Homeಚಳವಳಿಐತಿಹಾಸಿಕ ಕಿಸಾನ್ ಮಹಾಪಂಚಾಯತ್: ಬಿಜೆಪಿ ಸರ್ಕಾರಕ್ಕೆ ಸವಾಲು ಹಾಕಿದ ರೈತರು

ಐತಿಹಾಸಿಕ ಕಿಸಾನ್ ಮಹಾಪಂಚಾಯತ್: ಬಿಜೆಪಿ ಸರ್ಕಾರಕ್ಕೆ ಸವಾಲು ಹಾಕಿದ ರೈತರು

- Advertisement -
- Advertisement -

ಉತ್ತರ ಪ್ರದೇಶ ಚುನಾವಣೆಗೆ ಕೆಲವೇ ತಿಂಗಳುಗಳಿರುವಾಗ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಕ್ಕೆ ಸವಾಲು ಹಾಕುತ್ತಾ, ಒಕ್ಕೂಟ ಸರ್ಕಾರದ ಮೂರು ವಿವಾದಿತ ಕೃಷಿ ಕಾನೂನುಗಳ ವಿರುದ್ಧ ನಡೆದ ಕಿಸಾನ್ ಮಹಾಪಂಚಾಯತ್ ಐತಿಹಾಸಿಕ ಯಶಸ್ಸು ಕಂಡಿದೆ.

ಯೋಗಿ ಆದಿತ್ಯನಾಥ್ ರಾಜ್ಯದಲ್ಲಿ ಅವರಿಗೆ ಸೆಡ್ಡು ಹೊಡೆದಿರುವ ರೈತರು, ಮುಜಾಫರ್‌ನಗರದಲ್ಲಿ  ಸೆಪ್ಟೆಂಬರ್‌ 5ರ ಭಾನುವಾರ ಹಿಂದೂ-ಮುಸ್ಲಿಂ ರೈತರು ಒಗ್ಗೂಡಿ ಅತಿ ದೊಡ್ಡ ಕಿಸಾನ್ ಮಹಾಪಂಚಾಯತ್ ನಡೆಸಿ ಯಶಸ್ವಿಯಾಗಿದ್ದಾರೆ. ಕಳೆದ ಹತ್ತು ತಿಂಗಳುಗಳಿಂದ ದೆಹಲಿಯ ರೈತ ಚಳುವಳಿಯನ್ನು ಮುನ್ನಡೆಸುತ್ತಿರುವ ರೈತ ಸಂಘಗಳ ಸಂಸ್ಥೆ ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಈ ಮಹಾಪಂಚಾಯತ್ ಯೋಜಿಸಿತ್ತು.

2013 ರಲ್ಲಿ ಕೋಮು ಗಲಭೆಗಳಿಂದ ಕಂಗೆಟ್ಟಿದ್ದ ಪಶ್ಚಿಮ ಉತ್ತರ ಪ್ರದೇಶದ ಮುಜಾಫರ್‌ನಗರ ಜಿಲ್ಲೆಯು, ಬಿಜೆಪಿ ಬರುವವರೆಗೂ ರಾಷ್ಟ್ರೀಯ ಲೋಕದಳ (ಆರ್‌ಎಲ್‌ಡಿ)ಯ ಭದ್ರಕೋಟೆಯಾಗಿತ್ತು.

ಇದನ್ನೂ ಓದಿ: ಉತ್ತರ ಪ್ರದೇಶ: ಯೋಗಿ ಸರ್ಕಾರಕ್ಕೆ ಸೆಡ್ಡು ಹೊಡೆಯಲು ಮುಜಾಫರ್‌ನಗರದಲ್ಲಿ ರೈತರ ಮಹಾಪಂಚಾಯತ್‌

ಭಾನುವಾರ, ಭಾರತೀಯ ಕಿಸಾನ್ ಯೂನಿಯನ್‌ ಟಿಕಾಯತ್ ಬಣದ ನಾಯಕ ರಾಕೇಶ್ ಟಿಕಾಯತ್, ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಯುಪಿ ಜನರು ಗೃಹ ಸಚಿವ ಅಮಿತ್ ಶಾ, ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಇನ್ನು ಸಹಿಸುವುದಿಲ್ಲ. ನಾವು ಈ ರೀತಿಯ ಸರ್ಕಾರಗಳನ್ನು ಆಯ್ಕೆ ಮಾಡಿದರೆ, ಗಲಭೆಗಳು ಉಂಟಾಗುತ್ತವೆ. ಈ ಸ್ಥಳ ಈ ಹಿಂದೆ “ಅಲ್ಲಾಹು ಅಕ್ಬರ್, ಹರ್ ಹರ್ ಮಹದೇವ್” ಎಂಬ ಘೋಷಣೆಗಳಿಗೆ ಸಾಕ್ಷಿಯಾಗಿತ್ತು. ಇವರೆಲ್ಲಾ ವಿಭಜನೆಯ ಬಗ್ಗೆ ಮಾತನಾಡುತ್ತಾರೆ, ನಾವು ಒಗ್ಗೂಡಿಸುವ ಬಗ್ಗೆ ಮಾತನಾಡುತ್ತೇವೆ” ಎಂದು ಹೇಳಿದ್ದಾರೆ.

“ಕಾಯ್ದೆಗಳನ್ನು ಹಿಂಪಡೆಯುವವರೆಗೂ ಮನೆಗೆ ಮರುಳುವ ಮಾತೇ ಇಲ್ಲ. ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕು. ಕನಿಷ್ಠ ಬೆಂಬಲ ಬೆಲೆಯನ್ನು ಕಾನೂನು ಬದ್ಧಗೊಳಿಸಬೇಕು. ರೈತರ ಮೇಲಿರುವ ಪ್ರಕರಣಗಳನ್ನು ಕೈಬಿಡಬೇಕು” ಎಂದು ರಾಕೇಶ್‌ ಟಿಕಾಯತ್‌ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ನಾನೂ ಗೌರಿ’ ಕಿರುಚಿತ್ರ ಬಿಡುಗಡೆ: ವಾರ್ತಾಭಾರತಿಯಿಂದ ದಿಟ್ಟ ಪತ್ರಕರ್ತೆಗೆ ಗೌರವ ಸಮರ್ಪಣೆ

“ದೇಶವನ್ನು ಉಳಿಸುವುದಕ್ಕಾಗಿ ಮಹಾಪಂಚಾಯತ್ ಆಯೋಜಿಸಲಾಗಿದೆ ಎಂದು ಹೇಳಿದ ಟಿಕಾಯತ್‌ ಅವರು, ಈ ರೀತಿಯ ಪಂಚಾಯತ್‌ಗಳನ್ನು ದೇಶದೆಲ್ಲೆಡೆ ಆಯೋಜಿಸಲಾಗುವುದು. ರೈತರನ್ನು ಉಳಿಸಬೇಕಾಗಿದೆ. ದೇಶವನ್ನು ಉಳಿಸಬೇಕಿದೆ. ಉದ್ಯಮ, ಉದ್ಯೋಗ, ನೌಕರರು ಎಲ್ಲರನ್ನೂ ಉಳಿಸಬೇಕಾಗಿದೆ. ಇದೇ ನಮ್ಮ ಈ ಹೋರಾಟದ ಗುರಿ” ಎಂದಿದ್ದಾರೆ.

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಪ್ರಚಾರ ನಡೆಸಿದ ರೈತ ಸಂಘಟನೆಗಳು, ಉತ್ತರ ಪ್ರದೇಶದಲ್ಲೂ ಬಿಜೆಪಿ ವಿರುದ್ಧ ಅಭಿಯಾನ ನಡೆಸಲಿವೆ. ಇದಕ್ಕೆ ಮುಜಾಫರ್‌ನಗರ ಮಹಾಪಂಚಾಯತ್‌ನಿಂದ ಚಾಲನೆ ನೀಡಲಾಗಿದೆ. ರಾಕೇಶ್ ಟಿಕಾಯತ್ ವಿರುದ್ಧ ಕಿಡಿಕಾರಿದ್ದ ರಾಜ್ಯ ಬಿಜೆಪಿ ಘಟಕ ಈಗ ಪರದೆಯ ಹಿಂದೆ ಸರಿಯುತ್ತಿದೆ.

ಮುಜಾಫರ್‌ನಗರದ ಸರ್ಕಾರಿ ಇಂಟರ್‌ ಕಾಲೇಜ್‌ ಮೈದಾನದಲ್ಲಿ ಹಿಂದು-ಮುಸ್ಲಿಂ ಸಮುದಾಯ, ರೈತರು, ರೈತ ಮಹಿಳೆಯರು ಯುವಕರು ನೆರೆದು, ಒಕ್ಕೂಟ ಸರ್ಕಾರ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿದರು. ಮೈದಾನವಷ್ಟೇ ಅಲ್ಲದೆ, ನಗರದ ರಸ್ತೆ, ಫ್ಲೈಓವರ್‌ಗಳು ರೈತರಿಂದ ತುಂಬಿದ್ದವು.

ಮಹಾಪಂಚಾಯತ್‌ಗೆ ಹೊರಗಿಂದ ಬರುವ ರೈತರಿಗಾಗಿ 20 ಸಭಾಂಗಣಗಳನ್ನು ಸಜ್ಜುಗೊಳಿಸಲಾಗಿತ್ತು. ಯಾವುದೇ ವೈದ್ಯಕೀಯ ತುರ್ತುಸ್ಥಿತಿಯನ್ನು ಎದುರಿಸಲು ಸುಮಾರು 100 ವೈದ್ಯಕೀಯ ಶಿಬಿರಗಳು, 50 ಆಂಬ್ಯುಲೆನ್ಸ್‌ಗಳು ಮತ್ತು ತಾತ್ಕಾಲಿಕ ಆಸ್ಪತ್ರೆಯನ್ನು ಸಹ ಸ್ಥಾಪಿಸಲಾಗಿತ್ತು.


ಇದನ್ನೂ ಓದಿ: ಗೌರಿ ಲಂಕೇಶ್ ದಿನ: ಗೌರಿಯನ್ನು ನೆನೆಯುತ್ತಾ…ಸಾವಿರಾರು ಗೌರಿಯರ ಮಾತುಗಳು…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...