HomeಮುಖಪುಟRSS, ವಿಎಚ್‌ಪಿ, ತಾಲಿಬಾನ್ ಒಂದೇ ಮನಸ್ಥಿತಿಯವು: ಸಾಹಿತಿ ಜಾವೇದ್ ಅಖ್ತರ್

RSS, ವಿಎಚ್‌ಪಿ, ತಾಲಿಬಾನ್ ಒಂದೇ ಮನಸ್ಥಿತಿಯವು: ಸಾಹಿತಿ ಜಾವೇದ್ ಅಖ್ತರ್

- Advertisement -
- Advertisement -

ಭಾರತದಲ್ಲಿರುವ ವಿಶ್ವ ಹಿಂದೂ ಪರಿಷತ್ (VHP), ರಾಷ್ಟ್ರೀಯ ಸ್ವಯಂ ಸೇವಕ ಸಂಘ (RSS), ಬಜರಂಗದಳ ಹಾಗೂ ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡಿರುವ ತಾಲಿಬಾನಿಗಳು ಒಂದೇ ಎಂದು ಹಿರಿಯ ಸಾಹಿತಿ ಜಾವೇದ್ ಅಖ್ತರ್ ಹೇಳಿದ್ದು, ವಿವಾದಕ್ಕೆ ಕಾರಣವಾಗಿದೆ.

“ಈ ಸಂಘಟನೆಗಳನ್ನು ವಸ್ತುನಿಷ್ಠವಾಗಿ ವೀಕ್ಷಿಸಿದಾಗ ಹೆಸರುಗಳು ಮತ್ತು ಮುಖಛಾಯೆ ಬದಲಾಗಿವೆ. ಆದರೆ ವಿಶ್ವದಾದ್ಯಂತ ಅವರೆಲ್ಲರೂ ಸಮಾನ ಮನಸ್ಥಿತಿಯನ್ನು ಹೊಂದಿದ್ದಾರೆ” ಎಂದು ಬಾಲಿವುಡ್‌ ಹಿರಿಯ ಬರಹಗಾರ ಜಾವೇದ್ ಅಖ್ತರ್ ಹೇಳಿದ್ದಾರೆ. ಇದು ಬಿಜೆಪಿಗರ ಆಕ್ರೋಶಕ್ಕೆ ಕಾರಣವಾಗಿದೆ.

ತಾಲಿಬಾನಿಗಳಂತೆ ಬಲಪಂಥೀಯ ಸಂಘಟನೆಗಳು ಕೂಡಾ ಯಾವುದೇ ಕಾನೂನು ತಮ್ಮ ಧಾರ್ಮಿಕ ನಂಬಿಕೆಗಿಂತ ಮಿಗಿಲಾಗಿಲ್ಲ ಎಂದು ಭಾವಿಸುತ್ತವೆ ಎಂದು ಜಾವೇದ್ ಅಖ್ತರ್ ಹೇಳಿದ್ದರು.

ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡಿರುವ ತಾಲಿಬಾನಿಗಳು ಇಸ್ಲಾಮಿಕ್ ರಾಷ್ಟ್ರವನ್ನು ಬಯಸುವಂತೆ, ಭಾರತೀಯ ಬಲಪಂಥೀಯರು ಹಿಂದೂ ರಾಷ್ಟ್ರವನ್ನು ಬಯಸುತ್ತಾರೆ. ಅವರೆಲ್ಲರೂ ಸಮಾನ ಮನಸ್ಥಿತಿಯನ್ನು ಹೊಂದಿದ್ದಾರೆ. ನಿಸ್ಸಂಶಯವಾಗಿಯೂ ಅವರ ವರ್ತನೆಯು ಹೇಯವಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಲಸಿಕೆ ಹೆಸರಲ್ಲಿ ಖಾಸಗಿ ಆಸ್ಪತ್ರೆಗಳ ಪಾಲಾಗುತ್ತಿರುವ ಕಟ್ಟಡ ಕಾರ್ಮಿಕರ ನಿಧಿ – AICCTU ಆಕ್ರೋಶ

ಸಾಹಿತಿ ಜಾವೇದ್ ಅಖ್ತರ್ ಅವರ ಹೇಳಿಕೆಗೆ ಆಡಳಿತರೂಢ ಬಿಜೆಪಿ ಮತ್ತು ಸಂಘ ಪರಿವಾರದ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಬಿಜೆಪಿ ಶಾಸಕ ರಾಮ್ ಕದಂ. “ಸಂಘಪರಿವಾರದೊಂದಿಗೆ ಸಂಪರ್ಕವಿರುವವರೇ ದೇಶವನ್ನು ಆಳುತ್ತಿದ್ದಾರೆ. ಒಂದು ವೇಳೆ ತಾಲಿಬಾನ್‌ ಸಿದ್ಧಾಂತ ಇಲ್ಲಿ ಅಸ್ತಿತ್ವದಲ್ಲಿರುತ್ತಿದ್ದರೆ ಅವರಿಗೆ ಅಂತಹಾ ಹೇಳಿಕೆಗಳು ನೀಡಲು ಸಾಧ್ಯವೇ? ಈ ಪ್ರಶ್ನೆಗಿರುವ ಉತ್ತರವೇ ಅವರ ಟೀಕೆಗಳು ಎಷ್ಟು ಪೊಳ್ಳಾಗಿದೆ ಎನ್ನುವುದನ್ನು ತೋರಿಸುತ್ತದೆ. ಅವರು ಸಂಘದ ಸದಸ್ಯರಿಗೆ ಕೈಮುಗಿದು ಕ್ಷಮೆಯಾಚಿಸುವವರೆಗೂ, ಅವರ ಯಾವುದೇ ಚಲನಚಿತ್ರವನ್ನು ಭಾರತ ಮಾತೆಯ ಭೂಮಿಯಲ್ಲಿ ಪ್ರದರ್ಶಿಸಲು ನಾವು ಅನುಮತಿಸುವುದಿಲ್ಲ” ಎಂದು ಬೆದರಿಕೆ ಹಾಕಿದ್ದಾರೆ.


ಇದನ್ನೂ ಓದಿ: ’ಸಬಿಯಾ’ ಹೆಣ್ಣಲ್ಲವೇ?: ಅತ್ಯಾಚಾರ, ಕೊಲೆಗೆ ಮೌನ ತಾಳಿದ ಸಮಾಜಕ್ಕೆ ಪ್ರಜ್ಞಾವಂತರ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಅಜಾವೇದ್ ಅಖ್ತರ್ ಅವರು ಹೇಳಿರುವ ಮಾತು ೧೦೦ಕ್ಕೆ ೧೦೦% ಪ್ರತಿಶತ ಸತ್ಯವಾಗಿದೆ. ಇಲ್ಲಿ ಜಾವೇದ್ ಆಕ್ತರ್ ಅವರು ಸಂಘ ಪರಿವಾರದ ಸದಸ್ಯರಿಗೆ ಕೈಮುಗಿದು ಕ್ಷಮೆ ಕೇಳಬೇಕೆಂದಿರುವ third class ರಾಮ್ ಕದಂ ಎಂಬ ನರಪಿಳ್ಳೆ ಯಾರು? ಇವರೇನು ದೇಶಭಕ್ತಿಯ ಪ್ರಮಾಣ ಪತ್ರ ಕೊಡುವವರೇ?

  2. ಜಾವೇದ್ ಅಕ್ತರ್ ಸರಿಯಾಗಿಯೇ ಹೇಳಿದ್ದಾರೆ. ಅವರು ಕ್ಷಮೆ ಕೇಳುವ ಅಗತ್ಯ ಇಲ್ಲ. ತಾಲಿಬಾನಿಗಳ ಕೈಯಲ್ಲಿ ಬಂದೂಕಿದ್ದರೆ, ಚೆಡ್ಡಿಗಳ ಕೈಯಲ್ಲಿ ಲಾಟಿ ಇದೆ, ಇದೊಂದೆ ವ್ಯತ್ಯಾಸ.
    ಈಗ ತಾಲಿಬಾನ್ ಅದಿಕಾರದ ಚುಕ್ಕಾಣಿಯನ್ನು ಹಿಡಿದಿದ್ದಾರೆ. ಆದರೆ ಚೆಡ್ಡಿಗಳು ಯಾವತ್ತಿಗೂ ಪ್ರತ್ಯಕ್ಷವಾಗಿ ಅಧಿಕಾರವನ್ನು ವಹಿಸಿಕೊಳ್ಳುದಿಲ್ಲ. ಏಕೆಂದರೆ ಅವರು ಎಂದಿಗೂ, ಯಾವುದೇ ಜವಾಬ್ದಾರಿಯನ್ನು ಹೊರುವುದಿಲ್ಲ.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...