Homeಕ್ರೀಡೆಒಲಂಪಿಕ್ಪ್ಯಾರಾಲಿಂಪಿಕ್ಸ್‌: ಬ್ಯಾಡ್ಮಿಂಟನ್‌ನಲ್ಲಿ ಫೈನಲ್ ತಲುಪಿದ ಕನ್ನಡಿಗ ಸುಹಾಸ್!

ಪ್ಯಾರಾಲಿಂಪಿಕ್ಸ್‌: ಬ್ಯಾಡ್ಮಿಂಟನ್‌ನಲ್ಲಿ ಫೈನಲ್ ತಲುಪಿದ ಕನ್ನಡಿಗ ಸುಹಾಸ್!

- Advertisement -
- Advertisement -

ಪ್ರಸ್ತುತ ಉತ್ತರ ಪ್ರದೇಶದ ನೋಯ್ಡಾ ಜಿಲ್ಲಾ ಮ್ಯಾಜಿಸ್ಟ್ರೇಟ್ ಆಗಿರುವ, ಕನ್ನಡಿಗ ಸುಹಾಸ್‌ ಲಲಿನಕೆರೆ ಯತಿರಾಜ್‌ ಅವರು, ಶನಿವಾರ ನಡೆದ ಟೋಕಿಯೊ ಪ್ಯಾರಾಲಿಂಪಿಕ್ಸ್‌ನ ಪ್ಯಾರಾ ಬ್ಯಾಡ್ಮಿಂಟನ್ ಆಟದಲ್ಲಿ ಫೈನಲ್ ತಲುಪಿದ್ದಾರೆ. ಹಾಸನ ಮೂಲದ ಸುಹಾಸ್‌ ಅವರು ಟೋಕಿಯೊ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತವನ್ನು ಪ್ರತಿನಿಧಿಸಿದ ದೇಶದ ಮೊದಲ ನಾಗರಿಕ ಸೇವೆಯಲ್ಲಿರುವ ಅಧಿಕಾರಿಯಾಗಿದ್ದಾರೆ. ಚಿನ್ನದ ಬೇಟೆಗಾಗಿ ಅವರು ಭಾನುವಾರ ನಡೆಯಲಿರುವ ಪಂದ್ಯವನ್ನು ಗೆಲ್ಲಬೇಕಾಗಿದೆ.

‘ಪುರುಷರ ಸಿಂಗಲ್ಸ್‌‌ ಎಸ್‌ಎಲ್4’ ಸೆಮಿಫೈನಲ್ ಅನ್ನು ಸುಹಾಸ್ ಅವರು ಇಂಡೋನೇಷ್ಯಾದ ಫ್ರೆಡಿ ಸೆಟಿಯಾವಾನ್ ಅವರ ವಿರುದ್ದ ಆಡಿದ್ದರು. ಅವರು 21-9, 21-15 ಅಂತರದಿಂದ ಪ್ರತಿಸ್ಪರ್ಧಿಯನ್ನು ಸೋಲಿಸಿ ನೇರ ಸೆಟ್ಗಳಲ್ಲಿ ಪಂದ್ಯವನ್ನು ಗೆದ್ದಿದ್ದಾರೆ.

ಇದರ ನಡುವೆ ಹಾಲಿ ವಿಶ್ವ ಚಾಂಪಿಯನ್ ಪ್ರಮೋದ್ ಭಗತ್ ಅವರು ಶನಿವಾರ ನಡೆದ ಟೋಕಿಯೊ ಪ್ಯಾರಾಲಿಂಪಿಕ್ಸ್‌ನ ನೇರ ಪಂದ್ಯಗಳಲ್ಲಿ ಜಪಾನ್‌ನ ಡೈಸುಕೆ ಫುಜಿಹರಾ ಅವರನ್ನು ಸೋಲಿಸಿ ಬ್ಯಾಡ್ಮಿಂಟನ್ ಪುರುಷರ ಸಿಂಗಲ್ಸ್ ಫೈನಲ್‌ಗೆ ಪ್ರವೇಶಿಸಿದ್ದಾರೆ.

ಇದನ್ನೂ ಓದಿ: ಪ್ಯಾರಾಲಿಂಪಿಕ್ಸ್‌: ಪದಕ ಬೇಟೆ ಮುಂದುವರೆಸಿರುವ ಭಾರತ; ಬೆಳ್ಳಿ ಗೆದ್ದ ಮರಿಯಪ್ಪನ್‌!

ವಿಶ್ವದ ನಂಬರ್ 1 ಮತ್ತು ಪ್ರಸ್ತುತ ಏಷ್ಯನ್ ಚಾಂಪಿಯನ್ ಆಗಿರುವ 33 ವರ್ಷದ ಭಗತ್‌ 36 ನಿಮಿಷಗಳ ಕಾಲ ನಡೆದ ‘ಪುರುಷರ ಸಿಂಗಲ್ಸ್ ಎಸ್‌ಎಲ್ 3’ ಸೆಮಿಫೈನಲ್‌ನಲ್ಲಿ ಫುಜಿಹರಾ ವಿರುದ್ಧ 21-11, 21-16 ಅಂತರದಲ್ಲಿ ಜಯ ಸಾಧಿಸಿದ್ದಾರೆ.

ತನ್ನ 5 ನೇ ವಯಸ್ಸಿನಲ್ಲಿ ಪೋಲಿಯೋಗೆ ತುತ್ತಾಗಿ ಎಡಗಾಲಿನ ಸ್ವಾಧೀನ ಕಳೆದುಕೊಂಡಿದ್ದ ಭಗತ್, ನಾಲ್ಕು ವಿಶ್ವ ಚಾಂಪಿಯನ್‌ಶಿಪ್ ಚಿನ್ನ ಸೇರಿದಂತೆ ಒಟ್ಟು 45 ಅಂತರಾಷ್ಟ್ರೀಯ ಪದಕಗಳನ್ನು ಗೆದ್ದಿದ್ದಾರೆ.

ಈ ಮಧ್ಯೆ, ಶಟ್ಲರ್‌ ಮನೋಜ್ ಸರ್ಕಾರ್ ಶನಿವಾರ ನಡೆದ ‘ಪುರುಷರ ಸಿಂಗಲ್ಸ್ ಎಸ್‌ಎಲ್3’ ಸೆಮಿಫೈನಲ್ ಪಂದ್ಯದಲ್ಲಿ ನೇರ ಸೆಟ್ ಗಳಲ್ಲಿ ಸೋತಿದ್ದಾರೆ. ಅವರು ಕಂಚಿನ ಪದಕಕ್ಕಾಗಿ ಇಂದು ಮತ್ತೆ ಆಡಬೇಕಿದೆ.

ಟೋಕಿಯೊ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತ ತಂಡ ಇದುವರೆಗೂ 3 ಚಿನ್ನ, 7 ಬೆಳ್ಳಿ ಮತ್ತು 5 ಕಂಚಿನ ಪದಕಗಳು ಸೇರಿ ಒಟ್ಟು 15 ಪದಕಗಳನ್ನು ಗೆದ್ದಿದೆ.

ಇದನ್ನೂ ಓದಿ: ಚಿನ್ನ ಗೆದ್ದ ಶೂಟರ್ ಅವನಿ ಲೇಖರಾ: ಪ್ಯಾರಾಲಿಂಪಿಕ್ಸ್‌ನ ಮೊದಲ ಭಾರತೀಯ ಮಹಿಳೆಯೆಂಬ ಹೆಗ್ಗಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...