Homeಮುಖಪುಟಏಕೈಕ ‘ಪತ್ರಿಕಾಗೋಷ್ಠಿ’ಯಲ್ಲಿ ಒಂದೂ ಪ್ರಶ್ನೆಯನ್ನು ತೆಗೆದುಕೊಳ್ಳದ ಪ್ರಧಾನಿ.

ಏಕೈಕ ‘ಪತ್ರಿಕಾಗೋಷ್ಠಿ’ಯಲ್ಲಿ ಒಂದೂ ಪ್ರಶ್ನೆಯನ್ನು ತೆಗೆದುಕೊಳ್ಳದ ಪ್ರಧಾನಿ.

ಇಂದಿನ ಅಮಿತ್‍ಷಾ ಪತ್ರಿಕಾಗೋಷ್ಠಿಯಲ್ಲಿ ಪ್ರಧಾನಿಯದ್ದು ಉಪಸ್ಥಿತಿ ಮಾತ್ರ

- Advertisement -
- Advertisement -

| ನಾನುಗೌರಿ ಡೆಸ್ಕ್ |

ಪ್ರಧಾನಮಂತ್ರಿಯಾಗಿ ಅಧಿಕಾರಕ್ಕೇರಿದ ನಂತರ ಒಂದೇ ಒಂದು ಪತ್ರಿಕಾಗೋಷ್ಠಿಯನ್ನೂ ನರೇಂದ್ರ ಮೋದಿ ನಡೆಸಲಿಲ್ಲವೆಂಬ ಆರೋಪವನ್ನು ಉದ್ದಕ್ಕೂ ಎದುರಿಸಿದ್ದರು. ಅದಕ್ಕೆ ಉತ್ತರ ಕೊಡಲೆಂಬಂತೆ, ಚುನಾವಣಾ ಪ್ರಚಾರದ ಕಡೆಯ ದಿನವಾದ ಇಂದು ಬಿಜೆಪಿ ಕೇಂದ್ರ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಯಿತು. ಅದರಲ್ಲಿ ಸ್ವತಃ ನರೇಂದ್ರ ಮೋದಿಯವರು ಉಪಸ್ಥಿತರಿದ್ದರು. ಆದರೆ, ಅವರು ಒಂದೇ ಒಂದು ಪ್ರಶ್ನೆಯನ್ನೂ ತೆಗೆದುಕೊಳ್ಳಲಿಲ್ಲ. ಆ ಮೂಲಕ ಪತ್ರಿಕಾಗೋಷ್ಠಿಯಲ್ಲದ ಪತ್ರಿಕಾಗೋಷ್ಠಿ ಮಾಡಿದರು; ಅಥವಾ ಅಮಿತ್‍ಷಾ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು ಎಂದು ಹೇಳಬಹುದು.

ಪತ್ರಿಕಾಗೋಷ್ಠಿಯಲ್ಲಿ ಮೊದಲಿಗೆ ಬಿಜೆಪಿಯ ರಾಷ್ಟ್ರಾಧ್ಯಕ್ಷ ಅಮಿತ್‍ಷಾ ದೀರ್ಘವಾಗಿ ಮಾತಾಡಿದರು. ಅದರಲ್ಲಿ ಇಂದು ನಮ್ಮ ಜೊತೆ ಪ್ರಧಾನಿ ನರೇಂದ್ರ ಮೋದಿ ಇರುವುದು ನಮ್ಮೆಲ್ಲರಿಗೆ ಸಂತಸದ ಮತ್ತು ಆಶ್ಚರ್ಯಕರವಾದ ವಿಚಾರ ಎಂದು ಅಮಿತ್‍ಷಾ ಶುರು ಮಾಡಿದರು. ಅದಕ್ಕೆ ನರೇಂದ್ರ ಮೋದಿ ನಗುವಿನ ಮೂಲಕ ಪ್ರತಿಕ್ರಿಯೆ ವ್ಯಕ್ತಪಡಿಸಿದರು.

ಮೊದಲು ಬಿಜೆಪಿ ಪಕ್ಷ ಸಂಘಟನೆ ಹಾಗೂ ಬೂತ್ ಕಮಿಟಿಗಳ ಬಲದ ಕುರಿತು ಅಮಿತ್‍ಷಾ ವಿವರಿಸಿದರು. ಆ ನಂತರ ಐದು ವರ್ಷಗಳ ಸರ್ಕಾರದ ಸಾಧನೆಗಳು ಹಾಗೂ ಯೋಜನೆಗಳನ್ನು ಮುಂದಿಟ್ಟರು. ಸರ್ಕಾರ ರಚಿಸಿದಾಗ ಕೇವಲ 6 ರಾಜ್ಯಗಳಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ, ಈಗ 16 ರಾಜ್ಯಗಳಲ್ಲಿದೆ ಎಂದು ಹೆಮ್ಮೆ ಪಟ್ಟರು. ಈ ರೀತಿ ಸರ್ಕಾರ ರಚಿಸಿದ್ದನ್ನು ನಾವು ‘ನರೇಂದ್ರ ಮೋದಿ ಪ್ರಯೋಗ’ ಎಂದು ಕರೆಯುತ್ತೇವೆ ಮತ್ತು ಅದು ಯಶಸ್ವಿಯಾಗಿದೆ ಎಂಬುದು ಅಮಿತ್‍ಷಾ ಅಭಿಪ್ರಾಯವಾಗಿತ್ತು. ಪ್ರತಿಯೊಂದು ಲೋಕಸಭಾ ಕ್ಷೇತ್ರದಲ್ಲಿ 3,000 ಪೂರ್ಣಾವಧಿ ಕಾರ್ಯಕರ್ತರು 2 ವರ್ಷಗಳ ಕಾಲ ಕೆಲಸ ಮಾಡಿದ್ದು, ಸರ್ಕಾರದ ಯೋಜನೆಗಳನ್ನು ಜನರಿಗೆ ತಿಳಿಸುವಲ್ಲಿ ಯಶಸ್ವಿಯಾಗಿದ್ದೇವೆ. ಹಾಗಾಗಿ ನಮಗೆ ಪೂರ್ಣಬಹುಮತದಿಂದ ಗೆಲ್ಲುವ ವಿಶ್ವಾಸವಿದೆ ಎಂದು ನುಡಿದರು.

ಇದರ ನಂತರ ಅಮಿತ್‍ಷಾರಿಗಿಂಥ ಕಡಿಮೆ ಸಮಯ ನರೇಂದ್ರ ಮೋದಿ ಮಾತಾಡಿದರು. ನಿರ್ದಿಷ್ಟವಾದ ಅಂಶಗಳಿಗೆ ಹೋಗದೇ, ಜನರಲ್ ಆದ ಮಾತುಗಳನ್ನು ಆಡಿದರು. ಆದರೆ ಪ್ರಜಾತಂತ್ರದ ವಿಶೇಷವನ್ನು ಹೊಗಳಿದರು. ಭಾರತದ ಪ್ರಜಾತಂತ್ರವನ್ನು ಇಡೀ ಪ್ರಪಂಚಕ್ಕೆ ನಾವು ಎತ್ತಿ ತೋರಿಸಬಹುದಾದ ಹೆಮ್ಮೆಯ ಸಂಗತಿ ಎಂದರು. 2014ರಲ್ಲಿ ಅಧಿಕಾರಕ್ಕೆ ಬಂದ ಸಂದರ್ಭವನ್ನು ನೆನೆಯುತ್ತಾ, ಆಗ ಬೆಟ್ಟಿಂಗ್ ಕಟ್ಟಿದ್ದವರೆಲ್ಲರೂ ಸೋಲುವಷ್ಟು ಪ್ರಮಾಣದಲ್ಲಿ ನಮಗೆ ಸೀಟುಗಳು ಬಂದಿದ್ದವು ಎಂದು ತಮಾಷೆ ಮಾಡಿದರು.

ನಂತರ ಪ್ರಶ್ನೆಗಳನ್ನು ಎದುರಿಸಿದ್ದು ಅಮಿತ್‍ಷಾ ಮಾತ್ರ. ಬಿಜೆಪಿಗೆ ಬಹುಮತ ಬರದಿದ್ದರೆ ಏನು ಮಾಡುತ್ತೀರಿ ಎಂಬ ಪ್ರಶ್ನೆ ಪದೇ ಪದೇ ಬಂದಿತು. ‘ನಮಗೆ 300ಕ್ಕೂ ಹೆಚ್ಚು ಸೀಟುಗಳು ಬರುತ್ತವೆ, ಆದರೆ ಸರ್ಕಾರ ಎನ್‍ಡಿಎದಾಗಿರುತ್ತದೆ’ ಎಂದು ಅವರು ಪ್ರತಿ ಬಾರಿಯೂ ಹೇಳಿದರು. ಪಶ್ಚಿಮ ಬಂಗಾಳದಲ್ಲಿ ನಿಮ್ಮ ಪಕ್ಷದಿಂದ ಹಿಂಸಾಚಾರ ನಡೆದಿದೆ ಎಂದಾಗ ಅಮಿತ್‍ಷಾ ಕಿಡಿಯಾದರು. ನಮ್ಮ 80 ಕಾರ್ಯಕರ್ತರು ಅಲ್ಲಿ ಕೊಲೆಯಾಗಿದ್ದಾರೆ. ದೇಶಾದ್ಯಂತ ನಾವು ಚುನಾವಣೆ ನಡೆಸಿದ್ದೇವೆ, ಎಲ್ಲೂ ಏಕೆ ಹೀಗೆ ಆಗಿಲ್ಲ? ಎಂದು ಪತ್ರಕರ್ತರನ್ನೇ ಪ್ರಶ್ನಿಸಿದರು.

ಇದನ್ನು ಓದಿ: ನ್ಯೂಸ್ ನೇಷನ್ ಸಂದರ್ಶನದಲ್ಲಿ ಮೋದಿಗೆ ಪ್ರಶ್ನೆಗಳು ಮೊದಲೇ ಗೊತ್ತಿತ್ತಾ?

ಈ ಮಧ್ಯೆ ನರೇಂದ್ರ ಮೋದಿಯವರನ್ನು ಉದ್ದೇಶಿಸಿ ಎರಡೆರಡು ಬಾರಿ ಪತ್ರಕರ್ತರು ಪ್ರಶ್ನೆ ಕೇಳಲು ಯತ್ನಿಸಿದರು. ಆದರೆ, ಅಮಿತ್‍ಷಾರತ್ತ ಕೈ ತೋರಿಸಿದರು. ಒಮ್ಮೆ ‘ನಾನು ಪಕ್ಷದ ಶಿಸ್ತಿನ ಸಿಪಾಯಿ, ನಮ್ಮಲ್ಲಿ ಎಲ್ಲವೂ ಅಧ್ಯಕ್ಷರೇ. (ಅವರೇ ಉತ್ತರ ಕೊಡುತ್ತಾರೆ)’ ಎಂದರು. ಅಲ್ಲಿಗೆ ಮೋದಿಯವರು ಯಾವ ಪ್ರಶ್ನೆಗೂ ಉತ್ತರಿಸುವುದಿಲ್ಲ ಎಂಬುದು ಗೊತ್ತಾಗಿ ಪತ್ರಕರ್ತರು ಸುಮ್ಮನಾದರು.

ಹೆಚ್ಚಿನ ಪ್ರಶ್ನೆಗಳು ನಾಥೂರಾಂ ಗೋಡ್ಸೆಯನ್ನು ದೇಶಭಕ್ತ ಎಂದಿರುವ ಪ್ರಗ್ಯಾ ಠಾಕೂರ್, ಅನಂತಕುಮಾರ್ ಹೆಗಡೆ ಮತ್ತು ನಳಿನ್ ಕುಮಾರ್ ಕಟೀಲರ ಕುರಿತಾಗಿ ಬಂದವು. ಅವರಿಗೆ ಷೋಕಾಸ್ ನೋಟೀಸ್ ಕೊಡಲಾಗಿದೆ. ಪಕ್ಷದ ಶಿಸ್ತು ಸಮಿತಿ ಕ್ರಮ ಕೈಗೊಳ್ಳುತ್ತದೆ ಎಂದು ಅಮಿತ್‍ಷಾ ಹೇಳಿದರು. ಅದೇ ಸಂದರ್ಭದಲ್ಲಿ ‘ಕೇಸರಿ ಭಯೋತ್ಪಾದನೆ’ ಎಂಬ ಸುಳ್ಳು ಆರೋಪಕ್ಕೆ ಪ್ರಗ್ಯಾರನ್ನು ಅಭ್ಯರ್ಥಿಯಾಗಿಸಿ ಉತ್ತರ ಕೊಟ್ಟಿದ್ದೇವೆ ಎಂದು ಸಮರ್ಥನೆ ಸಹಾ ಮಾಡಿಕೊಂಡರು.

ಇದನ್ನು ಓದಿ: ಒಂದೇ ಚಾನೆಲ್, ಒಬ್ಬನೇ ಸಂದರ್ಶಕ. ಮೋದಿಗೆ ಕುಶಲ ಪ್ರಶ್ನೆ ರಾಹುಲ್‍ಗೆ ಕಠಿಣ ಪ್ರಶ್ನೆ. ವಿಡಿಯೋ ನೋಡಿ

ರಾಫೇಲ್ ಬಗ್ಗೆ ಬಂದ ಪ್ರಶ್ನೆಗಳಿಗೆ, ‘ಅದರಲ್ಲಿ ಯಾವ ತಪ್ಪೂ ನಡೆದಿಲ್ಲ’ ಎಂದು ಅಮಿತ್‍ಷಾ ಹೇಳಿದರು. ಕರ್ನಾಟಕವೂ ಸೇರಿದಂತೆ ದಕ್ಷಿಣ ರಾಜ್ಯಗಳು, ಒರಿಸ್ಸಾ, ಪಶ್ಚಿಮ ಬಂಗಾಳ, ಮಹಾರಾಷ್ಟ್ರ ಎಲ್ಲಾ ಕಡೆಯೂ ಹಿಂದಿಗಿಂತ ಹೆಚ್ಚಿನ ಮತ ಹಾಗೂ ಸೀಟುಗಳನ್ನು ಗೆಲ್ಲುತ್ತೇವೆ ಎಂಬ ಆತ್ಮವಿಶ್ವಾಸವನ್ನು ವ್ಯಕ್ತಪಡಿಸಿದರು.

ಪತ್ರಿಕಾಗೋಷ್ಠಿ ಕುರಿತು ವಿಶ್ಲೇಷಿಸಿದ ಕ್ವಿಂಟ್‍ನ ಆದಿತ್ಯಾ ‘ಇದು ಪತ್ರಿಕಾಗೋಷ್ಠಿಯಲ್ಲದ ಪತ್ರಿಕಾಗೋಷ್ಠಿ’ ಎಂದರಲ್ಲದೇ, ಇದನ್ನು ಮೀಡಿಯಾ ಬ್ರೀಫಿಂಗ್ ಎನ್ನಬಹುದೇ ಹೊರತು ಪತ್ರಿಕಾಗೋಷ್ಠಿ ಎನ್ನಲಾಗದು ಎಂಬ ಅಭಿಪ್ರಾಯ ಮುಂದಿಟ್ಟರು.

ಪತ್ರಿಕಾಗೋಷ್ಠಿಯ ಕುರಿತು ರಾಹುಲ್ ಗಾಂಧಿ ವ್ಯಂಗ್ಯ ಮಾಡಿ ಕೂಡಲೇ ಟ್ವೀಟ್  ಮಾಡಿದರು. ‘ಅಭಿನಂದನೆಗಳು ಮೋದೀಜಿ. ಮುಂದಿನ ಸಾರಿ ಒಂದೆರಡು ಪ್ರಶ್ನೆಗಳಿಗೆ ಉತ್ತರ ಕೊಡಲು ಅಮಿತ್ ಷಾ ನಿಮಗೆ ಬಿಡಬಹುದು’ ಎಂದು ಟ್ವೀಟ್ ಹೇಳುತ್ತದೆ.

ಈ ಪತ್ರಿಕಾಗೋಷ್ಠಿಯ ಕುರಿತು ಬರಹಗಾರರಾದ ಭೀಮನಗೌಡರ್ ಕಾಶಿರೆಡ್ಡಿ ಅವರು ‘ಹೇಳಿಕೊಟ್ಟ ಮಾತು; ಕಟ್ಟಿಕೊಟ್ಟ ಬುತ್ತಿ ಬಹಳ ದಿನ ಉಳಿಯುವುದಿಲ್ಲ ಎಂಬಂತಾಗಿದೆ’ ಎಂದು ಹೇಳಿದರು. ಪತ್ರಕರ್ತ ಮಲ್ಲನಗೌಡರ್ ‘ಕಡೆಯ ದಿನದ ಮೊದಲ ಪ್ರೆಸ್‍ಮೀಟ್ ಸಹಾ ಪ್ರೆಸ್‍ಮೀಟ್ ಆಗದೇ ಮೀಟ್ ದಿ ಪ್ರೆಸ್ ಪೀಪಲ್ ಅಷ್ಟೇ ಆಯಿತು’ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...