Homeಮುಖಪುಟಗುಂಪು ಹಲ್ಲೆ ಸರಣಿ ಮುಂದುವರಿಕೆ - ‘ಲವ್‌ ಜಿಹಾದ್‌’ ಆರೋಪದಲ್ಲಿ ಅಪ್ರಾಪ್ತ ಹಿಂದೂ ಬಾಲಕನಿಗೆ ಥಳಿತ

ಗುಂಪು ಹಲ್ಲೆ ಸರಣಿ ಮುಂದುವರಿಕೆ – ‘ಲವ್‌ ಜಿಹಾದ್‌’ ಆರೋಪದಲ್ಲಿ ಅಪ್ರಾಪ್ತ ಹಿಂದೂ ಬಾಲಕನಿಗೆ ಥಳಿತ

- Advertisement -
- Advertisement -

ದೇಶದಲ್ಲಿ ಗುಂಪು ಹಲ್ಲೆಗಳ ಸರಣಿ ಮುಂದುವರೆದಿದೆ. ಮಧ್ಯಪ್ರದೇಶದ ದೇವಾಸ್‌‌ನಲ್ಲಿ 16 ವರ್ಷ ಹಿಂದೂ ಬಾಲಕನನ್ನು ಮುಸ್ಲಿಂ ಎಂದು ಭಾವಿಸಿ ಗುಂಪೊಂದು ಅಮಾನುಷವಾಗಿ ಹಲ್ಲೆ ನಡೆಸಿದೆ. ಪೊಲೀಸರು ಬಾಲಕನನ್ನು ಹಲ್ಲೆ ನಡೆಸದಂತೆ ತಡೆಯುತ್ತಿದ್ದರೂ ದುಷ್ಕರ್ಮಿಗಳು ಅದನ್ನೂ ಮೀರಿ ಹಲ್ಲೆ ನಡೆಸಿದ್ದಾರೆ.

ಅಪ್ರಾಪ್ತ ವಯಸ್ಸಿನ ಬಾಲಕ ತನ್ನ ಗೆಳತಿಯೊಂದಿಗೆ ಉತ್ತರ ಪ್ರದೇಶದಿಂದ ಹೊರಟಿದ್ದರು. ಆದರೆ ಮಧ್ಯಪ್ರದೇಶದಲ್ಲಿ ದುಷ್ಕರ್ಮಿಗಳು, ಲವ್‌ ಜಿಹಾದ್‌ ಆರೋಪ ಹೊರೆಸಿ ಬಾಲಕನ ಮೇಲೆ ಪೊಲೀಸರ ಸಮ್ಮುಖದಲ್ಲೇ ಕ್ರೂರವಾಗಿ ಥಳಿಸಿದ್ದಾರೆ. ಘಟನೆಯ ವಿಡಿಯೊ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ದೇವಾಸ್ ಜಿಲ್ಲಾ ಕೇಂದ್ರದಿಂದ ಸುಮಾರು 17 ಕಿಮೀ ದೂರದಲ್ಲಿರುವ ದೇವಾಸ್-ಭೋಪಾಲ್ ರಸ್ತೆಯಲ್ಲಿನ ಬೌಂರಸಾ ಟೋಲ್‌‌ನಲ್ಲಿ ನಾಲ್ಕು ದಿನಗಳ ಹಿಂದೆ ಈ ಘಟನೆ ನಡೆದಿದೆ.

ಇದನ್ನೂ ಓದಿ: 5 ಕೆಜಿ ಗೋಧಿ ಕದ್ದ ಆರೋಪ: ಉತ್ತರಪ್ರದೇಶದ 9 ವರ್ಷದ ಬಾಲಕನನ್ನು ಮರಕ್ಕೆ ಕಟ್ಟಿ ಥಳಿತ

“12 ವರ್ಷದ ಹಿಂದೂ ಹುಡುಗಿಯನ್ನು ತನ್ನೊಂದಿಗೆ ಕರೆದುಕೊಂಡು ಹೋಗುತ್ತಿದ್ದ 16 ವರ್ಷದ ಹಿಂದೂ ಬಾಲಕನನ್ನು ಆರೋಪಿಗಳು ಮುಸ್ಲಿಂ ಎಂದು ಭಾವಿಸಿದ್ದರು ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ. ಆದ್ದರಿಂದ ಅವರು ಬಾಲಕನನ್ನು ಥಳಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಇದುವರೆಗೂ ಯಾರನ್ನೂ ಬಂಧಿಸಲಾಗಿಲ್ಲ. ಹುಡುಗಿ ಮತ್ತು ಹುಡುಗ ಇಬ್ಬರೂ ಉತ್ತರ ಪ್ರದೇಶದ ನಿವಾಸಿಗಳು ಎಂದು ಪೊಲೀಸರು ತಿಳಿಸಿದ್ದಾರೆ” ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

“ಹಲ್ಲೆ ಮಾಡಿದವರು ಇದು ಲವ್ ಜಿಹಾದ್ ಪ್ರಕರಣ ಎಂದು ಭಾವಿಸಿದ್ದಾರೆ. ಇಬ್ಬರೂ ಹಿಂದೂ ಸಮುದಾಯದವರು ಎಂದು ನಾವು ಅವರಿಗೆ ನಿರಂತರವಾಗಿ ಹೇಳುತ್ತಿದ್ದೆವು. ಆದರೆ ಅವರು ನಮ್ಮ ಮಾತನ್ನು ಕೇಳಲಿಲ್ಲ, ಬಾಲಕನಿಗೆ ಹಲ್ಲೆ ನಡೆಸುತ್ತಲೇ ಇದ್ದರು. ಈ ಘಟನೆ ನಾಲ್ಕು ದಿನಗಳ ಹಿಂದೆ ನಡೆದಿದ್ದು, ನಾವು ಆತನನ್ನು ರಕ್ಷಿಸದಿದ್ದರೆ, ಆತ ಸಾವಿಗೀಡಾಗುತ್ತಿದ್ದ” ಎಂದು ಹೆಸರು ಹೇಳಲು ಇಚ್ಚಿಸದ ಅಧಿಕಾರಿಯೊಬ್ಬರು ಹೇಳಿದ್ದಾರೆ ಎಂದು ಜನತಾಕಾ ರಿಪೋರ್ಟರ್‌ ವರದಿ ಮಾಡಿದೆ.

ಇದನ್ನೂ ಓದಿ: ತೆಲಂಗಾಣ: ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ಮಾಡಿದ ನಕಲಿ ಸಾಧು; ಸಾರ್ವಜನಿಕರಿಂದ ಥಳಿತ!

ಉತ್ತರ ಪ್ರದೇಶದ ಬಲಿಯಾದಿಂದ ತಪ್ಪಿಸಿಕೊಂಡು ಬಂದಿದ್ದ ಈ ಅಪ್ರಾಪ್ತ ಹುಡುಗ ಮತ್ತು ಹುಡುಗಿಯ ಬಗ್ಗೆ ಮಾಹಿತಿ ಸಿಕ್ಕಿದೆ ಎಂದು ಸೊಂಕಾಚ್ ಉಪ-ವಿಭಾಗೀಯ ಪೊಲೀಸ್ ಪ್ರಶಾಂತ್ ಸಿಂಗ್ ಸೆಂಗಾರ್ ಹೇಳಿದ್ದಾರೆ. ಇಬ್ಬರನ್ನು ಪೋಲಿಸ್ ಕಸ್ಟಡಿಗೆ ತೆಗೆದುಕೊಳ್ಳಲು ಸ್ಥಳೀಯ ಪೋಲಿಸರಿಗೆ ಕೇಳಲಾಗಿದ್ದರಿಂದ, ಪೊಲೀಸ್ ತಂಡವು ಬೌಂರಸಾ ಟೋಲ್‌ ಗೇಟ್‌ನಲ್ಲಿ ಬಸ್‌ಗಳನ್ನು ನಿಲ್ಲಿಸಿ ಪರಿಶೀಲನೆ ನಡೆಸಿಸುತ್ತಿದ್ದರು.

ಉತ್ತರ ಪ್ರದೇಶದಿಂದ ಅಹಮದಾಬಾದ್‌‌ಗೆ ಹೋಗುವ ಬಸ್ ತಪಾಸಣೆಯ ವೇಳೆ ಈ ಇಬ್ಬರು ಅಪ್ರಾಪ್ತರು ಪತ್ತೆಯಾಗಿದ್ದಾರೆ ಎಂದು ಸೆಂಗಾರ್ ಹೇಳಿದ್ದಾರೆ. ಬಾಲಕನನ್ನು ಬಸ್ಸಿನಿಂದ ಇಳಿಸುತ್ತಿದ್ದಂತೆ, ಕಾರಿನಲ್ಲಿದ್ದ ಗುಂಪೊಂದು ಪೊಲೀಸರ ಸಮ್ಮುಖದಲ್ಲೆ ಬಾಲಕನ ಮೇಲೆ ಹಲ್ಲೆ ನಡೆಸಲು ಪ್ರಾರಂಭಿಸಿದೆ. ಗುಂಪಿನಿಂದ ಬಾಲಕನನ್ನು ರಕ್ಷಿಸಿದ ಪೊಲೀಸ್ ತಂಡವು ಪೊಲೀಸ್ ಠಾಣೆಗೆ ಕಳುಹಿಸಿದೆ ಎಂದು ಅವರು ಹೇಳಿದ್ದಾರೆ. ಅದೇ ಸಮಯದಲ್ಲಿ, ಹುಡುಗಿಯನ್ನು ಮಹಿಳಾ ಪೊಲೀಸ್ ಠಾಣೆಗೆ ಕಳುಹಿಸಲಾಗಿದೆ.

ಬಾಲಕನು ಆರೋಪಿಯಿಂದ ಹಲ್ಲೆ ಮಾಡಿದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ ಎಂದು ಸೆಂಗಾರ್ ಹೇಳಿದ್ದಾರೆ. ವೈರಲ್ ಆದ ವಿಡಿಯೋ ಆಧಾರದ ಮೇಲೆ, ಬೌಂರಸಾ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 353, 147, 323 ಮತ್ತು 294 ರ ಅಡಿಯಲ್ಲಿ ನಾಲ್ವರು ಆರೋಪಿಗಳ ಸಹಿತ 15 ಅಪರಿಚಿತರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಇದುವರೆಗೂ ಯಾವುದೇ ಆರೋಪಿಯನ್ನು ಬಂಧಿಸಲಾಗಿಲ್ಲ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕೊರೊನಾ ಸಮಯದಲ್ಲಿ ಅಯೋಧ್ಯೆ ಕಾರ್ಯಕ್ರಮ ಬೇಕೆ?; ಬಂಗಾಳಿ ವಿದ್ಯಾರ್ಥಿಗೆ ಥಳಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...