HomeUncategorized‘ಅಧಿಕಾರ ದುರ್ಬಳಕೆಯಿಂದ ಬಿಜೆಪಿಗೆ 114 ಸ್ಥಾನ, ಪ್ರಚಾರವಿಲ್ಲದೆಯೂ ಕಾಂಗ್ರೆಸ್‌ಗೆ 100 ಸ್ಥಾನ’

‘ಅಧಿಕಾರ ದುರ್ಬಳಕೆಯಿಂದ ಬಿಜೆಪಿಗೆ 114 ಸ್ಥಾನ, ಪ್ರಚಾರವಿಲ್ಲದೆಯೂ ಕಾಂಗ್ರೆಸ್‌ಗೆ 100 ಸ್ಥಾನ’

ಹಣ ಹಾಗೂ ಅಧಿಕಾರ ದುರ್ಬಳಕೆ ಮಾಡಿದ ಹೊರತಾಗಿಯೂ ಬಿಜೆಪಿ 114 ಸ್ಥಾನ ಗೆದ್ದರೆ, ಕೋವಿಡ್ ಹಿನ್ನೆಲೆಯಲ್ಲಿ ಸರಿಯಾಗಿ ಪ್ರಚಾರ ಮಾಡಲಾಗದಿದ್ದರೂ ಕಾಂಗ್ರೆಸ್ 100 ಸ್ಥಾನದಲ್ಲಿ ಗೆದ್ದಿದೆ- ವಿ.ಎಸ್.ಉಗ್ರಪ್ಪ

- Advertisement -
- Advertisement -

269 ಸ್ಥಾನಗಳಿಗೆ ಇತ್ತೀಚೆಗೆ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಆಡಳಿತ ಪಕ್ಷ ಬಿಜೆಪಿಯ ಹಣ, ಅಧಿಕಾರ ದುರ್ಬಳಕೆ ಮಾಡಿದ ಹೊರತಾಗಿಯೂ 114 ಸ್ಥಾನ ಗೆದ್ದರೆ, ವಿರೋಧ ಪಕ್ಷಸ್ಥಾನದಲ್ಲಿರುವ ಕಾಂಗ್ರೆಸ್ ಕೋವಿಡ್ ಹಿನ್ನೆಲೆಯಲ್ಲಿ ಸರಿಯಾಗಿ ಪ್ರಚಾರ ಮಾಡಲಾಗದಿದ್ದರೂ 100 ಸ್ಥಾನದಲ್ಲಿ ಗೆದ್ದಿದೆ. ನಮಗೂ ಹಾಗೂ ಬಿಜೆಪಿಗೂ ಇರುವ ಅಂತರ ಕೇವಲ 14 ಸ್ಥಾನ ಎಂದು ಮಾಜಿ ಸಂಸದ ವಿ.ಎಸ್‌.ಉಗ್ರಪ್ಪ ಅಭಿಪ್ರಾಯಪಟ್ಟಿದ್ದಾರೆ.

ಚುನಾವಣೆ ಫಲಿತಾಂಶ ಸಂಬಂಧ ಪತ್ರಿಕಾಗೋಷ್ಠಿ ನಡೆಸಿರುವ ಅವರು, ಏಪ್ರಿಲ್ ನಲ್ಲಿ ನಡೆದ ಸ್ಥಳೀಯಸಂಸ್ಥೆ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಜಯ ಸಾಧಿಸಿತ್ತು. ಸರ್ಕಾರ ಏನೆಲ್ಲ ಪ್ರಯತ್ನ ಮಾಡಿದರೂ ಅವರ ನಿರೀಕ್ಷೆಗೆ ತಕ್ಕಂತೆ ಜನರ ಬೆಂಬಲ ಸಿಕ್ಕಿಲ್ಲ ಎಂಬ ಸ್ಪಷ್ಟ ಚಿತ್ರಣ ಸಿಕ್ಕಿದೆ. ನಳೀನ್ ಕುಮಾರ್ ಕಟೀಲ್, ಸಿ.ಟಿ.ರವಿ ಸೇರಿದಂತೆ ಬಿಜೆಪಿ ನಾಯಕರು ಬೆಲೆ ಏರಿಕೆ ವಿಚಾರವಾಗಿ ಜನರನ್ನು ದಾರಿ ತಪ್ಪಿಸುವ ಸಂಚು ರೂಪಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಮಾಜಿ ಸಚಿವ ಹೆಚ್.ಎಂ.ರೇವಣ್ಣ ಮಾತನಾಡಿ, ಬಿಜೆಪಿಯವರ ಬಂಡತನ ಹೇಗಿದೆ ಎಂದರೆ, ಚುನಾವಣೆ ಫಲಿತಾಂಶ ಪ್ರಕಟವಾದ ನಂತರ ಈ ರಾಜ್ಯದ ಜನ ಬೆಲೆ ಏರಿಕೆಯನ್ನು ಗಂಭೀರವಾಗಿ ಪರಿಗಣಿಸಿಲ್ಲ. ಇದರ ಬಗ್ಗೆ ನಾವು ಮಾತನಾಡುವ ಅಗತ್ಯವಿಲ್ಲ. ಜನ ಊಟ, ಪೂಜೆ ಮಾಡುತ್ತಿದ್ದಾರೆ ಎಂದು ಕಟೀಲ್ ಹಾಗೂ ರವಿಕುಮಾರ್ ಅವರು ಹೇಳಿದ್ದಾರೆ. ಬೆಲೆ ಏರಿಕೆ ಸಮರ್ಥಿಸಿಕೊಂಡು ಜನ ಸುಮ್ಮನಿದ್ದಾರೆ ಎಂಬುದನ್ನು ಬಿಂಬಿಸುತ್ತಿರುವವರು ಜನನಾಯಕರೇ ಎಂಬ ಪ್ರಶ್ನೆ ಉದ್ಬವಿಸುತ್ತದೆ. ಕೇಂದ್ರದಿಂದ ಬರುವ ಹಣದ ಜತೆಗೆ ಕೇಂದ್ರದ ಯೋಜನೆಗೆ ಅನುದಾನ ಬಂದಿಲ್ಲ. ರಾಜ್ಯದಲ್ಲಿನ ಹಲವು ಯೋಜನೆಗಳನ್ನು ಸ್ಥಗಿತಗೊಳಿಸಿದ್ದಾರೆ ಎಂದು ಹೇಳಿದ್ದಾರೆ.

ವಿದ್ಯಾರ್ಥಿಗಳ ಶೈಕ್ಷಣಿಕ ದೃಷ್ಟಿಯಲ್ಲಿ ಹಾಸ್ಟೆಲ್, ಸ್ಕಾಲರ್ ಶಿಪ್ ಎಲ್ಲವೂ ನಿಂತಿದೆ. ವಿದ್ಯೆಗೆ ಅವಕಾಶ ಇಲ್ಲವಾಗಿದೆ. ಸಿದ್ದರಾಮಯ್ಯ ಅವರು ಹಾಸ್ಟೆಲ್ ಸಿಗದ ವಿದ್ಯಾರ್ಥಿಗಳಿಗೆ ತಿಂಗಳಿಗೆ 1500 ರೂಪಾಯಿ ನೀಡುವ ವಿದ್ಯಾಸಿರಿ ಯೋಜನೆ ನೀಡಿದ್ದರು. ವಿದೇಶಕ್ಕೆ ಹೋಗುವ ವಿದ್ಯಾರ್ಥಿಗಳಿಗೆ ನೀಡುವ ಗ್ರಾಂಟ್, ಪಿ.ಎಚ್.ಡಿ. ವಿದ್ಯಾರ್ಥಿಗಳಿಗೆ ನೀಡುವ ಹಣ ನಿಂತಿದೆ. ಇದೆಲ್ಲ ನೋಡಿದಾಗ, ಮಾನವ ಸಂಪನ್ಮೂಲ ಬೆಳೆಯಲು ಈ ಸರ್ಕಾರದಲ್ಲಿ ಅವಕಾಶ ಇದೆಯೇ? ಕೋವಿಡ್ ಸಮಯದಲ್ಲಿ ನೆರವಾಗುತ್ತಿದ್ದ ಆಹಾರ ಭದ್ರತೆ, ಪಿಎಂಜಿಎಸ್ವೈನಿಂದ ನೀಡುವ ಕೂಲಿಯಂತಹ ಯೋಜನೆಗೆ ಹಣ ಬಿಡುಗಡೆಯಾಗಿಲ್ಲ ಎಂದರೆ ಈ ಸರ್ಕಾರ ಯಾವ ಹಂತಕ್ಕೆ ತಲುಪಿದೆ. ಇನ್ನು 15ನೇ ಹಣಕಾಸು ಸಮಿತಿ ಶಿಫಾರಸ್ಸಿನಂತೆ ರಾಜ್ಯಕ್ಕೆ ಹಣ ಬಂದಿಲ್ಲ. 5495 ಕೋಟಿ ರೂ. ಬರಬೇಕಾಗಿತ್ತು. ಆದರೆ ಒಂದು ಪೈಸೆಯೂ ಬಿಡುಗಡೆಯಾಗಿಲ್ಲ ಎಂದಿದ್ದಾರೆ.

ಇದನ್ನೂ ಓದಿ: ತರೀಕೆರೆ ಪುರಸಭೆ ಚುನಾವಣೆ: ಕಾಂಗ್ರೆಸ್‌ಗೆ ಭರ್ಜರಿ ಜಯ, ಒಂದು ಸ್ಥಾನಕ್ಕೆ ತೃಪ್ತಿ ಪಟ್ಟ ಬಿಜೆಪಿ

ಬಿಜೆಪಿ ಭಾವನಾತ್ಮಕವಾಗಿ ಪ್ರಚೋದನೆ ನೀಡುತ್ತದೆಯೇ ಹೊರತು ಜನಪರ ಕಾರ್ಯಕ್ರಮ ನೀಡುವುದಿಲ್ಲ. ಕೇಂದ್ರ ಹಾಗೂ ರಾಜ್ಯದಲ್ಲಿ ಒಂದೇ ಪಕ್ಷ ಇದ್ದರೆ ರಾಜ್ಯಕ್ಕೆ ಅನುಕೂಲವಾಗುತ್ತದೆ ಎಂಬ ನಿರೀಕ್ಷೆ ಇತ್ತು. ಆದರೆ ಅದು ಹುಸಿಯಾಗಿದೆ. ಯಡಿಯೂರಪ್ಪ ಅವರಿದ್ದರು ಅದಕ್ಕಾಗಿ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ ಎಂದು ಭಾವಿಸಿದ್ದೆ. ಬೊಮ್ಮಾಯಿ ಅವರು ಬಂದ ನಂತರವೂ ಅದೇ ಪರಿಸ್ಥಿತಿ ಮುಂದುವರಿದರೆ ಮುಂದೆ ರಾಜ್ಯದ ಗತಿ ಏನು ಎಂಬ ಪ್ರಶ್ನೆ ಮೂಡುತ್ತದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...