Homeಕರ್ನಾಟಕಮಾಂದಲ್‌ಪಟ್ಟಿಯ ಗುಡ್ಡ ವಿಸ್ತಾರದಲ್ಲಿ ಅರಳಿದ ನೀಲಿ ಸಂತಸ! ಕಣ್ಮನ ಸೆಳೆದ ನೀಲಕುರಿಂಜಿಯ ಸೋದರ ಸಂಬಂಧಿ

ಮಾಂದಲ್‌ಪಟ್ಟಿಯ ಗುಡ್ಡ ವಿಸ್ತಾರದಲ್ಲಿ ಅರಳಿದ ನೀಲಿ ಸಂತಸ! ಕಣ್ಮನ ಸೆಳೆದ ನೀಲಕುರಿಂಜಿಯ ಸೋದರ ಸಂಬಂಧಿ

- Advertisement -
- Advertisement -

ಕರ್ನಾಟಕ ರಾಜ್ಯದ ಪಶ್ಚಿಮ ಘಟ್ಟದ ಅರಣ್ಯ ಪ್ರದೇಶದಲ್ಲಿ 7000ಕ್ಕೂ ಮಿಗಿಲಾದ ಹೂ ಬಿಡುವ ಸಸ್ಯ ಪ್ರಬೇಧಗಳಿವೆ. ಆದರೆ ಸಮುದ್ರ ಮಟ್ಟದಿಂದ 1700 ಮೀಟರ್‌ಗಿಂತಲೂ ಹೆಚ್ಚಿನ ಎತ್ತರದ ಪ್ರದೇಶಗಳಲ್ಲಿರುವ ಶೋಲಾ ಅರಣ್ಯ ಪ್ರದೇಶಗಳ ಪರ್ವತ ಶ್ರೇಣಿಗಳಲ್ಲಿ ಬೆಳೆಯುವ ಹೂ ಬಿಡುವ ಪೊದೆಯಂತಹ ಸಸ್ಯಜಾತಿಯೇ ಕುರಿಂಜಿ ಹೂ ಅಥವಾ ನೀಲಕುರಿಂಜಿ ಹೂ.

ಏನಿದು ನೀಲಕುರಿಂಜಿ?

ವೈಜ್ಞಾನಿಕವಾಗಿ ಗುರುತಿಸಲ್ಪಟ್ಟಿರುವ ಹಲವಾರು ಸಸ್ಯ ಪ್ರಬೇಧಗಳಲ್ಲಿ ಸ್ಟ್ರೊಬಿಲಾಂತಸ್ (Strobilanthes) ಅನ್ನುವ ಸಸ್ಯಕುಲಕ್ಕೆ ಸೇರಿದ ಅಕ್ಯಾಂತೇಸಿಯೇ (Acanthaceae) ಕುಟುಂಬದ ಒಂದು ಸದಸ್ಯ ಈ ನೀಲಕುರಿಂಜಿ. ಸ್ಟ್ರೊಬಿಲಾಂತಸ್ ಸಸ್ಯಕುಲದಲ್ಲಿ 250ಕ್ಕೂ ಹೆಚ್ಚಿನ ಹೂವುಗಳು ಅರಳುತ್ತವೆ. ಕರ್ನಾಟಕದ ಕೊಡಗು ಜಿಲ್ಲೆಯ ಪುಷ್ಪಗಿರಿ ಪರ್ವತಶ್ರೇಣಿ, ಬ್ರಹ್ಮಗಿರಿ ಪರ್ವತಶ್ರೇಣಿ, ಚಿಕ್ಕಮಗಳೂರಿನ ಬಾಬಾಬುಡನ್‌ಗಿರಿ ಪರ್ವತಶ್ರೇಣಿ ಮತ್ತು ಬಳ್ಳಾರಿಯ ಸಂಡೂರಿನ ಬೆಟ್ಟಗಳಲ್ಲಿ ಕೂಡಾ ಈ ಹೂವುಗಳು ಅರಳುತ್ತವೆ.

ನೀಲಕುರಿಂಜಿಯ ವಿಶೇಷ ಏನು?

ಸ್ಟ್ರೊಬಿಲಾಂತಸ್ ಸಸ್ಯಕುಲದ ಹೂವುಗಳಲ್ಲಿ ಕೆಲವು ಹೂವುಗಳು ಪ್ರತೀ ವರ್ಷ ಅರಳಿದರೆ ಕೆಲವು 16 ವರ್ಷಗಳಿಗೊಮ್ಮೆ ಅರಳುತ್ತವೆ. ಹಾಗೇ 12 ವರ್ಷಗಳಿಗೊಮ್ಮೆ ಅರಳುವ ಹೂವೇ ನೀಲಕುರಿಂಜಿ ಹೂವು. ನೀಲಕುರಿಂಜಿ ಎನ್ನುವುದು ಮೂಲದಲ್ಲಿ ತಮಿಳಿನದಾಗಿದ್ದು ನೀಲಿ ಬಣ್ಣದಿಂದ ತುಂಬಿದ ಪರ್ವತ ಎಂದರ್ಥ. ವೈಜ್ಞಾನಿಕವಾಗಿ ಸ್ಟ್ರೊಬಿಲಾಂತಸ್ ಕುಂತಿಯಾನ (Strobilanthes kunthiana) ಎಂಬ ಹೆಸರಿನ ಈ ಹೂವು ಆ ಕುಲದಲ್ಲೇ ಅತೀ ಹೆಚ್ಚು ಪ್ರಮಾಣದಲ್ಲಿ ಪರ್ವತಶ್ರೇಣಿಯ ತುಂಬೆಲ್ಲಾ ಹಬ್ಬಿ ಅರಳುವ ಹೂವಾಗಿದೆ. ಈ ಹೂವು ಅರಳಿರುವ ಕಾಲದಲ್ಲಿ ಇಡೀ ಪರ್ವತವೇ ನೀಲಿ ಬಣ್ಣದಿಂದ ತುಂಬಿ ನೀಲಕುರಿಂಜಿಯೆ ಹೆಸರಿನ ಅರ್ಥವನ್ನು ಸಾರುತ್ತದೆ ಮಾತ್ರವಲ್ಲ ನೋಡುಗರ ಕಣ್ಮನ ಸೆಳೆಯುತ್ತದೆ.

ಈ ನೀಲಕುರಿಂಜಿ ಹೂವುಗಳು ಪ್ರತೀ 12 ವರ್ಷಗಳಿಗೊಮ್ಮೆ ಅರಳುತ್ತದೆ. ಈಗಾಗಲೇ ದಾಖಲಿಸಲ್ಪಟ್ಟಿರುವ ಮಾಹಿತಿಯಂತೆ ಈ ಹೂವು ಮೊದಲ ಬಾರಿಗೆ 1838ರಲ್ಲಿ ದಾಖಲಾಗಿದ್ದು ನಂತರ 12 ವಷರ್ಗಳ ಅಂತರದಲ್ಲಿ 1850, 1862 1874, 1886, 1898, 1910, 1922, 1934, 1946, 1958, 1970, 1982, 1994, 2006 ಮತ್ತು ಕೊನೆಯದಾಗಿ 2018ರಲ್ಲಿ ಅರಳಿರುವುದು ದಾಖಲಾಗಿರುತ್ತದೆ. 2018ರಲ್ಲಿ ಕೊಡಗಿನ ಪುಷ್ಪಗಿರಿ ಪರ್ವತ ಶ್ರೇಣಿಯ ತುದಿಯಲ್ಲಿ ಈ ಹೂವುಗಳು ಅರಳಿರುವುದನ್ನು ಅಲ್ಲಿನ ಅರಣ್ಯಾಧಿಕಾರಿಗಳು ದೃಢೀಕರಿಸಿರುತ್ತಾರೆ. ಮುಂದೆ 2030ಕ್ಕೆ ಅರಳುವುದನ್ನು ನಿರೀಕ್ಷಿಸಲಾಗಿದೆ. ಪುಷ್ಪಗಿರಿ ಅರಣ್ಯ ಪ್ರದೇಶವು ಸಮುದ್ರ ಮಟ್ಟದಿಂದ 1700 ಮೀಟರ್ ಎತ್ತರದಲ್ಲಿರುವುದು ನಾವು ಗಮನಿಸಬೇಕಾದ ವಿಚಾರ.

2021ರಲ್ಲಿ ಕೊಡಗಿನಲ್ಲಿ ಅರಳಿರುವ ಹೂವು ಯಾವುದು?

ಸ್ಟ್ರೊಬಿಲಾಂತಸ್ ಸಸ್ಯಕುಲದಲ್ಲಿ 250ಕ್ಕೂ ಹೆಚ್ಚಿನ ಹೂವುಗಳಿದ್ದು ಅವುಗಳಲ್ಲಿ ಕೊಡಗು ಜಿಲ್ಲೆಯ ಪರ್ವತ ಶ್ರೇಣಿಗಳಲ್ಲಿ ಮೂರು ಜಾತಿಯ ಹೂವುಗಳು ಅರಳುವುದು ದಾಖಲಾಗಿರುತ್ತದೆ. ಅವುಗಳೆಂದರೆ ಸ್ಟ್ರೊಬಿಲಾಂತಸ್ ಕುಂತಿಯಾನ (Strobilanthes kunthiana), ಸ್ಟ್ರೊಬಿಲಾಂತಸ್ ಸಿಸಿಲಿಸ್ (Strobilanthes sessilis) ಮತ್ತು ಸ್ಟ್ರೊಬಿಲಾಂತಸ್ ಕುಸ್ಪಿಡೇಟಸ್ (Strobilanthes cuspidatus). ಇವುಗಳಲ್ಲಿ ಸ್ಟ್ರೊಬಿಲಾಂತಸ್ ಕುಂತಿಯಾನ ಹೊರತುಪಡಿಸಿ ಉಳಿದ 2 ಜಾತಿಯ ಹೂವುಗಳು 4-5-6-7 ವರ್ಷಗಳ ಅಂತರದಲ್ಲಿ ಕೊಡಗು ಜಿಲ್ಲೆಯ ಪರ್ವತಗಳಲ್ಲಿ ಅಥವಾ ಎತ್ತರದ ಗುಡ್ಡಗಳಲ್ಲಿ ಅರಳುವುದನ್ನು ಅಲ್ಲಿನ ಸ್ಥಳೀಯರು ದಾಖಲಿಸಿರುತ್ತಾರೆ. ಸದರಿ 2021ರ ಆಗಸ್ಟ್ ಮಾಹೆಯಲ್ಲಿ ಕೊಡಗಿನ ಅತ್ಯಂತ ಆಕರ್ಷಣೀಯ ಪರ್ವತ ಪ್ರದೇಶವಾದ ಮಾಂದಲ್‌ಪಟ್ಟಿಯಲ್ಲಿ ಮತ್ತು ಪುಷ್ಪಗಿರಿ ಪರ್ವತ ಪ್ರದೇಶದಲ್ಲಿ ಅರಳಿರುವುದು ಸ್ಟ್ರೊಬಿಲಾಂತಸ್ ಸಿಸಿಲಿಸ್ ಜಾತಿಯ ಕುರಿಂಜಿ ಹೂವಾಗಿರುತ್ತದೆ.

ಈ ಹೂವುಗಳನ್ನು ಕಳೆದ ಮೂರು ವರ್ಷಗಳಿಂದ ಕೊಡಗಿನ ಬೇರೆ ಬೇರೆ ಗುಡ್ಡ ಪ್ರದೇಶಗಳಲ್ಲಿ ಅರಳಿರುವುದನ್ನು ನಾನೇ ಕಂಡಿದ್ದೇನೆ. ಕಳೆದ ವರ್ಷ ಕೂಡಾ ಕೊಡಗು ಜಿಲ್ಲೆಯ ಕಾಲೂರಿನಲ್ಲಿ ಮತ್ತು ಪುಷ್ಪಗಿರಿಯಲ್ಲಿ ಈ ಹೂವುಗಳು ಅರಳಿದೆ. ಆದರೆ ಈ ವರ್ಷ ಮಾಂದಲ್‌ಪಟ್ಟಿಯ ಬೆಟ್ಟದ ಪೂರ್ತಿ ಅತೀ ಹೆಚ್ಚಿನ ಪ್ರಮಾಣದಲ್ಲಿ ಅರಳಿರುವುದರಿಂದ ಅತ್ಯಂತ ಹೆಚ್ಚಿನ ಮಟ್ಟದಲ್ಲಿ ಸುದ್ದಿಯಾಗಿದ್ದು ಮಾತ್ರವಲ್ಲದೆ ಪ್ರವಾಸಿಗರನ್ನು ಆಕರ್ಷಿಸುವ ಕಾರಣದಿಂದಲೋ ಅಥವಾ ಮಾಹಿತಿಯ ಕೊರತೆಯಿಂದಲೋ ಸುದ್ದಿ ಮಾಧ್ಯಮಗಳು ಮತ್ತು ವಿಶೇಷವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಜನ ಈ ಹೂವುಗಳನ್ನು ನೀಲಕುರಿಂಜಿ ಎಂದು ಕರೆದರು. ಆದರೆ
ವಾಸ್ತವದಲ್ಲಿ ಕೊಡಗು ಜಿಲ್ಲೆಯ ಅನೇಕ ಗುಡ್ಡಗಳಲ್ಲಿ ಅರಳಿರುವ ಈ ನೀಲಿ ಸುಂದರಿ ಮಾತ್ರ ಸ್ಟ್ರೊಬಿಲಾಂತಸ್ ಸಿಸಿಲಿಸ್!.

ವ್ಯತ್ಯಾಸವೇನು?

ಸ್ಟ್ರೊಬಿಲಾಂತಸ್ ಕುಂತಿಯಾನ ಮತ್ತು ಸ್ಟ್ರೊಬಿಲಾಂತಸ್ ಸಿಸಿಲಿಸ್ ಹೂವುಗಳ ನಡುವೆ ಕಾಣಲು ಅಂತಹ ದೊಡ್ಡ ವ್ಯತ್ಯಾಸವೇನಿರುವುದಿಲ್ಲ. ಎರಡೂ ಪೊದೆಯ ಸಸ್ಯಗಳಾಗಿದ್ದು ಹೂವುಗಳು ಗೊಂಚಲಾಗಿ ಬೆಳೆಯುತ್ತದೆ ಮತ್ತು ಹೂವುಗಳಿಗೆ ಬೇರೆ ಹೂವುಗಳಂತೆ ತೊಟ್ಟುಗಳಿರುವುದಿಲ್ಲ. ಹೂವನ್ನು ನೇರ ಗೊಂಚಲಿನಿಂದಲೇ ಬೇರ್ಪಡಿಸಬೇಕು. ಕನಕಾಂಬರ ಹೂವಿನ ಹಾಗೆ!.

ನೀಲಕುರಿಂಜಿಯ ಹೂವುಗಳ ಕಾಂಡವು ತುಸು ಎತ್ತರಕ್ಕೆ, ನೇರವಾಗಿ ಬೆಳಯುವುದಲ್ಲದೆ ಕಾಂಡವು ಗಟ್ಟಿಯಾಗಿರುತ್ತದೆ. ಎಲೆಗಳು ತುಸು ಉದ್ದವಾಗಿರುತ್ತದೆ. ಹೂವಿನ ಮುಂಭಾಗ ತುಸು ಹೆಚ್ಚೇ ಅಗಲವಾಗಿರುತ್ತದೆ. ಆದರೆ ಸ್ಟ್ರೊಬಿಲಾಂತಸ್ ಸಿಸಿಲಿಸ್ ಹೂವುಗಳು ಗಂಟೆಯಾಕಾರದಲ್ಲಿ ಅರಳಿ ಹೂವಿನ ದಳದ ಅಂಚುಗಳು ಸ್ವಲ್ಪವೇ ಸ್ವಲ್ಪ ಹಿಮ್ಮುಖವಾಗಿ ಬಾಗಿರುತ್ತದೆ. ಎರಡೂ ಹೂವುಗಳನ್ನು ಒಟ್ಟಿಗೇ ನೋಡುವ ಕಾಲ ಬಹುಶಃ ಸಿಗಲಾರದೇನೋ ಅಥವಾ ಮುಂಬರುವ ದಿನಗಳಲ್ಲಿ ಒಟ್ಟಿಗೇ ಒಂದೇ ವರ್ಷ ಅರಳುವುದೇನೋ? ಕಾದು ನೋಡಬೇಕಿದೆ.

ವಿನೋದ್ ಕುಮಾರ್ ವಿ ಕೆ

ವಿನೋದ್ ಕುಮಾರ್ ವಿ ಕೆ
ವಿನೋದ್ ಹುಟ್ಟಿದ್ದು ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ. 2011ರಿಂದ ಛಾಯಾಗ್ರಹಣದಲ್ಲಿ ಆಸಕ್ತಿ. ಹಕ್ಕಿ, ಚಿಟ್ಟೆ, ಕೀಟಗಳಿಂದ ಪ್ರಾರಂಭವಾಗಿ ಟ್ರೆಕ್ಕಿಂಗ್ ಹವ್ಯಾಸವಾಗಿ ಬೆಳೆದಿದೆ. ಅರಣ್ಯ ಇಲಾಖೆಯಲ್ಲಿ ಕಚೇರಿ ಸಹಾಯಕನಾಗಿ ವೃತ್ತಿ. ಸದ್ಯಕ್ಕೆ ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ವಾಸವಾಗಿದ್ದಾರೆ.


ಇದನ್ನೂ ಓದಿ: ಗೌರಿ ಕಾರ್ನರ್: ಸೌಹಾರ್ದ ಗಿರಿಯಲ್ಲಿ ನಿಸರ್ಗದ ’ನೀಲಿಗ್ಯಾನ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...