Homeಕರ್ನಾಟಕಕನ್ನಡಿಗರಿಗೆ ಹಿಂದಿ ದಿವಸ ಬೇಕಾಗಿಲ್ಲ; ರಾಜ್ಯಾದ್ಯಂತ ಪ್ರತಿಭಟನೆಗೆ ಕರವೇ ಸಜ್ಜು: ನಾರಾಯಣಗೌಡ

ಕನ್ನಡಿಗರಿಗೆ ಹಿಂದಿ ದಿವಸ ಬೇಕಾಗಿಲ್ಲ; ರಾಜ್ಯಾದ್ಯಂತ ಪ್ರತಿಭಟನೆಗೆ ಕರವೇ ಸಜ್ಜು: ನಾರಾಯಣಗೌಡ

- Advertisement -
- Advertisement -

ಸೆಪ್ಟೆಂಬರ್ 14ರಂದು ಭಾರತ ಒಕ್ಕೂಟ ಸರ್ಕಾರ ನಡೆಸುವ ಹಿಂದಿ ದಿವಸ ಆಚರಣೆಗೆ ಕರ್ನಾಟಕ ರಕ್ಷಣಾ ವೇದಿಕೆ ತೀವ್ರವಾಗಿ ವಿರೋಧಿಸುತ್ತದೆ. ಆ ದಿನದಂದು ರಾಜ್ಯದ ಎಲ್ಲ ಭಾಗಗಳಲ್ಲೂ ರಾಷ್ಟ್ರೀಕೃತ ಮತ್ತು ಗ್ರಾಮೀಣ ಬ್ಯಾಂಕ್ ಗಳ ಮುಂಭಾಗ  ಪ್ರತಿಭಟನೆಗಳನ್ನು ನಡೆಸಲಾಗುವುದು ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣಗೌಡ ತಿಳಿಸಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಅವರು, ಕನ್ನಡಿಗರ ತೆರಿಗೆ ಹಣದಲ್ಲಿ ನಡೆಸಲಾಗುವ ಹಿಂದಿ ದಿವಸ ಆಚರಣೆ ಕನ್ನಡಿಗರಿಗೆ ಬೇಕಾಗಿಲ್ಲ. ಭಾಷಾ ವೈವಿಧ್ಯದ ಭಾರತದಲ್ಲಿ ಒಂದು ಭಾಷೆಯನ್ನು ಹೊತ್ತು ಮೆರೆಸುವುದರ ಅಗತ್ಯವಿಲ್ಲ. ಭಾರತೀಯ ಭಾಷೆಗಳಲ್ಲಿ ಹಿಂದಿಯೂ ಒಂದು, ಅದಕ್ಕೆ ವಿಶೇಷ ಮಹತ್ವ, ಪ್ರೋತ್ಸಾಹ ನೀಡುವುದು ಅನ್ಯಾಯ ಎಂದು ಅಭಿಪ್ರಾಯಪಟ್ಟಿದ್ದಾರೆ.

ಭಾರತದ ಸಂವಿಧಾನದ ಹದಿನಾಲ್ಕನೇ ಪರಿಚ್ಛೇದವು ಪ್ರತಿಯೊಬ್ಬ ಭಾರತೀಯನಿಗೂ ಸಮಾನತೆಯ ಹಕ್ಕನ್ನು ನೀಡುತ್ತದೆ. ಹಿಂದಿ ದಿವಸ ಆಚರಣೆಯ ಮೂಲಕ ಇತರ ಭಾರತೀಯ ಭಾಷೆಗಳನ್ನು ಕಡೆಗಣಿಸಿ, ಇತರ ಭಾಷಿಕರನ್ನು ಎರಡನೇ ದರ್ಜೆ ಪ್ರಜೆಗಳನ್ನಾಗಿಸುವುದು ಅಕ್ಷಮ್ಯ. ಇದು ಇನ್ನು ಮೇಲಾದರೂ ನಿಲ್ಲಬೇಕಿದೆ ಎಂದು ಆಗ್ರಹಿಸಿದ್ದಾರೆ.

ಹಿಂದಿನುಡಿಯೊಂದನ್ನು ಇಡೀ ದೇಶದಲ್ಲಿ ಬೆಳೆಸುವ ಪ್ರಮುಖ ಉದ್ದೇಶ, ಹಿಂದಿ ಭಾಷಿಕರಿಗೆ ಎಲ್ಲ ರಾಜ್ಯಗಳಲ್ಲೂ ಅಗತ್ಯ ಸೇವೆಗಳನ್ನು ಕಲ್ಪಿಸುವುದೇ ಆಗಿದೆ. ಇದರ ಮೂಲಕ ಇತರ ಭಾಷಿಕರಿಗೆ ಇಲ್ಲದ ಸೌಲಭ್ಯ ಹಿಂದಿ ಭಾಷಿಕರಿಗೆ ಒದಗಿಸಲಾಗುತ್ತಿದೆ. ಇದು ಸಂವಿಧಾನದ ಸಮಾನತೆಯ ಆಶಯಗಳಿಗೆ ವಿರುದ್ಧವಾಗಿದೆ ಎಂದು ತಿಳಿಸಿದ್ದಾರೆ.

ಒಕ್ಕೂಟ ಸರ್ಕಾರದ ನೇತೃತ್ವವನ್ನು ಯಾವುದೇ ರಾಜಕೀಯ ಪಕ್ಷ ಹಿಡಿದರೂ ಹಿಂದಿ ಹೇರಿಕೆಯನ್ನು ಎಗ್ಗಿಲ್ಲದೆ ನಡೆಸಲಾಗುತ್ತಿದೆ. ಕಳೆದ ಇಪ್ಪತ್ತು ವರ್ಷಗಳಿಂದಲೂ ಕರ್ನಾಟಕ ರಕ್ಷಣಾ ವೇದಿಕೆ ಪ್ರತಿವರ್ಷ ಹಿಂದಿ ದಿವಸ ಆಚರಣೆಯನ್ನು ವಿರೋಧಿಸುತ್ತ ಬಂದಿದೆ. ಭಾರತದ ಎಲ್ಲ ಭಾಷೆಗಳಿಗೂ ಸಮಾನ ಸ್ಥಾನಮಾನ ದೊರೆಯುವವರೆಗೆ ಈ ಪ್ರತಿರೋಧ ಮುಂದುವರೆಯಲಿದೆ ಎಂದು ಎಚ್ಚರಿಸಿದ್ದಾರೆ.

ಭಾರತ ಒಕ್ಕೂಟ ಸರ್ಕಾರ ಸಂವಿಧಾನದ 343ರಿಂದ 351ವರೆಗಿನ ಪರಿಚ್ಛೇದಗಳಿಗೆ ತಿದ್ದುಪಡಿ ತಂದು, ಹಿಂದಿ ಭಾಷೆಗೆ ನೀಡಲಾಗಿರುವ ವಿಶೇಷ ಅವಕಾಶಗಳನ್ನು ಕಿತ್ತುಹಾಕಬೇಕು. ಈ ಪರಿಚ್ಛೇದಗಳನ್ನು ತೆಗೆದುಹಾಕದ ಹೊರತು ಭಾರತೀಯರೆಲ್ಲರೂ ಸಮಾನರಾಗಲು ಸಾಧ್ಯವೇ ಇಲ್ಲ. ಭಾಷೆಯ ಹೆಸರಿನ ತಾರತಮ್ಯ ಕೊನೆಗೊಳ್ಳಲೇಬೇಕಾಗಿದೆ. ಹಿಂದಿ ಹೇರಿಕೆಯ ಪರಿಣಾಮವಾಗಿ ಕೇಂದ್ರ ಸರ್ಕಾರದ ಉದ್ಯೋಗಗಳು ಹಿಂದಿ ಭಾಷಿಕರ ಪಾಲಾಗುತ್ತಿವೆ. ಕನ್ನಡದ ಮಕ್ಕಳು ನಿರುದ್ಯೋಗದ ಸಮಸ್ಯೆ ಎದುರಿಸುವಂತಾಗಿದೆ. ಕರ್ನಾಟಕಕ್ಕೆ ಉತ್ತರದ ರಾಜ್ಯಗಳಿಂದ ವಲಸೆ ವಿಪರೀತವಾಗಿದ್ದು, ಕನ್ನಡಿಗರ ಅಸ್ಮಿತೆ, ಸಂಸ್ಕೃತಿ, ಪರಂಪರೆ ಮತ್ತು ಬದುಕು ಅಪಾಯಕ್ಕೆ ಸಿಲುಕಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ತಂತ್ರಜ್ಞಾನ ಮುಂದುವರೆದಿರುವುದರಿಂದ ಭಾರತದಲ್ಲಿ ಬಹುಭಾಷೆಗಳನ್ನು ಆಡಳಿತ ಭಾಷೆಗಳನ್ನಾಗಿ ಹೊಂದುವುದಕ್ಕೆ ಅವಕಾಶವಿದೆ. ಹಿಂದಿ, ಇಂಗ್ಲಿಷ್ ಮಾತ್ರವಲ್ಲದೆ ದೇಶದ ಎಲ್ಲ ಭಾಷೆಗಳನ್ನೂ ಆಡಳಿತ ಭಾಷೆಗಳನ್ನಾಗಿ ಮಾಡಬೇಕು. ಹಿಂದಿಯನ್ನರು ಶ್ರೇಷ್ಠ, ಉಳಿದವರು ಕನಿಷ್ಠ ಎಂಬ ಧೋರಣೆ ತೊಲಗಬೇಕು‌. ಈ ಎಲ್ಲ ಹಿನ್ನೆಲೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಸೆಪ್ಟೆಂಬರ್ 14ರಂದು ರಾಜ್ಯದಾದ್ಯಂತ ಎಲ್ಲ ರಾಷ್ಟ್ರೀಕೃತ, ಗ್ರಾಮೀಣ ಬ್ಯಾಂಕ್ ಗಳ ಮುಂಭಾಗ ಬೆಳಿಗ್ಗೆಯಿಂದ ಸಂಜೆಯವರೆಗೆ ವಿಭಿನ್ನ ರೀತಿಯ ಪ್ರತಿಭಟನೆಗಳನ್ನು ಹಮ್ಮಿಕೊಂಡಿದೆ. ಹಿಂದಿ ದಿವಸ ಆಚರಣೆ ಹೆಸರಿನ‌ ಮೋಸ, ದಬ್ಬಾಳಿಕೆಯನ್ನು ಕರವೇ ತೀವ್ರವಾಗಿ ವಿರೋಧಿಸಲಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ’ನಿಮ್ಮ ದುರಹಂಕಾರದ ನೆತ್ತಿಯ ಮೇಲೆ ಕಾಲಿಟ್ಟು ನಡೆಯುತ್ತೇವೆ’: ಕರವೇ ಅಭಿಯಾನಕ್ಕೆ ವ್ಯಾಪಕ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕರ್ನಾಟಕ ರಕ್ಷಣಾ ವೇದಿಕೆಯ ಈ ನಿರ್ದಾರ ಸ್ವಾಗತಾರ್ಹ. ಕನ್ನಡಿಗರೂ ಈ ನಿರ್ಧಾರವನ್ನು ಬೆಂಬಲಿಸಬೇಕು.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...