Homeಕರ್ನಾಟಕಐಡಿ ಫ್ರೆಶ್ ಫುಡ್ ವಿರುದ್ಧ ಕೋಮುವಾದಿ ವಾಟ್ಸಾಪ್ ಫಾರ್ವಡ್: ಫೇಕ್ ಪ್ರೊಪಗಂಡಾ ಎಂದ ಕಂಪನಿ

ಐಡಿ ಫ್ರೆಶ್ ಫುಡ್ ವಿರುದ್ಧ ಕೋಮುವಾದಿ ವಾಟ್ಸಾಪ್ ಫಾರ್ವಡ್: ಫೇಕ್ ಪ್ರೊಪಗಂಡಾ ಎಂದ ಕಂಪನಿ

ಐಡಿ ಕಂಪನಿಯು ಹಿಟ್ಟು ತಯಾರಿಸುವಾಗ ಅದರ ಪ್ರಮಾಣ ಹೆಚ್ಚಿಸಲು ಹಸುವಿನ ಮೂಳೆ ಮತ್ತು ಕರುವಿನ ಕರುಳನ್ನು ಬೆರೆಸಲಾಗುತ್ತಿದೆ ಎಂದು ವಾಟ್ಸಾಪ್‌ನಲ್ಲಿ ಹಂಚಿಕೊಳ್ಳಲಾಗುತ್ತಿದೆ.

- Advertisement -
- Advertisement -

6ನೇ ತರಗತಿ ಫೇಲ್‌ ಆದ ಹುಡುಗನೊಬ್ಬ 2000 ಕೋಟಿ ರೂಗಳ ಬೃಹತ್ ಕಂಪನಿ ಮಾಲೀಕನಾದುದ್ದು ಹೇಗೆ ಎಂದು ಪಾಸಿಟಿವ್ ಸ್ಟೋರಿಯೊಂದನ್ನು ಆಗಸ್ಟ್ 30 ರಂದು ಹ್ಯುಮನ್ಸ್ ಆಫ್ ಬಾಂಬೆ ಪ್ರಕಟಿಸಿತ್ತು. ಅದು ಬೆಂಗಳೂರು ಮೂಲದ ಇಡ್ಲಿ ಮತ್ತು ದೋಸೆ ಹಿಟ್ಟು ತಯಾರಿಕ ‘ಐಡಿ ಫ್ರೆಶ್ ಫುಡ್ ಕಂಪನಿ’ ಮತ್ತು ಅದರ ಸಿಇಓ ಮುಸ್ತಾಫ ಪಿ.ಸಿ ಯವರ ಸಂದರ್ಶನದ ಕುರಿತಾಗಿತ್ತು. ಕನ್ನಡ ಸೇರಿದಂತೆ ಎಲ್ಲಾ ಭಾಷೆಗಳ ಮಾಧ್ಯಮಗಳು ಇದನ್ನು ವರದಿ ಮಾಡಿದ್ದವು ಮಾತ್ರವಲ್ಲದೇ ಅವು ವೈರಲ್ ಆಗಿದ್ದವು.

ಇದಾದ ಒಂದು ವಾರದಲ್ಲಿ ವಾಟ್ಸಾಪ್ ನಲ್ಲಿ ಕೋಮು ಪ್ರಚೋದಕ ಫಾರ್ವಾಡ್ ಮೆಸೇಜ್ ಒಂದು ಹರಿದಾಡತೊಡಗಿತ್ತು. ಅದರಲ್ಲಿ “ಐಡಿ ಕಂಪನಿಯು ಹಿಟ್ಟು ತಯಾರಿಸುವಾಗ ಅದರ ಪ್ರಮಾಣವನ್ನು ಹೆಚ್ಚಿಸಲು ಹಸುವಿನ ಮೂಳೆ ಮತ್ತು ಕರುವಿನ ಕರುಳನ್ನು ಬೆರೆಸಲಾಗುತ್ತಿದೆ. ಸ್ಥಾಪಕ ಮುಸ್ತಾಫ ಪಿ.ಸಿ ಮತ್ತು ಅವರ ನಾಲ್ವರು ಸಂಬಂಧಿಗಳಾದ ಅಬ್ದುಲ್ ನಜೀರ್, ಶಂಸುದ್ದೀನ್ ಟಿ.ಕೆ, ಜಾಫರ್ ಟಿ.ಕೆ ಮತ್ತು ನೌಸಾದ್ ಟಿ.ಎ ರವರು ಕೇವಲ ಮುಸ್ಲಿಮರನ್ನು ಮಾತ್ರ ನೇಮಕ ಮಾಡಿಕೊಳ್ಳುತ್ತಿದ್ದಾರೆ ಮತ್ತು ಕಂಪನಿಯು ಹಲಾಲ್ ಸರ್ಟಿಫಿಕೆಟ್ ಹೊಂದಿದೆ” ಎಂದು ಪ್ರತಿಪಾದಿಸಲಾಗಿದೆ. ಜೊತೆಗೆ 2014 ರಲ್ಲಿ ಇದು 35 ಕೋಟಿ ರೂಗಳನ್ನು ಕ್ರೌಡ್ ಫಂಡಿಂಗ್ ಮೂಲಕ ಸಂಗ್ರಹಿಸಿದೆ. ಷರಿಯತ್ ಇಸ್ಲಾಂ ಕಾನೂನಿಗೆ ಬದ್ದವಾಗಿದೆ ಎಂದೆಲ್ಲಾ ಲಿಂಕ್‌ಗಳನ್ನು ಹಂಚಿಕೊಳ್ಳಲಾಗಿದೆ.

ಈ ಸಂದೇಶ ಹರಿದಾಡುತ್ತಿರುವುದು ಐಡಿ ಫ್ರೆಶ್ ಫುಡ್ ಕಂಪನಿಯ ಗಮನಕ್ಕೆ ಬಂದು ಅದು ಹೇಳಿಕೆ ಬಿಡುಗಡೆ ಮಾಡಿದೆ. “ಐಡಿ ಕಂಪನಿ ಹಿಟ್ಟು ತಯಾರಿಸುವಾಗ ಪ್ರಾಣಿಜನ್ಯವನ್ನು ಬಳಸುತ್ತಿದೆ ಎಂಬ ವಾಟ್ಸಾಪ್ ಸಂದೇಶವು ತಪ್ಪು, ಸುಳ್ಳು ಮಾಹಿತಿ ಮತ್ತು ಆಧಾರರಹಿತವಾಗಿದೆ. ನಾವು ಕೇವಲ ಸಸ್ಯಾಹಾರಿ ಪದಾರ್ಥಗಳನ್ನು ಮಾತ್ರ ಹಿಟ್ಟು ತಯಾರಿಸುವಲ್ಲಿ ಬಳಸುತ್ತೇವೆ. ಐಡಿ ಇಡ್ಲಿ ಮತ್ತು ದೋಸೆ ಹಿಟ್ಟಿನ್ನು ಅಕ್ಕಿ, ಉದ್ದಿನ ಬೇಳೆ, ಮೇಂತ್ಯ ಮತ್ತು ಆರ್‌ಓ ನೀರಿನಿಂದ ಮಾತ್ರ ತಯಾರಿಸುತ್ತೇವೆ. ಅದು 100% ನೈಸರ್ಗಿಕ ಮತ್ತು ಸಸ್ಯಾಹಾರಿಯಾಗಿದೆ. ಇದರಲ್ಲಿ ಯಾವುದೇ ರೀತಿಯ ಪ್ರಾಣಿಜನ್ಯವನ್ನು ನಾವು ಬಳಸುವುದಿಲ್ಲ” ಎಂದು ಹೇಳಿಕೆಯಲ್ಲಿ ತಿಳಿಸಿದೆ.

ನಾವು ಆರೋಗ್ಯಕರ ಮತ್ತು ಅಧಿಕೃತ ಭಾರತೀಯ ಉತ್ಪನ್ನಗಳನ್ನು ಬಳಸಿ ಯಾವುದೇ ರಾಸಾಯನಿಕಗಳು ಅಥವಾ ಸಂರಕ್ಷಕಗಳಿಲ್ಲದೆ ವಿಶ್ವದರ್ಜೆಯ, ಅತ್ಯಾಧುನಿಕ ಉತ್ಪಾದನಾ ಸೌಲಭ್ಯಗಳನ್ನು ಬಳಸಿ ಆಹಾರ ಸುರಕ್ಷತೆ ನಿರ್ವಹಣಾ ವ್ಯವಸ್ಥೆಗೆ ಅನುಗುಣವಾಗಿ ಹಿಟ್ಟನ್ನು ತಯಾರಿಸುತ್ತೇವೆ. ಹಾಗಾಗಿ ಆಧಾರರಹಿತ ಮತ್ತು ನಕಲಿ ಪ್ರಚಾರವನ್ನು ನಂಬಬಾರದು ಎಂದು ಅದು ಮನವಿ ಮಾಡಿದೆ.

ಬೆಂಗಳೂರು ಮೂಲಕ ಐಡಿ ಕಂಪನಿಯು 2005ರಲ್ಲಿ ಆರಂಭವಾಗಿದ್ದು 45 ಮಾರುಕಟ್ಟೆಗಳನ್ನು ಹೊಂದಿದ್ದು, ಖ್ಯಾತಿ ಗಳಿಸಿದೆ. ಹಲವಾರು ಅಂತರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆದಿರುವ ಕಂಪನಿಯು 2021ರ ಹಣಕಾಸು ವರ್ಷದಲ್ಲಿ 294 ಕೋಟಿ ರೂ ಲಾಭ ಗಳಿಸಿದೆ ಎಂದು ದಿ ಹಿಂದೂ ವರದಿ ಮಾಡಿದೆ. ಅದು ಇತ್ತೀಚೆಗೆ ಬೆಂಗಳೂರು ಬಳಿಯ ಆನೇಕಲ್‌ನಲ್ಲಿ 40 ಕೋಟಿ ರೂ ವೆಚ್ಚದಲ್ಲಿ ಬೃಹತ್ ಇಡ್ಲಿ ಮತ್ತು ದೋಸೆ ಹಿಟ್ಟು ತಯಾರಿಸುವ ಘಟಕ ಆರಂಭಿಸಿದೆ.

ಕಂಪನಿಯ ಮಾಲೀಕ ಮುಸ್ಲಿಂ ಆದ ಕಾರಣಕ್ಕೆ ಐಡಿ ಫ್ರೆಶ್ ಫುಡ್ ವಿರುದ್ಧ ವಾಟ್ಸಾಪ್‌ನಲ್ಲಿ ಅಪಪ್ರಚಾರ ಆರಂಭಿಸಲಾಗಿದೆಯೇ ಎಂಬ ಅನುಮಾನವೆದ್ದಿದೆ. ಆದರೆ ಐಡಿ ಕಂಪನಿ ಹೇಳಿಕೆ ನೀಡುವುದರ ಮೂಲಕ ಸ್ಪಷ್ಟೀಕರಣ ನೀಡಿದೆ.


ಇದನ್ನೂ ಓದಿ: ತಾಲಿಬಾನ್ ಪರ ಪಾಕ್‌ ಆರ್ಮಿ ದಾಳಿ ಎಂದು ವಿಡಿಯೊ ಗೇಮ್‌ ಕ್ಲಿಪ್‌ ಪ್ರಸಾರ ಮಾಡಿದ ರಿಪಬ್ಲಿಕ್ ಟಿವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...