Homeಚಳವಳಿಸಂಕಷ್ಟಕ್ಕಾಗದ ಸರ್ಕಾರ: ತಿಪಟೂರಿನಲ್ಲಿ ಬೀದಿಗೆ ಬಿದ್ದ ಅಲೆಮಾರಿ ಕುಟುಂಬಗಳು

ಸಂಕಷ್ಟಕ್ಕಾಗದ ಸರ್ಕಾರ: ತಿಪಟೂರಿನಲ್ಲಿ ಬೀದಿಗೆ ಬಿದ್ದ ಅಲೆಮಾರಿ ಕುಟುಂಬಗಳು

- Advertisement -
- Advertisement -

ಹಸಿವಿನಿಂದ ಕಂಗಾಲಾಗಿರುವ ಮಕ್ಕಳು, ಬೆಂಬಿಡದೇ ಸುರಿಯುತ್ತಿರುವ ಮಳೆ, ನಿದ್ರೆಯಿಲ್ಲದ ರಾತ್ರಿಗಳು.. ಇಂತಹದ್ದೊಂದು ಪರಿಸ್ಥಿತಿಯನ್ನು ನಾವು ಕಲ್ಪಿಸಿಕೊಳ್ಳಲು ಸಾಧ್ಯವೇ…?

ಕಳೆದ ಹದಿನೈದು ವರ್ಷಗಳ ಹಿಂದೆಯೇ ಉತ್ತರ ಕರ್ನಾಟಕದ ವಿವಿಧ ಭಾಗಗಳಿಂದ ವಲಸೆ ಬಂದು ತಿಪಟೂರಿನಲ್ಲಿ ಸಣ್ಣ ಪುಟ್ಟ ವ್ಯಾಪಾರ ಮಾಡುತ್ತಾ ಜೀವನ ಕಟ್ಟಿಕೊಂಡಿದ್ದ 28 ಕುಟುಂಬಗಳು ಇಂದು ಬೀದಿಗೆ ಬಿದ್ದಿವೆ. ಸರ್ಕಾರಿ ಜಮೀನಿನಲ್ಲಿ ಟೆಂಟ್ ಹಾಕಿಕೊಳ್ಳುವಂತಿಲ್ಲ ಎಂದು ಪೊಲೀಸರು ರಾತ್ರೋರಾತ್ರಿ ಮಕ್ಕಳು, ಬಸರಿ ಹೆಂಗಸರು ಎಂಬುದನ್ನು ನೋಡದೇ ಎತ್ತಂಗಡಿ ಮಾಡಿಸಿದ್ದಾರೆ.

ಹದಿನೆಂಟು ಮುಸ್ಲಿಂ ಸಮುದಾಯ ಹಾಗೂ ಹತ್ತು ಸುಡುಗಾಡು ಸಿದ್ಧರ ಸಮುದಾಯದ ಕುಟುಂಬಗಳು ತಿಪಟೂರಿನ ನಗರ ಸಭೆಯ ಸರ್ಕಾರಿ ಜಾಗದಲ್ಲಿ ಟೆಂಟ್ ಹಾಕಿಕೊಂಡು ಜೀವನ ನಡೆಸುತ್ತಿದ್ದರು. ಈ ಅಲೆಮಾರಿ ಸಮುದಾಯಗಳು ಒಂದು ಕಡೆ ನೆಲೆನಿಂತು, ವ್ಯಾಪಾರ ಮಾಡುತ್ತಿದ್ದದ್ದು ಮಾತ್ರವಲ್ಲದೇ ಮಕ್ಕಳಿಗೆ ಶಿಕ್ಷಣ ಕೊಡಿಸುತ್ತಿದ್ದರು. ಈ ವರ್ಷದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಈ ಸಮುದಾಯದ ಯುವತಿ ಇಡೀ ತಾಲ್ಲೂಕಿನಲ್ಲಿಯೇ ಅತಿ ಹೆಚ್ಚು ಅಂಕ ಪಡೆದಿದ್ದಾಳೆ.

ವಿಡಿಯೋ ನೋಡಿ

ನಾನು ತುಂಬಾ ಚೆನ್ನಾಗಿ ಓದಬೇಕು. ಸರ್ಕಾರಿ ಅಧಿಕಾರಿಯಾಗಿ ಕೆಲಸ ಪಡೆದುಕೊಳ್ಳಬೇಕು ಎಂಬ ಕನಸಿದೆ ಎನ್ನುವ ಯುವತಿ ತನ್ನ ಈಗಿನ ತನ್ನ ದುಸ್ಥಿತಿ ನೆನೆದು ಬೇಸರಿಸಿಕೊಳ್ಳುತ್ತಾಳೆ..

ಕುಟುಂಬಗಳಿದ್ದ ಜಾಗದಿಂದ ಎತ್ತಂಗಡಿ ಮಾಡಿಸಿರುವ ಪೊಲೀಸರು ಅವರು ಬೇರೆ ಕಡೆ ತಾತ್ಕಾಲಿಕ ಟೆಂಟ್ ಹಾಕಿಕೊಂಡರೆ ಅಲ್ಲಿಂದಲೂ ಎತ್ತಂಗಡಿ ಮಾಡಿಸುತ್ತಿದ್ದು ಲಾಠಿಚಾರ್ಜ್ ಮಾಡುವುದಾಗಿ ಬೆದರಿಕೆಯನ್ನು ಹಾಕಿದ್ದಾರೆ ಎನ್ನಲಾಗುತ್ತಿದೆ. ಪ್ರಸ್ತುತ ತಿಪಟೂರಿನಿಂದ ಐದಾರು ಕಿ.ಮೀ ಅಂತರದಲ್ಲಿ ತಾತ್ಕಾಲಿಕ ಟೆಂಟ್ ಹಾಕಿಕೊಂಡು ಜೀವನ ಸಾಗಿಸುತ್ತಿರುವ ಕುಟುಂಬಗಳು ಭಯದಿಂದಲೇ ದಿನ ಕಳೆಯುವಂತಾಗಿದೆ. ಅಲ್ಲಿ ಅವರಿಗೆ ಕುಡಿಯುವ ನೀರು, ಶೌಚಾಲಯ ಸೇರಿ ಯಾವುದೇ ವ್ಯವಸ್ಥೆಯಿಲ್ಲ.

ಈ ಬಗ್ಗೆ ಪ್ರತಿಕ್ರಿಯಿಸಿರುವ ತಹಶೀಲ್ದಾರರು ಆ ಎಲ್ಲಾ ಕುಟುಂಬಗಳಿಗೆ ವಸತಿ ವ್ಯವಸ್ಥೆ ಮಾಡಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ತಿಳಿಸಿದ್ದೇವೆ ಎಂದು ತಿಳಿಸಿದ್ದಾರೆ.

ಈ ಕುಟುಂಬಗಳಿಗೆ ಸರ್ಕಾರಿ ಜಾಗದಲ್ಲಿಯೇ ಟೆಂಟ್ ಹಾಕಿಕೊಳ್ಳಲು ವ್ಯವಸ್ಥೆ ಮಾಡಿಕೊಡಬೇಕು. ಸರ್ಕಾರವೇ ಈ ಕುಟುಂಬಗಳಿಗೆ ಮನೆ ನೀಡಬೇಕು ಎಂದು ಭೂಮಿ ಮತ್ತು ವಸತಿ ವಂಚಿತರ ಹೋರಾಟ ಸಮಿತಿ ಆಗ್ರಹಿಸಿದೆ. ಸೂರು ಕಳೆದುಕೊಂಡವರ ನಿಯೋಗ ತುಮಕೂರು ಜಿಲ್ಲಾಧಿಕಾರಿಯವರನ್ನು ಭೇಟಿ ಮಾಡಿ ವಸತಿ ವ್ಯವಸ್ಥೆ ಮಾಡಬೇಕು ಎಂದು ಮನವಿ ಮಾಡಿದೆ.

ಈ ಕುಟುಂಬಗಳಿಗೆ ಸೂರಿನ ವ್ಯವಸ್ಥೆ ಮಾಡಬೇಕು ಇಲ್ಲದಿದ್ದಲ್ಲಿ ಹೋರಾಟ ಆರಂಭಿಸಲಾಗುವುದು ಎಂದಿರುವ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಕುಮಾರ್ ಸಮತಳ ಅವರು ಸರ್ಕಾರದ ಜಾಗದಲ್ಲಿಯೇ ಇವರಿಗೆ ವಸತಿ ಸೌಲಭ್ಯ ಕಲ್ಪಿಸಬೇಕು ಎಂದು ಆಗ್ರಹಿಸಿದ್ದಾರೆ.

ಇದು ಬರಿ ತಿಪಟೂರಿನ ಕಥೆಯಲ್ಲ… ಇದೇ ರೀತಿ ರಾಜ್ಯದ ನಾನಾ ಭಾಗಗಳಲ್ಲಿ ಅಲೆಮಾರಿ ಕುಟುಂಬಗಳು ಸ್ವಂತ ಸೂರಿಲ್ಲದೇ, ಮೂಲಭೂತ ವ್ಯವಸ್ಥೆಗಳಿಲ್ಲದೇ ಬದುಕುತ್ತಿದ್ದಾರೆ. ಕುಡಿಯುವ ನೀರಿಗೂ ಹೋರಾಟ ಮಾಡುವಂತಹ ಪರಿಸ್ಥಿತಿಯಲ್ಲಿದ್ದಾರೆ. ಈ ಎಲ್ಲಾ ಕುಟುಂಬಗಳ ಬದುಕು ಹಸನಾಗುವುದು ಯಾವಾಗಾ…?


ಇದನ್ನೂ ಓದಿ: ಏಕಾಏಕಿ ಒಕ್ಕಲೆಬ್ಬಿಸುವಿಕೆ: ಮನೆ ಕಳೆದುಕೊಂಡು ದಾರಿ ಕಾಣದೆ ಪರಿತಪಿಸುತ್ತಿರುವ 86 ಕುಟುಂಬಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸಾರ್ವಜನಿಕ ಸೇವಕರ ಈ ಕ್ರೌರ್ಯ ಕಂಡನಾರ್ಹ.
    ಈ ೨೮ ಕುಟುಂಬಗಳಿಗೆ ಸರ್ಕಾರ ಈ ಕೂಡಲೇ ತಾತ್ಕಾಲಿಕ ವಸತಿಯನ್ನು ಕಲ್ಪಿಸಬೇಕು.ಆನಂತರ ಇವರಿಗೆ ಆಶ್ರಯ ಯೋಜನೆಯ ಅಡಿಯಲ್ಲಿ ನಿವೇಶನ ಮತ್ತು ಮನೆಗಳನ್ನು ಕೊಡಬೇಕು.

LEAVE A REPLY

Please enter your comment!
Please enter your name here

- Advertisment -

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...

ಪಶ್ಚಿಮ ಬಂಗಾಳ| ದುರ್ಗಾಪೂಜೆ ಸಂದರ್ಭದಲ್ಲಿ ಮಾಂಸ ಮಾರಾಟ ನಿಷೇಧ ಆದೇಶ ಹೊರಡಿಸಿದ ವಿಎಚ್‌ಪಿ; ಬಲಪಂಥೀಯ ಸಂಘನೆಯ ಅಧಿಕಾರ ಪ್ರಶ್ನಿಸಿದ ವಿಪಕ್ಷಗಳು

ಪಶ್ಚಿಮ ಬಂಗಾಳದಲ್ಲಿ ದುರ್ಗಾಪೂಜೆ ಆಚರಣೆಗೆ ಸಂಬಂಧಿಸಿದಂತೆ ಬಲಪಂಥೀಯ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಹೊರಡಿಸಿರುವ ಮಾರ್ಗಸೂಚಿಯು ರಾಜಕೀಯ ಚರ್ಚೆಗೆ ಗ್ರಾಸವಾಗಿದೆ. ಪೂಜಾ ಮಂಟಪಗಳ ಸುತ್ತಮುತ್ತ ಸಸ್ಯಾಹಾರಿ ಅಲ್ಲದ ಮಾಂಸ ಮತ್ತು ಮೀನು...