Homeಚಳವಳಿಐತಿಹಾಸಿಕ ಕಿಸಾನ್ ಮಹಾಪಂಚಾಯತ್: ಬಿಜೆಪಿ ಸರ್ಕಾರಕ್ಕೆ ಸವಾಲು ಹಾಕಿದ ರೈತರು

ಐತಿಹಾಸಿಕ ಕಿಸಾನ್ ಮಹಾಪಂಚಾಯತ್: ಬಿಜೆಪಿ ಸರ್ಕಾರಕ್ಕೆ ಸವಾಲು ಹಾಕಿದ ರೈತರು

- Advertisement -
- Advertisement -

ಉತ್ತರ ಪ್ರದೇಶ ಚುನಾವಣೆಗೆ ಕೆಲವೇ ತಿಂಗಳುಗಳಿರುವಾಗ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಕ್ಕೆ ಸವಾಲು ಹಾಕುತ್ತಾ, ಒಕ್ಕೂಟ ಸರ್ಕಾರದ ಮೂರು ವಿವಾದಿತ ಕೃಷಿ ಕಾನೂನುಗಳ ವಿರುದ್ಧ ನಡೆದ ಕಿಸಾನ್ ಮಹಾಪಂಚಾಯತ್ ಐತಿಹಾಸಿಕ ಯಶಸ್ಸು ಕಂಡಿದೆ.

ಯೋಗಿ ಆದಿತ್ಯನಾಥ್ ರಾಜ್ಯದಲ್ಲಿ ಅವರಿಗೆ ಸೆಡ್ಡು ಹೊಡೆದಿರುವ ರೈತರು, ಮುಜಾಫರ್‌ನಗರದಲ್ಲಿ  ಸೆಪ್ಟೆಂಬರ್‌ 5ರ ಭಾನುವಾರ ಹಿಂದೂ-ಮುಸ್ಲಿಂ ರೈತರು ಒಗ್ಗೂಡಿ ಅತಿ ದೊಡ್ಡ ಕಿಸಾನ್ ಮಹಾಪಂಚಾಯತ್ ನಡೆಸಿ ಯಶಸ್ವಿಯಾಗಿದ್ದಾರೆ. ಕಳೆದ ಹತ್ತು ತಿಂಗಳುಗಳಿಂದ ದೆಹಲಿಯ ರೈತ ಚಳುವಳಿಯನ್ನು ಮುನ್ನಡೆಸುತ್ತಿರುವ ರೈತ ಸಂಘಗಳ ಸಂಸ್ಥೆ ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಈ ಮಹಾಪಂಚಾಯತ್ ಯೋಜಿಸಿತ್ತು.

2013 ರಲ್ಲಿ ಕೋಮು ಗಲಭೆಗಳಿಂದ ಕಂಗೆಟ್ಟಿದ್ದ ಪಶ್ಚಿಮ ಉತ್ತರ ಪ್ರದೇಶದ ಮುಜಾಫರ್‌ನಗರ ಜಿಲ್ಲೆಯು, ಬಿಜೆಪಿ ಬರುವವರೆಗೂ ರಾಷ್ಟ್ರೀಯ ಲೋಕದಳ (ಆರ್‌ಎಲ್‌ಡಿ)ಯ ಭದ್ರಕೋಟೆಯಾಗಿತ್ತು.

ಇದನ್ನೂ ಓದಿ: ಉತ್ತರ ಪ್ರದೇಶ: ಯೋಗಿ ಸರ್ಕಾರಕ್ಕೆ ಸೆಡ್ಡು ಹೊಡೆಯಲು ಮುಜಾಫರ್‌ನಗರದಲ್ಲಿ ರೈತರ ಮಹಾಪಂಚಾಯತ್‌

ಭಾನುವಾರ, ಭಾರತೀಯ ಕಿಸಾನ್ ಯೂನಿಯನ್‌ ಟಿಕಾಯತ್ ಬಣದ ನಾಯಕ ರಾಕೇಶ್ ಟಿಕಾಯತ್, ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಯುಪಿ ಜನರು ಗೃಹ ಸಚಿವ ಅಮಿತ್ ಶಾ, ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಇನ್ನು ಸಹಿಸುವುದಿಲ್ಲ. ನಾವು ಈ ರೀತಿಯ ಸರ್ಕಾರಗಳನ್ನು ಆಯ್ಕೆ ಮಾಡಿದರೆ, ಗಲಭೆಗಳು ಉಂಟಾಗುತ್ತವೆ. ಈ ಸ್ಥಳ ಈ ಹಿಂದೆ “ಅಲ್ಲಾಹು ಅಕ್ಬರ್, ಹರ್ ಹರ್ ಮಹದೇವ್” ಎಂಬ ಘೋಷಣೆಗಳಿಗೆ ಸಾಕ್ಷಿಯಾಗಿತ್ತು. ಇವರೆಲ್ಲಾ ವಿಭಜನೆಯ ಬಗ್ಗೆ ಮಾತನಾಡುತ್ತಾರೆ, ನಾವು ಒಗ್ಗೂಡಿಸುವ ಬಗ್ಗೆ ಮಾತನಾಡುತ್ತೇವೆ” ಎಂದು ಹೇಳಿದ್ದಾರೆ.

“ಕಾಯ್ದೆಗಳನ್ನು ಹಿಂಪಡೆಯುವವರೆಗೂ ಮನೆಗೆ ಮರುಳುವ ಮಾತೇ ಇಲ್ಲ. ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕು. ಕನಿಷ್ಠ ಬೆಂಬಲ ಬೆಲೆಯನ್ನು ಕಾನೂನು ಬದ್ಧಗೊಳಿಸಬೇಕು. ರೈತರ ಮೇಲಿರುವ ಪ್ರಕರಣಗಳನ್ನು ಕೈಬಿಡಬೇಕು” ಎಂದು ರಾಕೇಶ್‌ ಟಿಕಾಯತ್‌ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ನಾನೂ ಗೌರಿ’ ಕಿರುಚಿತ್ರ ಬಿಡುಗಡೆ: ವಾರ್ತಾಭಾರತಿಯಿಂದ ದಿಟ್ಟ ಪತ್ರಕರ್ತೆಗೆ ಗೌರವ ಸಮರ್ಪಣೆ

“ದೇಶವನ್ನು ಉಳಿಸುವುದಕ್ಕಾಗಿ ಮಹಾಪಂಚಾಯತ್ ಆಯೋಜಿಸಲಾಗಿದೆ ಎಂದು ಹೇಳಿದ ಟಿಕಾಯತ್‌ ಅವರು, ಈ ರೀತಿಯ ಪಂಚಾಯತ್‌ಗಳನ್ನು ದೇಶದೆಲ್ಲೆಡೆ ಆಯೋಜಿಸಲಾಗುವುದು. ರೈತರನ್ನು ಉಳಿಸಬೇಕಾಗಿದೆ. ದೇಶವನ್ನು ಉಳಿಸಬೇಕಿದೆ. ಉದ್ಯಮ, ಉದ್ಯೋಗ, ನೌಕರರು ಎಲ್ಲರನ್ನೂ ಉಳಿಸಬೇಕಾಗಿದೆ. ಇದೇ ನಮ್ಮ ಈ ಹೋರಾಟದ ಗುರಿ” ಎಂದಿದ್ದಾರೆ.

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಪ್ರಚಾರ ನಡೆಸಿದ ರೈತ ಸಂಘಟನೆಗಳು, ಉತ್ತರ ಪ್ರದೇಶದಲ್ಲೂ ಬಿಜೆಪಿ ವಿರುದ್ಧ ಅಭಿಯಾನ ನಡೆಸಲಿವೆ. ಇದಕ್ಕೆ ಮುಜಾಫರ್‌ನಗರ ಮಹಾಪಂಚಾಯತ್‌ನಿಂದ ಚಾಲನೆ ನೀಡಲಾಗಿದೆ. ರಾಕೇಶ್ ಟಿಕಾಯತ್ ವಿರುದ್ಧ ಕಿಡಿಕಾರಿದ್ದ ರಾಜ್ಯ ಬಿಜೆಪಿ ಘಟಕ ಈಗ ಪರದೆಯ ಹಿಂದೆ ಸರಿಯುತ್ತಿದೆ.

ಮುಜಾಫರ್‌ನಗರದ ಸರ್ಕಾರಿ ಇಂಟರ್‌ ಕಾಲೇಜ್‌ ಮೈದಾನದಲ್ಲಿ ಹಿಂದು-ಮುಸ್ಲಿಂ ಸಮುದಾಯ, ರೈತರು, ರೈತ ಮಹಿಳೆಯರು ಯುವಕರು ನೆರೆದು, ಒಕ್ಕೂಟ ಸರ್ಕಾರ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿದರು. ಮೈದಾನವಷ್ಟೇ ಅಲ್ಲದೆ, ನಗರದ ರಸ್ತೆ, ಫ್ಲೈಓವರ್‌ಗಳು ರೈತರಿಂದ ತುಂಬಿದ್ದವು.

ಮಹಾಪಂಚಾಯತ್‌ಗೆ ಹೊರಗಿಂದ ಬರುವ ರೈತರಿಗಾಗಿ 20 ಸಭಾಂಗಣಗಳನ್ನು ಸಜ್ಜುಗೊಳಿಸಲಾಗಿತ್ತು. ಯಾವುದೇ ವೈದ್ಯಕೀಯ ತುರ್ತುಸ್ಥಿತಿಯನ್ನು ಎದುರಿಸಲು ಸುಮಾರು 100 ವೈದ್ಯಕೀಯ ಶಿಬಿರಗಳು, 50 ಆಂಬ್ಯುಲೆನ್ಸ್‌ಗಳು ಮತ್ತು ತಾತ್ಕಾಲಿಕ ಆಸ್ಪತ್ರೆಯನ್ನು ಸಹ ಸ್ಥಾಪಿಸಲಾಗಿತ್ತು.


ಇದನ್ನೂ ಓದಿ: ಗೌರಿ ಲಂಕೇಶ್ ದಿನ: ಗೌರಿಯನ್ನು ನೆನೆಯುತ್ತಾ…ಸಾವಿರಾರು ಗೌರಿಯರ ಮಾತುಗಳು…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...