HomeUncategorizedವಿ4 ಸ್ಟ್ರೀಮ್ ನಿಂದ ಹೊಸ ಪ್ರಯೋಗ: ನಾಳೆ ‘ನಸೀಬ್ ಏರೆಗುಂಡು ಏರೆಗಿಜ್ಜಿ’ ಸಿನಿಮಾ ಬಿಡುಗಡೆ

ವಿ4 ಸ್ಟ್ರೀಮ್ ನಿಂದ ಹೊಸ ಪ್ರಯೋಗ: ನಾಳೆ ‘ನಸೀಬ್ ಏರೆಗುಂಡು ಏರೆಗಿಜ್ಜಿ’ ಸಿನಿಮಾ ಬಿಡುಗಡೆ

- Advertisement -
- Advertisement -

ವಿ4 ಸ್ಟ್ರೀಮ್‌ ಓಟಿಟಿಯು ಕನ್ನಡ ಚಲನಚಿತ್ರವನ್ನು ತುಳು ಭಾಷೆಗೆ ಡಬ್ಬಿಂಗ್ ಮಾಡುವ ಮೂಲಕ ಸಿನಿ ಪ್ರೇಕ್ಷರನ್ನು ಮನರಂಜಿಸಿದೆ. ಇದೀಗ ಮೊಟ್ಟ ಮೊದಲ ಬಾರಿಗೆ ಕೊಂಕಣಿ ಭಾಷೆಯ ‘ನಶೀಬಾಚೊ ಖೆಳ್’ ಎನ್ನುವ ಸಿನಿಮಾವನ್ನು ‘ನಸೀಬ್ ಏರೆಗುಂಡು ಏರೆಗಿಜ್ಜಿ’ ಹೆಸರಲ್ಲಿ ಡಬ್‌ ಮಾಡಲಾಗಿದ್ದು, ಮೋಂತಿ ಫೆಸ್ಟ್‌ನ ದಿನದಂದು (ಸೆ.8ರಂದು) ವಿ4 ಸ್ಟ್ರೀಮ್‌ನಲ್ಲಿ ತೆರೆ ಕಾಣಲಿದೆ. ಕರ್ನಾಟಕದ ಮೊಟ್ಟ ಮೊದಲ ಓಟಿಟಿ ಪ್ಲಾಟ್ ಫಾಮ್ ವಿ4ಸ್ಟ್ರೀಮ್ ಪ್ರಯೋಗ ಕುತೂಹಲ ಮೂಡಿಸಿದೆ.

ಸುಮಾರು 35 ವರ್ಷಗಳ ಹಿಂದೆ ಹೆನ್ರಿ ಡಿ ಸಿಲ್ವರವರು ರಚಿಸಿದ ಕಾಜಾರಾಚೆ ಉತಾರ್ ಎಂಬ ನಾಟಕದ ಮೂಲ ಕಥೆಯನ್ನಾಧರಿಸಿ ಮತ್ತು ಇದನ್ನು ಆಧುನಿಕತೆಗುಣವಾಗಿ ಚಲನಚಿತ್ರವಾಗಿ ತೆರೆಗೆ ತರಲಾಗಿದೆ. ಕ್ಯಾಮ್ ಫಿಲ್ಮ್ ಅರ್ಪಿಸುವ, ಪ್ರೆಸ್ಟಸ್ ಎಂಟರ್ ಪ್ರೈಸಸ್ ಲಾಂಭನದಲ್ಲಿ ತಯಾರಾಗಿರುವ ಈ ಸಿನಿಮಾವನ್ನು ಹೆನ್ರಿ ಡಿಸಿಲ್ವ ನಿರ್ಮಿಸಿದ್ದಾರೆ. ಹ್ಯಾರಿ ಫರ್ನಾಂಡೀಸ್ ನಿರ್ದೇಶಿಸಿದ ನಶೀಬಾಚೊ ಖೆಳ್ ಕೊಂಕಣಿ ಚಲನಚಿತ್ರವು ನಸೀಬ್ ಏರೆಗುಂಡು ಏರೆಗಿಜ್ಜಿ ತುಳುವಿಗೆ ಡಬ್ಬಿಂಗ್ ಮಾಡಲಾಗಿದ್ದು ಬುಧವಾರ ತೆರೆಕಾಣಲಿದೆ.

ವಿ4 ಸ್ಟುಡಿಯೋದಲ್ಲಿ ಈ ಚಿತ್ರದ ಡಬ್ಬಿಂಗ್ ಮಾಡಲಾಗಿದೆ. ನಟ ಸ್ವರಾಜ್ ಶೆಟ್ಟಿ, ನಿರೀಕ್ಷಾ ಶೆಟ್ಟಿ, ಶೈಲಶ್ರೀ ಅವರು ಕಂಠದಾನ ಮಾಡಿದ್ದಾರೆ. ಹಾಸ್ಯದಲ್ಲಿ ಜಗದೀಶ್ ಆಡ್ಯಾರ್ ಸಾಥ್ ನೀಡಿದ್ದಾರೆ. ಹಿನ್ನೆಲೆ ಗಾಯನದಲ್ಲಿ ವಿದ್ಯಾ ಸುವರ್ಣ, ವೈಷ್ಣವಿ ಕಿಣಿ, ಪ್ರಶಾಂತ್ ಕಂಕನಾಡಿ, ವಿನೋದ್ ಕೋಕಿಲಾ ಅವರು ಕಂಠ ಸಿರಿಯಲ್ಲಿ ಅದ್ಭುತವಾಗಿ ಹಾಡುಗಳು ಮೂಡಿ ಬಂದಿದೆ. ವಿನೋದ್ ರಾಜ್ ಕೋಕಿಲ ಅವರು ಸಂಗೀತ ನೀಡಿದ್ದಾರೆ. ರಂಜಿತ್ ಕದ್ರಿ, ಆಶ್ವಿನ್ ಬಂಟ್ವಾಳ್ ಅವರು ಸಾಹಿತ್ಯ ಒದಗಿಸಿದ್ದಾರೆ. ವಿನೋದ್ ರಾಜ್ ಕೋಕಿಲ್ ಅವರು ಆ ದೃಶ್ಯಕ್ಕೆ ತಕ್ಕಂತೆ ಹೊಸ ಹಾಡುಗಳನ್ನು ಸಂಯೋಜಿಸಿ ತುಳು ಸಿನಿಮಾಕ್ಕೆ ಹೊಸ ನಾಂದಿ ಹಾಡಿದ್ದಾರೆ. ಗೂಗಲ್ ಫ್ಲೇಸ್ಟೋರ್‌ನಿಂದ ವಿ4 ಆಪ್ ಡೌನ್ ಲೋಡ್ ಮಾಡಿಕೊಂಡು ಸಿನಿಮಾ ನೋಡಬಹುದು ಎಂದು ವಿ4 ಸ್ಟುಡಿಯೋ ತಿಳಿಸಿದೆ.

***

ಈ ಸಿನಿಮಾ 2006ರಲ್ಲಿ ನಶೀಬಾಚೋ ಖೆಳ್ ಎಂಬುದಾಗಿ ಕೊಂಕಣಿಯಲ್ಲಿ ತೆರೆ ಕಂಡಿದೆ. ಕೊಂಕಣಿಯಲ್ಲಿ 2 ಲಕ್ಷ ಕೊಂಕಣಿಗರು ಈ ಸಿನಿಮಾವನ್ನು ವೀಕ್ಷಿಸಿದ್ದಾರೆ. ಕೆನಡಾ, ಅಮೆರಿಕಾ, ಆಸ್ಟ್ರೇಲಿಯಾ, ಲಂಡನ್, ಇಸ್ರೇಲ್ ಮೊದಲಾದ ದೇಶಗಳಲ್ಲಿ ಸಿನಿಮಾ ತೆರೆ ಕಂಡಿದೆ. ಈಗ ತುಳುವಿಗೆ ಈ ಸಿನಿಮಾ ಡಬ್ ಆಗಿ ನಸೀಬ್ ಏರೆಗುಂಡು ಏರೆಗಿಜ್ಜಿ ಹೆಸರಿನಲ್ಲಿ ತೆರೆಕಾಣುತ್ತಿದೆ. ಹಾರಿ ಫೆರ್ನಾಂಡಿಸ್ ನಿರ್ದೇಶಿಸಿದ ಈ ಚಲನಚಿತ್ರವನ್ನು ಶಕ್ತಿನಗರದ ಕಲಾಂಗಣ, ಬಲ್ಮಠ, ಬೊಂದೇಲ್. ಉಡುಪಿ ಜಿಲ್ಲೆಯ ಬಾರ್ಕೂರ್, ಸಾಸ್ತಾನದಲ್ಲಿ ಚಿತ್ರೀಕರಿಸಲಾಗಿದೆ. ಉತ್ತಮ ಹಾಸ್ಯ ಮತ್ತು ಉತ್ತಮ ಕಥಾಹಂದರವನ್ನು ಒಳಗೊಂಡಿರುವ ಈ ಸಿನಿಮಾದಲ್ಲಿ ಎಲ್ಬೆನ್ ಮಸ್ಕರೇಸನ್, ಎಸ್ತೇರ್ ನೊರೊನ್ಹಾ, ರಂಜಿತ ಊವಿಸ್ ಸಾಸ್ತಾನ, ಪ್ರಿನ್ಸ್ ಜಾಕೋಬ್ ಗೋವಾ, ಸ್ಟೇನಿ ಅಲ್ಬಾಂಸ್, ಸುಜಾತ ಅಂದ್ರಾದೆ, ಗ್ಯಾಲ್ವಿನ್ ಫೆರ್ನಾಂಡಿಸ್ ಮೊದಲಾದರು ಈ ಚಿತ್ರದಲ್ಲಿ ನಟಿಸಿದ್ದಾರೆ.
– ಹೆನ್ರಿ ಡಿ’ಸಿಲ್ವ, ನಿರ್ಮಾಪಕರು

***

ವಿ4 ಸ್ಟೀಮ್‌ನ ಓಟಿಟಿ ಆರಂಭಗೊಂಡ ಬಳಿಕ ಈಗಾಗಲೇ 8 ಕನ್ನಡ ಸಿನಿಮಾಗಳನ್ನು ತುಳು ಭಾಷೆಗೆ ಡಬ್ಬಿಂಗ್ ಮಾಡಲಾಗಿದೆ. ಪಂಚತಂತ್ರ, ಪೆನ್ಸಿಲ್‌ಬಾಕ್ಸ್, ರುದ್ರಾಕ್ಷಿಪುರ, ಅಭಿಸಾರಿಕೆ, ರಂಗೋಲು, ನಮ್ ಗಣಿ ಬಿ.ಕಾಂ ಪಾಸ್, ಬೀರ್‌ಬಲ್. ಈ ಎಲ್ಲ ಚಿತ್ರಗಳು ಒಟಿಟಿಯಲ್ಲಿ ಹೆಸರು ಮಾಡಿದ ಚಿತ್ರಗಳು. ಇದನ್ನು ತುಳುವಿಗೆ ಡಬ್ ಮಾಡಲಾಗಿದೆ. ಅದಲ್ಲದೆ ಎಲ್.ಎಸ್. ಮೀಡಿಯಾ ಪ್ರೊಡಕ್ಷನ್‌ನಲ್ಲಿ ಮೂಡಿಬರಲಿರುವ ಐದು ಚಿತ್ರಗಳಲ್ಲಿ ಎರಡು ಕನ್ನಡ ಮತ್ತು ಎರಡು ತುಳು ಚಲನಚಿತ್ರ ನಿರ್ಮಾಣ ಹಂತದಲ್ಲಿವೆ. ಈಗಾಗಲೇ ಟು&ಮಿ ಚಿತ್ರ ವಿ4ಸ್ಟೀಮ್‌ನ ಓಟಿಟಿ ತೆರೆ ಕಂಡು ಯಶಸ್ಸನ್ನು ಕಂಡಿದೆ. ಈ ವರ್ಷದಲ್ಲಿ ಹನ್ನೆರಡಕ್ಕೂ ಅಧಿಕ ಚಿತ್ರಗಳು ಬಿಡುಗಡೆಯಾಗಲಿವೆ.

-ಲಕ್ಷ್ಮಣ್ ಕುಂದರ್, ವಿ4 ನ್ಯೂಸ್ ಆಡಳಿತ ನಿರ್ದೇಶಕರು

***

ಮೊಟ್ಟ ಮೊದಲ ಬಾರಿಗೆ ತುಳುವಿನಲ್ಲಿ ಕೊಂಕಣಿ ಚಿತ್ರವನ್ನು ಡಬ್ಬಿಂಗ್ ಮಾಡಲಾಗಿದೆ. ಚಿತ್ರದಲ್ಲಿ ಕಾಮಿಡಿ ಇರುವುದರಿಂದ ಸಿನಿ ಪ್ರೇಕ್ಷಕರು ಪ್ರೋತ್ಸಾಹಿಸುವುದು ಗ್ಯಾರಂಟಿ. ಉತ್ತಮ ಹ್ಯಾಸ ಹಾಗೂ ಉತ್ತಮ ಕಥಾ ಹಂದರವನ್ನು ಒಳಗೊಂಡಿರುವ ಈ ಸಿನಿಮಾ ಅತ್ಯುತ್ತಮವಾಗಿ ಮೂಡಿ ಬಂದಿದೆ.

-ವಿನೋದ್ ರಾಜ್ ಕೋಕಿಲ, ಸಂಗೀತ ನಿರ್ದೇಶಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...