Homeಕರ್ನಾಟಕಬೆಲೆ ಏರಿಕೆಗೆ ಕಾಂಗ್ರೆಸ್ ಕಾರಣವಲ್ಲ, ಬಹಿರಂಗ ಚರ್ಚೆಗೆ ನಾವು ಸಿದ್ಧ: ಉಗ್ರಪ್ಪ ಸವಾಲು

ಬೆಲೆ ಏರಿಕೆಗೆ ಕಾಂಗ್ರೆಸ್ ಕಾರಣವಲ್ಲ, ಬಹಿರಂಗ ಚರ್ಚೆಗೆ ನಾವು ಸಿದ್ಧ: ಉಗ್ರಪ್ಪ ಸವಾಲು

ಈ ದೇಶ ಕಂಡ ಅತ್ಯಂತ ಸುಳ್ಳುಗಾರ, ಜನರ ದಾರಿ ತಪ್ಪಿಸುವ ಪ್ರಧಾನಿ ಎಂದರೆ ಅದು ಮೋದಿ. ಈ ದೇಶ ಕಂಡ ಅತ್ಯಂತ ಭ್ರಷ್ಟ ಪ್ರಧಾನಿ ಮೋದಿ- ವಿ.ಎಸ್.ಉಗ್ರಪ್ಪ

- Advertisement -
- Advertisement -

ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಏರಿಕೆಗೆ ಕಾಂಗ್ರೆಸ್ ನೀಡಿದ ತೈಲ ಬಾಂಡ್ ಗಳೇ ಕಾರಣ ಎಂದು ಹೇಳುತ್ತಿದ್ದಾರೆ. ಈ ವಿಚಾರದಲ್ಲಿ ಬಹಿರಂಗ ಚರ್ಚೆ ಮಾಡಲು ಸಿದ್ಧವಿದ್ದೇವೆ ಎಂದು ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಸವಾಲು ಹಾಕಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಬ್ಯಾರೆಲ್ ಕಚ್ಚಾತೈಲ ಬೆಲೆ 120-130 ಡಾಲರ್ ಇದ್ದಾಗ ಜನರಿಗೆ ಹೊರೆ ಹೆಚ್ಚಾಗಬಾರದು ಎಂದು ಸಬ್ಸಿಡಿ ಮೂಲಕ ಹೊರೆ ಇಳಿಸಲು ಕಾಂಗ್ರೆಸ್ 1.34 ಲಕ್ಷ ಕೋಟಿಯಷ್ಟು ತೈಲ ಬಾಂಡ್ ನೀಡಿದ್ದು ನಿಜ. ನಾವು ಜನರ ಒತ್ತಡ ಕಡಿಮೆ ಮಾಡಲು ಇದನ್ನು ಜಾರಿಗೆ ತಂದಿದ್ದೆವೆಯೇ ಹೊರತು ಕಿಕ್ ಬ್ಯಾಕ್ ಪಡೆಯಲು ಇದನ್ನು ನೀಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಈ ವರ್ಷ 10 ಸಾವಿರ ಕೋಟಿಯಷ್ಟು ಹಣವನ್ನು ಈ ತೈಲ ಬಾಂಡ್ ಗೆ ಪಾವತಿ ಮಾಡಬೇಕಾಗಿದೆ. ಆದರೆ ಈ ವರ್ಷ ಏಪ್ರಿಲ್- ಜುಲೈ ಅವಧಿಯಲ್ಲಿ ಕೇಂದ್ರ ಸರ್ಕಾರ ತೆರಿಗೆ ಮೂಲಕ 32,492 ಕೋಟಿಯಷ್ಟು ಹಣ ಸಂಗ್ರಹಿಸಿದೆ. ಬಿಜೆಪಿ ಸರ್ಕಾರ ಕಳೆದ 7 ವರ್ಷಗಳಲ್ಲಿ ಈ ಇಂಧನಗಳ ಮೇಲಿನ ತೆರಿಗೆಯಿಂದ 23 ಲಕ್ಷ ಕೋಟಿ ರೂ.ಗಳನ್ನು ಲೂಟಿ ಮಾಡಿದ್ದಾರೆ. ಕಷ್ಟದ ಸಮಯದಲ್ಲಿ ನಾವು ಬಾಂಡ್ ಮೂಲಕ ಹಣ ಸಂಗ್ರಹಿಸಿ ಜನರ ಮೇಲೆ ಹೊರೆ ಇಳಿಸಲು ಕಾಂಗ್ರೆಸ್ ಪ್ರಯತ್ನಿಸಿದರೆ, ಬಿಜೆಪಿ ಕಚ್ಚಾತೈಲ ಬೆಲೆ ಕಡಿಮೆ ಇದ್ದರೂ ಅದರ ಪ್ರಯೋಜನ ಜನರಿಗೆ ಸಿಗದಂತೆ ಮಾಡಿದೆ. ಆ ಮೂಲಕ ಪೆಟ್ರೋಲ್ ದರ 105, ಡೀಸೆಲ್ ದರ 94 ಹಾಗೂ ಅಡುಗೆ ಅನಿಲ 887 ರೂ. ಆಗಿದೆ. ಇದೇ ಕಾಂಗ್ರೆಸ್ ಹಾಗೂ ಬಿಜೆಪಿ ನಡುವಣ ವ್ಯತ್ಯಾಸ ಎಂದು ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಹೇಳುವ ಅಚ್ಛೇ ದಿನ್ ಇದೇನಾ? ಜನರ ಬದುಕು ದುರ್ಬರ ಮಾಡುವುದೇ ಬಿಜೆಪಿಯ ಅಚ್ಛೇ ದಿನ. ದೇಶದ ಜನರ ಭಾವನೆಯಲ್ಲಿ ಪ್ರಧಾನಿ ಇಮೇಜ್ ಕಡಿಮೆಯಾಗಿದೆ. ಜಾಗತಿಕ ಸಂಸ್ಥೆಗಳು ಅಭಿವೃದ್ಧಿಶೀಲ ರಾಷ್ಟ್ರಗಳ ಪಟ್ಟಿಯಿಂದ ಭಾರತವನ್ನು ಕೈಬಿಟ್ಟಿವೆ. ದೇಶದ ಜಿಡಿಪಿ ಋಣಾತ್ಮಕವಾಗಿ ಸಾಗಿರುವ ಕಾರಣದಿಂದ ಈ ನಿರ್ಧಾರಕ್ಕೆ ಬಂದಿದ್ದು, ಇದು ದೇಶಕ್ಕೆ ಆಗಿರುವ ಅಪಮಾನ, ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ದುರಾಡಳಿತವೇ ಕಾರಣ ಎಂದು ಆರೋಪಿಸಿದ್ದಾರೆ.

ರಾಜ್ಯದಿಂದ ಸಂಗ್ರಹಿಸಲಾಗುವ ಜಿಎಸ್‌ಟಿ 2018-19ರಲ್ಲಿ 10,754 ಕೋಟಿ ರೂ.ಗಳಿದ್ದು, 2029-20ರಲ್ಲಿ 16,620 ಕೋಟಿ ರೂ.ಗಳಷ್ಟಾಗಿದೆ. 2020-21ರಲ್ಲಿ 12 ಸಾವಿರ ಕೋಟಿ ರೂ., 2021-22ರಲ್ಲಿ 8,542.17 ಕೋಟಿ ರೂ.ಗಳಷ್ಟು ಜಿಎಸ್‌ಟಿ ಪರಿಹಾರ ಬರಬೇಕು. ಏಪ್ರಿಲ್- ಮೇ ತಿಂಗಳಲ್ಲೇ 5,500 ಕೋಟಿ ರೂ. ಪರಿಹಾರ ಬರಬೇಕು. ಆದರೆ ಕೇಂದ್ರ ಸರ್ಕಾರ ಕಳೆದ ಮಾರ್ಚ್ 27ರಂದು 2970 ಕೋಟಿ ಮಾತ್ರ. ಇನ್ನು 11 ಸಾವಿರ ಕೋಟಿಗೂ ಹೆಚ್ಚು ಹಣ ನೀಡಬೇಕಿದೆ. ಇತ್ತೀಚೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಸರ್ಕಾರದ ಸ್ವಚ್ಛ ಭಾರತ, ಪಿಎಂಜಿಎಸ್, ಪಿಎಂ ಅವಾಸ್ ಯೋಜನೆ, ರಾಷ್ಟ್ರೀಯ ಸುಸ್ಥಿರ ಕೃಷಿ, ಪ್ರಧಾನಮಂತ್ರಿ ಕೃಷಿ ಸಂಚಯ್ ಯೋಜನೆ, ವಿದ್ಯಾರ್ಥಿ ವೇತನ ಸೇರಿದಂತೆ ಪ್ರಮುಖ ಯೋಜನಗೆಳಿಗೆ ಪ್ರಸಕ್ತ ಆರ್ಥಿಕ ವರ್ಷದಲ್ಲಿ ನಯಾಪೈಸೆ ಅನುದಾನ ರಾಜ್ಯಕ್ಕೆ ಬಿಡುಗಡೆಯಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಕೇಂದ್ರದ ಪ್ರಮುಖ ವಲಯಗಳಾದ ಗ್ರಾಮೀಣಾಭಿವೃದ್ಧಿ, ವಸತಿ, ಕೃಷಿ ಸೇರಿದಂತೆ ಇತರೆ ವಲಯಗಳಿಗೆ 3,890 ಕೋಟಿ ರೂ. ಅನುದಾನ ಬೇಕಾಗಿದೆ. ಅದರಲ್ಲಿ ಕೇಂದ್ರದ ಪಾಲು 2,410 ಕೋಟಿ ರೂ., ರಾಜ್ಯದ ಪಾಲು 1,479 ಕೋಟಿ ರೂ. ಇದೆ. ಇದರಲ್ಲಿ ಕೇಂದ್ರದಿಂದ ಒಂದು ಪೈಸೆಯೂ ಕೇಂದ್ರ ಸರ್ಕಾರದಿಂದ ನೀಡುತ್ತಿಲ್ಲ. ಪಿಎಂಜಿಎಸ್ ವೈ ಒಂದೇ ಯೋಜನೆಯಲ್ಲಿ 900 ಕೋಟಿ ರೂ., ಸ್ವಚ್ಛ ಭಾರತ ಯೋಜನೆಯಲ್ಲಿ 290 ಕೋಟಿ ರೂ., ಅವಾಸ್ ಯೋಜನೆಯಲ್ಲಿ 300 ಕೋಟಿ ರೂ., ಸುಸ್ಥಿರ ಯೋಜನೆಗೆ 117 ಕೋಟಿ ರೂ., ಆಹಾರ ಭದ್ರತೆಗೆ 98.3 ಕೋಟಿ ರೂ., ಕೃಷಿ ಸಂಚಯ್ ಯೋಜನೆಗೆ 270 ಕೋಟಿ ರೂ. ನೀಡಬೇಕಿದೆ. ಕೊಟ್ಟಿಲ್ಲ ಯಾಕೆ? ಎಂದು ಪ್ರಶ್ನಿಸಿದ್ದಾರೆ.

ರಾಜ್ಯದ ಜನರಿಗೆ ತೆರಿಗೆ ಹೆಸರಲ್ಲಿ ಸುಲಿಗೆ ಮಾಡುತ್ತಿದ್ದಾರೆ. ಮತ್ತೊಂದೆಡೆ ನಮ್ಮ ಜಿಎಸ್ಟಿ ಪಾಲು ನೀಡುತ್ತಿಲ್ಲ. ಈ ಪ್ರಧಾನಿಯನ್ನು ಏನೆಂದು ಕರೆಯಬೇಕು? ಈ ದೇಶ ಕಂಡ ಅತ್ಯಂತ ಸುಳ್ಳುಗಾರ, ಜನರ ದಾರಿ ತಪ್ಪಿಸುವ ಪ್ರಧಾನಿ ಎಂದರೆ ಅದು ಮೋದಿ. ಈ ದೇಶ ಕಂಡ ಅತ್ಯಂತ ಭ್ರಷ್ಟ ಪ್ರಧಾನಿ ಮೋದಿ. ರಾಜೀವ್ ಗಾಂಧಿ ಅವರು ಪ್ರಧಾನಿ ಆಗಿದ್ದಾಗ ಬೋಫೋರ್ಸ್ ನಲ್ಲಿ 63 ಕೋಟಿ ರೂ., ಮನಮೋಹನ್ ಸಿಂಗ್ ಅವರ ಅವಧಿಯಲ್ಲಿ 2ಜಿ, ಕಲ್ಲಿದ್ದಲಿನಲ್ಲಿ 1.74 ಲಕ್ಷ ಕೋಟಿ ಹಗರಣ ಆಗಿದೆ ಎಂದು ಆರೋಪ ಮಾಡಿದ್ದರು. ನಾವು ತಪ್ಪು ಮಾಡಿಲ್ಲ ಎಂಬ ವಿಶ್ವಾಸದಿಂದ ತನಿಖೆಗೆ ಆದೇಶ ಮಾಡಿದ್ದೆವು. ಇವರು ಅಧಿಕಾರಕ್ಕೆ ಬಂದು 7 ವರ್ಷವಾಗಿದೆ ನಾವು ಹಗರಣ ಮಾಡಿದ್ದರೆ ನಮ್ಮನ್ನು ಜೈಲಿಗೆ ಹಾಕಬೇಕಿತ್ತು. ಏಕೆ ಹಾಕಿಲ್ಲ ಎಂದರೆ ಭ್ರಷ್ಟಾಚಾರ ನಡೆದಿಲ್ಲ ಎಂದಿದ್ದಾರೆ.

ಇದನ್ನೂ ಓದಿ: ‘ಅಧಿಕಾರ ದುರ್ಬಳಕೆಯಿಂದ ಬಿಜೆಪಿಗೆ 114 ಸ್ಥಾನ, ಪ್ರಚಾರವಿಲ್ಲದೆಯೂ ಕಾಂಗ್ರೆಸ್‌ಗೆ 100 ಸ್ಥಾನ’

ಈ ಸರ್ಕಾರ ರಫೇಲ್ ಯುದ್ಧ ವಿಮಾನ ಖರೀದಿಯಲ್ಲಿ 39,600 ಕೋಟಿ ಕಿಕ್ ಬ್ಯಾಗ್ ಪಡೆದಿದೆ. ವಾಜಪೇಯಿ ಅವರು 2001ರಲ್ಲಿ ವಾಜಪೇಯಿ ಅವರು ಪ್ರಧಾನಿಯಾಗಿದ್ದಾಗ ದೇಶಕ್ಕೆ 126 ಫೈಟರ್ ಜೆಟ್ ಬೇಕು ಎಂದು ಸಂಪುಟದಲ್ಲಿ ನಿರ್ಧಾರ ಕೈಗೊಂಡಿದ್ದರು. ನಂತರ 2008ರಲ್ಲಿ ಅದು ಟೆಂಡರ್ ಕರೆದು 2011ರಲ್ಲಿ ಅಂತಿಮವಾಗುತ್ತದೆ. ಆಗ ಒಂದು ಯುದ್ಧ ವಿಮಾನಕ್ಕೆ 570 ಕೋಟಿ ರೂ. ದರ ನಿಗದಿ ಮಾಡಿತ್ತು. ಆದರೆ ಬಿಜೆಪಿ ಸರ್ಕಾರ 2015ರಲ್ಲಿ ಕೇವಲ 36 ಯುದ್ಧ ವಿಮಾನವನ್ನು ಪ್ರತಿ ವಿಮಾನಕ್ಕೆ 1670 ಕೋಟಿ ರೂ.ಗೆ ದರ ಏರಿಸುತ್ತಾರೆ. ಇದರ ನಿರ್ಮಾಣದ ಜವಾಬ್ದಾರಿಯನ್ನು 11 ದಿನಗಳ ಹಿಂದಷ್ಟೇ ಹುಟ್ಟುಕೊಂಡಿದ್ದ ಅನಿಲ್ ಅಂಬಾನಿ ಅವರ ಕಂಪನಿಗೆ ನೀಡುತ್ತಾರೆ. ಒಂದು ವಿಮಾನಕ್ಕೆ 1100 ಕೋಟಿ ಎಂಬಂತೆ 36 ಯುದ್ಧ ವಿಮಾನಕ್ಕೆ 39,600 ಕೋಟಿ ನೀಡಿದ್ದಾರೆ ಎಂದು ಟೀಕಿಸಿದ್ದಾರೆ.

ಯುಪಿಎ ಇದ್ದಾಗ ಪೆಟ್ರೋಲ್ ಮೇಲೆ 9 ರೂಪಾಯಿ ಡೀಸೆಲ್ ಮೇಲೆ 3 ರೂಪಾಯಿ ತೆರಿಗೆ ಹಾಕಲಾಗುತ್ತಿತ್ತು. ಆದರೆ ಇಂದು 32.90 ಹಾಗೂ 31.80 ರೂಪಾಯಿ ತೆರಿಗೆ ಹಾಕಲಾಗಿದೆ. ಮಾತೆತ್ತಿದರೆ ಬಾಂಡ್ ಸಾಲ ತೀರಿಸಬೇಕು ಎನ್ನುವ ಬಿಜೆಪಿಗರಿಗೆ ನಾಚಿಕೆಯಾಗಬೇಕು. ಅವರು ರಾಜಕಾರಣ ಮಾಡಲಿ, ಆದರೆ ಸುಳ್ಳು ಹೇಳುವುದನ್ನು ನಿಲ್ಲಿಸಲಿ. ಅವರಿಗೆ ದಮ್ಮು, ತಾಕತ್ತು ಇದ್ದರೆ ಈ ವಿಚಾರವಾಗಿ ಸಾರ್ವಜನಿಕ ಚರ್ಚೆಗೆ ಬರಲಿ. ಬಿಜೆಪಿ ಅಸಮರ್ಥ ಆಡಳಿತ, ಜನವಿರೋಧಿ ಪ್ರವೃತ್ತಿಯಿಂದ ಇಂದು ಬೆಲೆ ಏರಿಕೆ ಆಗಿದೆ. ಇದೇ ಕಾರಣಕ್ಕೆ ಪ್ರಧಾನಿ ಅವರ ಜನಪ್ರಿಯತೆ ಶೇ.64ರಿಂದ ಶೇ.24ಕ್ಕೆ ಕುಸಿದಿದೆ ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...