HomeUncategorizedವಿ4 ಸ್ಟ್ರೀಮ್ ನಿಂದ ಹೊಸ ಪ್ರಯೋಗ: ನಾಳೆ ‘ನಸೀಬ್ ಏರೆಗುಂಡು ಏರೆಗಿಜ್ಜಿ’ ಸಿನಿಮಾ ಬಿಡುಗಡೆ

ವಿ4 ಸ್ಟ್ರೀಮ್ ನಿಂದ ಹೊಸ ಪ್ರಯೋಗ: ನಾಳೆ ‘ನಸೀಬ್ ಏರೆಗುಂಡು ಏರೆಗಿಜ್ಜಿ’ ಸಿನಿಮಾ ಬಿಡುಗಡೆ

- Advertisement -
- Advertisement -

ವಿ4 ಸ್ಟ್ರೀಮ್‌ ಓಟಿಟಿಯು ಕನ್ನಡ ಚಲನಚಿತ್ರವನ್ನು ತುಳು ಭಾಷೆಗೆ ಡಬ್ಬಿಂಗ್ ಮಾಡುವ ಮೂಲಕ ಸಿನಿ ಪ್ರೇಕ್ಷರನ್ನು ಮನರಂಜಿಸಿದೆ. ಇದೀಗ ಮೊಟ್ಟ ಮೊದಲ ಬಾರಿಗೆ ಕೊಂಕಣಿ ಭಾಷೆಯ ‘ನಶೀಬಾಚೊ ಖೆಳ್’ ಎನ್ನುವ ಸಿನಿಮಾವನ್ನು ‘ನಸೀಬ್ ಏರೆಗುಂಡು ಏರೆಗಿಜ್ಜಿ’ ಹೆಸರಲ್ಲಿ ಡಬ್‌ ಮಾಡಲಾಗಿದ್ದು, ಮೋಂತಿ ಫೆಸ್ಟ್‌ನ ದಿನದಂದು (ಸೆ.8ರಂದು) ವಿ4 ಸ್ಟ್ರೀಮ್‌ನಲ್ಲಿ ತೆರೆ ಕಾಣಲಿದೆ. ಕರ್ನಾಟಕದ ಮೊಟ್ಟ ಮೊದಲ ಓಟಿಟಿ ಪ್ಲಾಟ್ ಫಾಮ್ ವಿ4ಸ್ಟ್ರೀಮ್ ಪ್ರಯೋಗ ಕುತೂಹಲ ಮೂಡಿಸಿದೆ.

ಸುಮಾರು 35 ವರ್ಷಗಳ ಹಿಂದೆ ಹೆನ್ರಿ ಡಿ ಸಿಲ್ವರವರು ರಚಿಸಿದ ಕಾಜಾರಾಚೆ ಉತಾರ್ ಎಂಬ ನಾಟಕದ ಮೂಲ ಕಥೆಯನ್ನಾಧರಿಸಿ ಮತ್ತು ಇದನ್ನು ಆಧುನಿಕತೆಗುಣವಾಗಿ ಚಲನಚಿತ್ರವಾಗಿ ತೆರೆಗೆ ತರಲಾಗಿದೆ. ಕ್ಯಾಮ್ ಫಿಲ್ಮ್ ಅರ್ಪಿಸುವ, ಪ್ರೆಸ್ಟಸ್ ಎಂಟರ್ ಪ್ರೈಸಸ್ ಲಾಂಭನದಲ್ಲಿ ತಯಾರಾಗಿರುವ ಈ ಸಿನಿಮಾವನ್ನು ಹೆನ್ರಿ ಡಿಸಿಲ್ವ ನಿರ್ಮಿಸಿದ್ದಾರೆ. ಹ್ಯಾರಿ ಫರ್ನಾಂಡೀಸ್ ನಿರ್ದೇಶಿಸಿದ ನಶೀಬಾಚೊ ಖೆಳ್ ಕೊಂಕಣಿ ಚಲನಚಿತ್ರವು ನಸೀಬ್ ಏರೆಗುಂಡು ಏರೆಗಿಜ್ಜಿ ತುಳುವಿಗೆ ಡಬ್ಬಿಂಗ್ ಮಾಡಲಾಗಿದ್ದು ಬುಧವಾರ ತೆರೆಕಾಣಲಿದೆ.

ವಿ4 ಸ್ಟುಡಿಯೋದಲ್ಲಿ ಈ ಚಿತ್ರದ ಡಬ್ಬಿಂಗ್ ಮಾಡಲಾಗಿದೆ. ನಟ ಸ್ವರಾಜ್ ಶೆಟ್ಟಿ, ನಿರೀಕ್ಷಾ ಶೆಟ್ಟಿ, ಶೈಲಶ್ರೀ ಅವರು ಕಂಠದಾನ ಮಾಡಿದ್ದಾರೆ. ಹಾಸ್ಯದಲ್ಲಿ ಜಗದೀಶ್ ಆಡ್ಯಾರ್ ಸಾಥ್ ನೀಡಿದ್ದಾರೆ. ಹಿನ್ನೆಲೆ ಗಾಯನದಲ್ಲಿ ವಿದ್ಯಾ ಸುವರ್ಣ, ವೈಷ್ಣವಿ ಕಿಣಿ, ಪ್ರಶಾಂತ್ ಕಂಕನಾಡಿ, ವಿನೋದ್ ಕೋಕಿಲಾ ಅವರು ಕಂಠ ಸಿರಿಯಲ್ಲಿ ಅದ್ಭುತವಾಗಿ ಹಾಡುಗಳು ಮೂಡಿ ಬಂದಿದೆ. ವಿನೋದ್ ರಾಜ್ ಕೋಕಿಲ ಅವರು ಸಂಗೀತ ನೀಡಿದ್ದಾರೆ. ರಂಜಿತ್ ಕದ್ರಿ, ಆಶ್ವಿನ್ ಬಂಟ್ವಾಳ್ ಅವರು ಸಾಹಿತ್ಯ ಒದಗಿಸಿದ್ದಾರೆ. ವಿನೋದ್ ರಾಜ್ ಕೋಕಿಲ್ ಅವರು ಆ ದೃಶ್ಯಕ್ಕೆ ತಕ್ಕಂತೆ ಹೊಸ ಹಾಡುಗಳನ್ನು ಸಂಯೋಜಿಸಿ ತುಳು ಸಿನಿಮಾಕ್ಕೆ ಹೊಸ ನಾಂದಿ ಹಾಡಿದ್ದಾರೆ. ಗೂಗಲ್ ಫ್ಲೇಸ್ಟೋರ್‌ನಿಂದ ವಿ4 ಆಪ್ ಡೌನ್ ಲೋಡ್ ಮಾಡಿಕೊಂಡು ಸಿನಿಮಾ ನೋಡಬಹುದು ಎಂದು ವಿ4 ಸ್ಟುಡಿಯೋ ತಿಳಿಸಿದೆ.

***

ಈ ಸಿನಿಮಾ 2006ರಲ್ಲಿ ನಶೀಬಾಚೋ ಖೆಳ್ ಎಂಬುದಾಗಿ ಕೊಂಕಣಿಯಲ್ಲಿ ತೆರೆ ಕಂಡಿದೆ. ಕೊಂಕಣಿಯಲ್ಲಿ 2 ಲಕ್ಷ ಕೊಂಕಣಿಗರು ಈ ಸಿನಿಮಾವನ್ನು ವೀಕ್ಷಿಸಿದ್ದಾರೆ. ಕೆನಡಾ, ಅಮೆರಿಕಾ, ಆಸ್ಟ್ರೇಲಿಯಾ, ಲಂಡನ್, ಇಸ್ರೇಲ್ ಮೊದಲಾದ ದೇಶಗಳಲ್ಲಿ ಸಿನಿಮಾ ತೆರೆ ಕಂಡಿದೆ. ಈಗ ತುಳುವಿಗೆ ಈ ಸಿನಿಮಾ ಡಬ್ ಆಗಿ ನಸೀಬ್ ಏರೆಗುಂಡು ಏರೆಗಿಜ್ಜಿ ಹೆಸರಿನಲ್ಲಿ ತೆರೆಕಾಣುತ್ತಿದೆ. ಹಾರಿ ಫೆರ್ನಾಂಡಿಸ್ ನಿರ್ದೇಶಿಸಿದ ಈ ಚಲನಚಿತ್ರವನ್ನು ಶಕ್ತಿನಗರದ ಕಲಾಂಗಣ, ಬಲ್ಮಠ, ಬೊಂದೇಲ್. ಉಡುಪಿ ಜಿಲ್ಲೆಯ ಬಾರ್ಕೂರ್, ಸಾಸ್ತಾನದಲ್ಲಿ ಚಿತ್ರೀಕರಿಸಲಾಗಿದೆ. ಉತ್ತಮ ಹಾಸ್ಯ ಮತ್ತು ಉತ್ತಮ ಕಥಾಹಂದರವನ್ನು ಒಳಗೊಂಡಿರುವ ಈ ಸಿನಿಮಾದಲ್ಲಿ ಎಲ್ಬೆನ್ ಮಸ್ಕರೇಸನ್, ಎಸ್ತೇರ್ ನೊರೊನ್ಹಾ, ರಂಜಿತ ಊವಿಸ್ ಸಾಸ್ತಾನ, ಪ್ರಿನ್ಸ್ ಜಾಕೋಬ್ ಗೋವಾ, ಸ್ಟೇನಿ ಅಲ್ಬಾಂಸ್, ಸುಜಾತ ಅಂದ್ರಾದೆ, ಗ್ಯಾಲ್ವಿನ್ ಫೆರ್ನಾಂಡಿಸ್ ಮೊದಲಾದರು ಈ ಚಿತ್ರದಲ್ಲಿ ನಟಿಸಿದ್ದಾರೆ.
– ಹೆನ್ರಿ ಡಿ’ಸಿಲ್ವ, ನಿರ್ಮಾಪಕರು

***

ವಿ4 ಸ್ಟೀಮ್‌ನ ಓಟಿಟಿ ಆರಂಭಗೊಂಡ ಬಳಿಕ ಈಗಾಗಲೇ 8 ಕನ್ನಡ ಸಿನಿಮಾಗಳನ್ನು ತುಳು ಭಾಷೆಗೆ ಡಬ್ಬಿಂಗ್ ಮಾಡಲಾಗಿದೆ. ಪಂಚತಂತ್ರ, ಪೆನ್ಸಿಲ್‌ಬಾಕ್ಸ್, ರುದ್ರಾಕ್ಷಿಪುರ, ಅಭಿಸಾರಿಕೆ, ರಂಗೋಲು, ನಮ್ ಗಣಿ ಬಿ.ಕಾಂ ಪಾಸ್, ಬೀರ್‌ಬಲ್. ಈ ಎಲ್ಲ ಚಿತ್ರಗಳು ಒಟಿಟಿಯಲ್ಲಿ ಹೆಸರು ಮಾಡಿದ ಚಿತ್ರಗಳು. ಇದನ್ನು ತುಳುವಿಗೆ ಡಬ್ ಮಾಡಲಾಗಿದೆ. ಅದಲ್ಲದೆ ಎಲ್.ಎಸ್. ಮೀಡಿಯಾ ಪ್ರೊಡಕ್ಷನ್‌ನಲ್ಲಿ ಮೂಡಿಬರಲಿರುವ ಐದು ಚಿತ್ರಗಳಲ್ಲಿ ಎರಡು ಕನ್ನಡ ಮತ್ತು ಎರಡು ತುಳು ಚಲನಚಿತ್ರ ನಿರ್ಮಾಣ ಹಂತದಲ್ಲಿವೆ. ಈಗಾಗಲೇ ಟು&ಮಿ ಚಿತ್ರ ವಿ4ಸ್ಟೀಮ್‌ನ ಓಟಿಟಿ ತೆರೆ ಕಂಡು ಯಶಸ್ಸನ್ನು ಕಂಡಿದೆ. ಈ ವರ್ಷದಲ್ಲಿ ಹನ್ನೆರಡಕ್ಕೂ ಅಧಿಕ ಚಿತ್ರಗಳು ಬಿಡುಗಡೆಯಾಗಲಿವೆ.

-ಲಕ್ಷ್ಮಣ್ ಕುಂದರ್, ವಿ4 ನ್ಯೂಸ್ ಆಡಳಿತ ನಿರ್ದೇಶಕರು

***

ಮೊಟ್ಟ ಮೊದಲ ಬಾರಿಗೆ ತುಳುವಿನಲ್ಲಿ ಕೊಂಕಣಿ ಚಿತ್ರವನ್ನು ಡಬ್ಬಿಂಗ್ ಮಾಡಲಾಗಿದೆ. ಚಿತ್ರದಲ್ಲಿ ಕಾಮಿಡಿ ಇರುವುದರಿಂದ ಸಿನಿ ಪ್ರೇಕ್ಷಕರು ಪ್ರೋತ್ಸಾಹಿಸುವುದು ಗ್ಯಾರಂಟಿ. ಉತ್ತಮ ಹ್ಯಾಸ ಹಾಗೂ ಉತ್ತಮ ಕಥಾ ಹಂದರವನ್ನು ಒಳಗೊಂಡಿರುವ ಈ ಸಿನಿಮಾ ಅತ್ಯುತ್ತಮವಾಗಿ ಮೂಡಿ ಬಂದಿದೆ.

-ವಿನೋದ್ ರಾಜ್ ಕೋಕಿಲ, ಸಂಗೀತ ನಿರ್ದೇಶಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...