಸಮಸ್ಯೆಯನ್ನು ಗೋಜಲುಗೊಳಿಸಲಾಗಿತ್ತು. ಬಡಪಾಯಿ ಶಿವುರ ಗೋಳು ಹೇಳತೀರದಾಗಿತ್ತು. ಆಗ ಅನಿವಾರ್ಯವಾಗಿ ಭಟ್ಟರು 30 ನವೆಂಬರ್ 2019ರಂದು ಬೆಂಗಳೂರಲ್ಲಿರುವ ಲೋಕಾಯುಕ್ತ ಕಚೇರಿಗೆ ಖುದ್ದು ಹೋಗಿ ದೂರು ದಾಖಲಿಸಿದರು. ಆಗಲೂ ತಹಶೀಲ್ದಾರ್ ಹಿಂದೆ ಮಾಡಿದ ತಪ್ಪನ್ನೇ ಮತ್ತೆ ಮಾಡಿದರು. ಶಿವುರ ವಾಸ್ತವ್ಯ ಹೊನ್ನಾವರ ತಾಲೂಕಿನಲ್ಲಿಯೇ ಇದೆಯೆಂದು ದೃಢಪಡಿಸುವ ಯಾವ ದಾಖಲೆಯನ್ನೂ ಪರಿಗಣಿಸಲೇ ಇಲ್ಲ. ಫಲಾನುಭವಿ ಹೊನ್ನಾವರ ತಾಲೂಕಿ ಹೆರಂಗಡಿ ವ್ಯಾಪ್ತಿಯಲ್ಲಿಲ್ಲವೆಂದು ತಹಶೀಲ್ದಾರ್ ವರದಿ ತಯಾರಿಸಿದ್ದರು. ಇದನ್ನೆ ಡಿಸಿ ಸಾಹೇಬರು ಕಣ್ಣು ಮುಚ್ಚಿ ಲೋಕಾಯುಕ್ತಕ್ಕೆ ರವಾನಿಸಿಬಿಟ್ಟಿದ್ದರು!

ಆದರೆ ಲೋಕಾಯುಕ್ತದಲ್ಲಿದ್ದ ದೂರನ್ನು ಮುಗಿಸಿಕೊಳ್ಳುವ ಅನಿವಾರ್ಯತೆಗೆ ಸಿಲುಕಿದ್ದ ತಹಶೀಲ್ದಾರ್ ಶಿವು ಹಳ್ಳೇರ ರದ್ದಾದ ಪೆನ್‌ಷನ್ ಪುನಃ ಪ್ರಾರಂಭಿಸಬೇಕಾಗಿ ಬಂತು. ಆದರೆ ಇಲ್ಲೂ ಪ್ರಮಾದವಾಗಿತ್ತು. 1 ಅಕ್ಟೋಬರ್ 2020ರಿಂದ ಶಿವುರಿಗೆ ಪಿಂಚಣಿ ಬಟವಡೆ ಮಾಡುವಂತೆ ತಹಶೀಲ್ದಾರ್ ಆದೇಶಿಸಿದ್ದರು. ನ್ಯಾಯ ಕ್ರಮದಂತೆ ಶಿವುರ ಸಾಮಾಜಿಕ ಭದ್ರತಾ ಪಿಂಚಣಿ ವಿನಾ ಕಾರಣ ಸ್ಥಗಿತಗೊಳಿಸಲಾಗಿದ್ದ 2018ರ ಆಗಸ್ಟ್ ತಿಂಗಳಿಂದ ಬಾಕಿಯಿದ್ದ ಮೊತ್ತ ಬರಬೇಕಿತ್ತು. ಕಂದಾಯ ಅಧಿಕಾರಿಗಳ ಈ ಅವಾಂತರವನ್ನು ಮತ್ತೆ ಭಟ್ಟರು ಲೋಕಾಯುಕ್ತರ ಗಮನಕ್ಕೆ ತಂದರು. ಆದರೆ ಲೋಕಾಯುಕ್ತದಿಂದ ಯಾವ ಕ್ರಮವೂ ಆಗಿಲ್ಲ. ಲೋಕಾಯುಕ್ತದ ವಿಫಲತೆ ಶಿವುರನ್ನು ದಿಕ್ಕೆಡಿಸಿಬಿಟ್ಟಿದೆ.

ಲೋಕಾಯುಕ್ತರಂತವರೆ ಬಡಪಾಯಿ ಶಿವುರ ಸಮಸ್ಯೆ ಪರಿಗಣಿಸದಿರುವಾಗ ಅವರಿಗೆ ಇನ್ನೆಲ್ಲಿ ನ್ಯಾಯ ಸಿಗುತ್ತದೆ? ಹರ ಕೊಲ್ಲಲ್ ನರ ಕಾಯ್ವನೆ ಎಂಬಂತಾಗಿದೆಯೆಂದು ಜನರಾಡಿ ಕೊಳ್ಳುತ್ತಿದ್ದಾರೆ. ಜಿಲ್ಲಾಧಿಕಾರಿ ಮತ್ತಿತರ ಕಂದಾಯ ಅಧಿಕಾಗಳು ಗ್ರಾಮ ವಾಸ್ತವ್ಯ ಮಾಡಿ ಅರ್ಹರಿಗೆ ಸ್ಥಳದಲ್ಲೆ ವೃದ್ದಾಪ್ಯ ಮಂಜೂರಿ ಮಾಡುತ್ತಾರೆ. 60 ವರ್ಷ ಮೀರಿದ ಫಲಾನುಭವಿಗಳಿಗೆ ಪಿಂಚಣಿ ಮನೆ ಬಾಗಿಲಲ್ಲೆ ವಿತರಿಸಲಾಗುತ್ತದೆಂದು ಕಂದಾಯ ಮಂತ್ರಿ ಆರ್.ಅಶೋಕ್ ಹೇಳುತ್ತಾರೆ. ವಿಪರ್ಯಾಸವೆಂದರೆ ಮಂಜೂರಿಯಾಗಿ ಬರುತ್ತಿರುವ ಪಿಂಚಣಿಯನ್ನೆ ಕಿತ್ತುಕೊಳ್ಳುವ ಕ್ರೌರ್ಯ ಇನ್ನೊಂದೆಡೆಯಾಗುತ್ತಿದೆ!


ಇದನ್ನೂ ಓದಿ: ದಲಿತ ಮಹಿಳೆಯರನ್ನು ಕಾನೂನುಬಾಹಿರವಾಗಿ ಸೇವೆಯಿಂದ ವಜಾಗೊಳಿಸಿದ ನಿಮ್ಹಾನ್ಸ್‌: ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...