Homeಕರ್ನಾಟಕಕಾರ್ಮಿಕರಿಗೆ ಕೋವಿಡ್ ಲಸಿಕೆ ನೆಪದಲ್ಲಿ 312 ಕೋಟಿ ದುರ್ಬಳಕೆ: ಹರೀಶ್ ನಾಯ್ಕ್ ಆರೋಪ

ಕಾರ್ಮಿಕರಿಗೆ ಕೋವಿಡ್ ಲಸಿಕೆ ನೆಪದಲ್ಲಿ 312 ಕೋಟಿ ದುರ್ಬಳಕೆ: ಹರೀಶ್ ನಾಯ್ಕ್ ಆರೋಪ

ನಾವು ಖರ್ಚು ಮಾಡುತ್ತಿರುವುದು ಕಡಿಮೆ ಮೊತ್ತ. ಉಚಿತ ಸರ್ಕಾರಿ ಲಸಿಕೆ ತಡವಾಗುವುದರಿಂದ ಪಾವತಿ ಮಾಡುತ್ತಿದ್ದೇವೆ ಎಂದು ತಮ್ಮ ನಡೆಯನ್ನು ಸಚಿವ ಶಿವರಾಮ್ ಹೆಬ್ಬಾರ್ ಸಮರ್ಥಿಸಿಕೊಂಡಿದ್ದಾರೆ.

- Advertisement -
- Advertisement -

ನಲವತ್ತು ಲಕ್ಷ ಕಟ್ಟಡ ಕಾರ್ಮಿಕರು ಮತ್ತು ವಲಸೆ ಕಾರ್ಮಿಕರಿಗೆ ಕೋವಿಡ್ ಲಸಿಕೆ ಕೊಡುವ ಯೋಜನೆ ಹಾಕಿ ಕಾರ್ಮಿಕ ಕಲ್ಯಾಣ ಮಂಡಳಿಯ 312 ಕೋಟಿ ಲೂಟಿಗೆ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಹಾಗೂ ಮಂಡಳಿಯ ಅಧಿಕಾರಿಗಳು ಯತ್ನಿಸುತ್ತಿದ್ದಾರೆ ಎಂದು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ರಾಜ್ಯ ಉಪಾಧ್ಯಕ್ಷ ಹರೀಶ್ ನಾಯ್ಕ್ ಆರೋಪಿಸಿದ್ದಾರೆ.

ಕಾರ್ಮಿಕ ಮಂತ್ರಿ ಶಿವರಾಮ್ ಹೆಬ್ಬಾರ್ ಕಾರ್ಮಿಕರಿಗೆ ಕೋವಿಡ್ ಲಸಿಕೆ ವಿತರಣೆಗೆಂದು 312 ಕೋಟಿ ರೂಗಳನ್ನು ಖಾಸಗಿ ಆಸ್ಪತ್ರೆ ಮಾಲೀಕರಿಗೆ ಧಾರೆಯೆರೆಯಲು ಮುಂದಾಗಿರುವುದು ಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟ ನಿಧಿಯ ದುರ್ಬಳಕೆಯೆಂದು ಅವರು ಕಿಡಿಕಾರಿದ್ದಾರೆ.

ಕಾರ್ಮಿಕ ಸಚಿವರು, ಕಾರ್ಮಿಕ ಕಲ್ಯಾಣ ಮಂಡಳಿ ಅಧಿಕಾರಿಗಳು ಮತ್ತು ಖಾಸಗಿ ಆಸ್ಪತ್ರೆ ಧಣಿಗಳ ನಡುವೆ ನಡೆದ ಮಾತುಕತೆ ವೇಳೆ ರಾಜ್ಯದ 30 ಲಕ್ಷ ನೋಂದಾಯಿತ ಕಾರ್ಮಿಕರಿಗೆ ಮತ್ತು 10 ಲಕ್ಷ ವಲಸೆ ಕಾರ್ಮಿಕರಿಗೆ ಪ್ರತಿ ಲಸಿಕೆಗೆ 780 ರೂ ದರದಲ್ಲಿ ಕೋವಿಡ್ ಲಸಿಕೆ ಕೊಡಲು ಒಪ್ಪಂದ ಮಾಡಿಕೊಳ್ಳಲಾಗಿದೆ. ಕಾರ್ಮಿಕ ಕಲ್ಯಾಣ ಮಂಡಳಿಯ ನಿಧಿ ಪೋಲು ಮಾಡುವ ಕೆಲಸ ಇದಾಗಿದೆ. ಏಕೆಂದರೆ ಸರ್ಕಾರವೇ ನೇರವಾಗಿ ಉಚಿತ ಲಸಿಕೆ ನೀಡಬೇಕಾದರೆ ಇಲ್ಲಿ ಮಾತ್ರ ಏಕೆ ಹಣ ನೀಡಬೇಕು? ಕಟ್ಟಡ ಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಾಗಿರುವ ಈ ನಿಧಿ ದುರ್ಬಳಕೆಗೆ ಸಚಿವರು ಮತ್ತು ಮಂಡಳಿಯ ಅಧಿಕಾರಿಗಳ ಕೂಟ ಪ್ರಯತ್ನ ನಡೆಸಿದೆಯೆಂದು ನಾಯ್ಕ್ ಹೇಳಿದ್ದಾರೆ.

ಹರೀಶ್ ನಾಯ್ಕ್ (ಎಡದಿಂದ ಮೊದಲನೇಯವರು)

ಈಗಾಗಲೇ ಕಾರ್ಮಿಕ ಇಲಾಖೆಯಲ್ಲಿ ಮತ್ತು ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ ಹಲವು ಅವ್ಯವಹಾರ ನಡೆಸಲಾಗಿದೆ. ಟೂಲ್ ಕಿಟ್, ರೇಶನ್ ಕಿಟ್, ಬೂಸ್ಟಪ್ ಕಿಟ್, ಸುರಕ್ಷಾ ಕಿಟ್, ಕಂಪ್ಯೂಟರ್ ಖರೀದಿ, ಹೊಸ ತಂತ್ರಾಂಶ ಅಳವಡಿಕೆ, ಟಿವಿ ಖರೀದಿ, ಇನೋವಾ ಕಾರ್ ಖರೀದಿಯಲ್ಲಿ ಕೋಟ್ಯಾಂತರರೂ ಗೋಲ್ಮಾಲ್ ನಡೆಸಲಾಗಿದೆ. ಇದಲ್ಲದೆ ಮಂಡಳಿಯ 2688.90 ಕೋಟಿ ರೂ.ವಿವಿಧ ಬಾಬತ್ತುಗಳಿಗೆ 2021-22ನೇ ಸಾಲಿನಲ್ಲಿ ವ್ಯಯಿಸಲು ಮಂಡಳಿಯ ಸಭೆಯಲ್ಲಿ ನಿರ್ಧರಿಸಲಾಗಿದೆ. ಈ ಅವಕಾಶ ಬಳಸಿಕೊಂಡು ಕಾರ್ಮಿಕ ಮಂತ್ರಿ ಹೆಬ್ಬಾರ್, ಕಾರ್ಮಿಕ ಇಲಾಖೆಯ ಅಧಿಕಾರಿಗಳು ಮತ್ತು ಕಾರ್ಮಿಕ ಕಲ್ಯಾಣ ಮಂಡಳಿ ಕಾರ್ಯದರ್ಶಿ ಕೋಟಿ ಕಬಳಿಸಲು ನೋಡುತ್ತಿದ್ದಾರೆ. ಬಡ ಕಾರ್ಮಿಕರ ಹೆಸರಲ್ಲಿ ನಡೆಯುತ್ತಿರುವ ಹಗಲು ದರೋಡೆಯಿದು. ಇದಕ್ಕೆ ಕಡಿವಾಣ ಹಾಕಬೇಕಿದೆಯೆಂದು ಹರೀಶ್ ನಾಯ್ಕ್ ಹೇಳಿದ್ದಾರೆ.

ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಸೆಸ್ ರೂಪದಲ್ಲಿ ಸಂಗ್ರಹಿಸಿದ 10,000 ಕೋಟಿಗೂ ಅಧಿಕ ಹಣವಿದೆ. ಅದನ್ನು ಕಾರ್ಮಿಕ ಕಲ್ಯಾಣ ಉದ್ದೇಶಕ್ಕಾಗಿ ಮಾತ್ರ ಬಳಸಬಹುದಾಗಿದೆ. ಆದರೆ ರೇಷನ್ ಕಿಟ್, ಲಸಿಕೆ ಹೆಸರಲ್ಲಿ ಅದನ್ನು ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ ಎಂಬ ಆರೋಪ ಪದೇ ಪದೇ ಕೇಳಿಬರುತ್ತಿದೆ.

ಈಗಾಗಲೇ ಖಾಸಗಿ ಶಾಲೆಗಳು ಲಸಿಕೆ ನೀಡಲು ಹಲವು ಕೋಟಿ ರೂ ಪಾವತಿಸಲಾಗಿದೆ ಮತ್ತು ಕಾರ್ಯಾದೇಶ ನೀಡಲಾಗಿದೆ ಎಂದು ಪ್ರಜಾವಾಣಿ ವರದಿ ಮಾಡಿದೆ. ನಾವು ಖರ್ಚು ಮಾಡುತ್ತಿರುವುದು ಕಡಿಮೆ ಮೊತ್ತ. ಉಚಿತ ಸರ್ಕಾರಿ ಲಸಿಕೆ ತಡವಾಗುವುದರಿಂದ ಪಾವತಿ ಮಾಡುತ್ತಿದ್ದೇವೆ ಎಂದು ತಮ್ಮ ನಡೆಯನ್ನು ಸಚಿವ ಶಿವರಾಮ್ ಹೆಬ್ಬಾರ್ ಸಮರ್ಥಿಸಿಕೊಂಡಿದ್ದಾರೆ.


ಇದನ್ನೂ ಓದಿ: ಉತ್ತರ ಕನ್ನಡ: ಹೆಬ್ಬಾರ್‌ರ ಯಲ್ಲಾಪುರದಿಂದ ಸ್ಪರ್ಧೆಗೆ ದೇಶಪಾಂಡೆ ಮಗ ಸಜ್ಜು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...