Homeಕರ್ನಾಟಕಐಡಿ ಫ್ರೆಶ್ ಫುಡ್ ವಿರುದ್ಧ ಕೋಮುವಾದಿ ವಾಟ್ಸಾಪ್ ಫಾರ್ವಡ್: ಫೇಕ್ ಪ್ರೊಪಗಂಡಾ ಎಂದ ಕಂಪನಿ

ಐಡಿ ಫ್ರೆಶ್ ಫುಡ್ ವಿರುದ್ಧ ಕೋಮುವಾದಿ ವಾಟ್ಸಾಪ್ ಫಾರ್ವಡ್: ಫೇಕ್ ಪ್ರೊಪಗಂಡಾ ಎಂದ ಕಂಪನಿ

ಐಡಿ ಕಂಪನಿಯು ಹಿಟ್ಟು ತಯಾರಿಸುವಾಗ ಅದರ ಪ್ರಮಾಣ ಹೆಚ್ಚಿಸಲು ಹಸುವಿನ ಮೂಳೆ ಮತ್ತು ಕರುವಿನ ಕರುಳನ್ನು ಬೆರೆಸಲಾಗುತ್ತಿದೆ ಎಂದು ವಾಟ್ಸಾಪ್‌ನಲ್ಲಿ ಹಂಚಿಕೊಳ್ಳಲಾಗುತ್ತಿದೆ.

- Advertisement -
- Advertisement -

6ನೇ ತರಗತಿ ಫೇಲ್‌ ಆದ ಹುಡುಗನೊಬ್ಬ 2000 ಕೋಟಿ ರೂಗಳ ಬೃಹತ್ ಕಂಪನಿ ಮಾಲೀಕನಾದುದ್ದು ಹೇಗೆ ಎಂದು ಪಾಸಿಟಿವ್ ಸ್ಟೋರಿಯೊಂದನ್ನು ಆಗಸ್ಟ್ 30 ರಂದು ಹ್ಯುಮನ್ಸ್ ಆಫ್ ಬಾಂಬೆ ಪ್ರಕಟಿಸಿತ್ತು. ಅದು ಬೆಂಗಳೂರು ಮೂಲದ ಇಡ್ಲಿ ಮತ್ತು ದೋಸೆ ಹಿಟ್ಟು ತಯಾರಿಕ ‘ಐಡಿ ಫ್ರೆಶ್ ಫುಡ್ ಕಂಪನಿ’ ಮತ್ತು ಅದರ ಸಿಇಓ ಮುಸ್ತಾಫ ಪಿ.ಸಿ ಯವರ ಸಂದರ್ಶನದ ಕುರಿತಾಗಿತ್ತು. ಕನ್ನಡ ಸೇರಿದಂತೆ ಎಲ್ಲಾ ಭಾಷೆಗಳ ಮಾಧ್ಯಮಗಳು ಇದನ್ನು ವರದಿ ಮಾಡಿದ್ದವು ಮಾತ್ರವಲ್ಲದೇ ಅವು ವೈರಲ್ ಆಗಿದ್ದವು.

ಇದಾದ ಒಂದು ವಾರದಲ್ಲಿ ವಾಟ್ಸಾಪ್ ನಲ್ಲಿ ಕೋಮು ಪ್ರಚೋದಕ ಫಾರ್ವಾಡ್ ಮೆಸೇಜ್ ಒಂದು ಹರಿದಾಡತೊಡಗಿತ್ತು. ಅದರಲ್ಲಿ “ಐಡಿ ಕಂಪನಿಯು ಹಿಟ್ಟು ತಯಾರಿಸುವಾಗ ಅದರ ಪ್ರಮಾಣವನ್ನು ಹೆಚ್ಚಿಸಲು ಹಸುವಿನ ಮೂಳೆ ಮತ್ತು ಕರುವಿನ ಕರುಳನ್ನು ಬೆರೆಸಲಾಗುತ್ತಿದೆ. ಸ್ಥಾಪಕ ಮುಸ್ತಾಫ ಪಿ.ಸಿ ಮತ್ತು ಅವರ ನಾಲ್ವರು ಸಂಬಂಧಿಗಳಾದ ಅಬ್ದುಲ್ ನಜೀರ್, ಶಂಸುದ್ದೀನ್ ಟಿ.ಕೆ, ಜಾಫರ್ ಟಿ.ಕೆ ಮತ್ತು ನೌಸಾದ್ ಟಿ.ಎ ರವರು ಕೇವಲ ಮುಸ್ಲಿಮರನ್ನು ಮಾತ್ರ ನೇಮಕ ಮಾಡಿಕೊಳ್ಳುತ್ತಿದ್ದಾರೆ ಮತ್ತು ಕಂಪನಿಯು ಹಲಾಲ್ ಸರ್ಟಿಫಿಕೆಟ್ ಹೊಂದಿದೆ” ಎಂದು ಪ್ರತಿಪಾದಿಸಲಾಗಿದೆ. ಜೊತೆಗೆ 2014 ರಲ್ಲಿ ಇದು 35 ಕೋಟಿ ರೂಗಳನ್ನು ಕ್ರೌಡ್ ಫಂಡಿಂಗ್ ಮೂಲಕ ಸಂಗ್ರಹಿಸಿದೆ. ಷರಿಯತ್ ಇಸ್ಲಾಂ ಕಾನೂನಿಗೆ ಬದ್ದವಾಗಿದೆ ಎಂದೆಲ್ಲಾ ಲಿಂಕ್‌ಗಳನ್ನು ಹಂಚಿಕೊಳ್ಳಲಾಗಿದೆ.

ಈ ಸಂದೇಶ ಹರಿದಾಡುತ್ತಿರುವುದು ಐಡಿ ಫ್ರೆಶ್ ಫುಡ್ ಕಂಪನಿಯ ಗಮನಕ್ಕೆ ಬಂದು ಅದು ಹೇಳಿಕೆ ಬಿಡುಗಡೆ ಮಾಡಿದೆ. “ಐಡಿ ಕಂಪನಿ ಹಿಟ್ಟು ತಯಾರಿಸುವಾಗ ಪ್ರಾಣಿಜನ್ಯವನ್ನು ಬಳಸುತ್ತಿದೆ ಎಂಬ ವಾಟ್ಸಾಪ್ ಸಂದೇಶವು ತಪ್ಪು, ಸುಳ್ಳು ಮಾಹಿತಿ ಮತ್ತು ಆಧಾರರಹಿತವಾಗಿದೆ. ನಾವು ಕೇವಲ ಸಸ್ಯಾಹಾರಿ ಪದಾರ್ಥಗಳನ್ನು ಮಾತ್ರ ಹಿಟ್ಟು ತಯಾರಿಸುವಲ್ಲಿ ಬಳಸುತ್ತೇವೆ. ಐಡಿ ಇಡ್ಲಿ ಮತ್ತು ದೋಸೆ ಹಿಟ್ಟಿನ್ನು ಅಕ್ಕಿ, ಉದ್ದಿನ ಬೇಳೆ, ಮೇಂತ್ಯ ಮತ್ತು ಆರ್‌ಓ ನೀರಿನಿಂದ ಮಾತ್ರ ತಯಾರಿಸುತ್ತೇವೆ. ಅದು 100% ನೈಸರ್ಗಿಕ ಮತ್ತು ಸಸ್ಯಾಹಾರಿಯಾಗಿದೆ. ಇದರಲ್ಲಿ ಯಾವುದೇ ರೀತಿಯ ಪ್ರಾಣಿಜನ್ಯವನ್ನು ನಾವು ಬಳಸುವುದಿಲ್ಲ” ಎಂದು ಹೇಳಿಕೆಯಲ್ಲಿ ತಿಳಿಸಿದೆ.

ನಾವು ಆರೋಗ್ಯಕರ ಮತ್ತು ಅಧಿಕೃತ ಭಾರತೀಯ ಉತ್ಪನ್ನಗಳನ್ನು ಬಳಸಿ ಯಾವುದೇ ರಾಸಾಯನಿಕಗಳು ಅಥವಾ ಸಂರಕ್ಷಕಗಳಿಲ್ಲದೆ ವಿಶ್ವದರ್ಜೆಯ, ಅತ್ಯಾಧುನಿಕ ಉತ್ಪಾದನಾ ಸೌಲಭ್ಯಗಳನ್ನು ಬಳಸಿ ಆಹಾರ ಸುರಕ್ಷತೆ ನಿರ್ವಹಣಾ ವ್ಯವಸ್ಥೆಗೆ ಅನುಗುಣವಾಗಿ ಹಿಟ್ಟನ್ನು ತಯಾರಿಸುತ್ತೇವೆ. ಹಾಗಾಗಿ ಆಧಾರರಹಿತ ಮತ್ತು ನಕಲಿ ಪ್ರಚಾರವನ್ನು ನಂಬಬಾರದು ಎಂದು ಅದು ಮನವಿ ಮಾಡಿದೆ.

ಬೆಂಗಳೂರು ಮೂಲಕ ಐಡಿ ಕಂಪನಿಯು 2005ರಲ್ಲಿ ಆರಂಭವಾಗಿದ್ದು 45 ಮಾರುಕಟ್ಟೆಗಳನ್ನು ಹೊಂದಿದ್ದು, ಖ್ಯಾತಿ ಗಳಿಸಿದೆ. ಹಲವಾರು ಅಂತರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆದಿರುವ ಕಂಪನಿಯು 2021ರ ಹಣಕಾಸು ವರ್ಷದಲ್ಲಿ 294 ಕೋಟಿ ರೂ ಲಾಭ ಗಳಿಸಿದೆ ಎಂದು ದಿ ಹಿಂದೂ ವರದಿ ಮಾಡಿದೆ. ಅದು ಇತ್ತೀಚೆಗೆ ಬೆಂಗಳೂರು ಬಳಿಯ ಆನೇಕಲ್‌ನಲ್ಲಿ 40 ಕೋಟಿ ರೂ ವೆಚ್ಚದಲ್ಲಿ ಬೃಹತ್ ಇಡ್ಲಿ ಮತ್ತು ದೋಸೆ ಹಿಟ್ಟು ತಯಾರಿಸುವ ಘಟಕ ಆರಂಭಿಸಿದೆ.

ಕಂಪನಿಯ ಮಾಲೀಕ ಮುಸ್ಲಿಂ ಆದ ಕಾರಣಕ್ಕೆ ಐಡಿ ಫ್ರೆಶ್ ಫುಡ್ ವಿರುದ್ಧ ವಾಟ್ಸಾಪ್‌ನಲ್ಲಿ ಅಪಪ್ರಚಾರ ಆರಂಭಿಸಲಾಗಿದೆಯೇ ಎಂಬ ಅನುಮಾನವೆದ್ದಿದೆ. ಆದರೆ ಐಡಿ ಕಂಪನಿ ಹೇಳಿಕೆ ನೀಡುವುದರ ಮೂಲಕ ಸ್ಪಷ್ಟೀಕರಣ ನೀಡಿದೆ.


ಇದನ್ನೂ ಓದಿ: ತಾಲಿಬಾನ್ ಪರ ಪಾಕ್‌ ಆರ್ಮಿ ದಾಳಿ ಎಂದು ವಿಡಿಯೊ ಗೇಮ್‌ ಕ್ಲಿಪ್‌ ಪ್ರಸಾರ ಮಾಡಿದ ರಿಪಬ್ಲಿಕ್ ಟಿವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...