Homeಕರ್ನಾಟಕಕನ್ನಡಿಗರಿಗೆ ಹಿಂದಿ ದಿವಸ ಬೇಕಾಗಿಲ್ಲ; ರಾಜ್ಯಾದ್ಯಂತ ಪ್ರತಿಭಟನೆಗೆ ಕರವೇ ಸಜ್ಜು: ನಾರಾಯಣಗೌಡ

ಕನ್ನಡಿಗರಿಗೆ ಹಿಂದಿ ದಿವಸ ಬೇಕಾಗಿಲ್ಲ; ರಾಜ್ಯಾದ್ಯಂತ ಪ್ರತಿಭಟನೆಗೆ ಕರವೇ ಸಜ್ಜು: ನಾರಾಯಣಗೌಡ

- Advertisement -
- Advertisement -

ಸೆಪ್ಟೆಂಬರ್ 14ರಂದು ಭಾರತ ಒಕ್ಕೂಟ ಸರ್ಕಾರ ನಡೆಸುವ ಹಿಂದಿ ದಿವಸ ಆಚರಣೆಗೆ ಕರ್ನಾಟಕ ರಕ್ಷಣಾ ವೇದಿಕೆ ತೀವ್ರವಾಗಿ ವಿರೋಧಿಸುತ್ತದೆ. ಆ ದಿನದಂದು ರಾಜ್ಯದ ಎಲ್ಲ ಭಾಗಗಳಲ್ಲೂ ರಾಷ್ಟ್ರೀಕೃತ ಮತ್ತು ಗ್ರಾಮೀಣ ಬ್ಯಾಂಕ್ ಗಳ ಮುಂಭಾಗ  ಪ್ರತಿಭಟನೆಗಳನ್ನು ನಡೆಸಲಾಗುವುದು ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣಗೌಡ ತಿಳಿಸಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಅವರು, ಕನ್ನಡಿಗರ ತೆರಿಗೆ ಹಣದಲ್ಲಿ ನಡೆಸಲಾಗುವ ಹಿಂದಿ ದಿವಸ ಆಚರಣೆ ಕನ್ನಡಿಗರಿಗೆ ಬೇಕಾಗಿಲ್ಲ. ಭಾಷಾ ವೈವಿಧ್ಯದ ಭಾರತದಲ್ಲಿ ಒಂದು ಭಾಷೆಯನ್ನು ಹೊತ್ತು ಮೆರೆಸುವುದರ ಅಗತ್ಯವಿಲ್ಲ. ಭಾರತೀಯ ಭಾಷೆಗಳಲ್ಲಿ ಹಿಂದಿಯೂ ಒಂದು, ಅದಕ್ಕೆ ವಿಶೇಷ ಮಹತ್ವ, ಪ್ರೋತ್ಸಾಹ ನೀಡುವುದು ಅನ್ಯಾಯ ಎಂದು ಅಭಿಪ್ರಾಯಪಟ್ಟಿದ್ದಾರೆ.

ಭಾರತದ ಸಂವಿಧಾನದ ಹದಿನಾಲ್ಕನೇ ಪರಿಚ್ಛೇದವು ಪ್ರತಿಯೊಬ್ಬ ಭಾರತೀಯನಿಗೂ ಸಮಾನತೆಯ ಹಕ್ಕನ್ನು ನೀಡುತ್ತದೆ. ಹಿಂದಿ ದಿವಸ ಆಚರಣೆಯ ಮೂಲಕ ಇತರ ಭಾರತೀಯ ಭಾಷೆಗಳನ್ನು ಕಡೆಗಣಿಸಿ, ಇತರ ಭಾಷಿಕರನ್ನು ಎರಡನೇ ದರ್ಜೆ ಪ್ರಜೆಗಳನ್ನಾಗಿಸುವುದು ಅಕ್ಷಮ್ಯ. ಇದು ಇನ್ನು ಮೇಲಾದರೂ ನಿಲ್ಲಬೇಕಿದೆ ಎಂದು ಆಗ್ರಹಿಸಿದ್ದಾರೆ.

ಹಿಂದಿನುಡಿಯೊಂದನ್ನು ಇಡೀ ದೇಶದಲ್ಲಿ ಬೆಳೆಸುವ ಪ್ರಮುಖ ಉದ್ದೇಶ, ಹಿಂದಿ ಭಾಷಿಕರಿಗೆ ಎಲ್ಲ ರಾಜ್ಯಗಳಲ್ಲೂ ಅಗತ್ಯ ಸೇವೆಗಳನ್ನು ಕಲ್ಪಿಸುವುದೇ ಆಗಿದೆ. ಇದರ ಮೂಲಕ ಇತರ ಭಾಷಿಕರಿಗೆ ಇಲ್ಲದ ಸೌಲಭ್ಯ ಹಿಂದಿ ಭಾಷಿಕರಿಗೆ ಒದಗಿಸಲಾಗುತ್ತಿದೆ. ಇದು ಸಂವಿಧಾನದ ಸಮಾನತೆಯ ಆಶಯಗಳಿಗೆ ವಿರುದ್ಧವಾಗಿದೆ ಎಂದು ತಿಳಿಸಿದ್ದಾರೆ.

ಒಕ್ಕೂಟ ಸರ್ಕಾರದ ನೇತೃತ್ವವನ್ನು ಯಾವುದೇ ರಾಜಕೀಯ ಪಕ್ಷ ಹಿಡಿದರೂ ಹಿಂದಿ ಹೇರಿಕೆಯನ್ನು ಎಗ್ಗಿಲ್ಲದೆ ನಡೆಸಲಾಗುತ್ತಿದೆ. ಕಳೆದ ಇಪ್ಪತ್ತು ವರ್ಷಗಳಿಂದಲೂ ಕರ್ನಾಟಕ ರಕ್ಷಣಾ ವೇದಿಕೆ ಪ್ರತಿವರ್ಷ ಹಿಂದಿ ದಿವಸ ಆಚರಣೆಯನ್ನು ವಿರೋಧಿಸುತ್ತ ಬಂದಿದೆ. ಭಾರತದ ಎಲ್ಲ ಭಾಷೆಗಳಿಗೂ ಸಮಾನ ಸ್ಥಾನಮಾನ ದೊರೆಯುವವರೆಗೆ ಈ ಪ್ರತಿರೋಧ ಮುಂದುವರೆಯಲಿದೆ ಎಂದು ಎಚ್ಚರಿಸಿದ್ದಾರೆ.

ಭಾರತ ಒಕ್ಕೂಟ ಸರ್ಕಾರ ಸಂವಿಧಾನದ 343ರಿಂದ 351ವರೆಗಿನ ಪರಿಚ್ಛೇದಗಳಿಗೆ ತಿದ್ದುಪಡಿ ತಂದು, ಹಿಂದಿ ಭಾಷೆಗೆ ನೀಡಲಾಗಿರುವ ವಿಶೇಷ ಅವಕಾಶಗಳನ್ನು ಕಿತ್ತುಹಾಕಬೇಕು. ಈ ಪರಿಚ್ಛೇದಗಳನ್ನು ತೆಗೆದುಹಾಕದ ಹೊರತು ಭಾರತೀಯರೆಲ್ಲರೂ ಸಮಾನರಾಗಲು ಸಾಧ್ಯವೇ ಇಲ್ಲ. ಭಾಷೆಯ ಹೆಸರಿನ ತಾರತಮ್ಯ ಕೊನೆಗೊಳ್ಳಲೇಬೇಕಾಗಿದೆ. ಹಿಂದಿ ಹೇರಿಕೆಯ ಪರಿಣಾಮವಾಗಿ ಕೇಂದ್ರ ಸರ್ಕಾರದ ಉದ್ಯೋಗಗಳು ಹಿಂದಿ ಭಾಷಿಕರ ಪಾಲಾಗುತ್ತಿವೆ. ಕನ್ನಡದ ಮಕ್ಕಳು ನಿರುದ್ಯೋಗದ ಸಮಸ್ಯೆ ಎದುರಿಸುವಂತಾಗಿದೆ. ಕರ್ನಾಟಕಕ್ಕೆ ಉತ್ತರದ ರಾಜ್ಯಗಳಿಂದ ವಲಸೆ ವಿಪರೀತವಾಗಿದ್ದು, ಕನ್ನಡಿಗರ ಅಸ್ಮಿತೆ, ಸಂಸ್ಕೃತಿ, ಪರಂಪರೆ ಮತ್ತು ಬದುಕು ಅಪಾಯಕ್ಕೆ ಸಿಲುಕಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ತಂತ್ರಜ್ಞಾನ ಮುಂದುವರೆದಿರುವುದರಿಂದ ಭಾರತದಲ್ಲಿ ಬಹುಭಾಷೆಗಳನ್ನು ಆಡಳಿತ ಭಾಷೆಗಳನ್ನಾಗಿ ಹೊಂದುವುದಕ್ಕೆ ಅವಕಾಶವಿದೆ. ಹಿಂದಿ, ಇಂಗ್ಲಿಷ್ ಮಾತ್ರವಲ್ಲದೆ ದೇಶದ ಎಲ್ಲ ಭಾಷೆಗಳನ್ನೂ ಆಡಳಿತ ಭಾಷೆಗಳನ್ನಾಗಿ ಮಾಡಬೇಕು. ಹಿಂದಿಯನ್ನರು ಶ್ರೇಷ್ಠ, ಉಳಿದವರು ಕನಿಷ್ಠ ಎಂಬ ಧೋರಣೆ ತೊಲಗಬೇಕು‌. ಈ ಎಲ್ಲ ಹಿನ್ನೆಲೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಸೆಪ್ಟೆಂಬರ್ 14ರಂದು ರಾಜ್ಯದಾದ್ಯಂತ ಎಲ್ಲ ರಾಷ್ಟ್ರೀಕೃತ, ಗ್ರಾಮೀಣ ಬ್ಯಾಂಕ್ ಗಳ ಮುಂಭಾಗ ಬೆಳಿಗ್ಗೆಯಿಂದ ಸಂಜೆಯವರೆಗೆ ವಿಭಿನ್ನ ರೀತಿಯ ಪ್ರತಿಭಟನೆಗಳನ್ನು ಹಮ್ಮಿಕೊಂಡಿದೆ. ಹಿಂದಿ ದಿವಸ ಆಚರಣೆ ಹೆಸರಿನ‌ ಮೋಸ, ದಬ್ಬಾಳಿಕೆಯನ್ನು ಕರವೇ ತೀವ್ರವಾಗಿ ವಿರೋಧಿಸಲಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ’ನಿಮ್ಮ ದುರಹಂಕಾರದ ನೆತ್ತಿಯ ಮೇಲೆ ಕಾಲಿಟ್ಟು ನಡೆಯುತ್ತೇವೆ’: ಕರವೇ ಅಭಿಯಾನಕ್ಕೆ ವ್ಯಾಪಕ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕರ್ನಾಟಕ ರಕ್ಷಣಾ ವೇದಿಕೆಯ ಈ ನಿರ್ದಾರ ಸ್ವಾಗತಾರ್ಹ. ಕನ್ನಡಿಗರೂ ಈ ನಿರ್ಧಾರವನ್ನು ಬೆಂಬಲಿಸಬೇಕು.

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...