HomeUncategorizedವಿ4 ಸ್ಟ್ರೀಮ್ ನಿಂದ ಹೊಸ ಪ್ರಯೋಗ: ನಾಳೆ ‘ನಸೀಬ್ ಏರೆಗುಂಡು ಏರೆಗಿಜ್ಜಿ’ ಸಿನಿಮಾ ಬಿಡುಗಡೆ

ವಿ4 ಸ್ಟ್ರೀಮ್ ನಿಂದ ಹೊಸ ಪ್ರಯೋಗ: ನಾಳೆ ‘ನಸೀಬ್ ಏರೆಗುಂಡು ಏರೆಗಿಜ್ಜಿ’ ಸಿನಿಮಾ ಬಿಡುಗಡೆ

- Advertisement -
- Advertisement -

ವಿ4 ಸ್ಟ್ರೀಮ್‌ ಓಟಿಟಿಯು ಕನ್ನಡ ಚಲನಚಿತ್ರವನ್ನು ತುಳು ಭಾಷೆಗೆ ಡಬ್ಬಿಂಗ್ ಮಾಡುವ ಮೂಲಕ ಸಿನಿ ಪ್ರೇಕ್ಷರನ್ನು ಮನರಂಜಿಸಿದೆ. ಇದೀಗ ಮೊಟ್ಟ ಮೊದಲ ಬಾರಿಗೆ ಕೊಂಕಣಿ ಭಾಷೆಯ ‘ನಶೀಬಾಚೊ ಖೆಳ್’ ಎನ್ನುವ ಸಿನಿಮಾವನ್ನು ‘ನಸೀಬ್ ಏರೆಗುಂಡು ಏರೆಗಿಜ್ಜಿ’ ಹೆಸರಲ್ಲಿ ಡಬ್‌ ಮಾಡಲಾಗಿದ್ದು, ಮೋಂತಿ ಫೆಸ್ಟ್‌ನ ದಿನದಂದು (ಸೆ.8ರಂದು) ವಿ4 ಸ್ಟ್ರೀಮ್‌ನಲ್ಲಿ ತೆರೆ ಕಾಣಲಿದೆ. ಕರ್ನಾಟಕದ ಮೊಟ್ಟ ಮೊದಲ ಓಟಿಟಿ ಪ್ಲಾಟ್ ಫಾಮ್ ವಿ4ಸ್ಟ್ರೀಮ್ ಪ್ರಯೋಗ ಕುತೂಹಲ ಮೂಡಿಸಿದೆ.

ಸುಮಾರು 35 ವರ್ಷಗಳ ಹಿಂದೆ ಹೆನ್ರಿ ಡಿ ಸಿಲ್ವರವರು ರಚಿಸಿದ ಕಾಜಾರಾಚೆ ಉತಾರ್ ಎಂಬ ನಾಟಕದ ಮೂಲ ಕಥೆಯನ್ನಾಧರಿಸಿ ಮತ್ತು ಇದನ್ನು ಆಧುನಿಕತೆಗುಣವಾಗಿ ಚಲನಚಿತ್ರವಾಗಿ ತೆರೆಗೆ ತರಲಾಗಿದೆ. ಕ್ಯಾಮ್ ಫಿಲ್ಮ್ ಅರ್ಪಿಸುವ, ಪ್ರೆಸ್ಟಸ್ ಎಂಟರ್ ಪ್ರೈಸಸ್ ಲಾಂಭನದಲ್ಲಿ ತಯಾರಾಗಿರುವ ಈ ಸಿನಿಮಾವನ್ನು ಹೆನ್ರಿ ಡಿಸಿಲ್ವ ನಿರ್ಮಿಸಿದ್ದಾರೆ. ಹ್ಯಾರಿ ಫರ್ನಾಂಡೀಸ್ ನಿರ್ದೇಶಿಸಿದ ನಶೀಬಾಚೊ ಖೆಳ್ ಕೊಂಕಣಿ ಚಲನಚಿತ್ರವು ನಸೀಬ್ ಏರೆಗುಂಡು ಏರೆಗಿಜ್ಜಿ ತುಳುವಿಗೆ ಡಬ್ಬಿಂಗ್ ಮಾಡಲಾಗಿದ್ದು ಬುಧವಾರ ತೆರೆಕಾಣಲಿದೆ.

ವಿ4 ಸ್ಟುಡಿಯೋದಲ್ಲಿ ಈ ಚಿತ್ರದ ಡಬ್ಬಿಂಗ್ ಮಾಡಲಾಗಿದೆ. ನಟ ಸ್ವರಾಜ್ ಶೆಟ್ಟಿ, ನಿರೀಕ್ಷಾ ಶೆಟ್ಟಿ, ಶೈಲಶ್ರೀ ಅವರು ಕಂಠದಾನ ಮಾಡಿದ್ದಾರೆ. ಹಾಸ್ಯದಲ್ಲಿ ಜಗದೀಶ್ ಆಡ್ಯಾರ್ ಸಾಥ್ ನೀಡಿದ್ದಾರೆ. ಹಿನ್ನೆಲೆ ಗಾಯನದಲ್ಲಿ ವಿದ್ಯಾ ಸುವರ್ಣ, ವೈಷ್ಣವಿ ಕಿಣಿ, ಪ್ರಶಾಂತ್ ಕಂಕನಾಡಿ, ವಿನೋದ್ ಕೋಕಿಲಾ ಅವರು ಕಂಠ ಸಿರಿಯಲ್ಲಿ ಅದ್ಭುತವಾಗಿ ಹಾಡುಗಳು ಮೂಡಿ ಬಂದಿದೆ. ವಿನೋದ್ ರಾಜ್ ಕೋಕಿಲ ಅವರು ಸಂಗೀತ ನೀಡಿದ್ದಾರೆ. ರಂಜಿತ್ ಕದ್ರಿ, ಆಶ್ವಿನ್ ಬಂಟ್ವಾಳ್ ಅವರು ಸಾಹಿತ್ಯ ಒದಗಿಸಿದ್ದಾರೆ. ವಿನೋದ್ ರಾಜ್ ಕೋಕಿಲ್ ಅವರು ಆ ದೃಶ್ಯಕ್ಕೆ ತಕ್ಕಂತೆ ಹೊಸ ಹಾಡುಗಳನ್ನು ಸಂಯೋಜಿಸಿ ತುಳು ಸಿನಿಮಾಕ್ಕೆ ಹೊಸ ನಾಂದಿ ಹಾಡಿದ್ದಾರೆ. ಗೂಗಲ್ ಫ್ಲೇಸ್ಟೋರ್‌ನಿಂದ ವಿ4 ಆಪ್ ಡೌನ್ ಲೋಡ್ ಮಾಡಿಕೊಂಡು ಸಿನಿಮಾ ನೋಡಬಹುದು ಎಂದು ವಿ4 ಸ್ಟುಡಿಯೋ ತಿಳಿಸಿದೆ.

***

ಈ ಸಿನಿಮಾ 2006ರಲ್ಲಿ ನಶೀಬಾಚೋ ಖೆಳ್ ಎಂಬುದಾಗಿ ಕೊಂಕಣಿಯಲ್ಲಿ ತೆರೆ ಕಂಡಿದೆ. ಕೊಂಕಣಿಯಲ್ಲಿ 2 ಲಕ್ಷ ಕೊಂಕಣಿಗರು ಈ ಸಿನಿಮಾವನ್ನು ವೀಕ್ಷಿಸಿದ್ದಾರೆ. ಕೆನಡಾ, ಅಮೆರಿಕಾ, ಆಸ್ಟ್ರೇಲಿಯಾ, ಲಂಡನ್, ಇಸ್ರೇಲ್ ಮೊದಲಾದ ದೇಶಗಳಲ್ಲಿ ಸಿನಿಮಾ ತೆರೆ ಕಂಡಿದೆ. ಈಗ ತುಳುವಿಗೆ ಈ ಸಿನಿಮಾ ಡಬ್ ಆಗಿ ನಸೀಬ್ ಏರೆಗುಂಡು ಏರೆಗಿಜ್ಜಿ ಹೆಸರಿನಲ್ಲಿ ತೆರೆಕಾಣುತ್ತಿದೆ. ಹಾರಿ ಫೆರ್ನಾಂಡಿಸ್ ನಿರ್ದೇಶಿಸಿದ ಈ ಚಲನಚಿತ್ರವನ್ನು ಶಕ್ತಿನಗರದ ಕಲಾಂಗಣ, ಬಲ್ಮಠ, ಬೊಂದೇಲ್. ಉಡುಪಿ ಜಿಲ್ಲೆಯ ಬಾರ್ಕೂರ್, ಸಾಸ್ತಾನದಲ್ಲಿ ಚಿತ್ರೀಕರಿಸಲಾಗಿದೆ. ಉತ್ತಮ ಹಾಸ್ಯ ಮತ್ತು ಉತ್ತಮ ಕಥಾಹಂದರವನ್ನು ಒಳಗೊಂಡಿರುವ ಈ ಸಿನಿಮಾದಲ್ಲಿ ಎಲ್ಬೆನ್ ಮಸ್ಕರೇಸನ್, ಎಸ್ತೇರ್ ನೊರೊನ್ಹಾ, ರಂಜಿತ ಊವಿಸ್ ಸಾಸ್ತಾನ, ಪ್ರಿನ್ಸ್ ಜಾಕೋಬ್ ಗೋವಾ, ಸ್ಟೇನಿ ಅಲ್ಬಾಂಸ್, ಸುಜಾತ ಅಂದ್ರಾದೆ, ಗ್ಯಾಲ್ವಿನ್ ಫೆರ್ನಾಂಡಿಸ್ ಮೊದಲಾದರು ಈ ಚಿತ್ರದಲ್ಲಿ ನಟಿಸಿದ್ದಾರೆ.
– ಹೆನ್ರಿ ಡಿ’ಸಿಲ್ವ, ನಿರ್ಮಾಪಕರು

***

ವಿ4 ಸ್ಟೀಮ್‌ನ ಓಟಿಟಿ ಆರಂಭಗೊಂಡ ಬಳಿಕ ಈಗಾಗಲೇ 8 ಕನ್ನಡ ಸಿನಿಮಾಗಳನ್ನು ತುಳು ಭಾಷೆಗೆ ಡಬ್ಬಿಂಗ್ ಮಾಡಲಾಗಿದೆ. ಪಂಚತಂತ್ರ, ಪೆನ್ಸಿಲ್‌ಬಾಕ್ಸ್, ರುದ್ರಾಕ್ಷಿಪುರ, ಅಭಿಸಾರಿಕೆ, ರಂಗೋಲು, ನಮ್ ಗಣಿ ಬಿ.ಕಾಂ ಪಾಸ್, ಬೀರ್‌ಬಲ್. ಈ ಎಲ್ಲ ಚಿತ್ರಗಳು ಒಟಿಟಿಯಲ್ಲಿ ಹೆಸರು ಮಾಡಿದ ಚಿತ್ರಗಳು. ಇದನ್ನು ತುಳುವಿಗೆ ಡಬ್ ಮಾಡಲಾಗಿದೆ. ಅದಲ್ಲದೆ ಎಲ್.ಎಸ್. ಮೀಡಿಯಾ ಪ್ರೊಡಕ್ಷನ್‌ನಲ್ಲಿ ಮೂಡಿಬರಲಿರುವ ಐದು ಚಿತ್ರಗಳಲ್ಲಿ ಎರಡು ಕನ್ನಡ ಮತ್ತು ಎರಡು ತುಳು ಚಲನಚಿತ್ರ ನಿರ್ಮಾಣ ಹಂತದಲ್ಲಿವೆ. ಈಗಾಗಲೇ ಟು&ಮಿ ಚಿತ್ರ ವಿ4ಸ್ಟೀಮ್‌ನ ಓಟಿಟಿ ತೆರೆ ಕಂಡು ಯಶಸ್ಸನ್ನು ಕಂಡಿದೆ. ಈ ವರ್ಷದಲ್ಲಿ ಹನ್ನೆರಡಕ್ಕೂ ಅಧಿಕ ಚಿತ್ರಗಳು ಬಿಡುಗಡೆಯಾಗಲಿವೆ.

-ಲಕ್ಷ್ಮಣ್ ಕುಂದರ್, ವಿ4 ನ್ಯೂಸ್ ಆಡಳಿತ ನಿರ್ದೇಶಕರು

***

ಮೊಟ್ಟ ಮೊದಲ ಬಾರಿಗೆ ತುಳುವಿನಲ್ಲಿ ಕೊಂಕಣಿ ಚಿತ್ರವನ್ನು ಡಬ್ಬಿಂಗ್ ಮಾಡಲಾಗಿದೆ. ಚಿತ್ರದಲ್ಲಿ ಕಾಮಿಡಿ ಇರುವುದರಿಂದ ಸಿನಿ ಪ್ರೇಕ್ಷಕರು ಪ್ರೋತ್ಸಾಹಿಸುವುದು ಗ್ಯಾರಂಟಿ. ಉತ್ತಮ ಹ್ಯಾಸ ಹಾಗೂ ಉತ್ತಮ ಕಥಾ ಹಂದರವನ್ನು ಒಳಗೊಂಡಿರುವ ಈ ಸಿನಿಮಾ ಅತ್ಯುತ್ತಮವಾಗಿ ಮೂಡಿ ಬಂದಿದೆ.

-ವಿನೋದ್ ರಾಜ್ ಕೋಕಿಲ, ಸಂಗೀತ ನಿರ್ದೇಶಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...