Homeಕರ್ನಾಟಕಜಿಲ್ಲಾಧಿಕಾರಿ ಮತ್ತು ತಹಶೀಲ್ದಾರ್‌ರಿಂದ ವಯೋವೃದ್ಧ ದಲಿತನ ಪಿಂಚಣಿಗೆ ಸಂಚಕಾರ

ಜಿಲ್ಲಾಧಿಕಾರಿ ಮತ್ತು ತಹಶೀಲ್ದಾರ್‌ರಿಂದ ವಯೋವೃದ್ಧ ದಲಿತನ ಪಿಂಚಣಿಗೆ ಸಂಚಕಾರ

ಲೋಕಾಯುಕ್ತರಂತವರೆ ಬಡಪಾಯಿ ಶಿವುರ ಸಮಸ್ಯೆ ಪರಿಗಣಿಸದಿರುವಾಗ ಅವರಿಗೆ ಇನ್ನೆಲ್ಲಿ ನ್ಯಾಯ ಸಿಗುತ್ತದೆ?

- Advertisement -
- Advertisement -

ಉತ್ತರ ಕನ್ನಡದ ಹೊನ್ನಾವರ ತಾಲೂಕಿನ ಹೆರಂಗಡಿ ಗ್ರಾಮದ ವಯೋವೃದ್ಧ ದಲಿತ ಶಿವು ಹಳ್ಳೇರ ತುತ್ತಿಗಾಧರವಾದ ವೃದ್ಧಾಪ್ಯ ವೇತನ ಅಧಿಕಾರಿಗಳ ಅಸಡ್ಡೆ, ಹೊಣೆಗೇಡಿತನದಿಂದ ಸರಿಯಾಗಿ ಸಿಗದೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಉಳಿಯಲೊಂದು ಗುಡಿಸಲೂ ಇಲ್ಲದ ದೇಖರೇಖೆ ನೋಡಿಕೊಳ್ಳಲು ಯಾರೂ ಇಲ್ಲದ ಅವಿವಾಹಿತ ಶಿವುಗೀಗ ಎಂಬತ್ತು ವರ್ಷ ವಯಸ್ಸು. ಈ ಇಳಿ ವಯಸ್ಸಿನಲ್ಲಿ ಅವರಿಗೆ ಕಿವಿಯೂ ಕೇಳಿಸುತ್ತಿಲ್ಲ! ಫೆಬ್ರುವರಿ 2006 ರಿಂದ ಶಿವು ವೃದ್ಧಾಪ್ಯ ಪಿಂಚಣಿ ಮೇಲೆ ಜೀವವಿಟ್ಟು ಜೀವನ ನಡೆಸುತ್ತಿದ್ದರು.

ಹೇಗೋ ದಿನ ಕಳೆಯುತ್ತಿದ್ದಾಗ ಇದ್ದಕ್ಕಿದ್ದಂತೆ ಅಗಸ್ಟ್ 2018ರಲ್ಲಿ ಹೊನ್ನಾವರದ ಅಂದಿನ ತಹಶೀಲ್ದಾರ್ ವಿವೇಕ್ ಶೆಣ್ವಿ ಅಸಾಯಕ ಶಿವು ಹಳ್ಳೇರ ವೃದ್ದಾಪ್ಯ ವೇತನ ರದ್ದುಗೊಳಿಸಿ ಬಿಟ್ಟರು! ಅದಕ್ಕವರು ನೀಡಿದ ಕಾರಣ ಶಿವು ಹೊನ್ನಾವರ ತಾಲ್ಲೂಕಿನಲ್ಲಿ ವಾಸ್ತವ್ಯ ಮಾಡುತ್ತಿಲ್ಲ ಎಂಬುದಾಗಿತ್ತು. ಹೊನ್ನಾವರದ ಕಂದಾಯ ಅಧಿಕಾರಿಗಳು ಶಿವುರ ಅತಿ ಮುಖ್ಯ ದಾಖಲೆಯಾದ ಆಧಾರ ಕಾರ್ಡ್, ಮತದಾರ ಗುರುತಿನ ಚೀಟಿ, ಬಿಪಿಎಲ್ ಪಡಿತರ ಕಾರ್ಡ್, ಆಯುಷ್ಮಾನ್ ಆರೋಗ್ಯ ಕಾರ್ಡ್ ಅಥವಾ ಪಿಂಚಣಿ ಸಂದಾಯವಾಗುತ್ತಿದ್ದ ಅಂಚೆ ಇಲಾಖೆಯ ಪಾಸ್ ಬುಕ್‌ನಂಥ ಯಾವ ದಾಖಲೆಯನ್ನೂ ಪರಿಶೀಲಿಸದೆ ಎಡವಟ್ಟು ತೀರ್ಮಾನಕ್ಕೆ ಬಂದಿದ್ದರು! ತಹಶೀಲ್ದಾರರ ವಿವೇಚನಾರಹಿತ ಕ್ರಮವನ್ನು ಅಂದಿನ ಜಿಲ್ಲಾಧಿಕಾರಿ ಹರೀಶ್ ಕುಮಾರ್ ಎತ್ತಿ ಹಿಡಿದಿದ್ದು ಶಿವು ಹಳ್ಳಿರಗೆ ಅನ್ಯಾಯ ಮಾಡಿತ್ತು.

ಅಶಿಕ್ಷಿತ-ಅಮಾಯಕ ಶಿವು ಹಳ್ಳೇರ ಏನು ಮಾಡಬೇಕೆಂದು ತಿಳಿಯದೆ ಒದ್ದಾಡುತ್ತಿರುವಾಗ ಊರಿನ ಜಿ.ಎನ್.ಭಟ್ಟರಿಗೆ ವಿಷಯ ತಿಳಿಯುತ್ತದೆ. ಅವರು ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ, ತಹಶೀಲ್ದಾರ್‌ರಿಗೆ ಶಿವು ಹಳ್ಳೇರಗಾಗಿರುವ ತೊಂದರೆ ವಿವರಿಸಿ 2018ರ ಆಗಸ್ಟ್‌ನಿಂದ ಪಿಂಚಣಿ ಬಟವಡೆ ಮಾಡುವಂತೆ ಮನವಿ ಮಾಡುತ್ತಾರೆ. ಸರಕಾರಿ ಅಧಿಕಾರಿಗಳೊಂದಿಗೆ ವ್ಯವಹರಿಸುವ ಶಕ್ತಿ ವಯೋವೃದ್ಧ-ಅಶಿಕ್ಷಿತ ಶಿವುಗೆ ಇಲ್ಲದಿರುವುದರಿಂದ ಮತ್ತು ಅವರಿಗೆ ಕಿವಿ ಕೇಳಿಸದಿರುವುದರಿಂದ ಭಟ್ಟರೆ ಅರ್ಜಿ ಸಲ್ಲಿಸಿದ್ದರು. ಆದರೆ ಆರೆಂಟು ತಿಂಗಳು ಕಳೆದರೂ ತಹಶೀಲ್ದಾರ್ ಸಾಹೇಬರಿಂದ ಕನಿಷ್ಟ ಹಿಂಬರಹವೂ ಬರಲಿಲ್ಲ. ಜಿಲ್ಲಾಧಿಕಾರಿಗಳ ವಾಟ್ಸಪ್‌ಗೆ ಮನವಿ ಸಲ್ಲಿಸಿದರೂ ಪ್ರಯೋಜನವಾಗಲಿಲ್ಲ!

ಕಂದಾಯ ಅಧಿಕಾರಿಗಳು ಆಗಿರುವ ಅಚಾತುರ್ಯವನ್ನು ಅರಿತು ಕ್ಷಣಾರ್ಧದಲ್ಲಿ ಪರಿಹರಿಸಬಹುದಾಗಿದ್ದ ಈ ಸಣ್ಣ ಸಮಸ್ಯೆಯನ್ನು ಗೋಜಲುಗೊಳಿಸಲಾಗಿತ್ತು. ಬಡಪಾಯಿ ಶಿವುರ ಗೋಳು ಹೇಳತೀರದಾಗಿತ್ತು. ಆಗ ಅನಿವಾರ್ಯವಾಗಿ ಭಟ್ಟರು 30 ನವೆಂಬರ್ 2019ರಂದು ಬೆಂಗಳೂರಲ್ಲಿರುವ ಲೋಕಾಯುಕ್ತ ಕಚೇರಿಗೆ ಖುದ್ದು ಹೋಗಿ ದೂರು ದಾಖಲಿಸಿದರು. ಆಗಲೂ ತಹಶೀಲ್ದಾರ್ ಹಿಂದೆ ಮಾಡಿದ ತಪ್ಪನ್ನೇ ಮತ್ತೆ ಮಾಡಿದರು. ಶಿವುರ ವಾಸ್ತವ್ಯ ಹೊನ್ನಾವರ ತಾಲೂಕಿನಲ್ಲಿಯೇ ಇದೆಯೆಂದು ದೃಢಪಡಿಸುವ ಯಾವ ದಾಖಲೆಯನ್ನೂ ಪರಿಗಣಿಸಲೇ ಇಲ್ಲ. ಫಲಾನುಭವಿ ಹೊನ್ನಾವರ ತಾಲೂಕಿ ಹೆರಂಗಡಿ ವ್ಯಾಪ್ತಿಯಲ್ಲಿಲ್ಲವೆಂದು ತಹಶೀಲ್ದಾರ್ ವರದಿ ತಯಾರಿಸಿದ್ದರು. ಇದನ್ನೆ ಡಿಸಿ ಸಾಹೇಬರು ಕಣ್ಣು ಮುಚ್ಚಿ ಲೋಕಾಯುಕ್ತಕ್ಕೆ ರವಾನಿಸಿಬಿಟ್ಟಿದ್ದರು!

ಆದರೆ ಲೋಕಾಯುಕ್ತದಲ್ಲಿದ್ದ ದೂರನ್ನು ಮುಗಿಸಿಕೊಳ್ಳುವ ಅನಿವಾರ್ಯತೆಗೆ ಸಿಲುಕಿದ್ದ ತಹಶೀಲ್ದಾರ್ ಶಿವು ಹಳ್ಳೇರ ರದ್ದಾದ ಪೆನ್‌ಷನ್ ಪುನಃ ಪ್ರಾರಂಭಿಸಬೇಕಾಗಿ ಬಂತು. ಆದರೆ ಇಲ್ಲೂ ಪ್ರಮಾದವಾಗಿತ್ತು. 1 ಅಕ್ಟೋಬರ್ 2020ರಿಂದ ಶಿವುರಿಗೆ ಪಿಂಚಣಿ ಬಟವಡೆ ಮಾಡುವಂತೆ ತಹಶೀಲ್ದಾರ್ ಆದೇಶಿಸಿದ್ದರು. ನ್ಯಾಯ ಕ್ರಮದಂತೆ ಶಿವುರ ಸಾಮಾಜಿಕ ಭದ್ರತಾ ಪಿಂಚಣಿ ವಿನಾ ಕಾರಣ ಸ್ಥಗಿತಗೊಳಿಸಲಾಗಿದ್ದ 2018ರ ಆಗಸ್ಟ್ ತಿಂಗಳಿಂದ ಬಾಕಿಯಿದ್ದ ಮೊತ್ತ ಬರಬೇಕಿತ್ತು. ಕಂದಾಯ ಅಧಿಕಾರಿಗಳ ಈ ಅವಾಂತರವನ್ನು ಮತ್ತೆ ಭಟ್ಟರು ಲೋಕಾಯುಕ್ತರ ಗಮನಕ್ಕೆ ತಂದರು. ಆದರೆ ಲೋಕಾಯುಕ್ತದಿಂದ ಯಾವ ಕ್ರಮವೂ ಆಗಿಲ್ಲ. ಲೋಕಾಯುಕ್ತದ ವಿಫಲತೆ ಶಿವುರನ್ನು ದಿಕ್ಕೆಡಿಸಿಬಿಟ್ಟಿದೆ.

ಲೋಕಾಯುಕ್ತರಂತವರೆ ಬಡಪಾಯಿ ಶಿವುರ ಸಮಸ್ಯೆ ಪರಿಗಣಿಸದಿರುವಾಗ ಅವರಿಗೆ ಇನ್ನೆಲ್ಲಿ ನ್ಯಾಯ ಸಿಗುತ್ತದೆ? ಹರ ಕೊಲ್ಲಲ್ ನರ ಕಾಯ್ವನೆ ಎಂಬಂತಾಗಿದೆಯೆಂದು ಜನರಾಡಿ ಕೊಳ್ಳುತ್ತಿದ್ದಾರೆ. ಜಿಲ್ಲಾಧಿಕಾರಿ ಮತ್ತಿತರ ಕಂದಾಯ ಅಧಿಕಾಗಳು ಗ್ರಾಮ ವಾಸ್ತವ್ಯ ಮಾಡಿ ಅರ್ಹರಿಗೆ ಸ್ಥಳದಲ್ಲೆ ವೃದ್ದಾಪ್ಯ ಮಂಜೂರಿ ಮಾಡುತ್ತಾರೆ. 60 ವರ್ಷ ಮೀರಿದ ಫಲಾನುಭವಿಗಳಿಗೆ ಪಿಂಚಣಿ ಮನೆ ಬಾಗಿಲಲ್ಲೆ ವಿತರಿಸಲಾಗುತ್ತದೆಂದು ಕಂದಾಯ ಮಂತ್ರಿ ಆರ್.ಅಶೋಕ್ ಹೇಳುತ್ತಾರೆ. ವಿಪರ್ಯಾಸವೆಂದರೆ ಮಂಜೂರಿಯಾಗಿ ಬರುತ್ತಿರುವ ಪಿಂಚಣಿಯನ್ನೆ ಕಿತ್ತುಕೊಳ್ಳುವ ಕ್ರೌರ್ಯ ಇನ್ನೊಂದೆಡೆಯಾಗುತ್ತಿದೆ!


ಇದನ್ನೂ ಓದಿ: ದಲಿತ ಮಹಿಳೆಯರನ್ನು ಕಾನೂನುಬಾಹಿರವಾಗಿ ಸೇವೆಯಿಂದ ವಜಾಗೊಳಿಸಿದ ನಿಮ್ಹಾನ್ಸ್‌: ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...