Homeಚಳವಳಿಹುತಾತ್ಮ ಪತ್ರಕರ್ತೆ ಗೌರಿ ಲಂಕೇಶ್ ಸ್ಮರಣೆ: ನಾಳೆ 'ಗೌರಿ ನೆನಹು' ಕಾರ್ಯಕ್ರಮ

ಹುತಾತ್ಮ ಪತ್ರಕರ್ತೆ ಗೌರಿ ಲಂಕೇಶ್ ಸ್ಮರಣೆ: ನಾಳೆ ‘ಗೌರಿ ನೆನಹು’ ಕಾರ್ಯಕ್ರಮ

- Advertisement -
- Advertisement -

ಹಿಂದೂತ್ವವಾದಿಗಳ ಗುಂಡಿಗೆ ಎದೆಯೊಡ್ಡಿ ಹುತಾತ್ಮರಾದ ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್‌ರವರ ನೆನಪಿನಲ್ಲಿ ಸೆಪ್ಟಂಬರ್ 05 ರಂದು ಗೌರಿ ಮೆಮೋರಿಯಲ್ ಟ್ರಸ್ಟ್‌ನಿಂದ ‘ಗೌರಿ ನೆನಹು’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಸೆಪ್ಟಂಬರ್ 05ಕ್ಕೆ ಗೌರಿ ಲಂಕೇಶ್‌ರವರ ಹತ್ಯೆಯಾಗಿ 4 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಅಂದು ಬೆಳಿಗ್ಗೆ 8.30ಕ್ಕೆ ಚಾಮರಾಜಪೇಟೆಯಲ್ಲಿರುವ ಗೌರಿ ಲಂಕೇಶ್‌ರವರ ಸಮಾಧಿ ಬಳಿ ಗೌರವ ಸಲ್ಲಿಸಲಾಗುತ್ತದೆ ಎಂದು ಟ್ರಸ್ಟ್ ಸದಸ್ಯರಾದ ನೂರ್ ಶ್ರೀಧರ್ ತಿಳಿಸಿದ್ದಾರೆ.

ಗೌರಿ ಲಂಕೇಶ್‌ರವರ ನಮ್ಮನ್ನು ಅಗಲಿ ನಾಲ್ಕು ವರ್ಷಗಳಾಗಿವೆ. ಬನ್ನಿ ಸೇರೋಣ, ಗೌರಿ ಹಾದಿಯಲ್ಲಿ ಮುನ್ನೆಡೆಯೋಣ ಎಂದು ಅವರು ಕರೆ ನೀಡಿದ್ದಾರೆ.

ಅಂದು ಸಂಜೆಗೆ 5 ಗಂಟೆಗೆ ಗೌರಿ ಮೆಮೋರಿಯಲ್ ಟ್ರಸ್ಟ್ ಮತ್ತು ಸಿಟಿಜನ್ ಫಾರ್‌ ಜಸ್ಟೀಸ್ ಅಂಡ್ ಪೀಸ್ ಸಹಯೋಗದಲ್ಲಿzoom ವೇದಿಕೆಯಲ್ಲಿ ಮೃತ ಫಾದರ್‌ ಸ್ಟಾನ್ ಸ್ವಾಮಿ ಪ್ರಕರಣದಲ್ಲಿ ಪ್ರಮುಖರಾಗಿದ್ದ ಹಿರಿಯ ವಕೀಲ ಮಿಹೀರ್ ದೇಸಾಯಿ ಅವರಿಂದ “ಟೆರರ್ ಲಾ ಅಂಡರ್ ಪ್ರೋಟೋ ಫ್ಯಾಸಿಸ್ಟ್ ರೆಜಿಮ್” (ಫ್ಯಾಸಿಸ್ಟ್ ಆಡಳಿತದ ಅಡಿಯಲ್ಲಿ ಭಯೋತ್ಪಾದನಾ ಕಾನೂನುಗಳು) ಎಂಬ ವಿಷಯದ ಬಗ್ಗೆ ವಿಶೇಷ ಉಪನ್ಯಾಸ ನಡೆಯಲಿದೆ. ಈ ವೇದಿಕೆಯಲ್ಲಿ ಯುವ ಹೋರಾಟಗಾರರಾದ ನತಾಶಾ ನರ್ವಾಲ್, ದೇವಂಗಾನಾ ಕಾಲಿತಾ ಮತ್ತು ಆಸಿಫ್ ಇಕ್ಬಾಲ್ ತನ್ಹಾ ಮಾತನಾಡಲಿದ್ದಾರೆ. ಗೌರಿ ಲಂಕೇಶ್ ಅವರಿಗೆ ಗೌರವ ನಮನ ಸಲ್ಲಿಸಲಿದ್ದಾರೆ.

ಸೆಪ್ಟಂಬರ್ 05ರ ಭಾನುವಾರ ಸಂಜೆ 6 ಗಂಟೆಯಿಂದ ‘ಗೌರಿ ಹತ್ಯೆ ಪ್ರಕರಣ ಮತ್ತು ಹಿಂಸೆಯನ್ನು ಎದುರುಗೊಳ್ಳುವ ಅಗತ್ಯ’ ಎಂಬ ವಿಷಯದ ಕುರಿತು ನಾನುಗೌರಿ.ಕಾಂ । ನ್ಯಾಯಪಥ – ಕ್ಲಬ್ ಹೌಸ್ ಸಂವಾದ ನಡೆಯಲಿದೆ. ಚಿಂತಕ ಶಿವಸುಂದರ್ ಮತ್ತು ಪತ್ರಕರ್ತ ಆದಿತ್ಯ ಭಾರದ್ವಾಜ್ ಮಾತನಾಡಲಿದ್ದಾರೆ.

ಇನ್ನೊಂದೆಡೆ ಗೌರಿ ದಿನದ ಅಂಗವಾಗಿ ’ಸಹಮತ’ ತಂಡ “ಗಾಂಧಿ ಕೊಂದವರೇ ಕಲ್ಬುರ್ಗಿ ಕೊಂದರು; ಗೌರಿಯನ್ನೂ ಕೊಂದರು” ಎಂಬ ಚರ್ಚೆ ಆಯೋಜಿಸಿದೆ. ಚರ್ಚೆಯಲ್ಲಿ ನಿವೃತ್ತ ಪೊಲೀಸ್ ಅಧಿಕಾರಿ ಬಿ.ಕೆ.ಶಿವರಾಂ, ಹೋರಾಟಗಾರ್ತಿ ಕೆ.ನೀಲಾ ಮತ್ತು ಪತ್ರಕರ್ತ ನವೀನ್ ಸೂರಿಂಜೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳಲಿದ್ದಾರೆ. ಸೆ.5 ರ ಸಂಜೆ 4 ಗಂಟೆಗೆ ಚರ್ಚೆ ಆರಂಭವಾಗಲಿದೆ.


ಇದನ್ನೂ ಓದಿ: ಜನಪ್ರಿಯ ಚಾನೆಲ್‌ ಪ್ಯಾಕ್‌ನಿಂದ NDTV ಹೊರಗಿಟ್ಟು ವಿವಾದ ಸೃಷ್ಟಿಸಿದ ಹಾತ್‌ವೇ ಕೇಬಲ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...