Homeಮುಖಪುಟಕ್ಯಾಂಪಸ್‌ ತೆರೆದು 2020ರ ಬ್ಯಾಚ್ ವ್ಯಾಸಂಗಕ್ಕೆ ಅನುಮತಿ ನೀಡಲು ಜೆಎನ್‌ಯುಎಸ್‌ಯು ಒತ್ತಾಯ

ಕ್ಯಾಂಪಸ್‌ ತೆರೆದು 2020ರ ಬ್ಯಾಚ್ ವ್ಯಾಸಂಗಕ್ಕೆ ಅನುಮತಿ ನೀಡಲು ಜೆಎನ್‌ಯುಎಸ್‌ಯು ಒತ್ತಾಯ

ಸೌಲಭ್ಯಗಳ ಕೊರತೆಯಿಂದಾಗಿ ಬಹುತೇಕ ವಿದ್ಯಾರ್ಥಿಗಳು ಆನ್‌ಲೈನ್‌ ತರಗತಿಗಳಿಗೆ ಹಾಜರಾಗುತ್ತಿಲ್ಲ. ಅನೇಕ ವಿದ್ಯಾರ್ಥಿಗಳು ವ್ಯಾಸಂಗವನ್ನು ತೊರೆದಿದ್ದಾರೆ ಎಂದು ಎಐಎಸ್‌ಎ ಕಾರ್ಯದರ್ಶಿ ಕುಂದು ಹೇಳಿದ್ದಾರೆ.

- Advertisement -
- Advertisement -

2020ರ ಬ್ಯಾಚಿನ ವಿದ್ಯಾರ್ಥಿಗಳಿಗೆ ಹಾಸ್ಟೆಲ್‌ ತೆರೆದು, ಕ್ಯಾಂಪಸ್ ಪ್ರವೇಶಕ್ಕೆ ಅನುಮತಿ ನೀಡಬೇಕು ಎಂದು ಜವಹರಲಾಲ್ ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಒಕ್ಕೂಟ (ಜೆಎನ್‌ಯುಎಸ್‌ಯು) ಒತ್ತಾಯಿಸಿದೆ. ವಿದ್ಯಾರ್ಥಿಗಳ ಡೀನ್ ಕಚೇರಿ ಎದುರು ಜೆಎನ್‌ಯುಎಸ್‌ಯು ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದೆ.

ಸೆಪ್ಟೆಂಬರ್‌ 6ರಿಂದ ಮೊದಲ ಹಂತದ ತರಗತಿಗಳನ್ನು ಆರಂಭಿಸುವುದಾಗಿ ಜೆಎನ್‌ಯು ಮಾರ್ಗಸೂಚಿ ಬಿಡುಗಡೆ ಮಾಡಿತ್ತು. ಡಿಸೆಂಬರ್‌ 31ರೊಳಗೆ ಸಂಶೋಧನಾ ಪ್ರಬಂಧವನ್ನು ಸಲ್ಲಿಸಬೇಕಿರುವ ಸಂಶೋಧನಾರ್ಥಿಗಳ ಪ್ರವೇಶಕ್ಕೆ ಅವಕಾಶ ನೀಡಲಾಗುವುದು ಎನ್ನಲಾಗಿತ್ತು ಎಂದು ಸಂಶೋಧನಾ ವಿದ್ಯಾರ್ಥಿಗಳು ತಿಳಿಸಿದ್ದಾರೆ.

ಬೋಧನಾ ಕಲಿಕಾ ಚಟುವಟಿಕೆಗಳು ಆನ್ಲೈನ್‌ನಲ್ಲೇ ಮುಂದುವರಿಯಲಿವೆ. ಡಾ.ಬಿ.ಆರ್.ಅಂಬೇಡ್ಕರ್‌ ಕೇಂದ್ರೀಯ ಗ್ರಂಥಾಲಯ ಹೊರತುಪಡಿಸಿ, ಇತರ ಕೇಂದ್ರೀಯ ಗ್ರಂಥಾಲಯಗಳು, ತರಗತಿಗಳು ನಡೆಯುವುದಿಲ್ಲ ಎಂದು ತಿಳಿಸಲಾಗಿತ್ತು.

ವಿದ್ಯಾರ್ಥಿಗಳು 72 ಗಂಟೆಗಳ ಒಳಗಿನ ಕೋವಿಡ್‌ ನೆಗೆಟಿವ್‌ ವರದಿ (ಆರ್ಟಿಪಿಸಿಆರ್) ತಂದು, ಸ್ವಯಂ ಘೋಷಣಾ ಪತ್ರದೊಂದಿಗೆ ಸಲ್ಲಿಸಬೇಕು ಎಂದು ವಿವಿಯ ಆಡಳಿತ ವಿಭಾಗ ಹೇಳಿದೆ. “ವಿದ್ಯಾರ್ಥಿಗಳ ಒತ್ತಡದಿಂದಾಗಿ ಕೇವಲ ಪೊಳ್ಳು ಭರವಸೆಗಳನ್ನು ನೀಡಲಾಗುತ್ತಿದೆ” ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

“ಅರ್ಥಪೂರ್ಣ ರೀತಿಯಲ್ಲಿ ಕ್ಯಾಂಪಸ್‌ಗೆ ಅವಕಾಶ ನೀಡುವುದೆಂದರೆ ಸಂಶೋಧನಾ ಪ್ರಬಂಧ ಸಲ್ಲಿಸಬೇಕಾಗಿರುವ ವಿದ್ಯಾರ್ಥಿಗಳಿಗಷ್ಟೇ ಅಲ್ಲದೇ ಎಲ್ಲ ವಿದ್ಯಾರ್ಥಿಗಳಿಗೂ ಅವಕಾಶ ನೀಡುವುದೇ ಆಗಿದೆ” ಎಂದು ಎಐಎಸ್‌ಎ ಕಾರ್ಯದರ್ಶಿ, ಎಂಫಿಎಲ್ ವಿದ್ಯಾರ್ಥಿ ಮಧುರಿಮಾ ಕುಂದು ಅಭಿಪ್ರಾಯಪಟ್ಟಿದ್ದಾರೆ.

ದಿ ವೈರ್‌ ಸುದ್ದಿ ಜಾಲತಾಣದೊಂದಿಗೆ ಮಾತನಾಡಿರುವ ಕುಂದು, “2020ರ ಬ್ಯಾಚಿನ ವಿದ್ಯಾರ್ಥಿಗಳು ಒಂದು ವರ್ಷ ಇಲ್ಲಿ ಪೂರೈಸಿದ್ದಾರೆ. ಕ್ಯಾಂಪಸ್‌ ಪ್ರವೇಶಕ್ಕಾಗಿ ಅವರು ಒಮ್ಮೆಯಾದರೂ ಕೋರಿಕೆ ಸಲ್ಲಿಸಿಲ್ಲ. ಆನ್ಲೈನ್‌ ತರಗತಿಗಳಲ್ಲಿ ಅವರು ಹಾಜರಾಗುತ್ತಿಲ್ಲ. ಅವರಿಗೆ ಹಾಸ್ಟೆಲ್‌ಗಳನ್ನೂ ನೀಡಲಾಗಿಲ್ಲ. ಎಷ್ಟು ದಿನಗಳ ಕಾಲ ಶೈಕ್ಷಣಿಕ ಚಟುವಟಿಕೆಗಳನ್ನು ಗೂಗಲ್ ಮೀಟ್ ನಲ್ಲೇ ನಡೆಯಲು ಸಾಧ್ಯ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಜೆಎನ್‍ಯು ಘಟನೆ: ಸಂಪೂರ್ಣ ಹಿನ್ನೆಲೆ ಮತ್ತು ಉತ್ತರವಿಲ್ಲದ ಪ್ರಶ್ನೆಗಳು – ಪ್ರೊ. ಪುರುಷೋತ್ತಮ ಬಿಳಿಮಲೆ

ಮುಂದುವರಿದು, “ಹಿಂದುಳಿದ ವರ್ಗದಿಂದ ಬಂದ ಹಾಗೂ ತಾಂತ್ರಿಕ ಸೌಲಭ್ಯಗಳಿಲ್ಲದ ವಿದ್ಯಾರ್ಥಿಗಳು ಆನ್ಲೈನ್ ತರಗತಿಗೂ ಹಾಜರಾಗುತ್ತಿಲ್ಲ. ಕಲಿಕೆಯಿಂದ ಹೊರಗುಳಿಯುತ್ತಿರುವವರ ಸಂಖ್ಯೆ ಹೆಚ್ಚಳವಾಗುತ್ತಿದೆ. ಎಲ್ಲ ಕೋರ್ಸ್‌ಗಳಲ್ಲೂ ಈ ಬೆಳವಣಿಗೆಯಾಗಿದೆ. ಬಹುಶಃ ಸಂಪನ್ಮೂಲದ ಕೊರತೆಯಿಂದಾಗಿ ಆ ವಿದ್ಯಾರ್ಥಿಗಳು ವ್ಯಾಸಂಗವನ್ನು ಮುಂದವರಿಸಲು ಸಾಧ್ಯವಾಗುತ್ತಿಲ್ಲ ಎನಿಸುತ್ತದೆ” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...