Homeಕರ್ನಾಟಕವೈವಾಹಿಕ ಅತ್ಯಾಚಾರ ಅಪರಾಧವಲ್ಲ ತೀರ್ಪು; ಛತ್ತೀಸಗಡ ಹೈಕೋರ್ಟ್ ನ್ಯಾಯಾಂಗ ಸಮಾನತೆಯನ್ನು ಅರ್ಥಮಾಡಿಕೊಂಡಿದ್ದು ಇಷ್ಟೆಯೇ?

ವೈವಾಹಿಕ ಅತ್ಯಾಚಾರ ಅಪರಾಧವಲ್ಲ ತೀರ್ಪು; ಛತ್ತೀಸಗಡ ಹೈಕೋರ್ಟ್ ನ್ಯಾಯಾಂಗ ಸಮಾನತೆಯನ್ನು ಅರ್ಥಮಾಡಿಕೊಂಡಿದ್ದು ಇಷ್ಟೆಯೇ?

- Advertisement -
- Advertisement -

ಒಂದು ದೇಶದ ಪ್ರಗತಿಗೆ ಅನೇಕ ಅಂಶಗಳು ಕಾರಣವಾಗಿರಬಹುದು. ಪೆಟ್ರೋಲ್ ಮಾರಿ ಒಂದು ದೇಶ ಶ್ರೀಮಂತವಾದರೆ ಇನ್ನೊಂದು ತಂತ್ರಜ್ಞಾನ ಅಭಿವೃದ್ಧಿಯಿಂದ ಹಣ ಗಳಿಸಬಹುದು. ಆದರೆ ಯಾವ ದೇಶ ಲಿಂಗತಾರತಮ್ಯಗಳನ್ನು ’ಕಡಿಮೆ ಮಾಡಿ’ ಸಮಾನ, ಸಾಮಾಜಿಕ, ಆರ್ಥಿಕ, ರಾಜಕೀಯ ಅವಕಾಶಗಳನ್ನು ಕಲ್ಪಿಸಿದೆಯೋ ಅದು ಶ್ರೀಮಂತಿಕೆಯ ಜೊತೆ ಪ್ರಗತಿಯನ್ನೂ ಹೊಂದಿದೆ. ಇಲ್ಲಿ ಪ್ರಜ್ಞಾಪೂರ್ವಕವಾಗಿ ’ಕಡಿಮೆ ಮಾಡಿ’ ಎಂಬ ಪದ ಬಳಸಿದೆ, ಏಕೆಂದರೆ ಎಷ್ಟೇ ಪ್ರಬಲ ಅಥವಾ ಪ್ರಗತಿ ಹೊಂದಿದ ದೇಶವಿದ್ದರೂ ಸ್ತ್ರೀಯರ ವಿಷಯದಲ್ಲಿ ಸಂಪೂರ್ಣ ಸಮಾನತೆ ಸಾಧಿಸಿಲ್ಲ ಎನ್ನುವುದು ವಾಸ್ತವ. ಇನ್ನು ಭಾರತದ ಮಟ್ಟಿಗೆ ಹೇಳುವುದಾದರೆ ಇಲ್ಲಿ ಎರಡು ಬಗೆಯ ಸಮಾನತೆ ಇದೆ. ಒಂದು ’ಸಂವಿಧಾನಾತ್ಮಕ’ ಸಮಾನತೆ – ಇದು ಸ್ತ್ರೀ ಪುರುಷರ ಮಧ್ಯೆ ಯಾವುದೇ ತಾರತಮ್ಯ ಮಾಡುವುದಿಲ್ಲ. ಇನ್ನೊಂದು ’ಸಂವೇದನಾತ್ಮಕ’ ಸಮಾನತೆ – ಇದು ಮಹಿಳೆಯರ ನೋವುಗಳಿಗೆ ಸ್ಪಂದಿಸುವಲ್ಲಿಯೂ ಸಹ ಆ ಮಹಿಳೆಯ ಜಾತಿ, ಸ್ಥಾನಮಾನ, ಬಣ್ಣ ಮುಂತಾದ ಹಿನ್ನೆಲೆಯಲ್ಲಿ ತಾರತಮ್ಯ ಹೊಂದಿರುವಂಥದ್ದು. ವಿಪರ್ಯಾಸವೆಂದರೆ ಎರಡನೆಯದು ಮೊದಲಿನದ್ದಕ್ಕಿಂತ ಹೆಚ್ಚು ಶಕ್ತಿಶಾಲಿ.

ಇದೇ ವಾರ ಛತ್ತೀಸಗಡ ರಾಜ್ಯದ ಹೈಕೋರ್ಟ್ ತನ್ನ ಒಂದು ತೀರ್ಪಿನಲ್ಲಿ ವೈವಾಹಿಕ ಸಂಬಂಧದಲ್ಲಿ ಗಂಡನಾದವನು ಬಲವಂತದಿಂದ ಲೈಂಗಿಕ ಸಂಭೋಗ ಮಾಡಿದರೂ ಅದು ಅತ್ಯಾಚಾರವಲ್ಲ ಎಂದು ಹೇಳಿದೆ. ಆದರೆ ಇದೇ ತೀರ್ಪಿನಲ್ಲಿ ಮುಂದುವರೆದು “ಗಂಡಹೆಂಡತಿಯ ಜೊತೆ ಅನೈಸರ್ಗಿಕ ಸಂಭೋಗ ಮಾಡಿದ್ದು ಭಾರತೀಯ ದಂಡಸಂಹಿತೆಯ 377ನೇ ವಿಧಿ ಪ್ರಕಾರ ಅಪರಾಧ” ಎಂದಿದೆ. ಇಲ್ಲಿ ಒಂದು ಪ್ರಶ್ನೆ: ಒಂದೇ ಕೃತ್ಯದ ಒಂದು ಭಾಗ ಅಪರಾಧ, ಇನ್ನೊಂದು ಅಲ್ಲ, ಅದು ಹೇಗೆ? ಇಂಥ ಒಂದು ತೀರ್ಮಾನ ಕೊಡುವಾಗ ನ್ಯಾಯಾಧೀಶರು ಕೇವಲ ಕಾನೂನು ಪಾಲಿಸುವ ಯಂತ್ರಗಳಾಗಿರದೆ ಕಾನೂನನ್ನು ಪರಿಭಾಷಿಸುವ ಕಾಳಜಿ ಹೊಂದಿದ್ದರೆ ಇಂತಹ ಪ್ರತಿಗಾಮಿ ತೀರ್ಪು ಬರುತ್ತಿರಲಿಲ್ಲ. ಕಾಲಕಾಲಕ್ಕೆ ಬರುವ ವಿಶಾಲವಾದ ಪರಿಭಾಷೆಗಳಿಂದಲೇ ಅಲ್ಲವೆ ಸಾಮಾಜಿಕ ಮತ್ತು ವೈಚಾರಿಕ ಪ್ರಗತಿ ಆಗುವುದು!

ಭಾರತೀಯ ದಂಡಸಂಹಿತೆಯ 375ನೇ ವಿಧಿ ಪ್ರಕಾರ ಅತ್ಯಾಚಾರ ಎಂದರೆ ’ಯಾವುದೇ ಗಂಡಸು ಒಬ್ಬ ಹೆಂಗಸಿನ ಇಚ್ಛೆಗೆ ವಿರುದ್ಧವಾಗಿ, ಅವಳ ಒಪ್ಪಿಗೆ ಇಲ್ಲದೆ ಬಲವಂತದಿಂದ ಒಪ್ಪಿಗೆ ಪಡೆದು ನಡೆಸುವ ಲೈಂಗಿಕ ಸಂಭೋಗ’. ಇದರಲ್ಲಿ ಮುಂದುವರೆದು ’ಒಬ್ಬ ಗಂಡ ತನ್ನದೇ ಹೆಂಡತಿ ಇದ್ದರೂ ಹದಿನೈದು ವರ್ಷಕ್ಕಿಂತ ಚಿಕ್ಕವಳಿದ್ದರೆ ಅವಳ ಜೊತೆ ಲೈಂಗಿಕ ಸಂಪರ್ಕ ಹೊಂದುವುದು ಅಪರಾಧ’ ಎಂದಿದೆ. ಎಷ್ಟೋ ದಶಕಗಳಿಂದ ಈ ಕೊನೆಯ ಅಂಶ ವಿವಿಧ ಕಾರಣಗಳಿಂದ ಪ್ರಶ್ನೆಗೆ ಒಳಗಾಗುತ್ತಲೇ ಇದ್ದರೂ ಅದರಲ್ಲಿ ಯಾವುದೇ ಕ್ರಾಂತಿಕಾರಕ ಬದಲಾವಣೆಗಳು ಆಗಿಲ್ಲ.

18 ವರ್ಷಕ್ಕಿಂತ ಕಿರಿಯರನ್ನು ಮಕ್ಕಳು ಎಂದು ಕಾನೂನೇ ಪರಿಗಣಿಸುವಾಗ ಆ ಮಕ್ಕಳು ಕೊಡುವ ಸಮ್ಮತಿಯನ್ನು ಪರಿಗಣಿಸಬಹುದೇ?

ಹಾಗದರೆ 15 ರಿಂದ 18ರ ಒಳಗಿನ ಮದುವೆ ಆದ ಮಕ್ಕಳ ಮೇಲೆ ಅವಳ ಗಂಡ ಮಾಡುವ ಲೈಂಗಿಕ ಶೋಷಣೆಯನ್ನು ಯಾವ ರೀತಿ ಅರ್ಥೈಸಬೇಕು ಮುಂತಾದ ಅನೇಕ ಪ್ರಶ್ನೆಗಳಿಗೆ ಒಂದು ಸಣ್ಣ ಸಮಾಧಾನ ಸಿಕ್ಕಿದ್ದು ಇತ್ತೀಚೆಗೆ 2017ರಲ್ಲಿ ಜಸ್ಟೀಸ್ ಮದನ್ ಲೋಕೂರ್ ಮತ್ತು ಜಸ್ಟೀಸ್ ದೀಪಕ್ ಗುಪ್ತಾ ಅವರ ತೀರ್ಪು. ಅವರು 15 ವರ್ಷದ ಮಿತಿಯನ್ನು 18ಕ್ಕೆ ಏರಿಸಿದರು, ಆದರೆ ವೈವಾಹಿಕ ಅತ್ಯಾಚಾರ ಅಪರಾಧ ಹೌದೋ ಅಲ್ಲವೋ ಎಂಬ ಪ್ರಶ್ನೆಯನ್ನು ಮುಟ್ಟಲಿಲ್ಲ.

ವ್ಯಕ್ತಿಯ ವೈಯಕ್ತಿಕ ಸ್ವಾತಂತ್ರ್ಯವನ್ನು ಮತ್ತು ಖಾಸಗಿತನವನ್ನು ವ್ಯಾಖ್ಯಾನಿಸಿ ಎಷ್ಟೋ ತೀರ್ಪುಗಳು ಬಂದರೂ ಹೆಂಡತಿಯ ವೈಯಕ್ತಿಕತೆ ಮತ್ತು ಖಾಸಗಿತನದ ಪ್ರಶ್ನೆಗಳು ಹಾಗೇ ಇವೆ. ಈ ಪುರುಷಾಧಿಪತ್ಯ ಮತ್ತು ಪ್ರಗತಿಗಾಮಿ ಧೋರಣೆಗಳು ನ್ಯಾಯಾಂಗದಲ್ಲೂ ಸಹ ಆಳವಾಗಿ ಬೇರೂರಿವೆ. ಇತ್ತೀಚಿನ ಕೆಲ ವರ್ಷಗಳಲ್ಲಿ ಮಹಿಳಾ ಸಮಾನ ಅವಕಾಶಗಳ ಕೆಲ ತೀರ್ಪುಗಳು ’ಸೇನೆಯಲ್ಲಿ ಮಹಿಳೆಯ ಸೇರ್ಪಡೆ’, ’ಶಬರಿಮಲೈ ದೇವಸ್ಥಾನ ಪ್ರವೇಶ’ದ ರೂಪದಲ್ಲಿ ಬಂದರೂ ವೈವಾಹಿಕ ಸಂಬಂಧದ ಒಳಗೆ ಇಣುಕುವ ಧೈರ್ಯ ಇನ್ನೂ ನ್ಯಾಯಾಂಗಕ್ಕೆ ಬಂದಂತಿಲ್ಲ.

ದೆಹಲಿ ಹೈಕೋರ್ಟಿನಲ್ಲಿ ’ವೈವಾಹಿಕ ಅತ್ಯಾಚಾರವನ್ನು ಅಪರಾಧ’ ಎಂದು ಪರಿಗಣಿಸಲು ಕೋರಿ ಹಾಕಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಪ್ರಸ್ತುತ ಕೇಂದ್ರ ಸರ್ಕಾರ ತನ್ನ ಅಭಿಪ್ರಾಯವನ್ನು ತಿಳಿಸಿ, “ಇಂತಹ ನಡೆ ವಿವಾಹ ಎಂಬ ವ್ಯವಸ್ಥೆ ಕುಸಿಯಲು ದಾರಿ ಮಾಡಿಕೊಡುತ್ತದೆ” ಎಂದು ಹೇಳಿದೆ.

ಅಂದರೆ ಈ ವ್ಯವಸ್ಥೆ ಜೀವವಿಲ್ಲದ ಅಸ್ತಿಪಂಜರವಾಗಿದ್ದರೂ ಚಿಂತೆಯಿಲ್ಲ, ಅದನ್ನು ಬಲವಂತದಿಂದ ಉಳಿಸಬೇಕು ಎಂಬುದು ಸರ್ಕಾರದ ನಿಲುವು ಮಹಿಳೆಯರ ಬಗ್ಗೆ ಇರುವ ಧೋರಣೆಯನ್ನು ತೋರಿಸುತ್ತದೆ. ವಿವಾಹ ಎಂಬ ವ್ಯವಸ್ಥೆ ಸದೃಢವಾಗಿ ನಿಲ್ಲಬೇಕಾದರೆ ಅದರ ನೆಲೆಯನ್ನು ಗಟ್ಟಿಗೊಳಿಸಿ, ಸಂಬಂಧಗಳನ್ನು ಸದೃಢಗೊಳಿಸುವ ಪ್ರಯತ್ನಗಳಾಗಬೇಕು. ಇದೇ ಸಂದರ್ಭದಲ್ಲಿ ಒಂದು ಆಶಾಕಿರಣದಂತೆ ಕೇರಳ ಹೈಕೋರ್ಟ್ ’ವೈವಾಹಿಕ ಅತ್ಯಾಚಾರವೂ ಅಪರಾಧವಾಗಿದೆ’ ಎಂದು ಹೇಳಿದೆ. ಈ ಎಲ್ಲ ತೀರ್ಪುಗಳೂ ಬೇರೆ ಬೇರೆ ಹಿನ್ನೆಲೆಯಲ್ಲಿ ಬಂದಿದ್ದರೂ ಕೂಡ ಈ ಒಂದು ವಿಷಯದ ಬಗ್ಗೆ ಸುಪ್ರೀಂ ಕೋರ್ಟ್ ಸ್ಪಷ್ಟತೆಯನ್ನು ಕೊಡುವ ತುರ್ತು ಅಗತ್ಯ ಇದೆ.

ಅನುಪಮಾ ಎಂಬ ಲೇಖಕಿ ತನ್ನ ‘Gendered Citizenship’ ಎಂಬ ಪುಸ್ತಕದಲ್ಲಿ ಈ ಜಗತ್ತು ಸಾರ್ವಜನಿಕ ಮತ್ತು ಖಾಸಗಿ ಎಂಬ ವಲಯದಲ್ಲಿ ವಿಭಜನೆ ಆಗಿದೆ ಎನ್ನುತ್ತಾರೆ. ಈ ಹಿನ್ನೆಲೆಯಲ್ಲಿ ನೋಡಿದರೆ ಸಮಾಜದಲ್ಲಿ ಅದರಲ್ಲೂ ಪುರುಷಪ್ರಧಾನ ಸಮಾಜದಲ್ಲಿ ಸಾರ್ವಜನಿಕ ವಲಯ ಗಂಡಸರಿಗೆ, ಕೌಟುಂಬಿಕ ಅಥವಾ ಖಾಸಗಿ ವಲಯ ಹೆಂಗಸರಿಗೆ ಎಂದು ಸಾರಾಸಗಟಾಗಿ ನಿರ್ಧರಿಸಿದ ಮೇಲೆ, ತನ್ನ ಖಾಸಗಿ ವಲಯದಿಂದ ಹೊರಬರಲು ಪ್ರಯತ್ನಿಸುವ ಪ್ರತಿಯೊಬ್ಬ ಮಹಿಳೆಯೂ ಒಂದಲ್ಲ ಒಂದು ರೀತಿಯ ದೌರ್ಜನ್ಯಕ್ಕೆ ಒಳಗಾಗುತ್ತಲೇ ಬಂದಿದ್ದಾಳೆ. ಮೈಸೂರಿನಲ್ಲಿ ಮೊನ್ನೆ ನಡೆದ ಕಾಲೇಜು ವಿದ್ಯಾರ್ಥಿನಿಯ ರೇಪ್ ಕೇಸಿನಲ್ಲಿ ಆ ವಿದ್ಯಾರ್ಥಿನಿಯನ್ನೆ ದೂಷಿಸಿದವರು ಎಷ್ಟೋ ಜನ. ಈ ಹಿಂದೆ ದೆಹಲಿಯಲ್ಲಿ ನಡೆದ ನಿರ್ಭಯಾ ಕೇಸಿನಲ್ಲಿ ಕೂಡ ಇಂತಹದೇ ಮಾತುಗಳು ಕೇಳಿಬಂದಿದ್ದವು.

ಬಿಜೆಪಿ ನಾಯಕರೊಬ್ಬರು ಸಂತ್ರಸ್ತೆ, ’ಅಣ್ಣಾ ನನ್ನನ್ನು ಬಿಟ್ಟುಬಿಡು’ ಎಂದು ಕೇಳಿಕೊಳ್ಳಬೇಕಾಗಿತ್ತು ಎಂದರೆ, ಇನ್ನೊಬ್ಬರು ’ಹನುಮಾನ್ ಚಾಲೀಸಾ’ ಹೇಳಬೇಕಾಗಿತ್ತು ಎಂದರು. ಈ ಮನೋರೋಗಕ್ಕೆ ಚಿಕಿತ್ಸೆ ಇದೆಯೇ? ಹೆಣ್ಣು ತಿರುಗಾಡುವ ಸಮಯ, ಉಟ್ಟುಕೊಳ್ಳುವ ಬಟ್ಟೆ, ಯಾರ ಜೊತೆ ತಿರುಗಾಡುತ್ತಾಳೆ, ಎಂತಹ ಸ್ಥಳಕ್ಕೆ ಹೋಗುತ್ತಾಳೆ, ಕೆಲವೊಮ್ಮೆಯಂತೂ ಏನು ತಿನ್ನುತ್ತಾಳೆ ಎಂಬುದು ಕೂಡ ಸಾರ್ವಜನಿಕ ಚರ್ಚೆಯ ವಸ್ತುವಾಗುತ್ತದೆ. ಹಿಂದಿ ಭಾಷೆಯ ’ಪಿಂಕ್ ಎಂಬ ಸಿನಿಮಾದಲ್ಲಿ ಅಮಿತಾಭ್ ಬಚ್ಚನ್‌ರ ಒಂದು ಮಾತಿದೆ – “ಈ ದೇಶದಲ್ಲಿ ಸ್ಥಳ ಹೆಣ್ಣುಮಕ್ಕಳ ನಡತೆಯನ್ನು ನಿರ್ಧರಿಸುತ್ತದೆ; ದೇವಸ್ಥಾನ ಅಥವಾ ಲೈಬ್ರರಿಯಲ್ಲಿ ಪರಿಚಯವಾದರೆ ಒಳ್ಳೆ ಹುಡುಗಿ, ಪಬ್ ಅಥವಾ ಡಿಸ್ಕೊದಲ್ಲಿ ಸಿಕ್ಕರೆ ಪ್ರಶ್ನಾರ್ಹ ನಡತೆ ಹೊಂದಿದವಳು” ಎಂದು. ಮೈಸೂರು ಘಟನೆ ನಂತರ ರಾಜ್ಯದ ಗೃಹಮಂತ್ರಿ, ಸಂತ್ರಸ್ತೆ ಏಳು ಗಂಟೆ ನಂತರ ಅಂತಹ ಸ್ಥಳಕ್ಕೆ ಹೋಗಿದ್ದು ತಪ್ಪು ಎಂದಾಗ ಈ ಮೇಲಿನ ಮಾತು ನೆನಪಾಯ್ತು.

ಇದೇ ದಂಡಸಂಹಿತೆಯ 497 ವಿಧಿಯಾದ “ವ್ಯಭಿಚಾರ ಒಂದು ದಂಡನಾರ್ಹ ಅಪರಾಧ” ಎಂಬುದನ್ನು ಸುಪ್ರೀಂ ಕೋರ್ಟ್ ತೆಗೆದು ಹಾಕಿದಾಗ ಆ ಬಗ್ಗೆ ಸಾರ್ವಜನಿಕರಿಗೆ ಸರಿಯಾದ ತಿಳಿವಳಿಕೆ ಕೊಡುವ ಪ್ರಯತ್ನಗಳಾಗಲಿಲ್ಲ. ಹೇಗೆ ಈ ಕಾನೂನು ಹೆಣ್ಣನ್ನು ಕೊಟ್ಟಿಗೆಯಲ್ಲಿ ಕಟ್ಟಿದ ಹಸುವಿನಂತೆ ಪರಿಗಣಿಸುತ್ತದೆ ಎಂಬುದು ಇಂದಿಗೂ ಗೊಂದಲವಾಗಿ ಉಳಿದಿದೆ.

ಇಂದೂ ವೈವಾಹಿಕ ಅತ್ಯಾಚಾರವನ್ನು ಅಪರಾಧ ಎಂದು ಪರಿಗಣಿಸದ 36 ರಾಷ್ಟ್ರಗಳಲ್ಲಿ ಭಾರತವೂ ಒಂದು. ಇದಕ್ಕೆ ಒಂದು ಮುಖ್ಯಕಾರಣ “ಮದುವೆ ಎಂಬುದು ಲೈಂಗಿಕ ಸಂಪರ್ಕಕ್ಕೆ ಅಪರೋಕ್ಷ ಸಮ್ಮತಿ” ಎಂಬ ಕಲ್ಪನೆ. ಜೊತೆಗೆ ಮದುವೆ ಎಂಬ ವ್ಯವಸ್ಥೆ, ಸಾಮಾಜಿಕ ಚಲನೆಯಲ್ಲಿ ಮನುಷ್ಯ ಕಂಡುಕೊಂಡ ಒಂದು ವ್ಯವಸ್ಥೆ ಎಂದು ತಿಳಿಯದೆ ಧಾರ್ಮಿಕ ಸಂಸ್ಕಾರಗಳ ಭಾಗವಾಗಿಸಿದ್ದು ಕೂಡ ಕಾರಣ. ಸುಳ್ಳು ಕೇಸುಗಳು ದಾಖಲಾಗಬಹುದು, ಹೆಂಗಸರು ಇದರ ದುರುಪಯೋಗ ಮಾಡಿಕೊಳ್ಳಬಹುದು ಎಂಬುದು ಕಾನೂನು ತರದೇ ಇರಲು ಸಮರ್ಥನೆ
ಅಲ್ಲ. ಬದಲಾವಣೆ ಕಾಲದ ನಿಯಮ, ಅದು ಆರೋಗ್ಯಪೂರ್ಣವಾಗಿದ್ದರೆ ಸಮಾಜ ಸ್ವಸ್ಥವಾಗಿರುತ್ತದೆ.

ರಾಜಲಕ್ಷ್ಮಿ ಅಂಕಲಗಿ

ರಾಜಲಕ್ಷ್ಮಿ ಅಂಕಲಗಿ
ಹೈಕೋರ್ಟ್ ವಕೀಲರು, ಹಲವು ಜನಪರ ಹೋರಾಟಗಳಲ್ಲಿ ಸಕ್ರಿಯವಾಗಿ ಭಾಗಿಯಾಗಿದ್ದಾರೆ. ಕಾನೂನು ವಿಷಯಗಳ ಮೇಲೆ ಹಲವು ಲೇಖನಗಳನ್ನು ಪ್ರಕಟಿಸಿದ್ದಾರೆ.


ಇದನ್ನೂ ಓದಿ: 200 ಹಲ್ಲಾ ಹೋ: ಪ್ರತೀಕಾರ ಹತ್ಯೆಯ ಸುತ್ತ ಮಹತ್ವದ ಜಾತಿ ದೌರ್ಜನ್ಯದ ಪ್ರಶ್ನೆಗಳು

ಇದನ್ನೂ ಓದಿ: ಮಹಿಳಾ ಮುಖ್ಯ ನ್ಯಾಯಮೂರ್ತಿ: ತನ್ನ ಪೂರ್ವಾಗ್ರಹಗಳಿಂದ ಬಿಡುಗಡೆ ಹೊಂದುವುದೇ ಸುಪ್ರೀಂಕೋರ್ಟ್?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...