Homeಫ್ಯಾಕ್ಟ್‌ಚೆಕ್‘ಪಾಕಿಸ್ತಾನ್‌ ಮುರ್ದಾಬಾದ್‌’ ಘೋಷಣೆಯೊಂದಿಗೆ ಕಸದಬುಟ್ಟಿ ತಯಾರಿಸಿತೆ ನೀಲ್ ಕಮಲ್ ಸಂಸ್ಥೆ?

‘ಪಾಕಿಸ್ತಾನ್‌ ಮುರ್ದಾಬಾದ್‌’ ಘೋಷಣೆಯೊಂದಿಗೆ ಕಸದಬುಟ್ಟಿ ತಯಾರಿಸಿತೆ ನೀಲ್ ಕಮಲ್ ಸಂಸ್ಥೆ?

- Advertisement -
- Advertisement -

ನೀಲ್ ಕಮಲ್ ಸಂಸ್ಥೆಯು ‘ಪಾಕಿಸ್ತಾನ್ ಮುರ್ದಾಬಾದ್’ (ಪಾಕಿಸ್ತಾನಕ್ಕೆ ಧಿಕ್ಕಾರ) ಘೋಷಣೆಯನ್ನು ಪಾಕಿಸ್ತಾನದ ಬಾವುಟದೊಂದಿಗೆ ತನ್ನ ಉತ್ಪನ್ನದ ಮೇಲೆ ಮುದ್ರಿಸಿದೆ ಎಂಬ ಚಿತ್ರವೊಂದು ಇತ್ತೀಚೆಗೆ ವೈರಲ್‌ ಆಗಿದೆ.

ರೈಲ್ವೆ ನಿಲ್ದಾಣವೊಂದರ ಕಸದಬುಟ್ಟಿಯ ಮೇಲೆ ಈ ರೀತಿಯ ಘೋಷಣೆ ಹಾಗೂ ಭಾವುಟದ ಚಿತ್ರವಿದ್ದು, ಶಿಪ್ರಾ ದತ್‌ ಎಂಬುವವರು, “ಪ್ಲಾಸ್ಟಿಕ್ ಉತ್ಪನ್ನ ಸಂಸ್ಥೆ ನೀಲ್ ಕಮಲ್, ಬಹಳ ಸಂತೋಷ ತರುವ ಕೆಲಸ ಮಾಡಿದೆ” ಎಂಬ ಒಕ್ಕಣೆಯಲ್ಲಿ ತಮ್ಮ ಟ್ಟಿಟರ್‌ ಖಾತೆಯಲ್ಲಿ ಈ ಚಿತ್ರವನ್ನು ಹಂಚಿಕೊಂಡಿದ್ದಾರೆ. ಅದನ್ನು ತಕ್ಷಣದಲ್ಲೇ ನೂರಾರು ಮಂದಿ ರೀಟ್ವೀಟ್‌ ಮಾಡಿದ್ದಾರೆ.

ಬಿಜೆಪಿಯ ಪರ ಸದಾ ಬ್ಯಾಟಿಂಗ್ ಮಾಡುವ ನಟಿ ಕಂಗನಾ ರಣಾವತ್‌ ಅಭಿಮಾನಿಗಳು, ಇದೇ ಅರ್ಥದಲ್ಲಿಯೇ ಚಿತ್ರವನ್ನು ತಮ್ಮ ಪೇಜ್‌ನಲ್ಲಿ ಹಂಚಿಕೊಂಡಿದ್ದಾರೆ. ಗುಂಜೇಶ್‌ ಗೌತಮ್ ಝಾ, ಹಮ್‌ಲೋಗ್ ಇಂಡಿಯಾ, ಪಿ.ಎನ್.ರಾಯ್, ಜೀತೇಂದ್ರ ಭಾರದ್ವಾಜ್ ಸೇರಿದಂತೆ ಇನ್ನಿತರರೂ ಈ ಚಿತ್ರವನ್ನು ಹಂಚಿಕೊಂಡಿದ್ದಾರೆ. ಫೇಸ್ ಬುಕ್‌ನಲ್ಲೂ ಚಿತ್ರ ವೈರಲ್ ಆಗಿದೆ.

ಸತ್ಯಾಂಶವೇನು?

ನಿಜಾಂಶವನ್ನು ಬೇಧಿಸಿರುವ ಆಲ್ಟ್ ನ್ಯೂಸ್‌‌, ಸಾಮಾಜಿಕ ಮಾಧ್ಯಮಗಳಲ್ಲಿ ಬಿಂಬಿಸಿರುವಂತೆ, ’ನೀಲ್ ಕಮಲ್ ಸಂಸ್ಥೆ ಈ ರೀತಿಯ ಘೋಷಣೆಯೊಂದಿಗೆ ಕಸದಬುಟ್ಟಿಯನ್ನು ಉತ್ಪಾದಿಸಿಲ್ಲ’ ಎಂದು ಸ್ಪಷ್ಟಪಡಿಸಿದೆ.

ಫೆ.22, 2019ರಲ್ಲಿ ಈ ಚಿತ್ರ ’ಪತ್ರಿಕಾ’ ಜಾಲತಾಣದಲ್ಲಿ ವರದಿಯಾಗಿದೆ. ಪುಲ್ವಾಮ ದಾಳಿಯಾದ ಹಿನ್ನೆಲೆಯಲ್ಲಿ ಯಾರೋ ಅಪರಿಚಿತರು, ’ಪಾಕಿಸ್ತಾನ ಮುರ್ದಾಬಾದ್’ ಸ್ಟಿಕ್ಕರ್‌ಗಳನ್ನು 10ರಿಂದ 12 ಕಸದಬುಟ್ಟಿಗಳ ಮೇಲೆ ಉದಯಪುರ್ ರೈಲ್ವೆ ನಿಲ್ದಾಣದಲ್ಲಿ ಅಂಟಿಸಿದ್ದಾರೆ. ಅಧಿಕಾರಿಗಳು ಸೂಚನೆ ನೀಡಿದ ಬಳಿಕ ಆ ಸ್ಟಿಕ್ಕರ್ಗಳನ್ನು ತೆರವು ಮಾಡಲಾಗಿದೆ. ಸ್ಟಿಕ್ಕರ್ ಅಂಟಿಸಿರುವ ಸಂಬಂಧ ಸ್ಥಳೀಯ ಮಾಧ್ಯಮ ’ಉದಯಪುರ್ ಟೈಮ್ಸ್’ ಕೂಡ ವರದಿ ಮಾಡಿತ್ತು. 2019ರ ವರದಿಯನ್ನು ತಿರುಚಿ, ಬೇರೊಂದು ಒಕ್ಕಣೆಯೊಂದಿಗೆ ಇತ್ತೀಚೆಗೆ ಈ ಚಿತ್ರವನ್ನು ವೈರಲ್ ಮಾಡಲಾಗಿದೆ.

ಇದನ್ನೂ ಓದಿ: ಇದು ಭಯೋತ್ಪಾದಕರನ್ನು ಬಂಧಿಸುವ ದೃಶ್ಯವಲ್ಲ!

ನೀಲ್ ಕಮಲ್ ಸಂಸ್ಥೆಯು, “ಈ ಥರದ ಯಾವುದೇ ಉತ್ಪನ್ನಗಳನ್ನು ನಾವು ತಯಾರಿಸಿಲ್ಲ. ಯಾವುದೇ ಸ್ಟಿಕ್ಕರ್‍ಗಳನ್ನೂ ಅಂಟಿಸಿಲ್ಲ” ಎಂದು ಆಲ್ಟ್ ನ್ಯೂಸ್‌ಗೆ ತಿಳಿಸಿದೆ. ಕಂಪೆನಿಯ ಹೆಸರು, ಲೋಗೋ, ಸಂಪರ್ಕ ಮಾಹಿತಿ ಮಾತ್ರ ಉತ್ಪನ್ನದ ಮೇಲೆ ಮುದ್ರಿಸಿರುವುದಾಗಿ ಸ್ಪಷ್ಟಪಡಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...