Homeಕರ್ನಾಟಕಲಸಿಕೆ ಹೆಸರಲ್ಲಿ ಖಾಸಗಿ ಆಸ್ಪತ್ರೆಗಳ ಪಾಲಾಗುತ್ತಿರುವ ಕಟ್ಟಡ ಕಾರ್ಮಿಕರ ನಿಧಿ - AICCTU ಆಕ್ರೋಶ

ಲಸಿಕೆ ಹೆಸರಲ್ಲಿ ಖಾಸಗಿ ಆಸ್ಪತ್ರೆಗಳ ಪಾಲಾಗುತ್ತಿರುವ ಕಟ್ಟಡ ಕಾರ್ಮಿಕರ ನಿಧಿ – AICCTU ಆಕ್ರೋಶ

- Advertisement -
- Advertisement -

ದೇಶದಾದ್ಯಂತ ಎಲ್ಲರಿಗೂ ಉಚಿತ ಕೊರೊನಾ ಲಸಿಕೆ ನೀಡಬೇಕು ಎಂದು ಸುಪ್ರೀಂಕೋರ್ಟ್ ಆದೇಶ ನೀಡಿದ ನಂತರ ದೇಶದಾದ್ಯಂತ ಎಲ್ಲರಿಗೂ ಉಚಿತ ಲಸಿಕೆ ನೀಡಲಾಗುತ್ತಿದೆ. ಆದರೆ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ, ಅವರ ಶ್ರಮದಿಂದಾಗಿ ಶೇಖರಣೆಯಾದ ಕಲ್ಯಾಣ ನಿಧಿಯಿಂದ ಲಸಿಕೆ ನೀಡುವುದಕ್ಕೆ ರಾಜ್ಯ ಸರ್ಕಾರ ಹೊರಟಿದ್ದು, ಒಂದು ಡೋಸ್‌ಗೆ ರೂ.789 ಯಂತೆ ಒಟ್ಟು 15.60 ಕೋಟಿ ರೂ.ಗಳನ್ನು ಖಾಸಗಿ ಆಸ್ಪತ್ರೆ ಮತ್ತು ನರ್ಸಿಂಗ್‌ ಹೋಮ್‌ಗಳಿಗೆ ಬಿಡುಗಡೆ ಮಾಡಿದೆ ಎಂದು ವರದಿಯಾಗಿದೆ.

ಕಾರ್ಮಿಕರ ಸುರಕ್ಷತೆ, ಕಲ್ಯಾಣ ಮತ್ತು ಸೇವೆಗಾಗಿ, “ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು (ಉದ್ಯೋಗ ಮತ್ತು ಸೇವಾ ನಿಯಮಗಳ ನಿಯಂತ್ರಣ) ಕಾಯಿದೆ-1996” ರ ಅಡಿಯಲ್ಲಿ “ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ”ಯನ್ನು ಸ್ಥಾಪಿಸಲಾಗಿದೆ. “ಮಂಡಳಿ ಇರುವುದು ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಉದ್ಯೋಗ ಮತ್ತು ಸೇವೆಯ ಪರಿಸ್ಥಿತಿಗಳನ್ನು ನಿಯಂತ್ರಿಸಲು ಮತ್ತು ಅವರ ಸುರಕ್ಷತೆ, ಆರೋಗ್ಯ ಮತ್ತು ಕಲ್ಯಾಣ ಕ್ರಮಗಳನ್ನು ಜಾರಿಗೊಳಿಸುವುದಕ್ಕಾಗಿ” ಎಂದು AICCTU ಹೇಳಿದ್ದು, ಸರ್ಕಾರದ ಕಾರ್ಯಾದೇಶ ದಿಗ್ಬ್ರಮೆ ಉಂಟುಮಾಡಿದೆ ಎಂದು ಅದು ಹೇಳಿದೆ.

ಇದನ್ನೂ ಓದಿ: ಹೆಣ್ಣು ಮಕ್ಕಳ ಆಕ್ರಂದನ ಕೇಳುತ್ತಿಲ್ಲವೇ? ದೆಹಲಿಯ ದಲಿತ ಬಾಲಕಿ ಮೇಲಿನ ಅತ್ಯಾಚಾರ ಖಂಡಿಸಿ ಪ್ರತಿಭಟನೆ

ಕಲ್ಯಾಣ ಮಂಡಳಿಯಲ್ಲಿ ನೋಂದಾಯಿತ ಕಾರ್ಮಿಕರೆ ಸುಮಾರು 30 ಲಕ್ಷ ಜನರಿದ್ದಾರೆ. ಆದರೆ ಪ್ರಸ್ತುತ ಸರ್ಕಾರ ಕೇವಲ 2 ಲಕ್ಷ ಡೋಸ್‌ಗಳಿಗೆ ಕಾರ್ಮಿಕರ ಖಾಸಗಿ ಆಸ್ಪತ್ರಗೆ ಬಿಡುಗಡೆ ಮಾಡಲಾಗಿದೆ.

ಕಾರ್ಮಿಕ ಸಂಘಟನೆ AICCTU ಯ ಪದಾದಿಕಾರಿಯೊಬ್ಬರು ನಾನುಗೌರಿ.ಕಾಂ ಜೊತೆ ಮಾತನಾಡಿ, “ಕಟ್ಟಡ ಮತ್ತು ನಿರ್ಮಾಣ ಕ್ಷೇತ್ರ ಕಾರ್ಮಿಕರಲ್ಲಿ 60% ಜನರು ಈಗಾಗಲೆ ಲಸಿಕೆಯನ್ನು ಪಡೆದುಕೊಂಡಿದ್ದಾರೆ. ಹೊರ ರಾಜ್ಯದಿಂದ ಬರುವ ವಲಸೆ ಕಾರ್ಮಿಕರು ಕೂಡಾ ಲಸಿಕೆ ಪಡೆದೇ ರಾಜ್ಯ ಪ್ರವೇಶಿಸುತ್ತಾರೆ. ಲಾಕ್‌ಡೌನ್‌ ಸಮಯದಲ್ಲಿ ಕೆಲಸವಿಲ್ಲದೆ ಸಂಕಷ್ಟದಲ್ಲಿದ್ದ ಕಾರ್ಮಿಕರಿಗೆ ನೇರವಾಗಲು ರಾಜ್ಯಕ್ಕೆ ವಿನಂತಿಸಿದಾಗ ಅದಕ್ಕೆ ಸರ್ಕಾರ ಸ್ಪಂದಿಸಿರಲಿಲ್ಲ. ಈಗ, ಕಾರ್ಮಿಕರ ನಿಧಿಯಿಂದ 400 ಆಸ್ಪತ್ರೆಗಳಿಗೆ ಹಣ ಬಿಡುಗಡೆ ಮಾಡಿದೆ. ಸರ್ಕಾರದ ಈ ನಡೆ ಖಾಸಗಿ ಆಸ್ಪತ್ರೆಗಳ ಅವರ ಹಿತ ಕಾಯಲು ಬೇಕಾಗಿಯೆ ಹೊರತು ಕಾರ್ಮಿಕರ ಹಿತ ಕಾಯಲು ಅಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಕಾರ್ಮಿಕರ ಅನುಕೂಲಕ್ಕಾಗಿ ಮೀಸಲಾದ ಹಣವನ್ನು ನೇರವಾಗಿ ಆ ಕಾರ್ಮಿಕರ ಖಾತೆಗೆ ಜಮಾ ಮಾಡಬೇಕಾಗುತ್ತದೆ. ಅವರ ಹೆಸರಲ್ಲಿ ಕಾರ್ಪೋರೇಟ್‌ ಆಸ್ಪತ್ರೆಗಳ ಖಾತೆಗೆ ಜಮಾ ಮಾಡಲು ಹೊರಟಿರುವುದು ಅತ್ಯಂತ ಖಂಡನೀಯ. ಸದರಿ ಕಾರ್ಯಾದೇಶ ಹೊರಡಿಸುವುದಕ್ಕಿಂತ ಮುಂಚೆ ಕಾರ್ಮಿಕರನ್ನು ಅಥವಾ ಕಾರ್ಮಿಕ ಸಂಘಟನೆಗಳನ್ನು ಸಂಪರ್ಕಿಸಿ ಚರ್ಚೆ ನಡೆಸಬೇಕೆನ್ನುವ ಸಾಮಾನ್ಯ ಜ್ಞಾನ ಸರ್ಕಾರ ಮತ್ತು ಆಡಳಿತ ವಲಯಕ್ಕೆ ಇಲ್ಲದಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಧಿಕ್ಕರಿಸಿದಂತಿದೆ” ಎಂದು AICCTU ಹೇಳಿದೆ.

ಇದನ್ನೂ ಓದಿ: ಸರಕಾರಿ ಜಾಹೀರಾತು 100% ಕಡಿತ: ಸಿಎಎ ಪ್ರತಿಭಟನೆಗಳ ವರದಿ ಮಾಡಿದ್ದಕ್ಕೆ ಬೆಲೆ ತೆರುತ್ತಿದೆಯೇ ವಾರ್ತಾಭಾರತಿ ಕನ್ನಡ ದೈನಿಕ?

“ಆಡಳಿತ ನಡೆಸುತ್ತಿರುವ ಕಾರ್ಪೋರೇಟ್‌ ಗುಲಾಮಿ ಸರ್ಕಾರದ ನೀತಿಯಿಂದಾಗಿ ಕಾರ್ಮಿಕರ ಕಲ್ಯಾಣ ಮಂಡಳಿಯು, ಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಾಗಿರುವ ಹಣವನ್ನು ಖಾಸಗಿ ಆಸ್ಪತ್ರೆ ಮತ್ತು ನರ್ಸಿಂಗ್‌ ಹೋಮ್‌ ಅಸೋಶಿಯೇಷನ್‌ರವರ ಹಿತ ಕಾಪಾಡುವುದಕ್ಕಾಗಿ ದುರುಪಯೋಗ ಪಡಿಸಿಕೊಳ್ಳಲು ಹೊರಟಿರುವುದು ದುರದೃಷ್ಟಕರ ಸಂಗತಿ” ಎಂದು ಅದು ಹೇಳಿದೆ.

“ಕೊರೊನಾ ಎರಡನೇ ಅಲೆಯಲ್ಲಿ ಕಾರ್ಮಿಕರ ಕಾಳಜಿ ವಹಿಸದ ರಾಜ್ಯ ಸರ್ಕಾರ, ಈಗ ಕಾರ್ಮಿಕರ ಕಲ್ಯಾಣಕ್ಕಾಗಿ ಉಳಿತಾಯ ಮಾಡಿದ್ದ ಹಣವನ್ನು ಬೇಜವಾಬ್ದಾರಿಯಿಂದ ಖರ್ಚು ಮಾಡುತ್ತಿದೆ. ತಮ್ಮ ಜವಾಬ್ದಾರಿಯಿಂದ ಕಳಚಿಕೊಂಡು ಈಗ ಖಾಸಗೀ ವಲಯದ ಅಭಿವೃದ್ಧಿಗಾಗಿ ಕೆಲಸ ಮಾಡುತ್ತಿರುವ ಸರ್ಕಾರವನ್ನು ನಾವು ಖಂಡಿಸುತ್ತೇವೆ” ಎಂದು AICCTU ತಿಳಿಸಿದೆ.
ಕಾರ್ಮಿಕ ಸಂಘಟನೆಗಳ ಅಹವಾಲುಗಳನ್ನು ಕೇಳದೆ, ಅಧಿಕಾರವನ್ನು ದುರುಪಯೋಗಪಡಿಸಿಕೊಂಡು, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ನಿಧಿಯನ್ನು ಲೂಟಿ ಮಾಡುವುದಕ್ಕಾಗಿಯೇ ಹೊರಡಿಸಿರುವ ಕಾರ್ಯಾದೇಶವನ್ನು ತಕ್ಷಣವೇ ರದ್ದುಗೊಳಿಸಬೇಕೆಂದು AICCTU ಆಗ್ರಹಿಸಿದ್ದು, “ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿರರಿಗೆ ಉಚಿತವಾಗಿ ಕೋವಿಡ್‌ ಲಸಿಕೆ ನೀಡಬೇಕೆಂದು ಮತ್ತು ಈ ಕಾರ್ಮಿಕರ ಕಲ್ಯಾಣ ನಿಧಿಯನ್ನು ಕಾರ್ಮಿಕರ ಕಲ್ಯಾಣ ಯೋಜನೆಗಳಿಗಾಗಿಯೇ ಉಪಯೋಗಿಸಬೇಕು” ಎಂದು ಅದು ಹೇಳಿದೆ.

ಇದನ್ನೂ ಓದಿ: ಕಾರ್ಮಿಕರ ದುಡಿಯುವ ಅವಧಿಯನ್ನು 10 ಗಂಟೆಗೆ ಏರಿಸಿದ ರಾಜ್ಯ ಸರ್ಕಾರ: ಕಾರ್ಮಿಕರ ಸಂಘಟನೆಗಳ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...