Homeಮುಖಪುಟಗುಂಪು ಹಲ್ಲೆ ಸರಣಿ ಮುಂದುವರಿಕೆ - ‘ಲವ್‌ ಜಿಹಾದ್‌’ ಆರೋಪದಲ್ಲಿ ಅಪ್ರಾಪ್ತ ಹಿಂದೂ ಬಾಲಕನಿಗೆ ಥಳಿತ

ಗುಂಪು ಹಲ್ಲೆ ಸರಣಿ ಮುಂದುವರಿಕೆ – ‘ಲವ್‌ ಜಿಹಾದ್‌’ ಆರೋಪದಲ್ಲಿ ಅಪ್ರಾಪ್ತ ಹಿಂದೂ ಬಾಲಕನಿಗೆ ಥಳಿತ

- Advertisement -
- Advertisement -

ದೇಶದಲ್ಲಿ ಗುಂಪು ಹಲ್ಲೆಗಳ ಸರಣಿ ಮುಂದುವರೆದಿದೆ. ಮಧ್ಯಪ್ರದೇಶದ ದೇವಾಸ್‌‌ನಲ್ಲಿ 16 ವರ್ಷ ಹಿಂದೂ ಬಾಲಕನನ್ನು ಮುಸ್ಲಿಂ ಎಂದು ಭಾವಿಸಿ ಗುಂಪೊಂದು ಅಮಾನುಷವಾಗಿ ಹಲ್ಲೆ ನಡೆಸಿದೆ. ಪೊಲೀಸರು ಬಾಲಕನನ್ನು ಹಲ್ಲೆ ನಡೆಸದಂತೆ ತಡೆಯುತ್ತಿದ್ದರೂ ದುಷ್ಕರ್ಮಿಗಳು ಅದನ್ನೂ ಮೀರಿ ಹಲ್ಲೆ ನಡೆಸಿದ್ದಾರೆ.

ಅಪ್ರಾಪ್ತ ವಯಸ್ಸಿನ ಬಾಲಕ ತನ್ನ ಗೆಳತಿಯೊಂದಿಗೆ ಉತ್ತರ ಪ್ರದೇಶದಿಂದ ಹೊರಟಿದ್ದರು. ಆದರೆ ಮಧ್ಯಪ್ರದೇಶದಲ್ಲಿ ದುಷ್ಕರ್ಮಿಗಳು, ಲವ್‌ ಜಿಹಾದ್‌ ಆರೋಪ ಹೊರೆಸಿ ಬಾಲಕನ ಮೇಲೆ ಪೊಲೀಸರ ಸಮ್ಮುಖದಲ್ಲೇ ಕ್ರೂರವಾಗಿ ಥಳಿಸಿದ್ದಾರೆ. ಘಟನೆಯ ವಿಡಿಯೊ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ದೇವಾಸ್ ಜಿಲ್ಲಾ ಕೇಂದ್ರದಿಂದ ಸುಮಾರು 17 ಕಿಮೀ ದೂರದಲ್ಲಿರುವ ದೇವಾಸ್-ಭೋಪಾಲ್ ರಸ್ತೆಯಲ್ಲಿನ ಬೌಂರಸಾ ಟೋಲ್‌‌ನಲ್ಲಿ ನಾಲ್ಕು ದಿನಗಳ ಹಿಂದೆ ಈ ಘಟನೆ ನಡೆದಿದೆ.

ಇದನ್ನೂ ಓದಿ: 5 ಕೆಜಿ ಗೋಧಿ ಕದ್ದ ಆರೋಪ: ಉತ್ತರಪ್ರದೇಶದ 9 ವರ್ಷದ ಬಾಲಕನನ್ನು ಮರಕ್ಕೆ ಕಟ್ಟಿ ಥಳಿತ

“12 ವರ್ಷದ ಹಿಂದೂ ಹುಡುಗಿಯನ್ನು ತನ್ನೊಂದಿಗೆ ಕರೆದುಕೊಂಡು ಹೋಗುತ್ತಿದ್ದ 16 ವರ್ಷದ ಹಿಂದೂ ಬಾಲಕನನ್ನು ಆರೋಪಿಗಳು ಮುಸ್ಲಿಂ ಎಂದು ಭಾವಿಸಿದ್ದರು ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ. ಆದ್ದರಿಂದ ಅವರು ಬಾಲಕನನ್ನು ಥಳಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಇದುವರೆಗೂ ಯಾರನ್ನೂ ಬಂಧಿಸಲಾಗಿಲ್ಲ. ಹುಡುಗಿ ಮತ್ತು ಹುಡುಗ ಇಬ್ಬರೂ ಉತ್ತರ ಪ್ರದೇಶದ ನಿವಾಸಿಗಳು ಎಂದು ಪೊಲೀಸರು ತಿಳಿಸಿದ್ದಾರೆ” ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

“ಹಲ್ಲೆ ಮಾಡಿದವರು ಇದು ಲವ್ ಜಿಹಾದ್ ಪ್ರಕರಣ ಎಂದು ಭಾವಿಸಿದ್ದಾರೆ. ಇಬ್ಬರೂ ಹಿಂದೂ ಸಮುದಾಯದವರು ಎಂದು ನಾವು ಅವರಿಗೆ ನಿರಂತರವಾಗಿ ಹೇಳುತ್ತಿದ್ದೆವು. ಆದರೆ ಅವರು ನಮ್ಮ ಮಾತನ್ನು ಕೇಳಲಿಲ್ಲ, ಬಾಲಕನಿಗೆ ಹಲ್ಲೆ ನಡೆಸುತ್ತಲೇ ಇದ್ದರು. ಈ ಘಟನೆ ನಾಲ್ಕು ದಿನಗಳ ಹಿಂದೆ ನಡೆದಿದ್ದು, ನಾವು ಆತನನ್ನು ರಕ್ಷಿಸದಿದ್ದರೆ, ಆತ ಸಾವಿಗೀಡಾಗುತ್ತಿದ್ದ” ಎಂದು ಹೆಸರು ಹೇಳಲು ಇಚ್ಚಿಸದ ಅಧಿಕಾರಿಯೊಬ್ಬರು ಹೇಳಿದ್ದಾರೆ ಎಂದು ಜನತಾಕಾ ರಿಪೋರ್ಟರ್‌ ವರದಿ ಮಾಡಿದೆ.

ಇದನ್ನೂ ಓದಿ: ತೆಲಂಗಾಣ: ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ಮಾಡಿದ ನಕಲಿ ಸಾಧು; ಸಾರ್ವಜನಿಕರಿಂದ ಥಳಿತ!

ಉತ್ತರ ಪ್ರದೇಶದ ಬಲಿಯಾದಿಂದ ತಪ್ಪಿಸಿಕೊಂಡು ಬಂದಿದ್ದ ಈ ಅಪ್ರಾಪ್ತ ಹುಡುಗ ಮತ್ತು ಹುಡುಗಿಯ ಬಗ್ಗೆ ಮಾಹಿತಿ ಸಿಕ್ಕಿದೆ ಎಂದು ಸೊಂಕಾಚ್ ಉಪ-ವಿಭಾಗೀಯ ಪೊಲೀಸ್ ಪ್ರಶಾಂತ್ ಸಿಂಗ್ ಸೆಂಗಾರ್ ಹೇಳಿದ್ದಾರೆ. ಇಬ್ಬರನ್ನು ಪೋಲಿಸ್ ಕಸ್ಟಡಿಗೆ ತೆಗೆದುಕೊಳ್ಳಲು ಸ್ಥಳೀಯ ಪೋಲಿಸರಿಗೆ ಕೇಳಲಾಗಿದ್ದರಿಂದ, ಪೊಲೀಸ್ ತಂಡವು ಬೌಂರಸಾ ಟೋಲ್‌ ಗೇಟ್‌ನಲ್ಲಿ ಬಸ್‌ಗಳನ್ನು ನಿಲ್ಲಿಸಿ ಪರಿಶೀಲನೆ ನಡೆಸಿಸುತ್ತಿದ್ದರು.

ಉತ್ತರ ಪ್ರದೇಶದಿಂದ ಅಹಮದಾಬಾದ್‌‌ಗೆ ಹೋಗುವ ಬಸ್ ತಪಾಸಣೆಯ ವೇಳೆ ಈ ಇಬ್ಬರು ಅಪ್ರಾಪ್ತರು ಪತ್ತೆಯಾಗಿದ್ದಾರೆ ಎಂದು ಸೆಂಗಾರ್ ಹೇಳಿದ್ದಾರೆ. ಬಾಲಕನನ್ನು ಬಸ್ಸಿನಿಂದ ಇಳಿಸುತ್ತಿದ್ದಂತೆ, ಕಾರಿನಲ್ಲಿದ್ದ ಗುಂಪೊಂದು ಪೊಲೀಸರ ಸಮ್ಮುಖದಲ್ಲೆ ಬಾಲಕನ ಮೇಲೆ ಹಲ್ಲೆ ನಡೆಸಲು ಪ್ರಾರಂಭಿಸಿದೆ. ಗುಂಪಿನಿಂದ ಬಾಲಕನನ್ನು ರಕ್ಷಿಸಿದ ಪೊಲೀಸ್ ತಂಡವು ಪೊಲೀಸ್ ಠಾಣೆಗೆ ಕಳುಹಿಸಿದೆ ಎಂದು ಅವರು ಹೇಳಿದ್ದಾರೆ. ಅದೇ ಸಮಯದಲ್ಲಿ, ಹುಡುಗಿಯನ್ನು ಮಹಿಳಾ ಪೊಲೀಸ್ ಠಾಣೆಗೆ ಕಳುಹಿಸಲಾಗಿದೆ.

ಬಾಲಕನು ಆರೋಪಿಯಿಂದ ಹಲ್ಲೆ ಮಾಡಿದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ ಎಂದು ಸೆಂಗಾರ್ ಹೇಳಿದ್ದಾರೆ. ವೈರಲ್ ಆದ ವಿಡಿಯೋ ಆಧಾರದ ಮೇಲೆ, ಬೌಂರಸಾ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 353, 147, 323 ಮತ್ತು 294 ರ ಅಡಿಯಲ್ಲಿ ನಾಲ್ವರು ಆರೋಪಿಗಳ ಸಹಿತ 15 ಅಪರಿಚಿತರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಇದುವರೆಗೂ ಯಾವುದೇ ಆರೋಪಿಯನ್ನು ಬಂಧಿಸಲಾಗಿಲ್ಲ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕೊರೊನಾ ಸಮಯದಲ್ಲಿ ಅಯೋಧ್ಯೆ ಕಾರ್ಯಕ್ರಮ ಬೇಕೆ?; ಬಂಗಾಳಿ ವಿದ್ಯಾರ್ಥಿಗೆ ಥಳಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...