Homeಕರ್ನಾಟಕNEP ಎಂದರೆ ‘ನಾಗ್ಪುರ ಶಿಕ್ಷಣ ನೀತಿ’ - ಡಿ.ಕೆ. ಶಿವಕುಮಾರ್ ಆಕ್ರೋಶ

NEP ಎಂದರೆ ‘ನಾಗ್ಪುರ ಶಿಕ್ಷಣ ನೀತಿ’ – ಡಿ.ಕೆ. ಶಿವಕುಮಾರ್ ಆಕ್ರೋಶ

- Advertisement -
- Advertisement -

‘ಬಿಜೆಪಿ ಸರ್ಕಾರ ತರಾತುರಿಯಲ್ಲಿ ಜಾರಿಗೆ ತರಲು ಮುಂದಾಗಿರುವ NEP ರಾಷ್ಟ್ರೀಯ ಶಿಕ್ಷಣ ನೀತಿ ಅಲ್ಲ, ಅದು ನಾಗ್ಪುರ ಶಿಕ್ಷಣ ನೀತಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಂಸತ್ತಿನಲ್ಲಿ ಚರ್ಚೆ ಆಗದೇ ಇರುವ ನೀತಿಯನ್ನು ರಾಜ್ಯದಲ್ಲಿ ತರಾತುರಿಯಲ್ಲಿ ಜಾರಿಗೆ ತರಲು ಹೊರಟಿರುವುದರ ವಿರುದ್ಧ ಕಾಂಗ್ರೆಸ್ ಪಕ್ಷ ಹೋರಾಟ ಮಾಡಲಿದೆ. ನೀವು ಏನೇ ತಿಪ್ಪರಲಾಗ ಹಾಕಿದರೂ ವಿಧಾನಮಂಡಲ ಅಧಿವೇಶನದಲ್ಲಿ ಚರ್ಚೆಯಾಗದೇ ಇದನ್ನು ಜಾರಿಗೊಳಿಸಲು ಅವಕಾಶ ನೀಡುವುದಿಲ್ಲ ಎಂದು ಅವರು ಹೇಳಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ಜಿಲ್ಲಾವಾರು ಮುಖಂಡರ ಸಭೆ ನಡೆಸಿದ ಶಿವಕುಮಾರ್ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ರಾಷ್ಟ್ರೀಯ ಶಿಕ್ಷಣ ನೀತಿ ವಿಚಾರವಾಗಿ ಪಕ್ಷದ ನಿಲುವು ಹಾಗೂ ಪಕ್ಷದ ಸಂಘಟನೆ ಬಗ್ಗೆ ಮಾಹಿತಿ ನೀಡಿದರು. “ರಾಷ್ಟ್ರೀಯ ಶಿಕ್ಷಣ ನೀತಿ ಎಂದರೆ ಅದರ ಬಗ್ಗೆ ರಾಷ್ಟ್ರಾದ್ಯಂತ ವ್ಯಾಪಕ ಚರ್ಚೆ ಆಗಬೇಕು. ಸಂಸತ್ತು, ವಿಧಾನಸಭೆ, ವಿಧಾನ ಪರಿಷತ್ ನಲ್ಲಿ ಚರ್ಚಿಸಬೇಕು. ಆದರೆ ಅದ್ಯಾವುದು ನಡೆದಿಲ್ಲ. ಸದನ ಸಮಿತಿ ರಚಿಸಿ, ರಾಜ್ಯದುದ್ದಗಲಕ್ಕೂ ಜನರ ಜತೆ ಚರ್ಚಿಸಿ, ಅಭಿಪ್ರಾಯ ಪಡೆಯುವವರೆಗೂ ರಾಜ್ಯದಲ್ಲಿ ಇದರ ಜಾರಿಗೆ ನಾವು ಅವಕಾಶ ನೀಡುವುದಿಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸುದ್ದಿಯಲ್ಲಿರಬೇಕು ಎಂಬ ಕಾರಣಕ್ಕೆ ಹುಚ್ಚರು ಕಾಂಗ್ರೆಸ್ ನಾಯಕರ ಬಗ್ಗೆ ಮಾತನಾಡುತ್ತಾರೆ: ಡಿ.ಕೆ. ಶಿವಕುಮಾರ್

“ನಾನು ಕೂಡ ಶಿಕ್ಷಣ ಕ್ಷೇತ್ರದಲ್ಲಿ ಬಹಳ ಆಸಕ್ತಿ ಹೊಂದಿದ್ದು, ವಿದ್ಯಾಸಂಸ್ಥೆಗಳನ್ನು ನಡೆಸುತ್ತಾ ಬಂದಿದ್ದೇನೆ. ಹಲವು ಶಿಕ್ಷಣ ಸಂಸ್ಥೆಗಳಲ್ಲಿ ಟ್ರಸ್ಟಿಯಾಗಿದ್ದೇನೆ. ಈ ನೂತನ ಶಿಕ್ಷಣ ನೀತಿ ಏನು, ಅದರಿಂದ ಆಗುವ ಪ್ರಯೋಜನೆಗಳೇನು? ಎಂಬುದನ್ನು ಅರ್ಥ ಮಾಡಿಕೊಳ್ಳಲು ನನ್ನಿಂದಲೇ ಸಾಧ್ಯವಾಗುತ್ತಿಲ್ಲ. ಇದನ್ನು ಅರ್ಥ ಮಾಡಿಕೊಳ್ಳಲು ಹಲವು ಬಾರಿ ವಿದ್ಯಾರ್ಥಿಗಳು, ಶಿಕ್ಷಕರು, ತಜ್ಞರ ಜತೆ ಚರ್ಚೆ ಮಾಡಿ ಪ್ರಯತ್ನಪಟ್ಟರೂ ಇದರ ಒಳಗುಟ್ಟು ಏನು ಎಂಬುದೇ ಅರ್ಥವಾಗುತ್ತಿಲ್ಲ. ರಾಜ್ಯ ಬಿಜೆಪಿ ಸರ್ಕಾರ ಯಾಕಿಷ್ಟು ಆತುರದಲ್ಲಿ ಇದನ್ನು ಜಾರಿ ತರಲು ಮುಂದಾಗಿದೆಯೋ ತಿಳಿಯುತ್ತಿಲ್ಲ” ಎಂದು ಸಂಶಯ ವ್ಯಕ್ತಪಡಿಸಿದರು.

“ಶಿಕ್ಷಕರು ಇಲ್ಲ, ವಿದ್ಯಾರ್ಥಿಗಳು ಶಾಲೆ ಸೇರಲು ಸಾಧ್ಯವಾಗಿಲ್ಲ. ಇಂಥ ಪರಿಸ್ಥಿತಿಯಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಪಟ್ಟ ಯಾರ ಜತೆಗೂ ಸರ್ಕಾರ ಈ ನೂತನ ಶಿಕ್ಷಣ ನೀತಿ ಬಗ್ಗೆ ಚರ್ಚೆ ಮಾಡಿಲ್ಲ. ಸಂಸತ್ತಿನಿಂದ ಹಿಡಿದು, ವಿಧಾನ ಮಂಡಲದ ಉಭಯ ಸದನಗಳವರೆಗೂ ಎಲ್ಲೂ ಚರ್ಚೆ ಆಗಿಲ್ಲ” ಎಂದು ಅವರು ಹೇಳಿದ್ದಾರೆ.

“ಶಿಕ್ಷಣ ರಾಜ್ಯಗಳಿಗೆ ಸಂಬಂಧಿಸಿದ ವಿಚಾರ. ರಾಷ್ಟ್ರ ಮಟ್ಟದಲ್ಲಿ ನೀತಿ ನಿರೂಪಿಸಬೇಕು ನಿಜ. ಆದರೆ ಅದರ ಬಗ್ಗೆ ಎಲ್ಲ ಕಡೆಗಳಲ್ಲೂ ವ್ಯಾಪಕ ಚರ್ಚೆ ಆಗಬೇಕಲ್ಲವೇ? ಚರ್ಚೆಯೇ ನಡೆಯದೇ, ಏಕಾಏಕಿ ಈ ನೀತಿ ಜಾರಿಗೊಳಿಸುತ್ತೇವೆ ಎಂದು ಶಿಕ್ಷಣ ಸಚಿವರು ಹೇಳಿಕೆ ನೀಡಿರುವುದರಿಂದ ಪೋಷಕರು, ಶಿಕ್ಷಕರು, ವಿದ್ಯಾರ್ಥಿಗಳು ಎಲ್ಲರೂ ಗಾಬರಿ ಬಿದ್ದಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ಈ ನೀತಿ ಬಗ್ಗೆ ವಿಧಾನಸಭೆ, ವಿಧಾನ ಪರಿಷತ್, ಶಿಕ್ಷಣ ಸಂಸ್ಥೆಗಳು, ಪೋಷಕರು, ಶಿಕ್ಷಕರ ಮಟ್ಟದಲ್ಲಿ ಸಂಪೂರ್ಣವಾಗಿ ಚರ್ಚೆಯಾಗುವವರೆಗೂ ಈ ನೀತಿ ಜಾರಿಯನ್ನು ತಡೆ ಹಿಡಿಯಬೇಕು. ಅಲ್ಲಿಯವರೆಗೂ ನಾವು ಕೂಡ ಇದನ್ನು ವಿರೋಧಿಸುತ್ತೇವೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ದೇಶಕ್ಕೆ ಸ್ವಾತಂತ್ರ್ಯ ಬಂದದ್ದೇ ಸಿ.ಟಿ. ರವಿ ಅವರಿಂದ: ಡಿ.ಕೆ. ಶಿವಕುಮಾರ್ ಲೇವಡಿ

“ಇದು ಮಕ್ಕಳು, ರಾಜ್ಯ, ದೇಶದ ಭವಿಷ್ಯದ ವಿಚಾರ. ಈ ನೀತಿಯಲ್ಲಿ ತ್ರಿಭಾಷಾ ಸೂತ್ರ ಪರಿಚಯಿಸುವ ಮೂಲಕ ಹಿಂಬಾಗಿಲಿನಿಂದ ಹಿಂದಿ ಭಾಷೆ ಹೇರಿಕೆಗೆ ಪ್ರಯತ್ನಿಸಲಾಗುತ್ತಿದೆ. ಈ ವಿಚಾರವಾಗಿ ಕನ್ನಡಪರ ಸಂಘಟನೆಗಳು ನನ್ನನ್ನು ಸಂಪರ್ಕಿಸುತ್ತಿದ್ದಾರೆ. ಇದೇ ನೀತಿಯನ್ನು ಬಿಜೆಪಿ ಸರ್ಕಾರ ಅಧಿಕಾರದಲ್ಲಿರುವ ಮಧ್ಯಪ್ರದೇಶ, ಉತ್ತರ ಪ್ರದೇಶ, ಗುಜರಾತ್ ನಲ್ಲಿ ಯಾಕೆ ಜಾರಿತರಲು ಪ್ರಯತ್ನಿಸುತ್ತಿಲ್ಲ. ಕೇರಳ ಹಾಗೂ ತಮಿಳುನಾಡಿನಲ್ಲಿ ಇದರ ವಿಚಾರದಲ್ಲಿ ಮಾತು ಕೂಡ ಆಡುವ ಸ್ಥಿತಿ ಇಲ್ಲ. ಮಾತನಾಡಿದರೆ, ಅಲ್ಲಿನ ಜನ ಬಡಿಯುತ್ತಾರೆ” ಎಂದು ಅವರು ಹೇಳಿದ್ದಾರೆ.

“ಶಿಕ್ಷಣ ಸಚಿವರಿಗೆ ಸಾಮಾನ್ಯ ಪ್ರಜ್ಞೆಯೇ ಇಲ್ಲ ಎಂದು ಕಾಣುತ್ತದೆ. ಮುಖ್ಯಮಂತ್ರಿಗಳು ಅವರದೇ ಜಂಜಾಟದಲ್ಲಿ ಮುಳುಗಿರಬೇಕು! ಹೀಗಾಗಿ ಸಭೆಗಳ ಮೇಲೆ ಸಭೆ ನಡೆಯುತ್ತಿದ್ದರೂ ಈ ಬಗ್ಗೆ ಅವರು ಗಮನ ಹರಿಸಿಲ್ಲ. ಈ ನೀತಿಯಲ್ಲಿ ವಿದ್ಯಾರ್ಥಿ ಪದವಿ ಅವಧಿಯಲ್ಲಿ ಎರಡು ಮೂರು ವಿಷಯಗಳನ್ನು ವಿದ್ಯಾಭ್ಯಾಸ ಮಾಡಬಹುದಂತೆ. ಇದು ಹೇಗೆ ಸಾಧ್ಯ? ಇದಕ್ಕೆ ಮೂಲಭೂತ ಸೌಕರ್ಯ ಕಲ್ಪಿಸಲಾಗಿದೆಯೇ? ಸರ್ಕಾರ ವಿದ್ಯಾರ್ಥಿಗಳಿಗೆ ಕಂಪ್ಯೂಟರ್, ಟ್ಯಾಬ್ ಒದಗಿಸಿದೆಯೇ? ಆನ್ಲೈನ್ ಶಿಕ್ಷಣಕ್ಕೆ ಒತ್ತು ನೀಡಲು ರಾಜ್ಯಾದ್ಯಂತ ಇಂಟರ್ ನೆಟ್ ವ್ಯವಸ್ಥೆ ಕಲ್ಪಿಸಿದೆಯೇ? ಈ ಶಿಕ್ಷಣ ನೀತಿ ಕೇವಲ ನಗರದ ವಿದ್ಯಾರ್ಥಿಗಳಿಗೆ ಅನುಕೂಲಕರವಾಗಿದೆಯೇ ಹೊರತು, ಗ್ರಾಮೀಣ ಪ್ರದೇಶದ ಮಕ್ಕಳಿಗೆ ಯಾವುದೇ ಲಾಭವಿಲ್ಲ, ಅನುಕೂಲವೂ ಇಲ್ಲ” ಎಂದು ಅವರು ತಿಳಿಸಿದ್ದಾರೆ.

“ನಮ್ಮಲ್ಲಿ ಎಲ್ಲ ವರ್ಗದ ಜನ ಆತಂಕಕ್ಕೆ ಒಳಗಾಗಿದ್ದು, ಈ ನೀತಿ ಜಾರಿಗೊಳಿಸುವುದನ್ನು ನಿಲ್ಲಿಸಬೇಕು. ಅಧಿವೇಶನದಲ್ಲಿ ಈ ಬಗ್ಗೆ ಚರ್ಚೆ ಮಾಡಬೇಕು ಎಂದು ಮುಖ್ಯಮಂತ್ರಿಗಳಿಗೆ ಆಗ್ರಹಿಸುತ್ತಿದ್ದೇನೆ. ಈ ವಿಚಾರವಾಗಿ ನಾವು ಶಿಕ್ಷಣ ತಜ್ಞರ ಜತೆ ಚರ್ಚೆ ಮಾಡಿ ಅಧಿವೇಶನದಲ್ಲಿ ನಮ್ಮ ಪಕ್ಷದ ಅಭಿಪ್ರಾಯ ಮಂಡಿಸುತ್ತೇವೆ” ಎಂದು ಶಿವಕುಮಾರ್‌ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ‘ಚಾಮರಾಜನಗರ ಆಕ್ಸಿಜನ್ ದುರಂತ’ದಲ್ಲಿ ಮೃತಪಟ್ಟವರಿಗೆ ಕೊರೊನಾ ಸಾವು ಮರಣಪ್ರಮಾಣ ಪತ್ರ ನೀಡದ ರಾಜ್ಯ ಸರ್ಕಾರ: ಡಿಕೆ ಶಿವಕುಮಾರ್‌‌ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಡಿ.ಕೆ.ಶಿ. ಅವರ ಅಭಿಪ್ರಾಯ ಸರಿಯಾಗಿದೆ. ಆದರೆ ಮನುವಾದಿಗಳು ಅಧಿಕಾರದಲ್ಲಿ ತಳವೂರಿರುವುದಕ್ಕೆ, ಕಾಂಗ್ರೆಸ್ ಆಡಳಿತದಲ್ಲಿನ ವೈಪಲ್ಯಗಳು ಸಹ ಕಾರಣ. ಮನುವಾದಿಗಳ ವಿರುದ್ದ ಕಾಂಗ್ರೆಸ್ ಎಲ್ಲಾ ವಿರೋಧ ಪಕ್ಷಗಳನ್ನು ಒಗ್ಗೂಡಿಸುವ ಕೆಲಸ ಮಾಡಬೇಕು. ಏಕಾಂಗಿ ಹೋರಾಟದಿಂದ ಮನುವಾದಿಗಳನ್ನು ಅಧಿಕಾರದಿಂದ ತೊಲಗಿಸುವುದು ಸಾದ್ಯವಿಲ್ಲ.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...