Homeಕರ್ನಾಟಕಲಸಿಕೆ ಹೆಸರಲ್ಲಿ ಖಾಸಗಿ ಆಸ್ಪತ್ರೆಗಳ ಪಾಲಾಗುತ್ತಿರುವ ಕಟ್ಟಡ ಕಾರ್ಮಿಕರ ನಿಧಿ - AICCTU ಆಕ್ರೋಶ

ಲಸಿಕೆ ಹೆಸರಲ್ಲಿ ಖಾಸಗಿ ಆಸ್ಪತ್ರೆಗಳ ಪಾಲಾಗುತ್ತಿರುವ ಕಟ್ಟಡ ಕಾರ್ಮಿಕರ ನಿಧಿ – AICCTU ಆಕ್ರೋಶ

- Advertisement -
- Advertisement -

ದೇಶದಾದ್ಯಂತ ಎಲ್ಲರಿಗೂ ಉಚಿತ ಕೊರೊನಾ ಲಸಿಕೆ ನೀಡಬೇಕು ಎಂದು ಸುಪ್ರೀಂಕೋರ್ಟ್ ಆದೇಶ ನೀಡಿದ ನಂತರ ದೇಶದಾದ್ಯಂತ ಎಲ್ಲರಿಗೂ ಉಚಿತ ಲಸಿಕೆ ನೀಡಲಾಗುತ್ತಿದೆ. ಆದರೆ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ, ಅವರ ಶ್ರಮದಿಂದಾಗಿ ಶೇಖರಣೆಯಾದ ಕಲ್ಯಾಣ ನಿಧಿಯಿಂದ ಲಸಿಕೆ ನೀಡುವುದಕ್ಕೆ ರಾಜ್ಯ ಸರ್ಕಾರ ಹೊರಟಿದ್ದು, ಒಂದು ಡೋಸ್‌ಗೆ ರೂ.789 ಯಂತೆ ಒಟ್ಟು 15.60 ಕೋಟಿ ರೂ.ಗಳನ್ನು ಖಾಸಗಿ ಆಸ್ಪತ್ರೆ ಮತ್ತು ನರ್ಸಿಂಗ್‌ ಹೋಮ್‌ಗಳಿಗೆ ಬಿಡುಗಡೆ ಮಾಡಿದೆ ಎಂದು ವರದಿಯಾಗಿದೆ.

ಕಾರ್ಮಿಕರ ಸುರಕ್ಷತೆ, ಕಲ್ಯಾಣ ಮತ್ತು ಸೇವೆಗಾಗಿ, “ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು (ಉದ್ಯೋಗ ಮತ್ತು ಸೇವಾ ನಿಯಮಗಳ ನಿಯಂತ್ರಣ) ಕಾಯಿದೆ-1996” ರ ಅಡಿಯಲ್ಲಿ “ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ”ಯನ್ನು ಸ್ಥಾಪಿಸಲಾಗಿದೆ. “ಮಂಡಳಿ ಇರುವುದು ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಉದ್ಯೋಗ ಮತ್ತು ಸೇವೆಯ ಪರಿಸ್ಥಿತಿಗಳನ್ನು ನಿಯಂತ್ರಿಸಲು ಮತ್ತು ಅವರ ಸುರಕ್ಷತೆ, ಆರೋಗ್ಯ ಮತ್ತು ಕಲ್ಯಾಣ ಕ್ರಮಗಳನ್ನು ಜಾರಿಗೊಳಿಸುವುದಕ್ಕಾಗಿ” ಎಂದು AICCTU ಹೇಳಿದ್ದು, ಸರ್ಕಾರದ ಕಾರ್ಯಾದೇಶ ದಿಗ್ಬ್ರಮೆ ಉಂಟುಮಾಡಿದೆ ಎಂದು ಅದು ಹೇಳಿದೆ.

ಇದನ್ನೂ ಓದಿ: ಹೆಣ್ಣು ಮಕ್ಕಳ ಆಕ್ರಂದನ ಕೇಳುತ್ತಿಲ್ಲವೇ? ದೆಹಲಿಯ ದಲಿತ ಬಾಲಕಿ ಮೇಲಿನ ಅತ್ಯಾಚಾರ ಖಂಡಿಸಿ ಪ್ರತಿಭಟನೆ

ಕಲ್ಯಾಣ ಮಂಡಳಿಯಲ್ಲಿ ನೋಂದಾಯಿತ ಕಾರ್ಮಿಕರೆ ಸುಮಾರು 30 ಲಕ್ಷ ಜನರಿದ್ದಾರೆ. ಆದರೆ ಪ್ರಸ್ತುತ ಸರ್ಕಾರ ಕೇವಲ 2 ಲಕ್ಷ ಡೋಸ್‌ಗಳಿಗೆ ಕಾರ್ಮಿಕರ ಖಾಸಗಿ ಆಸ್ಪತ್ರಗೆ ಬಿಡುಗಡೆ ಮಾಡಲಾಗಿದೆ.

ಕಾರ್ಮಿಕ ಸಂಘಟನೆ AICCTU ಯ ಪದಾದಿಕಾರಿಯೊಬ್ಬರು ನಾನುಗೌರಿ.ಕಾಂ ಜೊತೆ ಮಾತನಾಡಿ, “ಕಟ್ಟಡ ಮತ್ತು ನಿರ್ಮಾಣ ಕ್ಷೇತ್ರ ಕಾರ್ಮಿಕರಲ್ಲಿ 60% ಜನರು ಈಗಾಗಲೆ ಲಸಿಕೆಯನ್ನು ಪಡೆದುಕೊಂಡಿದ್ದಾರೆ. ಹೊರ ರಾಜ್ಯದಿಂದ ಬರುವ ವಲಸೆ ಕಾರ್ಮಿಕರು ಕೂಡಾ ಲಸಿಕೆ ಪಡೆದೇ ರಾಜ್ಯ ಪ್ರವೇಶಿಸುತ್ತಾರೆ. ಲಾಕ್‌ಡೌನ್‌ ಸಮಯದಲ್ಲಿ ಕೆಲಸವಿಲ್ಲದೆ ಸಂಕಷ್ಟದಲ್ಲಿದ್ದ ಕಾರ್ಮಿಕರಿಗೆ ನೇರವಾಗಲು ರಾಜ್ಯಕ್ಕೆ ವಿನಂತಿಸಿದಾಗ ಅದಕ್ಕೆ ಸರ್ಕಾರ ಸ್ಪಂದಿಸಿರಲಿಲ್ಲ. ಈಗ, ಕಾರ್ಮಿಕರ ನಿಧಿಯಿಂದ 400 ಆಸ್ಪತ್ರೆಗಳಿಗೆ ಹಣ ಬಿಡುಗಡೆ ಮಾಡಿದೆ. ಸರ್ಕಾರದ ಈ ನಡೆ ಖಾಸಗಿ ಆಸ್ಪತ್ರೆಗಳ ಅವರ ಹಿತ ಕಾಯಲು ಬೇಕಾಗಿಯೆ ಹೊರತು ಕಾರ್ಮಿಕರ ಹಿತ ಕಾಯಲು ಅಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಕಾರ್ಮಿಕರ ಅನುಕೂಲಕ್ಕಾಗಿ ಮೀಸಲಾದ ಹಣವನ್ನು ನೇರವಾಗಿ ಆ ಕಾರ್ಮಿಕರ ಖಾತೆಗೆ ಜಮಾ ಮಾಡಬೇಕಾಗುತ್ತದೆ. ಅವರ ಹೆಸರಲ್ಲಿ ಕಾರ್ಪೋರೇಟ್‌ ಆಸ್ಪತ್ರೆಗಳ ಖಾತೆಗೆ ಜಮಾ ಮಾಡಲು ಹೊರಟಿರುವುದು ಅತ್ಯಂತ ಖಂಡನೀಯ. ಸದರಿ ಕಾರ್ಯಾದೇಶ ಹೊರಡಿಸುವುದಕ್ಕಿಂತ ಮುಂಚೆ ಕಾರ್ಮಿಕರನ್ನು ಅಥವಾ ಕಾರ್ಮಿಕ ಸಂಘಟನೆಗಳನ್ನು ಸಂಪರ್ಕಿಸಿ ಚರ್ಚೆ ನಡೆಸಬೇಕೆನ್ನುವ ಸಾಮಾನ್ಯ ಜ್ಞಾನ ಸರ್ಕಾರ ಮತ್ತು ಆಡಳಿತ ವಲಯಕ್ಕೆ ಇಲ್ಲದಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಧಿಕ್ಕರಿಸಿದಂತಿದೆ” ಎಂದು AICCTU ಹೇಳಿದೆ.

ಇದನ್ನೂ ಓದಿ: ಸರಕಾರಿ ಜಾಹೀರಾತು 100% ಕಡಿತ: ಸಿಎಎ ಪ್ರತಿಭಟನೆಗಳ ವರದಿ ಮಾಡಿದ್ದಕ್ಕೆ ಬೆಲೆ ತೆರುತ್ತಿದೆಯೇ ವಾರ್ತಾಭಾರತಿ ಕನ್ನಡ ದೈನಿಕ?

“ಆಡಳಿತ ನಡೆಸುತ್ತಿರುವ ಕಾರ್ಪೋರೇಟ್‌ ಗುಲಾಮಿ ಸರ್ಕಾರದ ನೀತಿಯಿಂದಾಗಿ ಕಾರ್ಮಿಕರ ಕಲ್ಯಾಣ ಮಂಡಳಿಯು, ಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಾಗಿರುವ ಹಣವನ್ನು ಖಾಸಗಿ ಆಸ್ಪತ್ರೆ ಮತ್ತು ನರ್ಸಿಂಗ್‌ ಹೋಮ್‌ ಅಸೋಶಿಯೇಷನ್‌ರವರ ಹಿತ ಕಾಪಾಡುವುದಕ್ಕಾಗಿ ದುರುಪಯೋಗ ಪಡಿಸಿಕೊಳ್ಳಲು ಹೊರಟಿರುವುದು ದುರದೃಷ್ಟಕರ ಸಂಗತಿ” ಎಂದು ಅದು ಹೇಳಿದೆ.

“ಕೊರೊನಾ ಎರಡನೇ ಅಲೆಯಲ್ಲಿ ಕಾರ್ಮಿಕರ ಕಾಳಜಿ ವಹಿಸದ ರಾಜ್ಯ ಸರ್ಕಾರ, ಈಗ ಕಾರ್ಮಿಕರ ಕಲ್ಯಾಣಕ್ಕಾಗಿ ಉಳಿತಾಯ ಮಾಡಿದ್ದ ಹಣವನ್ನು ಬೇಜವಾಬ್ದಾರಿಯಿಂದ ಖರ್ಚು ಮಾಡುತ್ತಿದೆ. ತಮ್ಮ ಜವಾಬ್ದಾರಿಯಿಂದ ಕಳಚಿಕೊಂಡು ಈಗ ಖಾಸಗೀ ವಲಯದ ಅಭಿವೃದ್ಧಿಗಾಗಿ ಕೆಲಸ ಮಾಡುತ್ತಿರುವ ಸರ್ಕಾರವನ್ನು ನಾವು ಖಂಡಿಸುತ್ತೇವೆ” ಎಂದು AICCTU ತಿಳಿಸಿದೆ.
ಕಾರ್ಮಿಕ ಸಂಘಟನೆಗಳ ಅಹವಾಲುಗಳನ್ನು ಕೇಳದೆ, ಅಧಿಕಾರವನ್ನು ದುರುಪಯೋಗಪಡಿಸಿಕೊಂಡು, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ನಿಧಿಯನ್ನು ಲೂಟಿ ಮಾಡುವುದಕ್ಕಾಗಿಯೇ ಹೊರಡಿಸಿರುವ ಕಾರ್ಯಾದೇಶವನ್ನು ತಕ್ಷಣವೇ ರದ್ದುಗೊಳಿಸಬೇಕೆಂದು AICCTU ಆಗ್ರಹಿಸಿದ್ದು, “ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿರರಿಗೆ ಉಚಿತವಾಗಿ ಕೋವಿಡ್‌ ಲಸಿಕೆ ನೀಡಬೇಕೆಂದು ಮತ್ತು ಈ ಕಾರ್ಮಿಕರ ಕಲ್ಯಾಣ ನಿಧಿಯನ್ನು ಕಾರ್ಮಿಕರ ಕಲ್ಯಾಣ ಯೋಜನೆಗಳಿಗಾಗಿಯೇ ಉಪಯೋಗಿಸಬೇಕು” ಎಂದು ಅದು ಹೇಳಿದೆ.

ಇದನ್ನೂ ಓದಿ: ಕಾರ್ಮಿಕರ ದುಡಿಯುವ ಅವಧಿಯನ್ನು 10 ಗಂಟೆಗೆ ಏರಿಸಿದ ರಾಜ್ಯ ಸರ್ಕಾರ: ಕಾರ್ಮಿಕರ ಸಂಘಟನೆಗಳ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...