Homeಮುಖಪುಟಏಕೈಕ ‘ಪತ್ರಿಕಾಗೋಷ್ಠಿ’ಯಲ್ಲಿ ಒಂದೂ ಪ್ರಶ್ನೆಯನ್ನು ತೆಗೆದುಕೊಳ್ಳದ ಪ್ರಧಾನಿ.

ಏಕೈಕ ‘ಪತ್ರಿಕಾಗೋಷ್ಠಿ’ಯಲ್ಲಿ ಒಂದೂ ಪ್ರಶ್ನೆಯನ್ನು ತೆಗೆದುಕೊಳ್ಳದ ಪ್ರಧಾನಿ.

ಇಂದಿನ ಅಮಿತ್‍ಷಾ ಪತ್ರಿಕಾಗೋಷ್ಠಿಯಲ್ಲಿ ಪ್ರಧಾನಿಯದ್ದು ಉಪಸ್ಥಿತಿ ಮಾತ್ರ

- Advertisement -
- Advertisement -

| ನಾನುಗೌರಿ ಡೆಸ್ಕ್ |

ಪ್ರಧಾನಮಂತ್ರಿಯಾಗಿ ಅಧಿಕಾರಕ್ಕೇರಿದ ನಂತರ ಒಂದೇ ಒಂದು ಪತ್ರಿಕಾಗೋಷ್ಠಿಯನ್ನೂ ನರೇಂದ್ರ ಮೋದಿ ನಡೆಸಲಿಲ್ಲವೆಂಬ ಆರೋಪವನ್ನು ಉದ್ದಕ್ಕೂ ಎದುರಿಸಿದ್ದರು. ಅದಕ್ಕೆ ಉತ್ತರ ಕೊಡಲೆಂಬಂತೆ, ಚುನಾವಣಾ ಪ್ರಚಾರದ ಕಡೆಯ ದಿನವಾದ ಇಂದು ಬಿಜೆಪಿ ಕೇಂದ್ರ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಯಿತು. ಅದರಲ್ಲಿ ಸ್ವತಃ ನರೇಂದ್ರ ಮೋದಿಯವರು ಉಪಸ್ಥಿತರಿದ್ದರು. ಆದರೆ, ಅವರು ಒಂದೇ ಒಂದು ಪ್ರಶ್ನೆಯನ್ನೂ ತೆಗೆದುಕೊಳ್ಳಲಿಲ್ಲ. ಆ ಮೂಲಕ ಪತ್ರಿಕಾಗೋಷ್ಠಿಯಲ್ಲದ ಪತ್ರಿಕಾಗೋಷ್ಠಿ ಮಾಡಿದರು; ಅಥವಾ ಅಮಿತ್‍ಷಾ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು ಎಂದು ಹೇಳಬಹುದು.

ಪತ್ರಿಕಾಗೋಷ್ಠಿಯಲ್ಲಿ ಮೊದಲಿಗೆ ಬಿಜೆಪಿಯ ರಾಷ್ಟ್ರಾಧ್ಯಕ್ಷ ಅಮಿತ್‍ಷಾ ದೀರ್ಘವಾಗಿ ಮಾತಾಡಿದರು. ಅದರಲ್ಲಿ ಇಂದು ನಮ್ಮ ಜೊತೆ ಪ್ರಧಾನಿ ನರೇಂದ್ರ ಮೋದಿ ಇರುವುದು ನಮ್ಮೆಲ್ಲರಿಗೆ ಸಂತಸದ ಮತ್ತು ಆಶ್ಚರ್ಯಕರವಾದ ವಿಚಾರ ಎಂದು ಅಮಿತ್‍ಷಾ ಶುರು ಮಾಡಿದರು. ಅದಕ್ಕೆ ನರೇಂದ್ರ ಮೋದಿ ನಗುವಿನ ಮೂಲಕ ಪ್ರತಿಕ್ರಿಯೆ ವ್ಯಕ್ತಪಡಿಸಿದರು.

ಮೊದಲು ಬಿಜೆಪಿ ಪಕ್ಷ ಸಂಘಟನೆ ಹಾಗೂ ಬೂತ್ ಕಮಿಟಿಗಳ ಬಲದ ಕುರಿತು ಅಮಿತ್‍ಷಾ ವಿವರಿಸಿದರು. ಆ ನಂತರ ಐದು ವರ್ಷಗಳ ಸರ್ಕಾರದ ಸಾಧನೆಗಳು ಹಾಗೂ ಯೋಜನೆಗಳನ್ನು ಮುಂದಿಟ್ಟರು. ಸರ್ಕಾರ ರಚಿಸಿದಾಗ ಕೇವಲ 6 ರಾಜ್ಯಗಳಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ, ಈಗ 16 ರಾಜ್ಯಗಳಲ್ಲಿದೆ ಎಂದು ಹೆಮ್ಮೆ ಪಟ್ಟರು. ಈ ರೀತಿ ಸರ್ಕಾರ ರಚಿಸಿದ್ದನ್ನು ನಾವು ‘ನರೇಂದ್ರ ಮೋದಿ ಪ್ರಯೋಗ’ ಎಂದು ಕರೆಯುತ್ತೇವೆ ಮತ್ತು ಅದು ಯಶಸ್ವಿಯಾಗಿದೆ ಎಂಬುದು ಅಮಿತ್‍ಷಾ ಅಭಿಪ್ರಾಯವಾಗಿತ್ತು. ಪ್ರತಿಯೊಂದು ಲೋಕಸಭಾ ಕ್ಷೇತ್ರದಲ್ಲಿ 3,000 ಪೂರ್ಣಾವಧಿ ಕಾರ್ಯಕರ್ತರು 2 ವರ್ಷಗಳ ಕಾಲ ಕೆಲಸ ಮಾಡಿದ್ದು, ಸರ್ಕಾರದ ಯೋಜನೆಗಳನ್ನು ಜನರಿಗೆ ತಿಳಿಸುವಲ್ಲಿ ಯಶಸ್ವಿಯಾಗಿದ್ದೇವೆ. ಹಾಗಾಗಿ ನಮಗೆ ಪೂರ್ಣಬಹುಮತದಿಂದ ಗೆಲ್ಲುವ ವಿಶ್ವಾಸವಿದೆ ಎಂದು ನುಡಿದರು.

ಇದರ ನಂತರ ಅಮಿತ್‍ಷಾರಿಗಿಂಥ ಕಡಿಮೆ ಸಮಯ ನರೇಂದ್ರ ಮೋದಿ ಮಾತಾಡಿದರು. ನಿರ್ದಿಷ್ಟವಾದ ಅಂಶಗಳಿಗೆ ಹೋಗದೇ, ಜನರಲ್ ಆದ ಮಾತುಗಳನ್ನು ಆಡಿದರು. ಆದರೆ ಪ್ರಜಾತಂತ್ರದ ವಿಶೇಷವನ್ನು ಹೊಗಳಿದರು. ಭಾರತದ ಪ್ರಜಾತಂತ್ರವನ್ನು ಇಡೀ ಪ್ರಪಂಚಕ್ಕೆ ನಾವು ಎತ್ತಿ ತೋರಿಸಬಹುದಾದ ಹೆಮ್ಮೆಯ ಸಂಗತಿ ಎಂದರು. 2014ರಲ್ಲಿ ಅಧಿಕಾರಕ್ಕೆ ಬಂದ ಸಂದರ್ಭವನ್ನು ನೆನೆಯುತ್ತಾ, ಆಗ ಬೆಟ್ಟಿಂಗ್ ಕಟ್ಟಿದ್ದವರೆಲ್ಲರೂ ಸೋಲುವಷ್ಟು ಪ್ರಮಾಣದಲ್ಲಿ ನಮಗೆ ಸೀಟುಗಳು ಬಂದಿದ್ದವು ಎಂದು ತಮಾಷೆ ಮಾಡಿದರು.

ನಂತರ ಪ್ರಶ್ನೆಗಳನ್ನು ಎದುರಿಸಿದ್ದು ಅಮಿತ್‍ಷಾ ಮಾತ್ರ. ಬಿಜೆಪಿಗೆ ಬಹುಮತ ಬರದಿದ್ದರೆ ಏನು ಮಾಡುತ್ತೀರಿ ಎಂಬ ಪ್ರಶ್ನೆ ಪದೇ ಪದೇ ಬಂದಿತು. ‘ನಮಗೆ 300ಕ್ಕೂ ಹೆಚ್ಚು ಸೀಟುಗಳು ಬರುತ್ತವೆ, ಆದರೆ ಸರ್ಕಾರ ಎನ್‍ಡಿಎದಾಗಿರುತ್ತದೆ’ ಎಂದು ಅವರು ಪ್ರತಿ ಬಾರಿಯೂ ಹೇಳಿದರು. ಪಶ್ಚಿಮ ಬಂಗಾಳದಲ್ಲಿ ನಿಮ್ಮ ಪಕ್ಷದಿಂದ ಹಿಂಸಾಚಾರ ನಡೆದಿದೆ ಎಂದಾಗ ಅಮಿತ್‍ಷಾ ಕಿಡಿಯಾದರು. ನಮ್ಮ 80 ಕಾರ್ಯಕರ್ತರು ಅಲ್ಲಿ ಕೊಲೆಯಾಗಿದ್ದಾರೆ. ದೇಶಾದ್ಯಂತ ನಾವು ಚುನಾವಣೆ ನಡೆಸಿದ್ದೇವೆ, ಎಲ್ಲೂ ಏಕೆ ಹೀಗೆ ಆಗಿಲ್ಲ? ಎಂದು ಪತ್ರಕರ್ತರನ್ನೇ ಪ್ರಶ್ನಿಸಿದರು.

ಇದನ್ನು ಓದಿ: ನ್ಯೂಸ್ ನೇಷನ್ ಸಂದರ್ಶನದಲ್ಲಿ ಮೋದಿಗೆ ಪ್ರಶ್ನೆಗಳು ಮೊದಲೇ ಗೊತ್ತಿತ್ತಾ?

ಈ ಮಧ್ಯೆ ನರೇಂದ್ರ ಮೋದಿಯವರನ್ನು ಉದ್ದೇಶಿಸಿ ಎರಡೆರಡು ಬಾರಿ ಪತ್ರಕರ್ತರು ಪ್ರಶ್ನೆ ಕೇಳಲು ಯತ್ನಿಸಿದರು. ಆದರೆ, ಅಮಿತ್‍ಷಾರತ್ತ ಕೈ ತೋರಿಸಿದರು. ಒಮ್ಮೆ ‘ನಾನು ಪಕ್ಷದ ಶಿಸ್ತಿನ ಸಿಪಾಯಿ, ನಮ್ಮಲ್ಲಿ ಎಲ್ಲವೂ ಅಧ್ಯಕ್ಷರೇ. (ಅವರೇ ಉತ್ತರ ಕೊಡುತ್ತಾರೆ)’ ಎಂದರು. ಅಲ್ಲಿಗೆ ಮೋದಿಯವರು ಯಾವ ಪ್ರಶ್ನೆಗೂ ಉತ್ತರಿಸುವುದಿಲ್ಲ ಎಂಬುದು ಗೊತ್ತಾಗಿ ಪತ್ರಕರ್ತರು ಸುಮ್ಮನಾದರು.

ಹೆಚ್ಚಿನ ಪ್ರಶ್ನೆಗಳು ನಾಥೂರಾಂ ಗೋಡ್ಸೆಯನ್ನು ದೇಶಭಕ್ತ ಎಂದಿರುವ ಪ್ರಗ್ಯಾ ಠಾಕೂರ್, ಅನಂತಕುಮಾರ್ ಹೆಗಡೆ ಮತ್ತು ನಳಿನ್ ಕುಮಾರ್ ಕಟೀಲರ ಕುರಿತಾಗಿ ಬಂದವು. ಅವರಿಗೆ ಷೋಕಾಸ್ ನೋಟೀಸ್ ಕೊಡಲಾಗಿದೆ. ಪಕ್ಷದ ಶಿಸ್ತು ಸಮಿತಿ ಕ್ರಮ ಕೈಗೊಳ್ಳುತ್ತದೆ ಎಂದು ಅಮಿತ್‍ಷಾ ಹೇಳಿದರು. ಅದೇ ಸಂದರ್ಭದಲ್ಲಿ ‘ಕೇಸರಿ ಭಯೋತ್ಪಾದನೆ’ ಎಂಬ ಸುಳ್ಳು ಆರೋಪಕ್ಕೆ ಪ್ರಗ್ಯಾರನ್ನು ಅಭ್ಯರ್ಥಿಯಾಗಿಸಿ ಉತ್ತರ ಕೊಟ್ಟಿದ್ದೇವೆ ಎಂದು ಸಮರ್ಥನೆ ಸಹಾ ಮಾಡಿಕೊಂಡರು.

ಇದನ್ನು ಓದಿ: ಒಂದೇ ಚಾನೆಲ್, ಒಬ್ಬನೇ ಸಂದರ್ಶಕ. ಮೋದಿಗೆ ಕುಶಲ ಪ್ರಶ್ನೆ ರಾಹುಲ್‍ಗೆ ಕಠಿಣ ಪ್ರಶ್ನೆ. ವಿಡಿಯೋ ನೋಡಿ

ರಾಫೇಲ್ ಬಗ್ಗೆ ಬಂದ ಪ್ರಶ್ನೆಗಳಿಗೆ, ‘ಅದರಲ್ಲಿ ಯಾವ ತಪ್ಪೂ ನಡೆದಿಲ್ಲ’ ಎಂದು ಅಮಿತ್‍ಷಾ ಹೇಳಿದರು. ಕರ್ನಾಟಕವೂ ಸೇರಿದಂತೆ ದಕ್ಷಿಣ ರಾಜ್ಯಗಳು, ಒರಿಸ್ಸಾ, ಪಶ್ಚಿಮ ಬಂಗಾಳ, ಮಹಾರಾಷ್ಟ್ರ ಎಲ್ಲಾ ಕಡೆಯೂ ಹಿಂದಿಗಿಂತ ಹೆಚ್ಚಿನ ಮತ ಹಾಗೂ ಸೀಟುಗಳನ್ನು ಗೆಲ್ಲುತ್ತೇವೆ ಎಂಬ ಆತ್ಮವಿಶ್ವಾಸವನ್ನು ವ್ಯಕ್ತಪಡಿಸಿದರು.

ಪತ್ರಿಕಾಗೋಷ್ಠಿ ಕುರಿತು ವಿಶ್ಲೇಷಿಸಿದ ಕ್ವಿಂಟ್‍ನ ಆದಿತ್ಯಾ ‘ಇದು ಪತ್ರಿಕಾಗೋಷ್ಠಿಯಲ್ಲದ ಪತ್ರಿಕಾಗೋಷ್ಠಿ’ ಎಂದರಲ್ಲದೇ, ಇದನ್ನು ಮೀಡಿಯಾ ಬ್ರೀಫಿಂಗ್ ಎನ್ನಬಹುದೇ ಹೊರತು ಪತ್ರಿಕಾಗೋಷ್ಠಿ ಎನ್ನಲಾಗದು ಎಂಬ ಅಭಿಪ್ರಾಯ ಮುಂದಿಟ್ಟರು.

ಪತ್ರಿಕಾಗೋಷ್ಠಿಯ ಕುರಿತು ರಾಹುಲ್ ಗಾಂಧಿ ವ್ಯಂಗ್ಯ ಮಾಡಿ ಕೂಡಲೇ ಟ್ವೀಟ್  ಮಾಡಿದರು. ‘ಅಭಿನಂದನೆಗಳು ಮೋದೀಜಿ. ಮುಂದಿನ ಸಾರಿ ಒಂದೆರಡು ಪ್ರಶ್ನೆಗಳಿಗೆ ಉತ್ತರ ಕೊಡಲು ಅಮಿತ್ ಷಾ ನಿಮಗೆ ಬಿಡಬಹುದು’ ಎಂದು ಟ್ವೀಟ್ ಹೇಳುತ್ತದೆ.

ಈ ಪತ್ರಿಕಾಗೋಷ್ಠಿಯ ಕುರಿತು ಬರಹಗಾರರಾದ ಭೀಮನಗೌಡರ್ ಕಾಶಿರೆಡ್ಡಿ ಅವರು ‘ಹೇಳಿಕೊಟ್ಟ ಮಾತು; ಕಟ್ಟಿಕೊಟ್ಟ ಬುತ್ತಿ ಬಹಳ ದಿನ ಉಳಿಯುವುದಿಲ್ಲ ಎಂಬಂತಾಗಿದೆ’ ಎಂದು ಹೇಳಿದರು. ಪತ್ರಕರ್ತ ಮಲ್ಲನಗೌಡರ್ ‘ಕಡೆಯ ದಿನದ ಮೊದಲ ಪ್ರೆಸ್‍ಮೀಟ್ ಸಹಾ ಪ್ರೆಸ್‍ಮೀಟ್ ಆಗದೇ ಮೀಟ್ ದಿ ಪ್ರೆಸ್ ಪೀಪಲ್ ಅಷ್ಟೇ ಆಯಿತು’ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...