Homeಕರ್ನಾಟಕಜಿಲ್ಲಾಧಿಕಾರಿ ಮತ್ತು ತಹಶೀಲ್ದಾರ್‌ರಿಂದ ವಯೋವೃದ್ಧ ದಲಿತನ ಪಿಂಚಣಿಗೆ ಸಂಚಕಾರ

ಜಿಲ್ಲಾಧಿಕಾರಿ ಮತ್ತು ತಹಶೀಲ್ದಾರ್‌ರಿಂದ ವಯೋವೃದ್ಧ ದಲಿತನ ಪಿಂಚಣಿಗೆ ಸಂಚಕಾರ

ಲೋಕಾಯುಕ್ತರಂತವರೆ ಬಡಪಾಯಿ ಶಿವುರ ಸಮಸ್ಯೆ ಪರಿಗಣಿಸದಿರುವಾಗ ಅವರಿಗೆ ಇನ್ನೆಲ್ಲಿ ನ್ಯಾಯ ಸಿಗುತ್ತದೆ?

- Advertisement -
- Advertisement -

ಉತ್ತರ ಕನ್ನಡದ ಹೊನ್ನಾವರ ತಾಲೂಕಿನ ಹೆರಂಗಡಿ ಗ್ರಾಮದ ವಯೋವೃದ್ಧ ದಲಿತ ಶಿವು ಹಳ್ಳೇರ ತುತ್ತಿಗಾಧರವಾದ ವೃದ್ಧಾಪ್ಯ ವೇತನ ಅಧಿಕಾರಿಗಳ ಅಸಡ್ಡೆ, ಹೊಣೆಗೇಡಿತನದಿಂದ ಸರಿಯಾಗಿ ಸಿಗದೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಉಳಿಯಲೊಂದು ಗುಡಿಸಲೂ ಇಲ್ಲದ ದೇಖರೇಖೆ ನೋಡಿಕೊಳ್ಳಲು ಯಾರೂ ಇಲ್ಲದ ಅವಿವಾಹಿತ ಶಿವುಗೀಗ ಎಂಬತ್ತು ವರ್ಷ ವಯಸ್ಸು. ಈ ಇಳಿ ವಯಸ್ಸಿನಲ್ಲಿ ಅವರಿಗೆ ಕಿವಿಯೂ ಕೇಳಿಸುತ್ತಿಲ್ಲ! ಫೆಬ್ರುವರಿ 2006 ರಿಂದ ಶಿವು ವೃದ್ಧಾಪ್ಯ ಪಿಂಚಣಿ ಮೇಲೆ ಜೀವವಿಟ್ಟು ಜೀವನ ನಡೆಸುತ್ತಿದ್ದರು.

ಹೇಗೋ ದಿನ ಕಳೆಯುತ್ತಿದ್ದಾಗ ಇದ್ದಕ್ಕಿದ್ದಂತೆ ಅಗಸ್ಟ್ 2018ರಲ್ಲಿ ಹೊನ್ನಾವರದ ಅಂದಿನ ತಹಶೀಲ್ದಾರ್ ವಿವೇಕ್ ಶೆಣ್ವಿ ಅಸಾಯಕ ಶಿವು ಹಳ್ಳೇರ ವೃದ್ದಾಪ್ಯ ವೇತನ ರದ್ದುಗೊಳಿಸಿ ಬಿಟ್ಟರು! ಅದಕ್ಕವರು ನೀಡಿದ ಕಾರಣ ಶಿವು ಹೊನ್ನಾವರ ತಾಲ್ಲೂಕಿನಲ್ಲಿ ವಾಸ್ತವ್ಯ ಮಾಡುತ್ತಿಲ್ಲ ಎಂಬುದಾಗಿತ್ತು. ಹೊನ್ನಾವರದ ಕಂದಾಯ ಅಧಿಕಾರಿಗಳು ಶಿವುರ ಅತಿ ಮುಖ್ಯ ದಾಖಲೆಯಾದ ಆಧಾರ ಕಾರ್ಡ್, ಮತದಾರ ಗುರುತಿನ ಚೀಟಿ, ಬಿಪಿಎಲ್ ಪಡಿತರ ಕಾರ್ಡ್, ಆಯುಷ್ಮಾನ್ ಆರೋಗ್ಯ ಕಾರ್ಡ್ ಅಥವಾ ಪಿಂಚಣಿ ಸಂದಾಯವಾಗುತ್ತಿದ್ದ ಅಂಚೆ ಇಲಾಖೆಯ ಪಾಸ್ ಬುಕ್‌ನಂಥ ಯಾವ ದಾಖಲೆಯನ್ನೂ ಪರಿಶೀಲಿಸದೆ ಎಡವಟ್ಟು ತೀರ್ಮಾನಕ್ಕೆ ಬಂದಿದ್ದರು! ತಹಶೀಲ್ದಾರರ ವಿವೇಚನಾರಹಿತ ಕ್ರಮವನ್ನು ಅಂದಿನ ಜಿಲ್ಲಾಧಿಕಾರಿ ಹರೀಶ್ ಕುಮಾರ್ ಎತ್ತಿ ಹಿಡಿದಿದ್ದು ಶಿವು ಹಳ್ಳಿರಗೆ ಅನ್ಯಾಯ ಮಾಡಿತ್ತು.

ಅಶಿಕ್ಷಿತ-ಅಮಾಯಕ ಶಿವು ಹಳ್ಳೇರ ಏನು ಮಾಡಬೇಕೆಂದು ತಿಳಿಯದೆ ಒದ್ದಾಡುತ್ತಿರುವಾಗ ಊರಿನ ಜಿ.ಎನ್.ಭಟ್ಟರಿಗೆ ವಿಷಯ ತಿಳಿಯುತ್ತದೆ. ಅವರು ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ, ತಹಶೀಲ್ದಾರ್‌ರಿಗೆ ಶಿವು ಹಳ್ಳೇರಗಾಗಿರುವ ತೊಂದರೆ ವಿವರಿಸಿ 2018ರ ಆಗಸ್ಟ್‌ನಿಂದ ಪಿಂಚಣಿ ಬಟವಡೆ ಮಾಡುವಂತೆ ಮನವಿ ಮಾಡುತ್ತಾರೆ. ಸರಕಾರಿ ಅಧಿಕಾರಿಗಳೊಂದಿಗೆ ವ್ಯವಹರಿಸುವ ಶಕ್ತಿ ವಯೋವೃದ್ಧ-ಅಶಿಕ್ಷಿತ ಶಿವುಗೆ ಇಲ್ಲದಿರುವುದರಿಂದ ಮತ್ತು ಅವರಿಗೆ ಕಿವಿ ಕೇಳಿಸದಿರುವುದರಿಂದ ಭಟ್ಟರೆ ಅರ್ಜಿ ಸಲ್ಲಿಸಿದ್ದರು. ಆದರೆ ಆರೆಂಟು ತಿಂಗಳು ಕಳೆದರೂ ತಹಶೀಲ್ದಾರ್ ಸಾಹೇಬರಿಂದ ಕನಿಷ್ಟ ಹಿಂಬರಹವೂ ಬರಲಿಲ್ಲ. ಜಿಲ್ಲಾಧಿಕಾರಿಗಳ ವಾಟ್ಸಪ್‌ಗೆ ಮನವಿ ಸಲ್ಲಿಸಿದರೂ ಪ್ರಯೋಜನವಾಗಲಿಲ್ಲ!

ಕಂದಾಯ ಅಧಿಕಾರಿಗಳು ಆಗಿರುವ ಅಚಾತುರ್ಯವನ್ನು ಅರಿತು ಕ್ಷಣಾರ್ಧದಲ್ಲಿ ಪರಿಹರಿಸಬಹುದಾಗಿದ್ದ ಈ ಸಣ್ಣ ಸಮಸ್ಯೆಯನ್ನು ಗೋಜಲುಗೊಳಿಸಲಾಗಿತ್ತು. ಬಡಪಾಯಿ ಶಿವುರ ಗೋಳು ಹೇಳತೀರದಾಗಿತ್ತು. ಆಗ ಅನಿವಾರ್ಯವಾಗಿ ಭಟ್ಟರು 30 ನವೆಂಬರ್ 2019ರಂದು ಬೆಂಗಳೂರಲ್ಲಿರುವ ಲೋಕಾಯುಕ್ತ ಕಚೇರಿಗೆ ಖುದ್ದು ಹೋಗಿ ದೂರು ದಾಖಲಿಸಿದರು. ಆಗಲೂ ತಹಶೀಲ್ದಾರ್ ಹಿಂದೆ ಮಾಡಿದ ತಪ್ಪನ್ನೇ ಮತ್ತೆ ಮಾಡಿದರು. ಶಿವುರ ವಾಸ್ತವ್ಯ ಹೊನ್ನಾವರ ತಾಲೂಕಿನಲ್ಲಿಯೇ ಇದೆಯೆಂದು ದೃಢಪಡಿಸುವ ಯಾವ ದಾಖಲೆಯನ್ನೂ ಪರಿಗಣಿಸಲೇ ಇಲ್ಲ. ಫಲಾನುಭವಿ ಹೊನ್ನಾವರ ತಾಲೂಕಿ ಹೆರಂಗಡಿ ವ್ಯಾಪ್ತಿಯಲ್ಲಿಲ್ಲವೆಂದು ತಹಶೀಲ್ದಾರ್ ವರದಿ ತಯಾರಿಸಿದ್ದರು. ಇದನ್ನೆ ಡಿಸಿ ಸಾಹೇಬರು ಕಣ್ಣು ಮುಚ್ಚಿ ಲೋಕಾಯುಕ್ತಕ್ಕೆ ರವಾನಿಸಿಬಿಟ್ಟಿದ್ದರು!

ಆದರೆ ಲೋಕಾಯುಕ್ತದಲ್ಲಿದ್ದ ದೂರನ್ನು ಮುಗಿಸಿಕೊಳ್ಳುವ ಅನಿವಾರ್ಯತೆಗೆ ಸಿಲುಕಿದ್ದ ತಹಶೀಲ್ದಾರ್ ಶಿವು ಹಳ್ಳೇರ ರದ್ದಾದ ಪೆನ್‌ಷನ್ ಪುನಃ ಪ್ರಾರಂಭಿಸಬೇಕಾಗಿ ಬಂತು. ಆದರೆ ಇಲ್ಲೂ ಪ್ರಮಾದವಾಗಿತ್ತು. 1 ಅಕ್ಟೋಬರ್ 2020ರಿಂದ ಶಿವುರಿಗೆ ಪಿಂಚಣಿ ಬಟವಡೆ ಮಾಡುವಂತೆ ತಹಶೀಲ್ದಾರ್ ಆದೇಶಿಸಿದ್ದರು. ನ್ಯಾಯ ಕ್ರಮದಂತೆ ಶಿವುರ ಸಾಮಾಜಿಕ ಭದ್ರತಾ ಪಿಂಚಣಿ ವಿನಾ ಕಾರಣ ಸ್ಥಗಿತಗೊಳಿಸಲಾಗಿದ್ದ 2018ರ ಆಗಸ್ಟ್ ತಿಂಗಳಿಂದ ಬಾಕಿಯಿದ್ದ ಮೊತ್ತ ಬರಬೇಕಿತ್ತು. ಕಂದಾಯ ಅಧಿಕಾರಿಗಳ ಈ ಅವಾಂತರವನ್ನು ಮತ್ತೆ ಭಟ್ಟರು ಲೋಕಾಯುಕ್ತರ ಗಮನಕ್ಕೆ ತಂದರು. ಆದರೆ ಲೋಕಾಯುಕ್ತದಿಂದ ಯಾವ ಕ್ರಮವೂ ಆಗಿಲ್ಲ. ಲೋಕಾಯುಕ್ತದ ವಿಫಲತೆ ಶಿವುರನ್ನು ದಿಕ್ಕೆಡಿಸಿಬಿಟ್ಟಿದೆ.

ಲೋಕಾಯುಕ್ತರಂತವರೆ ಬಡಪಾಯಿ ಶಿವುರ ಸಮಸ್ಯೆ ಪರಿಗಣಿಸದಿರುವಾಗ ಅವರಿಗೆ ಇನ್ನೆಲ್ಲಿ ನ್ಯಾಯ ಸಿಗುತ್ತದೆ? ಹರ ಕೊಲ್ಲಲ್ ನರ ಕಾಯ್ವನೆ ಎಂಬಂತಾಗಿದೆಯೆಂದು ಜನರಾಡಿ ಕೊಳ್ಳುತ್ತಿದ್ದಾರೆ. ಜಿಲ್ಲಾಧಿಕಾರಿ ಮತ್ತಿತರ ಕಂದಾಯ ಅಧಿಕಾಗಳು ಗ್ರಾಮ ವಾಸ್ತವ್ಯ ಮಾಡಿ ಅರ್ಹರಿಗೆ ಸ್ಥಳದಲ್ಲೆ ವೃದ್ದಾಪ್ಯ ಮಂಜೂರಿ ಮಾಡುತ್ತಾರೆ. 60 ವರ್ಷ ಮೀರಿದ ಫಲಾನುಭವಿಗಳಿಗೆ ಪಿಂಚಣಿ ಮನೆ ಬಾಗಿಲಲ್ಲೆ ವಿತರಿಸಲಾಗುತ್ತದೆಂದು ಕಂದಾಯ ಮಂತ್ರಿ ಆರ್.ಅಶೋಕ್ ಹೇಳುತ್ತಾರೆ. ವಿಪರ್ಯಾಸವೆಂದರೆ ಮಂಜೂರಿಯಾಗಿ ಬರುತ್ತಿರುವ ಪಿಂಚಣಿಯನ್ನೆ ಕಿತ್ತುಕೊಳ್ಳುವ ಕ್ರೌರ್ಯ ಇನ್ನೊಂದೆಡೆಯಾಗುತ್ತಿದೆ!


ಇದನ್ನೂ ಓದಿ: ದಲಿತ ಮಹಿಳೆಯರನ್ನು ಕಾನೂನುಬಾಹಿರವಾಗಿ ಸೇವೆಯಿಂದ ವಜಾಗೊಳಿಸಿದ ನಿಮ್ಹಾನ್ಸ್‌: ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...