HomeಮುಖಪುಟRSS, ವಿಎಚ್‌ಪಿ, ತಾಲಿಬಾನ್ ಒಂದೇ ಮನಸ್ಥಿತಿಯವು: ಸಾಹಿತಿ ಜಾವೇದ್ ಅಖ್ತರ್

RSS, ವಿಎಚ್‌ಪಿ, ತಾಲಿಬಾನ್ ಒಂದೇ ಮನಸ್ಥಿತಿಯವು: ಸಾಹಿತಿ ಜಾವೇದ್ ಅಖ್ತರ್

- Advertisement -
- Advertisement -

ಭಾರತದಲ್ಲಿರುವ ವಿಶ್ವ ಹಿಂದೂ ಪರಿಷತ್ (VHP), ರಾಷ್ಟ್ರೀಯ ಸ್ವಯಂ ಸೇವಕ ಸಂಘ (RSS), ಬಜರಂಗದಳ ಹಾಗೂ ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡಿರುವ ತಾಲಿಬಾನಿಗಳು ಒಂದೇ ಎಂದು ಹಿರಿಯ ಸಾಹಿತಿ ಜಾವೇದ್ ಅಖ್ತರ್ ಹೇಳಿದ್ದು, ವಿವಾದಕ್ಕೆ ಕಾರಣವಾಗಿದೆ.

“ಈ ಸಂಘಟನೆಗಳನ್ನು ವಸ್ತುನಿಷ್ಠವಾಗಿ ವೀಕ್ಷಿಸಿದಾಗ ಹೆಸರುಗಳು ಮತ್ತು ಮುಖಛಾಯೆ ಬದಲಾಗಿವೆ. ಆದರೆ ವಿಶ್ವದಾದ್ಯಂತ ಅವರೆಲ್ಲರೂ ಸಮಾನ ಮನಸ್ಥಿತಿಯನ್ನು ಹೊಂದಿದ್ದಾರೆ” ಎಂದು ಬಾಲಿವುಡ್‌ ಹಿರಿಯ ಬರಹಗಾರ ಜಾವೇದ್ ಅಖ್ತರ್ ಹೇಳಿದ್ದಾರೆ. ಇದು ಬಿಜೆಪಿಗರ ಆಕ್ರೋಶಕ್ಕೆ ಕಾರಣವಾಗಿದೆ.

ತಾಲಿಬಾನಿಗಳಂತೆ ಬಲಪಂಥೀಯ ಸಂಘಟನೆಗಳು ಕೂಡಾ ಯಾವುದೇ ಕಾನೂನು ತಮ್ಮ ಧಾರ್ಮಿಕ ನಂಬಿಕೆಗಿಂತ ಮಿಗಿಲಾಗಿಲ್ಲ ಎಂದು ಭಾವಿಸುತ್ತವೆ ಎಂದು ಜಾವೇದ್ ಅಖ್ತರ್ ಹೇಳಿದ್ದರು.

ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡಿರುವ ತಾಲಿಬಾನಿಗಳು ಇಸ್ಲಾಮಿಕ್ ರಾಷ್ಟ್ರವನ್ನು ಬಯಸುವಂತೆ, ಭಾರತೀಯ ಬಲಪಂಥೀಯರು ಹಿಂದೂ ರಾಷ್ಟ್ರವನ್ನು ಬಯಸುತ್ತಾರೆ. ಅವರೆಲ್ಲರೂ ಸಮಾನ ಮನಸ್ಥಿತಿಯನ್ನು ಹೊಂದಿದ್ದಾರೆ. ನಿಸ್ಸಂಶಯವಾಗಿಯೂ ಅವರ ವರ್ತನೆಯು ಹೇಯವಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಲಸಿಕೆ ಹೆಸರಲ್ಲಿ ಖಾಸಗಿ ಆಸ್ಪತ್ರೆಗಳ ಪಾಲಾಗುತ್ತಿರುವ ಕಟ್ಟಡ ಕಾರ್ಮಿಕರ ನಿಧಿ – AICCTU ಆಕ್ರೋಶ

ಸಾಹಿತಿ ಜಾವೇದ್ ಅಖ್ತರ್ ಅವರ ಹೇಳಿಕೆಗೆ ಆಡಳಿತರೂಢ ಬಿಜೆಪಿ ಮತ್ತು ಸಂಘ ಪರಿವಾರದ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಬಿಜೆಪಿ ಶಾಸಕ ರಾಮ್ ಕದಂ. “ಸಂಘಪರಿವಾರದೊಂದಿಗೆ ಸಂಪರ್ಕವಿರುವವರೇ ದೇಶವನ್ನು ಆಳುತ್ತಿದ್ದಾರೆ. ಒಂದು ವೇಳೆ ತಾಲಿಬಾನ್‌ ಸಿದ್ಧಾಂತ ಇಲ್ಲಿ ಅಸ್ತಿತ್ವದಲ್ಲಿರುತ್ತಿದ್ದರೆ ಅವರಿಗೆ ಅಂತಹಾ ಹೇಳಿಕೆಗಳು ನೀಡಲು ಸಾಧ್ಯವೇ? ಈ ಪ್ರಶ್ನೆಗಿರುವ ಉತ್ತರವೇ ಅವರ ಟೀಕೆಗಳು ಎಷ್ಟು ಪೊಳ್ಳಾಗಿದೆ ಎನ್ನುವುದನ್ನು ತೋರಿಸುತ್ತದೆ. ಅವರು ಸಂಘದ ಸದಸ್ಯರಿಗೆ ಕೈಮುಗಿದು ಕ್ಷಮೆಯಾಚಿಸುವವರೆಗೂ, ಅವರ ಯಾವುದೇ ಚಲನಚಿತ್ರವನ್ನು ಭಾರತ ಮಾತೆಯ ಭೂಮಿಯಲ್ಲಿ ಪ್ರದರ್ಶಿಸಲು ನಾವು ಅನುಮತಿಸುವುದಿಲ್ಲ” ಎಂದು ಬೆದರಿಕೆ ಹಾಕಿದ್ದಾರೆ.


ಇದನ್ನೂ ಓದಿ: ’ಸಬಿಯಾ’ ಹೆಣ್ಣಲ್ಲವೇ?: ಅತ್ಯಾಚಾರ, ಕೊಲೆಗೆ ಮೌನ ತಾಳಿದ ಸಮಾಜಕ್ಕೆ ಪ್ರಜ್ಞಾವಂತರ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಅಜಾವೇದ್ ಅಖ್ತರ್ ಅವರು ಹೇಳಿರುವ ಮಾತು ೧೦೦ಕ್ಕೆ ೧೦೦% ಪ್ರತಿಶತ ಸತ್ಯವಾಗಿದೆ. ಇಲ್ಲಿ ಜಾವೇದ್ ಆಕ್ತರ್ ಅವರು ಸಂಘ ಪರಿವಾರದ ಸದಸ್ಯರಿಗೆ ಕೈಮುಗಿದು ಕ್ಷಮೆ ಕೇಳಬೇಕೆಂದಿರುವ third class ರಾಮ್ ಕದಂ ಎಂಬ ನರಪಿಳ್ಳೆ ಯಾರು? ಇವರೇನು ದೇಶಭಕ್ತಿಯ ಪ್ರಮಾಣ ಪತ್ರ ಕೊಡುವವರೇ?

  2. ಜಾವೇದ್ ಅಕ್ತರ್ ಸರಿಯಾಗಿಯೇ ಹೇಳಿದ್ದಾರೆ. ಅವರು ಕ್ಷಮೆ ಕೇಳುವ ಅಗತ್ಯ ಇಲ್ಲ. ತಾಲಿಬಾನಿಗಳ ಕೈಯಲ್ಲಿ ಬಂದೂಕಿದ್ದರೆ, ಚೆಡ್ಡಿಗಳ ಕೈಯಲ್ಲಿ ಲಾಟಿ ಇದೆ, ಇದೊಂದೆ ವ್ಯತ್ಯಾಸ.
    ಈಗ ತಾಲಿಬಾನ್ ಅದಿಕಾರದ ಚುಕ್ಕಾಣಿಯನ್ನು ಹಿಡಿದಿದ್ದಾರೆ. ಆದರೆ ಚೆಡ್ಡಿಗಳು ಯಾವತ್ತಿಗೂ ಪ್ರತ್ಯಕ್ಷವಾಗಿ ಅಧಿಕಾರವನ್ನು ವಹಿಸಿಕೊಳ್ಳುದಿಲ್ಲ. ಏಕೆಂದರೆ ಅವರು ಎಂದಿಗೂ, ಯಾವುದೇ ಜವಾಬ್ದಾರಿಯನ್ನು ಹೊರುವುದಿಲ್ಲ.

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...